Homeಕರ್ನಾಟಕಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು; ಇವರು ನೈಜ ಹಿಂದುಗಳೇ ಅಲ್ಲ: ಬಿಜೆಪಿ ಬೆಂಬಲಿತ ಸಂಘಟನೆಗಳ...

ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು; ಇವರು ನೈಜ ಹಿಂದುಗಳೇ ಅಲ್ಲ: ಬಿಜೆಪಿ ಬೆಂಬಲಿತ ಸಂಘಟನೆಗಳ ವಿರುದ್ದದ ವಾಗ್ದಾಳಿ ಮುಂದುವರೆಸಿದ ಕುಮಾರಸ್ವಾಮಿ

- Advertisement -
- Advertisement -

‘ಜನರನ್ನು ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು. ಇವರು ನೈಜ ಹಿಂದುಗಳೇ ಅಲ್ಲ’ ಎಂದು ರಾಜ್ಯದಲ್ಲಿ ಕೋಮುಸೌಹಾರ್ದ ಕದಡುವ ಬಿಜೆಪಿ ಬೆಂಬಲಿತ ಸಂಘಟನೆಗಳ ವಿರುದ್ದದ ತಮ್ಮ ವಾಗ್ದಾಳಿಯನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಶನಿವಾರವೂ ಮುಂದುವರೆಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದಿರುವ ಅವರು, “ಯುಗಾದಿ ಪರ್ವದಿನದಂದು ನಾವೆಲ್ಲ ಒಂದು ಸಂಕಲ್ಪ ಮಾಡೋಣ. ಕರ್ನಾಟಕವು ಕರ್ನಾಟಕವಾಗಿಯೇ ಉಳಿಯಬೇಕೆಂಬ ಆಶಯದಿಂದಲೇ ಈ ಸಂಕಲ್ಪ” ಎಂದು ಅವರು ಹೇಳಿದ್ದಾರೆ. ಅಧಿಕಾರಕ್ಕಾಗಿ ಏನನ್ನೂ ಮಾಡಲು ಹೇಸದ ಕಿಡಿಗೇಡಿಗಳಿಗೆ, ಧರ್ಮವಿನಾಶಕ್ಕೆ ಕಂಕಣತೊಟ್ಟ ಕಿರಾತಕರಿಗೆ ಪಾಠ ಕಲಿಸುವ ಧೈರ್ಯ ಮಾಡೋಣ. ಕರ್ನಾಟಕ ನಮ್ಮದು. ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ದ್ರೋಹಿಗಳದ್ದಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

“ಕುರ್ಚಿ ಹಿಡಿಯಲು ಮನಸುಗಳನ್ನು ಮುರಿಯುತ್ತಿದ್ದಾರೆ. ನಾಳೆ ಮನೆಗಳನ್ನೂ ಒಡೆದು ಅಣ್ಣ-ತಮ್ಮ, ಅಕ್ಕ-ತಂಗಿ ನಡುವೆಯೂ ಬೆಂಕಿ ಇಟ್ಟು ಮನೆ ಮುರುಕರೂ ಆಗುತ್ತಾರೆ. ಹಿಂದುತ್ವದ ಹೆಸರೇಳಿಕೊಂಡು ʼಹಿಂದುತ್ವದ ವಿನಾಶʼ ಮಾಡುತ್ತಿರುವ ಈ ನಕಲಿಗಳ ಮಾತನ್ನು ಯಾರೂ ನಂಬಬಾರದು. ಕರಪತ್ರ ಹಿಡಿದು ಬಂದರೆ ಭಾವೈಕ್ಯತೆಯ ಪಾಠ ಹೇಳಿ ಕಳಿಸಿ” ಎಂದು ರಾಜ್ಯದ ಜನತೆಗೆ ಸಲಹೆ ನೀಡಿದ್ದಾರೆ.

“ತಲೆತಲಾಂತರಗಳಿಂದ ಯುಗಾದಿ ಇದೆ, ವರ್ಷತೊಡಕೂ ಇದೆ, ಹಲಾಲೂ ಇದೆ. ʼಹಲಾಲ್‌ ಹಾಲಾಹಲʼವನ್ನುಈಗ ಸೃಷ್ಟಿಸಲಾಗಿದೆ. ಹಲಾಲು, ಜಟ್ಕಾ ಎಂದು ಜನರನ್ನು ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು. ಹಿಂದುತ್ವ ಹೆಸರಿನಲ್ಲಿ ರಾಜಕೀಯ ಜನ್ಮ ಪಡೆದು ರಕ್ಕಸರೂಪದಲ್ಲಿ ಬೆಳೆದಿರುವ ಪಕ್ಷದ ಬಾಲಂಗೋಚಿಗಳಿವು. ಇವರು ನೈಜ ಹಿಂದುಗಳೇ ಅಲ್ಲ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ತಲೆತಲಾಂತರಗಳಿಂದ ಇಲ್ಲದ ʼಆಹಾರ ತಾರತಮ್ಯʼ ಈಗೇಕೆ ಬಂತು? 150 ಸ್ಥಾನಗಳ ಗುರಿ ಮುಟ್ಟಲು ರೂಪಿಸಿದ ʼರೋಡ್ ಮ್ಯಾಪ್ʼ ಇದೇ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಸರ್ವಸಮಾನ, ಸರ್ವಹಕ್ಕು, ಸರ್ವಕಲ್ಯಾಣ; ಅಂದರೆ, ʼಸರ್ವೇ ಜನಾಃ ಸುಖಿನೋ ಭವಂತುʼ ಎಂಬ ಆಶಯವುಳ್ಳ ಸಂವಿಧಾನವನ್ನೇ ಮುಗಿಸುವ ರಕ್ಕಸ ಹುನ್ನಾರಕ್ಕೆ ಇದು ನಾಂದಿಯಷ್ಟೇ” ಎಂದು ಅವರು ಅಭಿಪ್ರಾಯಪಟ್ಟದ್ದಾರೆ.

