Homeಕರ್ನಾಟಕಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು; ಇವರು ನೈಜ ಹಿಂದುಗಳೇ ಅಲ್ಲ: ಬಿಜೆಪಿ ಬೆಂಬಲಿತ ಸಂಘಟನೆಗಳ...

ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು; ಇವರು ನೈಜ ಹಿಂದುಗಳೇ ಅಲ್ಲ: ಬಿಜೆಪಿ ಬೆಂಬಲಿತ ಸಂಘಟನೆಗಳ ವಿರುದ್ದದ ವಾಗ್ದಾಳಿ ಮುಂದುವರೆಸಿದ ಕುಮಾರಸ್ವಾಮಿ

- Advertisement -
- Advertisement -

‘ಜನರನ್ನು ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು. ಇವರು ನೈಜ ಹಿಂದುಗಳೇ ಅಲ್ಲ’ ಎಂದು ರಾಜ್ಯದಲ್ಲಿ ಕೋಮುಸೌಹಾರ್ದ ಕದಡುವ ಬಿಜೆಪಿ ಬೆಂಬಲಿತ ಸಂಘಟನೆಗಳ ವಿರುದ್ದದ ತಮ್ಮ ವಾಗ್ದಾಳಿಯನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಶನಿವಾರವೂ ಮುಂದುವರೆಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದಿರುವ ಅವರು, “ಯುಗಾದಿ ಪರ್ವದಿನದಂದು ನಾವೆಲ್ಲ ಒಂದು ಸಂಕಲ್ಪ ಮಾಡೋಣ. ಕರ್ನಾಟಕವು ಕರ್ನಾಟಕವಾಗಿಯೇ ಉಳಿಯಬೇಕೆಂಬ ಆಶಯದಿಂದಲೇ ಈ ಸಂಕಲ್ಪ” ಎಂದು ಅವರು ಹೇಳಿದ್ದಾರೆ. ಅಧಿಕಾರಕ್ಕಾಗಿ ಏನನ್ನೂ ಮಾಡಲು ಹೇಸದ ಕಿಡಿಗೇಡಿಗಳಿಗೆ, ಧರ್ಮವಿನಾಶಕ್ಕೆ ಕಂಕಣತೊಟ್ಟ ಕಿರಾತಕರಿಗೆ ಪಾಠ ಕಲಿಸುವ ಧೈರ್ಯ ಮಾಡೋಣ. ಕರ್ನಾಟಕ ನಮ್ಮದು. ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ದ್ರೋಹಿಗಳದ್ದಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

“ಕುರ್ಚಿ ಹಿಡಿಯಲು ಮನಸುಗಳನ್ನು ಮುರಿಯುತ್ತಿದ್ದಾರೆ. ನಾಳೆ ಮನೆಗಳನ್ನೂ ಒಡೆದು ಅಣ್ಣ-ತಮ್ಮ, ಅಕ್ಕ-ತಂಗಿ ನಡುವೆಯೂ ಬೆಂಕಿ ಇಟ್ಟು ಮನೆ ಮುರುಕರೂ ಆಗುತ್ತಾರೆ. ಹಿಂದುತ್ವದ ಹೆಸರೇಳಿಕೊಂಡು ʼಹಿಂದುತ್ವದ ವಿನಾಶʼ ಮಾಡುತ್ತಿರುವ ಈ ನಕಲಿಗಳ ಮಾತನ್ನು ಯಾರೂ ನಂಬಬಾರದು. ಕರಪತ್ರ ಹಿಡಿದು ಬಂದರೆ ಭಾವೈಕ್ಯತೆಯ ಪಾಠ ಹೇಳಿ ಕಳಿಸಿ” ಎಂದು ರಾಜ್ಯದ ಜನತೆಗೆ ಸಲಹೆ ನೀಡಿದ್ದಾರೆ.

“ತಲೆತಲಾಂತರಗಳಿಂದ ಯುಗಾದಿ ಇದೆ, ವರ್ಷತೊಡಕೂ ಇದೆ, ಹಲಾಲೂ ಇದೆ. ʼಹಲಾಲ್‌ ಹಾಲಾಹಲʼವನ್ನುಈಗ ಸೃಷ್ಟಿಸಲಾಗಿದೆ. ಹಲಾಲು, ಜಟ್ಕಾ ಎಂದು ಜನರನ್ನು ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು. ಹಿಂದುತ್ವ ಹೆಸರಿನಲ್ಲಿ ರಾಜಕೀಯ ಜನ್ಮ ಪಡೆದು ರಕ್ಕಸರೂಪದಲ್ಲಿ ಬೆಳೆದಿರುವ ಪಕ್ಷದ ಬಾಲಂಗೋಚಿಗಳಿವು. ಇವರು ನೈಜ ಹಿಂದುಗಳೇ ಅಲ್ಲ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ತಲೆತಲಾಂತರಗಳಿಂದ ಇಲ್ಲದ ʼಆಹಾರ ತಾರತಮ್ಯʼ ಈಗೇಕೆ ಬಂತು? 150 ಸ್ಥಾನಗಳ ಗುರಿ ಮುಟ್ಟಲು ರೂಪಿಸಿದ ʼರೋಡ್ ಮ್ಯಾಪ್ʼ ಇದೇ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಸರ್ವಸಮಾನ, ಸರ್ವಹಕ್ಕು, ಸರ್ವಕಲ್ಯಾಣ; ಅಂದರೆ, ʼಸರ್ವೇ ಜನಾಃ ಸುಖಿನೋ ಭವಂತುʼ ಎಂಬ ಆಶಯವುಳ್ಳ ಸಂವಿಧಾನವನ್ನೇ ಮುಗಿಸುವ ರಕ್ಕಸ ಹುನ್ನಾರಕ್ಕೆ ಇದು ನಾಂದಿಯಷ್ಟೇ” ಎಂದು ಅವರು ಅಭಿಪ್ರಾಯಪಟ್ಟದ್ದಾರೆ.

