Homeಕರ್ನಾಟಕಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು; ಇವರು ನೈಜ ಹಿಂದುಗಳೇ ಅಲ್ಲ: ಬಿಜೆಪಿ ಬೆಂಬಲಿತ ಸಂಘಟನೆಗಳ...

ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು; ಇವರು ನೈಜ ಹಿಂದುಗಳೇ ಅಲ್ಲ: ಬಿಜೆಪಿ ಬೆಂಬಲಿತ ಸಂಘಟನೆಗಳ ವಿರುದ್ದದ ವಾಗ್ದಾಳಿ ಮುಂದುವರೆಸಿದ ಕುಮಾರಸ್ವಾಮಿ

- Advertisement -
- Advertisement -

‘ಜನರನ್ನು ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು. ಇವರು ನೈಜ ಹಿಂದುಗಳೇ ಅಲ್ಲ’ ಎಂದು ರಾಜ್ಯದಲ್ಲಿ ಕೋಮುಸೌಹಾರ್ದ ಕದಡುವ ಬಿಜೆಪಿ ಬೆಂಬಲಿತ ಸಂಘಟನೆಗಳ ವಿರುದ್ದದ ತಮ್ಮ ವಾಗ್ದಾಳಿಯನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಶನಿವಾರವೂ ಮುಂದುವರೆಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದಿರುವ ಅವರು, “ಯುಗಾದಿ ಪರ್ವದಿನದಂದು ನಾವೆಲ್ಲ ಒಂದು ಸಂಕಲ್ಪ ಮಾಡೋಣ. ಕರ್ನಾಟಕವು ಕರ್ನಾಟಕವಾಗಿಯೇ ಉಳಿಯಬೇಕೆಂಬ ಆಶಯದಿಂದಲೇ ಈ ಸಂಕಲ್ಪ” ಎಂದು ಅವರು ಹೇಳಿದ್ದಾರೆ. ಅಧಿಕಾರಕ್ಕಾಗಿ ಏನನ್ನೂ ಮಾಡಲು ಹೇಸದ ಕಿಡಿಗೇಡಿಗಳಿಗೆ, ಧರ್ಮವಿನಾಶಕ್ಕೆ ಕಂಕಣತೊಟ್ಟ ಕಿರಾತಕರಿಗೆ ಪಾಠ ಕಲಿಸುವ ಧೈರ್ಯ ಮಾಡೋಣ. ಕರ್ನಾಟಕ ನಮ್ಮದು. ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ದ್ರೋಹಿಗಳದ್ದಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

“ಕುರ್ಚಿ ಹಿಡಿಯಲು ಮನಸುಗಳನ್ನು ಮುರಿಯುತ್ತಿದ್ದಾರೆ. ನಾಳೆ ಮನೆಗಳನ್ನೂ ಒಡೆದು ಅಣ್ಣ-ತಮ್ಮ, ಅಕ್ಕ-ತಂಗಿ ನಡುವೆಯೂ ಬೆಂಕಿ ಇಟ್ಟು ಮನೆ ಮುರುಕರೂ ಆಗುತ್ತಾರೆ. ಹಿಂದುತ್ವದ ಹೆಸರೇಳಿಕೊಂಡು ʼಹಿಂದುತ್ವದ ವಿನಾಶʼ ಮಾಡುತ್ತಿರುವ ಈ ನಕಲಿಗಳ ಮಾತನ್ನು ಯಾರೂ ನಂಬಬಾರದು. ಕರಪತ್ರ ಹಿಡಿದು ಬಂದರೆ ಭಾವೈಕ್ಯತೆಯ ಪಾಠ ಹೇಳಿ ಕಳಿಸಿ” ಎಂದು ರಾಜ್ಯದ ಜನತೆಗೆ ಸಲಹೆ ನೀಡಿದ್ದಾರೆ.

“ತಲೆತಲಾಂತರಗಳಿಂದ ಯುಗಾದಿ ಇದೆ, ವರ್ಷತೊಡಕೂ ಇದೆ, ಹಲಾಲೂ ಇದೆ. ʼಹಲಾಲ್‌ ಹಾಲಾಹಲʼವನ್ನುಈಗ ಸೃಷ್ಟಿಸಲಾಗಿದೆ. ಹಲಾಲು, ಜಟ್ಕಾ ಎಂದು ಜನರನ್ನು ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು. ಹಿಂದುತ್ವ ಹೆಸರಿನಲ್ಲಿ ರಾಜಕೀಯ ಜನ್ಮ ಪಡೆದು ರಕ್ಕಸರೂಪದಲ್ಲಿ ಬೆಳೆದಿರುವ ಪಕ್ಷದ ಬಾಲಂಗೋಚಿಗಳಿವು. ಇವರು ನೈಜ ಹಿಂದುಗಳೇ ಅಲ್ಲ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ತಲೆತಲಾಂತರಗಳಿಂದ ಇಲ್ಲದ ʼಆಹಾರ ತಾರತಮ್ಯʼ ಈಗೇಕೆ ಬಂತು? 150 ಸ್ಥಾನಗಳ ಗುರಿ ಮುಟ್ಟಲು ರೂಪಿಸಿದ ʼರೋಡ್ ಮ್ಯಾಪ್ʼ ಇದೇ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಸರ್ವಸಮಾನ, ಸರ್ವಹಕ್ಕು, ಸರ್ವಕಲ್ಯಾಣ; ಅಂದರೆ, ʼಸರ್ವೇ ಜನಾಃ ಸುಖಿನೋ ಭವಂತುʼ ಎಂಬ ಆಶಯವುಳ್ಳ ಸಂವಿಧಾನವನ್ನೇ ಮುಗಿಸುವ ರಕ್ಕಸ ಹುನ್ನಾರಕ್ಕೆ ಇದು ನಾಂದಿಯಷ್ಟೇ” ಎಂದು ಅವರು ಅಭಿಪ್ರಾಯಪಟ್ಟದ್ದಾರೆ.

