Homeಮುಖಪುಟಟಾರ್ಗೆಟ್ ತಲುಪದ ಉದ್ಯೋಗಿಗೆ ನಾಯಿಯಂತೆ ತೆವಳುವ ಶಿಕ್ಷೆ; ವ್ಯವಸ್ಥಾಪಕನ ಅಮಾನವೀಯ ವರ್ತನೆ

ಟಾರ್ಗೆಟ್ ತಲುಪದ ಉದ್ಯೋಗಿಗೆ ನಾಯಿಯಂತೆ ತೆವಳುವ ಶಿಕ್ಷೆ; ವ್ಯವಸ್ಥಾಪಕನ ಅಮಾನವೀಯ ವರ್ತನೆ

- Advertisement -
- Advertisement -

ಕೇರಳದ ಕೊಚ್ಚಿಯಲ್ಲಿರುವ ಖಾಸಗಿ ಮಾರ್ಕೆಟಿಂಗ್ ಸಂಸ್ಥೆಯ ಉದ್ಯೋಗಿಯೊಬ್ಬರು ಟಾರ್ಗೆಟ್ ತಲುಪಲಿಲ್ಲ ಎಂಬ ಕಾರಣಕ್ಕೆ ವ್ಯವಸ್ಥಾಪಕನೊಬ್ಬ ಅಮಾನವೀಯವಾಗಿ ನಡೆಸಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಸಂತ್ರಸ್ತನ ಕೊರಳಿಗೆ ಸರಪಳಿಯಿಂದ ಬಂಧಿಸಿ, ನಾಯಿಗಳಂತೆ ಮೊಣಕಾಲುಗಳ ಮೇಲೆ ನಡೆಯುವಂತೆ ಮಾಡಲಾಗಿದೆ.

ಪೊಲೀಸರ ಪ್ರಕಾರ, ಕಂಪನಿಯ ಮಾಜಿ ವ್ಯವಸ್ಥಾಪಕರೊಬ್ಬರು ಕಂಪನಿಯ ಮಾಲೀಕರೊಂದಿಗೆ ಅಸಮಾಧಾನ ಹೊಂದಿದ್ದರು. ಹೊಸದಾಗಿ ಕೆಲಸಕ್ಕೆ ಸೇರಿದ್ದ ಸಿಬ್ಬಂದಿಗೆ ಶಿಕ್ಷೆ ನೀಡಿ ವೀಡಿಯೊ ಚಿತ್ರೀಕರಿಸಿಕೊಂಡಿದ್ದಾನೆ. ತನ್ನ ಕೃತ್ಯ ಸಮರ್ಥಿಸಿಕೊಂಡಿದ್ದ ಆತ ಇದು ತರಬೇತಿಯ ಭಾಗವಾಗಿದೆ ಎಂದು ಹೇಳಿಕೊಂಡಿದ್ದಾನೆ.

ವ್ಯಕ್ತಿಯ ಕುತ್ತಿಗೆಗೆ ಚೈನ್ ಕಟ್ಟಿದ್ದು, ಮತ್ತೋರ್ವ ವ್ಯಕ್ತಿ ನಾಯಿಯಂತೆ ಮೊಣಕಾಲುಗಳ ಮೇಲೆ ನಡೆಯುವಂತೆ ಮಾಡುವುದನ್ನು ತೋರಿಸುವ ವೈರಲ್ ವೀಡಿಯೊವನ್ನು ಸುಮಾರು ನಾಲ್ಕು ತಿಂಗಳ ಹಿಂದೆ ಚಿತ್ರೀಕರಿಸಲಾಗಿದೆ. ಆರೋಪಿತ ವ್ಯವಸ್ಥಾಪಕ ಈಗ ಕಂಪನಿಯನ್ನು ತೊರೆದಿದ್ದಾನೆ ಎಂದು ತಿಳಿದುಬಂದಿದೆ.

ಮತ್ತೊಂದು ವೀಡಿಯೊದಲ್ಲಿ ಶಿಕ್ಷೆಯಾಗಿ ನೌಕರರನ್ನು ಬಲವಂತವಾಗಿ ವಿವಸ್ತ್ರಗೊಳಿಸುವುದನ್ನು ತೋರಿಸಲಾಗಿದೆ.