ಇದನ್ನೂ ಓದಿ: ಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ

“ಅನ್ನ-ಆಹಾರದಲ್ಲಿ ಅರಾಜಕತೆ ಉಂಟು ಮಾಡಿ ಬೇಳೆ ಬೇಯಿಸಿಕೊಳ್ಳುವವರು ʼಭಾರತಕ್ಕೆ ಮತ್ತು ಭಾವೈಕ್ಯ ಪರಂಪರೆಗೆ ದೊಡ್ಡ ಅಪಾಯ.ʼ ಮನಸುಗಳ ನಡುವೆ ಯುದ್ಧವನ್ನೇ ಸೃಷ್ಟಿಸುತ್ತಿರುವ ಈ ಕಿಡಿಗೇಡಿಗಳು ಯುದ್ಧೋನ್ಮಾದ ಸರ್ವಾಧಿಕಾರಿಗಳಿಗಿಂತಲೂ ವಿನಾಶಕಾರಿ. ಇದನ್ನು ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕು.
ಯುಗಾದಿ ಹಬ್ಬದ ದಿನ ನೈಜ ಹಿಂದುಗಳು ಯಾರೂ ಮಾಂಸ ಮಾರುವುದಿಲ್ಲ, ಖರೀದಿಸುವುದೂ ಇಲ್ಲ. ಆದರೆ, ಜಟ್ಕಾ ಕಟ್ ಹೆಸರಿನಲ್ಲಿ ಕೆಲವರು ಇವತ್ತೇ ಮಾಂಸದ ಅಂಗಡಿಗಳನ್ನು ತೆರೆದಿದ್ದಾರೆ! ಇವರಾ ಹಿಂದುಗಳು? ʼಇಂಡಿಯಾದಿಂದಲೇ ಹಿಂದೂ ಧರ್ಮವನ್ನು ಮೂಲೋತ್ಪಾಟನೆ ಮಾಡುವುದೇ ಇವರ ಹಿಡನ್ ಅಜೆಂಡಾ ಆಗಿದೆʼ ಎನ್ನುವುದು ನನ್ನ ಅಭಿಪ್ರಾಯ” ಎಂದು ಅವರು ಹೇಳಿದ್ದಾರೆ.

“ಅನಾದಿ ಕಾಲದಿಂದ ಯುಗಾದಿ, ವರ್ಷತೊಡಕನ್ನು ನಾವೆಲ್ಲರೂ ಆಚರಿಸಿದಂತೆ, ಈ ವರ್ಷವೂ ಆಚರಿಸೋಣ. ʼಭಾರತವನ್ನು ಒಡೆಯುವ ವಿಷಬೀಜಾಸುರರನ್ನು ಹಿಮ್ಮೆಟ್ಟಿಸೋಣ.ʼ ಸರ್ವ ಜನಾಂಗದ ತೋಟ ಕರುನಾಡಿನಲ್ಲಿರುವ ಪ್ರತಿಯೊಬ್ಬರಿಗೂ ನನ್ನ ಮನವಿ ಇದು. ಇಡೀ ದೇಶಕ್ಕೆ ಮಾದರಿಯಾದ ನೆಮ್ಮದಿಯ ಕರುನಾಡನ್ನು ಕಾಪಾಡಿಕೊಳ್ಳೋಣ” ಎಂದು ಅವರು ವಿನಂತಿಸಿದ್ದಾರೆ.

“ಕರ್ನಾಟಕವು ಎಲ್ಲರನ್ನೂ ಒಳಗೊಳ್ಳುವ ಶುದ್ಧ ಅಂತಃಕರಣದ ಮನಸುಗಳದ್ದು. ಭಾವನೆಗಳ ಕೆಂಡದ ಮಳೆ ಸುರಿಸುವ ಕಿರಾತಕರದ್ದಲ್ಲ. ಜನಪೀಡಕರನ್ನು ತಿರಸ್ಕರಿಸೋಣ. ಪರಂಪರಾಗತವಾಗಿ ಬಂದಿರುವ ಯುಗಾದಿ, ವರ್ಷತೊಡಕನ್ನು ಎಂದಿನಂತೆ ಸಂಭ್ರಮಿಸುವ ಮೂಲಕ ಇವರ ಸೋಗಲಾಡಿತನಕ್ಕೆ ಇತಿಶ್ರೀ ಹಾಡೋಣ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಕೋಮುದ್ವೇಷಕ್ಕೆ ಪೊಳ್ಳು ’ಸಮರ್ಥನೆ’ಯೂ ಬೇಡವಾಗಿರುವ ವಿಷಮ ಹಂತದಲ್ಲಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....