Homeಮುಖಪುಟಟಾರ್ಗೆಟ್ ತಲುಪದ ಉದ್ಯೋಗಿಗೆ ನಾಯಿಯಂತೆ ತೆವಳುವ ಶಿಕ್ಷೆ; ವ್ಯವಸ್ಥಾಪಕನ ಅಮಾನವೀಯ ವರ್ತನೆ

ಟಾರ್ಗೆಟ್ ತಲುಪದ ಉದ್ಯೋಗಿಗೆ ನಾಯಿಯಂತೆ ತೆವಳುವ ಶಿಕ್ಷೆ; ವ್ಯವಸ್ಥಾಪಕನ ಅಮಾನವೀಯ ವರ್ತನೆ

- Advertisement -
- Advertisement -

ಕೇರಳದ ಕೊಚ್ಚಿಯಲ್ಲಿರುವ ಖಾಸಗಿ ಮಾರ್ಕೆಟಿಂಗ್ ಸಂಸ್ಥೆಯ ಉದ್ಯೋಗಿಯೊಬ್ಬರು ಟಾರ್ಗೆಟ್ ತಲುಪಲಿಲ್ಲ ಎಂಬ ಕಾರಣಕ್ಕೆ ವ್ಯವಸ್ಥಾಪಕನೊಬ್ಬ ಅಮಾನವೀಯವಾಗಿ ನಡೆಸಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಸಂತ್ರಸ್ತನ ಕೊರಳಿಗೆ ಸರಪಳಿಯಿಂದ ಬಂಧಿಸಿ, ನಾಯಿಗಳಂತೆ ಮೊಣಕಾಲುಗಳ ಮೇಲೆ ನಡೆಯುವಂತೆ ಮಾಡಲಾಗಿದೆ.

ಪೊಲೀಸರ ಪ್ರಕಾರ, ಕಂಪನಿಯ ಮಾಜಿ ವ್ಯವಸ್ಥಾಪಕರೊಬ್ಬರು ಕಂಪನಿಯ ಮಾಲೀಕರೊಂದಿಗೆ ಅಸಮಾಧಾನ ಹೊಂದಿದ್ದರು. ಹೊಸದಾಗಿ ಕೆಲಸಕ್ಕೆ ಸೇರಿದ್ದ ಸಿಬ್ಬಂದಿಗೆ ಶಿಕ್ಷೆ ನೀಡಿ ವೀಡಿಯೊ ಚಿತ್ರೀಕರಿಸಿಕೊಂಡಿದ್ದಾನೆ. ತನ್ನ ಕೃತ್ಯ ಸಮರ್ಥಿಸಿಕೊಂಡಿದ್ದ ಆತ ಇದು ತರಬೇತಿಯ ಭಾಗವಾಗಿದೆ ಎಂದು ಹೇಳಿಕೊಂಡಿದ್ದಾನೆ.

ವ್ಯಕ್ತಿಯ ಕುತ್ತಿಗೆಗೆ ಚೈನ್ ಕಟ್ಟಿದ್ದು, ಮತ್ತೋರ್ವ ವ್ಯಕ್ತಿ ನಾಯಿಯಂತೆ ಮೊಣಕಾಲುಗಳ ಮೇಲೆ ನಡೆಯುವಂತೆ ಮಾಡುವುದನ್ನು ತೋರಿಸುವ ವೈರಲ್ ವೀಡಿಯೊವನ್ನು ಸುಮಾರು ನಾಲ್ಕು ತಿಂಗಳ ಹಿಂದೆ ಚಿತ್ರೀಕರಿಸಲಾಗಿದೆ. ಆರೋಪಿತ ವ್ಯವಸ್ಥಾಪಕ ಈಗ ಕಂಪನಿಯನ್ನು ತೊರೆದಿದ್ದಾನೆ ಎಂದು ತಿಳಿದುಬಂದಿದೆ.

ಮತ್ತೊಂದು ವೀಡಿಯೊದಲ್ಲಿ ಶಿಕ್ಷೆಯಾಗಿ ನೌಕರರನ್ನು ಬಲವಂತವಾಗಿ ವಿವಸ್ತ್ರಗೊಳಿಸುವುದನ್ನು ತೋರಿಸಲಾಗಿದೆ.

ವೀಡಿಯೊಗಳು ವೈರಲ್ ಆಗುತ್ತಿದ್ದಂತೆ, ರಾಜ್ಯ ಕಾರ್ಮಿಕ ಇಲಾಖೆಯು ಕೆಲಸದ ಸ್ಥಳದಲ್ಲಿ ನಡೆದ ಅಮಾನವೀಯ ಕಿರುಕುಳದ ಬಗ್ಗೆ ತನಿಖೆಗೆ ಆದೇಶಿಸಿತು. ಈ ವಿಷಯದ ಬಗ್ಗೆ ವಿವರವಾದ ವರದಿಯನ್ನು ಕೋರಿತು.

ವೈರಲ್ ವೀಡಿಯೊಗಳಲ್ಲಿ ಕಂಡುಬರುವ ನೌಕರರ ಹೇಳಿಕೆಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ, ಘಟನೆಗೆ ಮಾಜಿ ವ್ಯವಸ್ಥಾಪಕರನ್ನು ದೂಷಿಸಿದ್ದಾರೆ.