ಇದನ್ನೂ ಓದಿ: ಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ

“ಅನ್ನ-ಆಹಾರದಲ್ಲಿ ಅರಾಜಕತೆ ಉಂಟು ಮಾಡಿ ಬೇಳೆ ಬೇಯಿಸಿಕೊಳ್ಳುವವರು ʼಭಾರತಕ್ಕೆ ಮತ್ತು ಭಾವೈಕ್ಯ ಪರಂಪರೆಗೆ ದೊಡ್ಡ ಅಪಾಯ.ʼ ಮನಸುಗಳ ನಡುವೆ ಯುದ್ಧವನ್ನೇ ಸೃಷ್ಟಿಸುತ್ತಿರುವ ಈ ಕಿಡಿಗೇಡಿಗಳು ಯುದ್ಧೋನ್ಮಾದ ಸರ್ವಾಧಿಕಾರಿಗಳಿಗಿಂತಲೂ ವಿನಾಶಕಾರಿ. ಇದನ್ನು ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕು.
ಯುಗಾದಿ ಹಬ್ಬದ ದಿನ ನೈಜ ಹಿಂದುಗಳು ಯಾರೂ ಮಾಂಸ ಮಾರುವುದಿಲ್ಲ, ಖರೀದಿಸುವುದೂ ಇಲ್ಲ. ಆದರೆ, ಜಟ್ಕಾ ಕಟ್ ಹೆಸರಿನಲ್ಲಿ ಕೆಲವರು ಇವತ್ತೇ ಮಾಂಸದ ಅಂಗಡಿಗಳನ್ನು ತೆರೆದಿದ್ದಾರೆ! ಇವರಾ ಹಿಂದುಗಳು? ʼಇಂಡಿಯಾದಿಂದಲೇ ಹಿಂದೂ ಧರ್ಮವನ್ನು ಮೂಲೋತ್ಪಾಟನೆ ಮಾಡುವುದೇ ಇವರ ಹಿಡನ್ ಅಜೆಂಡಾ ಆಗಿದೆʼ ಎನ್ನುವುದು ನನ್ನ ಅಭಿಪ್ರಾಯ” ಎಂದು ಅವರು ಹೇಳಿದ್ದಾರೆ.

“ಅನಾದಿ ಕಾಲದಿಂದ ಯುಗಾದಿ, ವರ್ಷತೊಡಕನ್ನು ನಾವೆಲ್ಲರೂ ಆಚರಿಸಿದಂತೆ, ಈ ವರ್ಷವೂ ಆಚರಿಸೋಣ. ʼಭಾರತವನ್ನು ಒಡೆಯುವ ವಿಷಬೀಜಾಸುರರನ್ನು ಹಿಮ್ಮೆಟ್ಟಿಸೋಣ.ʼ ಸರ್ವ ಜನಾಂಗದ ತೋಟ ಕರುನಾಡಿನಲ್ಲಿರುವ ಪ್ರತಿಯೊಬ್ಬರಿಗೂ ನನ್ನ ಮನವಿ ಇದು. ಇಡೀ ದೇಶಕ್ಕೆ ಮಾದರಿಯಾದ ನೆಮ್ಮದಿಯ ಕರುನಾಡನ್ನು ಕಾಪಾಡಿಕೊಳ್ಳೋಣ” ಎಂದು ಅವರು ವಿನಂತಿಸಿದ್ದಾರೆ.

“ಕರ್ನಾಟಕವು ಎಲ್ಲರನ್ನೂ ಒಳಗೊಳ್ಳುವ ಶುದ್ಧ ಅಂತಃಕರಣದ ಮನಸುಗಳದ್ದು. ಭಾವನೆಗಳ ಕೆಂಡದ ಮಳೆ ಸುರಿಸುವ ಕಿರಾತಕರದ್ದಲ್ಲ. ಜನಪೀಡಕರನ್ನು ತಿರಸ್ಕರಿಸೋಣ. ಪರಂಪರಾಗತವಾಗಿ ಬಂದಿರುವ ಯುಗಾದಿ, ವರ್ಷತೊಡಕನ್ನು ಎಂದಿನಂತೆ ಸಂಭ್ರಮಿಸುವ ಮೂಲಕ ಇವರ ಸೋಗಲಾಡಿತನಕ್ಕೆ ಇತಿಶ್ರೀ ಹಾಡೋಣ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಕೋಮುದ್ವೇಷಕ್ಕೆ ಪೊಳ್ಳು ’ಸಮರ್ಥನೆ’ಯೂ ಬೇಡವಾಗಿರುವ ವಿಷಮ ಹಂತದಲ್ಲಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...