Homeಕರ್ನಾಟಕಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು; ಇವರು ನೈಜ ಹಿಂದುಗಳೇ ಅಲ್ಲ: ಬಿಜೆಪಿ ಬೆಂಬಲಿತ ಸಂಘಟನೆಗಳ...

ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು; ಇವರು ನೈಜ ಹಿಂದುಗಳೇ ಅಲ್ಲ: ಬಿಜೆಪಿ ಬೆಂಬಲಿತ ಸಂಘಟನೆಗಳ ವಿರುದ್ದದ ವಾಗ್ದಾಳಿ ಮುಂದುವರೆಸಿದ ಕುಮಾರಸ್ವಾಮಿ

- Advertisement -
- Advertisement -

‘ಜನರನ್ನು ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು. ಇವರು ನೈಜ ಹಿಂದುಗಳೇ ಅಲ್ಲ’ ಎಂದು ರಾಜ್ಯದಲ್ಲಿ ಕೋಮುಸೌಹಾರ್ದ ಕದಡುವ ಬಿಜೆಪಿ ಬೆಂಬಲಿತ ಸಂಘಟನೆಗಳ ವಿರುದ್ದದ ತಮ್ಮ ವಾಗ್ದಾಳಿಯನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಶನಿವಾರವೂ ಮುಂದುವರೆಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದಿರುವ ಅವರು, “ಯುಗಾದಿ ಪರ್ವದಿನದಂದು ನಾವೆಲ್ಲ ಒಂದು ಸಂಕಲ್ಪ ಮಾಡೋಣ. ಕರ್ನಾಟಕವು ಕರ್ನಾಟಕವಾಗಿಯೇ ಉಳಿಯಬೇಕೆಂಬ ಆಶಯದಿಂದಲೇ ಈ ಸಂಕಲ್ಪ” ಎಂದು ಅವರು ಹೇಳಿದ್ದಾರೆ. ಅಧಿಕಾರಕ್ಕಾಗಿ ಏನನ್ನೂ ಮಾಡಲು ಹೇಸದ ಕಿಡಿಗೇಡಿಗಳಿಗೆ, ಧರ್ಮವಿನಾಶಕ್ಕೆ ಕಂಕಣತೊಟ್ಟ ಕಿರಾತಕರಿಗೆ ಪಾಠ ಕಲಿಸುವ ಧೈರ್ಯ ಮಾಡೋಣ. ಕರ್ನಾಟಕ ನಮ್ಮದು. ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ದ್ರೋಹಿಗಳದ್ದಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

“ಕುರ್ಚಿ ಹಿಡಿಯಲು ಮನಸುಗಳನ್ನು ಮುರಿಯುತ್ತಿದ್ದಾರೆ. ನಾಳೆ ಮನೆಗಳನ್ನೂ ಒಡೆದು ಅಣ್ಣ-ತಮ್ಮ, ಅಕ್ಕ-ತಂಗಿ ನಡುವೆಯೂ ಬೆಂಕಿ ಇಟ್ಟು ಮನೆ ಮುರುಕರೂ ಆಗುತ್ತಾರೆ. ಹಿಂದುತ್ವದ ಹೆಸರೇಳಿಕೊಂಡು ʼಹಿಂದುತ್ವದ ವಿನಾಶʼ ಮಾಡುತ್ತಿರುವ ಈ ನಕಲಿಗಳ ಮಾತನ್ನು ಯಾರೂ ನಂಬಬಾರದು. ಕರಪತ್ರ ಹಿಡಿದು ಬಂದರೆ ಭಾವೈಕ್ಯತೆಯ ಪಾಠ ಹೇಳಿ ಕಳಿಸಿ” ಎಂದು ರಾಜ್ಯದ ಜನತೆಗೆ ಸಲಹೆ ನೀಡಿದ್ದಾರೆ.

“ತಲೆತಲಾಂತರಗಳಿಂದ ಯುಗಾದಿ ಇದೆ, ವರ್ಷತೊಡಕೂ ಇದೆ, ಹಲಾಲೂ ಇದೆ. ʼಹಲಾಲ್‌ ಹಾಲಾಹಲʼವನ್ನುಈಗ ಸೃಷ್ಟಿಸಲಾಗಿದೆ. ಹಲಾಲು, ಜಟ್ಕಾ ಎಂದು ಜನರನ್ನು ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು. ಹಿಂದುತ್ವ ಹೆಸರಿನಲ್ಲಿ ರಾಜಕೀಯ ಜನ್ಮ ಪಡೆದು ರಕ್ಕಸರೂಪದಲ್ಲಿ ಬೆಳೆದಿರುವ ಪಕ್ಷದ ಬಾಲಂಗೋಚಿಗಳಿವು. ಇವರು ನೈಜ ಹಿಂದುಗಳೇ ಅಲ್ಲ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ತಲೆತಲಾಂತರಗಳಿಂದ ಇಲ್ಲದ ʼಆಹಾರ ತಾರತಮ್ಯʼ ಈಗೇಕೆ ಬಂತು? 150 ಸ್ಥಾನಗಳ ಗುರಿ ಮುಟ್ಟಲು ರೂಪಿಸಿದ ʼರೋಡ್ ಮ್ಯಾಪ್ʼ ಇದೇ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಸರ್ವಸಮಾನ, ಸರ್ವಹಕ್ಕು, ಸರ್ವಕಲ್ಯಾಣ; ಅಂದರೆ, ʼಸರ್ವೇ ಜನಾಃ ಸುಖಿನೋ ಭವಂತುʼ ಎಂಬ ಆಶಯವುಳ್ಳ ಸಂವಿಧಾನವನ್ನೇ ಮುಗಿಸುವ ರಕ್ಕಸ ಹುನ್ನಾರಕ್ಕೆ ಇದು ನಾಂದಿಯಷ್ಟೇ” ಎಂದು ಅವರು ಅಭಿಪ್ರಾಯಪಟ್ಟದ್ದಾರೆ.

