Homeಮುಖಪುಟಟಾರ್ಗೆಟ್ ತಲುಪದ ಉದ್ಯೋಗಿಗೆ ನಾಯಿಯಂತೆ ತೆವಳುವ ಶಿಕ್ಷೆ; ವ್ಯವಸ್ಥಾಪಕನ ಅಮಾನವೀಯ ವರ್ತನೆ

ಟಾರ್ಗೆಟ್ ತಲುಪದ ಉದ್ಯೋಗಿಗೆ ನಾಯಿಯಂತೆ ತೆವಳುವ ಶಿಕ್ಷೆ; ವ್ಯವಸ್ಥಾಪಕನ ಅಮಾನವೀಯ ವರ್ತನೆ

- Advertisement -
- Advertisement -

ಕೇರಳದ ಕೊಚ್ಚಿಯಲ್ಲಿರುವ ಖಾಸಗಿ ಮಾರ್ಕೆಟಿಂಗ್ ಸಂಸ್ಥೆಯ ಉದ್ಯೋಗಿಯೊಬ್ಬರು ಟಾರ್ಗೆಟ್ ತಲುಪಲಿಲ್ಲ ಎಂಬ ಕಾರಣಕ್ಕೆ ವ್ಯವಸ್ಥಾಪಕನೊಬ್ಬ ಅಮಾನವೀಯವಾಗಿ ನಡೆಸಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಸಂತ್ರಸ್ತನ ಕೊರಳಿಗೆ ಸರಪಳಿಯಿಂದ ಬಂಧಿಸಿ, ನಾಯಿಗಳಂತೆ ಮೊಣಕಾಲುಗಳ ಮೇಲೆ ನಡೆಯುವಂತೆ ಮಾಡಲಾಗಿದೆ.

ಪೊಲೀಸರ ಪ್ರಕಾರ, ಕಂಪನಿಯ ಮಾಜಿ ವ್ಯವಸ್ಥಾಪಕರೊಬ್ಬರು ಕಂಪನಿಯ ಮಾಲೀಕರೊಂದಿಗೆ ಅಸಮಾಧಾನ ಹೊಂದಿದ್ದರು. ಹೊಸದಾಗಿ ಕೆಲಸಕ್ಕೆ ಸೇರಿದ್ದ ಸಿಬ್ಬಂದಿಗೆ ಶಿಕ್ಷೆ ನೀಡಿ ವೀಡಿಯೊ ಚಿತ್ರೀಕರಿಸಿಕೊಂಡಿದ್ದಾನೆ. ತನ್ನ ಕೃತ್ಯ ಸಮರ್ಥಿಸಿಕೊಂಡಿದ್ದ ಆತ ಇದು ತರಬೇತಿಯ ಭಾಗವಾಗಿದೆ ಎಂದು ಹೇಳಿಕೊಂಡಿದ್ದಾನೆ.

ವ್ಯಕ್ತಿಯ ಕುತ್ತಿಗೆಗೆ ಚೈನ್ ಕಟ್ಟಿದ್ದು, ಮತ್ತೋರ್ವ ವ್ಯಕ್ತಿ ನಾಯಿಯಂತೆ ಮೊಣಕಾಲುಗಳ ಮೇಲೆ ನಡೆಯುವಂತೆ ಮಾಡುವುದನ್ನು ತೋರಿಸುವ ವೈರಲ್ ವೀಡಿಯೊವನ್ನು ಸುಮಾರು ನಾಲ್ಕು ತಿಂಗಳ ಹಿಂದೆ ಚಿತ್ರೀಕರಿಸಲಾಗಿದೆ. ಆರೋಪಿತ ವ್ಯವಸ್ಥಾಪಕ ಈಗ ಕಂಪನಿಯನ್ನು ತೊರೆದಿದ್ದಾನೆ ಎಂದು ತಿಳಿದುಬಂದಿದೆ.

ಮತ್ತೊಂದು ವೀಡಿಯೊದಲ್ಲಿ ಶಿಕ್ಷೆಯಾಗಿ ನೌಕರರನ್ನು ಬಲವಂತವಾಗಿ ವಿವಸ್ತ್ರಗೊಳಿಸುವುದನ್ನು ತೋರಿಸಲಾಗಿದೆ.

ವೀಡಿಯೊಗಳು ವೈರಲ್ ಆಗುತ್ತಿದ್ದಂತೆ, ರಾಜ್ಯ ಕಾರ್ಮಿಕ ಇಲಾಖೆಯು ಕೆಲಸದ ಸ್ಥಳದಲ್ಲಿ ನಡೆದ ಅಮಾನವೀಯ ಕಿರುಕುಳದ ಬಗ್ಗೆ ತನಿಖೆಗೆ ಆದೇಶಿಸಿತು. ಈ ವಿಷಯದ ಬಗ್ಗೆ ವಿವರವಾದ ವರದಿಯನ್ನು ಕೋರಿತು.

ವೈರಲ್ ವೀಡಿಯೊಗಳಲ್ಲಿ ಕಂಡುಬರುವ ನೌಕರರ ಹೇಳಿಕೆಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ, ಘಟನೆಗೆ ಮಾಜಿ ವ್ಯವಸ್ಥಾಪಕರನ್ನು ದೂಷಿಸಿದ್ದಾರೆ.