ಇದನ್ನೂ ಓದಿ: ಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ

“ಅನ್ನ-ಆಹಾರದಲ್ಲಿ ಅರಾಜಕತೆ ಉಂಟು ಮಾಡಿ ಬೇಳೆ ಬೇಯಿಸಿಕೊಳ್ಳುವವರು ʼಭಾರತಕ್ಕೆ ಮತ್ತು ಭಾವೈಕ್ಯ ಪರಂಪರೆಗೆ ದೊಡ್ಡ ಅಪಾಯ.ʼ ಮನಸುಗಳ ನಡುವೆ ಯುದ್ಧವನ್ನೇ ಸೃಷ್ಟಿಸುತ್ತಿರುವ ಈ ಕಿಡಿಗೇಡಿಗಳು ಯುದ್ಧೋನ್ಮಾದ ಸರ್ವಾಧಿಕಾರಿಗಳಿಗಿಂತಲೂ ವಿನಾಶಕಾರಿ. ಇದನ್ನು ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕು.
ಯುಗಾದಿ ಹಬ್ಬದ ದಿನ ನೈಜ ಹಿಂದುಗಳು ಯಾರೂ ಮಾಂಸ ಮಾರುವುದಿಲ್ಲ, ಖರೀದಿಸುವುದೂ ಇಲ್ಲ. ಆದರೆ, ಜಟ್ಕಾ ಕಟ್ ಹೆಸರಿನಲ್ಲಿ ಕೆಲವರು ಇವತ್ತೇ ಮಾಂಸದ ಅಂಗಡಿಗಳನ್ನು ತೆರೆದಿದ್ದಾರೆ! ಇವರಾ ಹಿಂದುಗಳು? ʼಇಂಡಿಯಾದಿಂದಲೇ ಹಿಂದೂ ಧರ್ಮವನ್ನು ಮೂಲೋತ್ಪಾಟನೆ ಮಾಡುವುದೇ ಇವರ ಹಿಡನ್ ಅಜೆಂಡಾ ಆಗಿದೆʼ ಎನ್ನುವುದು ನನ್ನ ಅಭಿಪ್ರಾಯ” ಎಂದು ಅವರು ಹೇಳಿದ್ದಾರೆ.

“ಅನಾದಿ ಕಾಲದಿಂದ ಯುಗಾದಿ, ವರ್ಷತೊಡಕನ್ನು ನಾವೆಲ್ಲರೂ ಆಚರಿಸಿದಂತೆ, ಈ ವರ್ಷವೂ ಆಚರಿಸೋಣ. ʼಭಾರತವನ್ನು ಒಡೆಯುವ ವಿಷಬೀಜಾಸುರರನ್ನು ಹಿಮ್ಮೆಟ್ಟಿಸೋಣ.ʼ ಸರ್ವ ಜನಾಂಗದ ತೋಟ ಕರುನಾಡಿನಲ್ಲಿರುವ ಪ್ರತಿಯೊಬ್ಬರಿಗೂ ನನ್ನ ಮನವಿ ಇದು. ಇಡೀ ದೇಶಕ್ಕೆ ಮಾದರಿಯಾದ ನೆಮ್ಮದಿಯ ಕರುನಾಡನ್ನು ಕಾಪಾಡಿಕೊಳ್ಳೋಣ” ಎಂದು ಅವರು ವಿನಂತಿಸಿದ್ದಾರೆ.

“ಕರ್ನಾಟಕವು ಎಲ್ಲರನ್ನೂ ಒಳಗೊಳ್ಳುವ ಶುದ್ಧ ಅಂತಃಕರಣದ ಮನಸುಗಳದ್ದು. ಭಾವನೆಗಳ ಕೆಂಡದ ಮಳೆ ಸುರಿಸುವ ಕಿರಾತಕರದ್ದಲ್ಲ. ಜನಪೀಡಕರನ್ನು ತಿರಸ್ಕರಿಸೋಣ. ಪರಂಪರಾಗತವಾಗಿ ಬಂದಿರುವ ಯುಗಾದಿ, ವರ್ಷತೊಡಕನ್ನು ಎಂದಿನಂತೆ ಸಂಭ್ರಮಿಸುವ ಮೂಲಕ ಇವರ ಸೋಗಲಾಡಿತನಕ್ಕೆ ಇತಿಶ್ರೀ ಹಾಡೋಣ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಕೋಮುದ್ವೇಷಕ್ಕೆ ಪೊಳ್ಳು ’ಸಮರ್ಥನೆ’ಯೂ ಬೇಡವಾಗಿರುವ ವಿಷಮ ಹಂತದಲ್ಲಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...