ಇದನ್ನೂ ಓದಿ: ಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ

“ಅನ್ನ-ಆಹಾರದಲ್ಲಿ ಅರಾಜಕತೆ ಉಂಟು ಮಾಡಿ ಬೇಳೆ ಬೇಯಿಸಿಕೊಳ್ಳುವವರು ʼಭಾರತಕ್ಕೆ ಮತ್ತು ಭಾವೈಕ್ಯ ಪರಂಪರೆಗೆ ದೊಡ್ಡ ಅಪಾಯ.ʼ ಮನಸುಗಳ ನಡುವೆ ಯುದ್ಧವನ್ನೇ ಸೃಷ್ಟಿಸುತ್ತಿರುವ ಈ ಕಿಡಿಗೇಡಿಗಳು ಯುದ್ಧೋನ್ಮಾದ ಸರ್ವಾಧಿಕಾರಿಗಳಿಗಿಂತಲೂ ವಿನಾಶಕಾರಿ. ಇದನ್ನು ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕು.
ಯುಗಾದಿ ಹಬ್ಬದ ದಿನ ನೈಜ ಹಿಂದುಗಳು ಯಾರೂ ಮಾಂಸ ಮಾರುವುದಿಲ್ಲ, ಖರೀದಿಸುವುದೂ ಇಲ್ಲ. ಆದರೆ, ಜಟ್ಕಾ ಕಟ್ ಹೆಸರಿನಲ್ಲಿ ಕೆಲವರು ಇವತ್ತೇ ಮಾಂಸದ ಅಂಗಡಿಗಳನ್ನು ತೆರೆದಿದ್ದಾರೆ! ಇವರಾ ಹಿಂದುಗಳು? ʼಇಂಡಿಯಾದಿಂದಲೇ ಹಿಂದೂ ಧರ್ಮವನ್ನು ಮೂಲೋತ್ಪಾಟನೆ ಮಾಡುವುದೇ ಇವರ ಹಿಡನ್ ಅಜೆಂಡಾ ಆಗಿದೆʼ ಎನ್ನುವುದು ನನ್ನ ಅಭಿಪ್ರಾಯ” ಎಂದು ಅವರು ಹೇಳಿದ್ದಾರೆ.

“ಅನಾದಿ ಕಾಲದಿಂದ ಯುಗಾದಿ, ವರ್ಷತೊಡಕನ್ನು ನಾವೆಲ್ಲರೂ ಆಚರಿಸಿದಂತೆ, ಈ ವರ್ಷವೂ ಆಚರಿಸೋಣ. ʼಭಾರತವನ್ನು ಒಡೆಯುವ ವಿಷಬೀಜಾಸುರರನ್ನು ಹಿಮ್ಮೆಟ್ಟಿಸೋಣ.ʼ ಸರ್ವ ಜನಾಂಗದ ತೋಟ ಕರುನಾಡಿನಲ್ಲಿರುವ ಪ್ರತಿಯೊಬ್ಬರಿಗೂ ನನ್ನ ಮನವಿ ಇದು. ಇಡೀ ದೇಶಕ್ಕೆ ಮಾದರಿಯಾದ ನೆಮ್ಮದಿಯ ಕರುನಾಡನ್ನು ಕಾಪಾಡಿಕೊಳ್ಳೋಣ” ಎಂದು ಅವರು ವಿನಂತಿಸಿದ್ದಾರೆ.

“ಕರ್ನಾಟಕವು ಎಲ್ಲರನ್ನೂ ಒಳಗೊಳ್ಳುವ ಶುದ್ಧ ಅಂತಃಕರಣದ ಮನಸುಗಳದ್ದು. ಭಾವನೆಗಳ ಕೆಂಡದ ಮಳೆ ಸುರಿಸುವ ಕಿರಾತಕರದ್ದಲ್ಲ. ಜನಪೀಡಕರನ್ನು ತಿರಸ್ಕರಿಸೋಣ. ಪರಂಪರಾಗತವಾಗಿ ಬಂದಿರುವ ಯುಗಾದಿ, ವರ್ಷತೊಡಕನ್ನು ಎಂದಿನಂತೆ ಸಂಭ್ರಮಿಸುವ ಮೂಲಕ ಇವರ ಸೋಗಲಾಡಿತನಕ್ಕೆ ಇತಿಶ್ರೀ ಹಾಡೋಣ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಕೋಮುದ್ವೇಷಕ್ಕೆ ಪೊಳ್ಳು ’ಸಮರ್ಥನೆ’ಯೂ ಬೇಡವಾಗಿರುವ ವಿಷಮ ಹಂತದಲ್ಲಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...