ಸಂಸ್ಥೆಯ ಉದ್ಯೋಗಿಗಳೆಂದು ನಂಬಲಾದ ಕೆಲವು ಜನರು ಸ್ಥಳೀಯ ಟಿವಿ ಚಾನೆಲ್‌ಗೆ ನೀಡಿದ ಹೇಳಿಕೆಯಲ್ಲಿ, ಟಾರ್ಗೆಟ್ ಸಾಧಿಸುವಲ್ಲಿ ವಿಫಲರಾದವರಿಗೆ ಆಡಳಿತ ಮಂಡಳಿಯು ಇಂತಹ ಶಿಕ್ಷೆಗಳನ್ನು ವಿಧಿಸುತ್ತಿದೆ ಎಂದು ಹೇಳಿದ್ದಾರೆ.

ಪೊಲೀಸರ ಪ್ರಕಾರ, ಈ ಘಟನೆ ಕಲೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಮಾರ್ಕೆಟಿಂಗ್ ಸಂಸ್ಥೆಯಲ್ಲಿ ನಡೆದಿದೆ; ಅಪರಾಧವು ಹತ್ತಿರದ ಪೆರುಂಬವೂರಿನಲ್ಲಿ ನಡೆದಿದೆ ಎಂದು ಹೇಳಲಾಗಿದೆ.

ದೃಶ್ಯಗಳಲ್ಲಿ ಕಿರುಕುಳ ಮತ್ತು ಚಿತ್ರಹಿಂಸೆ ನೀಡಲಾಗಿದೆ ಎಂದು ಹೇಳಲಾದ ವ್ಯಕ್ತಿ ಮಾತನಾಡಿ, ದೃಶ್ಯಗಳಲ್ಲಿ ಚಿತ್ರಿಸಿದ್ದಕ್ಕೆ ವಿರುದ್ಧವಾಗಿ ಹೇಳಿಕೆ ನೀಡಿದ್ದಾರೆ. ಸಂಸ್ಥೆಯಲ್ಲಿ ಯಾವುದೇ ಕಿರುಕುಳ ಇಲ್ಲ ಎಂದಿದ್ದಾರೆ.

“ನಾನು ಇನ್ನೂ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದೇನೆ. ಈ ದೃಶ್ಯಗಳು ಕೆಲವು ತಿಂಗಳ ಹಿಂದಿನವು ಮತ್ತು ಆಗ ಸಂಸ್ಥೆಯ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಬಲವಂತವಾಗಿ ತೆಗೆದುಕೊಂಡಿದ್ದಾರೆ. ನಂತರ ಅವರನ್ನು ಆಡಳಿತ ಮಂಡಳಿಯು ರಾಜೀನಾಮೆ ನೀಡುವಂತೆ ಕೇಳಿಕೊಂಡಿತು. ಅವರು ಈಗ ಸಂಸ್ಥೆಯ ಮಾಲೀಕರನ್ನು ಕೆಣಕಲು ಈ ದೃಶ್ಯಗಳನ್ನು ಬಳಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಅವರು ಪೊಲೀಸರು ಮತ್ತು ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಅದೇ ಹೇಳಿಕೆಯನ್ನು ನೀಡಿದ್ದಾರೆ ಎಂದು ವರದಿಯಾಗಿದೆ.

ರಾಜ್ಯ ಕಾರ್ಮಿಕ ಸಚಿವ ವಿ ಶಿವನ್‌ಕುಟ್ಟಿ ಈ ದೃಶ್ಯಗಳನ್ನು ‘ಆಘಾತಕಾರಿ’ ಎಂದು ಬಣ್ಣಿಸಿದ್ದಾರೆ. ಕೇರಳದಂತಹ ರಾಜ್ಯದಲ್ಲಿ ಇದನ್ನು ಯಾವುದೇ ಕಾರಣಕ್ಕೂ ಸ್ವೀಕರಿಸಲು ಸಾಧ್ಯವಿಲ್ಲ ಎಂದು ಹೇಳಿದರು.

“ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದೇನೆ, ತನಿಖೆ ನಡೆಸಿದ ನಂತರ ಘಟನೆಗೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಸೂಚಿಸಿದ್ದೇನೆ” ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ಹೈಕೋರ್ಟ್ ವಕೀಲ ಕುಲತ್ತೂರ್ ಜೈಸಿಂಗ್ ಅವರ ದೂರಿನ ಆಧಾರದ ಮೇಲೆ ರಾಜ್ಯ ಮಾನವ ಹಕ್ಕುಗಳ ಆಯೋಗವು ಘಟನೆಯ ಬಗ್ಗೆ ಪ್ರಕರಣ ದಾಖಲಿಸಿದೆ.

ಈ ಮಧ್ಯೆ, ಕೇರಳ ರಾಜ್ಯ ಯುವ ಆಯೋಗವು ಸಹ ಮಧ್ಯಪ್ರವೇಶಿಸಿ ಕಿರುಕುಳ ಘಟನೆಯ ಬಗ್ಗೆ ಸ್ವತಃ ಪ್ರಕರಣ ದಾಖಲಿಸಿದೆ. ಈ ಸಂಬಂಧ ವರದಿ ಸಲ್ಲಿಸುವಂತೆ ಸಮಿತಿಯು ಜಿಲ್ಲಾ ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಿದೆ.

ನಾಗರಿಕ ಮತ್ತು ಪ್ರಜಾಪ್ರಭುತ್ವ ಸಮಾಜದಲ್ಲಿ ಸ್ವೀಕಾರಾರ್ಹವಲ್ಲದ ಇಂತಹ ಪದ್ಧತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಯೋಗದ ಅಧ್ಯಕ್ಷ ಎಂ ಶಾಜರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತೆಲಂಗಾಣ| 20 ಮಹಿಳೆಯರು ಸೇರಿದಂತೆ 86 ಮಾವೋವಾದಿಗಳ ಶರಣಾಗತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...