ಸಂಸ್ಥೆಯ ಉದ್ಯೋಗಿಗಳೆಂದು ನಂಬಲಾದ ಕೆಲವು ಜನರು ಸ್ಥಳೀಯ ಟಿವಿ ಚಾನೆಲ್‌ಗೆ ನೀಡಿದ ಹೇಳಿಕೆಯಲ್ಲಿ, ಟಾರ್ಗೆಟ್ ಸಾಧಿಸುವಲ್ಲಿ ವಿಫಲರಾದವರಿಗೆ ಆಡಳಿತ ಮಂಡಳಿಯು ಇಂತಹ ಶಿಕ್ಷೆಗಳನ್ನು ವಿಧಿಸುತ್ತಿದೆ ಎಂದು ಹೇಳಿದ್ದಾರೆ.

ಪೊಲೀಸರ ಪ್ರಕಾರ, ಈ ಘಟನೆ ಕಲೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಮಾರ್ಕೆಟಿಂಗ್ ಸಂಸ್ಥೆಯಲ್ಲಿ ನಡೆದಿದೆ; ಅಪರಾಧವು ಹತ್ತಿರದ ಪೆರುಂಬವೂರಿನಲ್ಲಿ ನಡೆದಿದೆ ಎಂದು ಹೇಳಲಾಗಿದೆ.

ದೃಶ್ಯಗಳಲ್ಲಿ ಕಿರುಕುಳ ಮತ್ತು ಚಿತ್ರಹಿಂಸೆ ನೀಡಲಾಗಿದೆ ಎಂದು ಹೇಳಲಾದ ವ್ಯಕ್ತಿ ಮಾತನಾಡಿ, ದೃಶ್ಯಗಳಲ್ಲಿ ಚಿತ್ರಿಸಿದ್ದಕ್ಕೆ ವಿರುದ್ಧವಾಗಿ ಹೇಳಿಕೆ ನೀಡಿದ್ದಾರೆ. ಸಂಸ್ಥೆಯಲ್ಲಿ ಯಾವುದೇ ಕಿರುಕುಳ ಇಲ್ಲ ಎಂದಿದ್ದಾರೆ.

“ನಾನು ಇನ್ನೂ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದೇನೆ. ಈ ದೃಶ್ಯಗಳು ಕೆಲವು ತಿಂಗಳ ಹಿಂದಿನವು ಮತ್ತು ಆಗ ಸಂಸ್ಥೆಯ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಬಲವಂತವಾಗಿ ತೆಗೆದುಕೊಂಡಿದ್ದಾರೆ. ನಂತರ ಅವರನ್ನು ಆಡಳಿತ ಮಂಡಳಿಯು ರಾಜೀನಾಮೆ ನೀಡುವಂತೆ ಕೇಳಿಕೊಂಡಿತು. ಅವರು ಈಗ ಸಂಸ್ಥೆಯ ಮಾಲೀಕರನ್ನು ಕೆಣಕಲು ಈ ದೃಶ್ಯಗಳನ್ನು ಬಳಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಅವರು ಪೊಲೀಸರು ಮತ್ತು ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಅದೇ ಹೇಳಿಕೆಯನ್ನು ನೀಡಿದ್ದಾರೆ ಎಂದು ವರದಿಯಾಗಿದೆ.

ರಾಜ್ಯ ಕಾರ್ಮಿಕ ಸಚಿವ ವಿ ಶಿವನ್‌ಕುಟ್ಟಿ ಈ ದೃಶ್ಯಗಳನ್ನು ‘ಆಘಾತಕಾರಿ’ ಎಂದು ಬಣ್ಣಿಸಿದ್ದಾರೆ. ಕೇರಳದಂತಹ ರಾಜ್ಯದಲ್ಲಿ ಇದನ್ನು ಯಾವುದೇ ಕಾರಣಕ್ಕೂ ಸ್ವೀಕರಿಸಲು ಸಾಧ್ಯವಿಲ್ಲ ಎಂದು ಹೇಳಿದರು.

“ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದೇನೆ, ತನಿಖೆ ನಡೆಸಿದ ನಂತರ ಘಟನೆಗೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಸೂಚಿಸಿದ್ದೇನೆ” ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ಹೈಕೋರ್ಟ್ ವಕೀಲ ಕುಲತ್ತೂರ್ ಜೈಸಿಂಗ್ ಅವರ ದೂರಿನ ಆಧಾರದ ಮೇಲೆ ರಾಜ್ಯ ಮಾನವ ಹಕ್ಕುಗಳ ಆಯೋಗವು ಘಟನೆಯ ಬಗ್ಗೆ ಪ್ರಕರಣ ದಾಖಲಿಸಿದೆ.

ಈ ಮಧ್ಯೆ, ಕೇರಳ ರಾಜ್ಯ ಯುವ ಆಯೋಗವು ಸಹ ಮಧ್ಯಪ್ರವೇಶಿಸಿ ಕಿರುಕುಳ ಘಟನೆಯ ಬಗ್ಗೆ ಸ್ವತಃ ಪ್ರಕರಣ ದಾಖಲಿಸಿದೆ. ಈ ಸಂಬಂಧ ವರದಿ ಸಲ್ಲಿಸುವಂತೆ ಸಮಿತಿಯು ಜಿಲ್ಲಾ ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಿದೆ.

ನಾಗರಿಕ ಮತ್ತು ಪ್ರಜಾಪ್ರಭುತ್ವ ಸಮಾಜದಲ್ಲಿ ಸ್ವೀಕಾರಾರ್ಹವಲ್ಲದ ಇಂತಹ ಪದ್ಧತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಯೋಗದ ಅಧ್ಯಕ್ಷ ಎಂ ಶಾಜರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತೆಲಂಗಾಣ| 20 ಮಹಿಳೆಯರು ಸೇರಿದಂತೆ 86 ಮಾವೋವಾದಿಗಳ ಶರಣಾಗತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...