ವೀಡಿಯೊಗಳು ವೈರಲ್ ಆಗುತ್ತಿದ್ದಂತೆ, ರಾಜ್ಯ ಕಾರ್ಮಿಕ ಇಲಾಖೆಯು ಕೆಲಸದ ಸ್ಥಳದಲ್ಲಿ ನಡೆದ ಅಮಾನವೀಯ ಕಿರುಕುಳದ ಬಗ್ಗೆ ತನಿಖೆಗೆ ಆದೇಶಿಸಿತು. ಈ ವಿಷಯದ ಬಗ್ಗೆ ವಿವರವಾದ ವರದಿಯನ್ನು ಕೋರಿತು.

ವೈರಲ್ ವೀಡಿಯೊಗಳಲ್ಲಿ ಕಂಡುಬರುವ ನೌಕರರ ಹೇಳಿಕೆಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ, ಘಟನೆಗೆ ಮಾಜಿ ವ್ಯವಸ್ಥಾಪಕರನ್ನು ದೂಷಿಸಿದ್ದಾರೆ.

ಸಂಸ್ಥೆಯ ಉದ್ಯೋಗಿಗಳೆಂದು ನಂಬಲಾದ ಕೆಲವು ಜನರು ಸ್ಥಳೀಯ ಟಿವಿ ಚಾನೆಲ್‌ಗೆ ನೀಡಿದ ಹೇಳಿಕೆಯಲ್ಲಿ, ಟಾರ್ಗೆಟ್ ಸಾಧಿಸುವಲ್ಲಿ ವಿಫಲರಾದವರಿಗೆ ಆಡಳಿತ ಮಂಡಳಿಯು ಇಂತಹ ಶಿಕ್ಷೆಗಳನ್ನು ವಿಧಿಸುತ್ತಿದೆ ಎಂದು ಹೇಳಿದ್ದಾರೆ.

ಪೊಲೀಸರ ಪ್ರಕಾರ, ಈ ಘಟನೆ ಕಲೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಮಾರ್ಕೆಟಿಂಗ್ ಸಂಸ್ಥೆಯಲ್ಲಿ ನಡೆದಿದೆ; ಅಪರಾಧವು ಹತ್ತಿರದ ಪೆರುಂಬವೂರಿನಲ್ಲಿ ನಡೆದಿದೆ ಎಂದು ಹೇಳಲಾಗಿದೆ.

ದೃಶ್ಯಗಳಲ್ಲಿ ಕಿರುಕುಳ ಮತ್ತು ಚಿತ್ರಹಿಂಸೆ ನೀಡಲಾಗಿದೆ ಎಂದು ಹೇಳಲಾದ ವ್ಯಕ್ತಿ ಮಾತನಾಡಿ, ದೃಶ್ಯಗಳಲ್ಲಿ ಚಿತ್ರಿಸಿದ್ದಕ್ಕೆ ವಿರುದ್ಧವಾಗಿ ಹೇಳಿಕೆ ನೀಡಿದ್ದಾರೆ. ಸಂಸ್ಥೆಯಲ್ಲಿ ಯಾವುದೇ ಕಿರುಕುಳ ಇಲ್ಲ ಎಂದಿದ್ದಾರೆ.

“ನಾನು ಇನ್ನೂ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದೇನೆ. ಈ ದೃಶ್ಯಗಳು ಕೆಲವು ತಿಂಗಳ ಹಿಂದಿನವು ಮತ್ತು ಆಗ ಸಂಸ್ಥೆಯ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಬಲವಂತವಾಗಿ ತೆಗೆದುಕೊಂಡಿದ್ದಾರೆ. ನಂತರ ಅವರನ್ನು ಆಡಳಿತ ಮಂಡಳಿಯು ರಾಜೀನಾಮೆ ನೀಡುವಂತೆ ಕೇಳಿಕೊಂಡಿತು. ಅವರು ಈಗ ಸಂಸ್ಥೆಯ ಮಾಲೀಕರನ್ನು ಕೆಣಕಲು ಈ ದೃಶ್ಯಗಳನ್ನು ಬಳಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಅವರು ಪೊಲೀಸರು ಮತ್ತು ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಅದೇ ಹೇಳಿಕೆಯನ್ನು ನೀಡಿದ್ದಾರೆ ಎಂದು ವರದಿಯಾಗಿದೆ.

ರಾಜ್ಯ ಕಾರ್ಮಿಕ ಸಚಿವ ವಿ ಶಿವನ್‌ಕುಟ್ಟಿ ಈ ದೃಶ್ಯಗಳನ್ನು ‘ಆಘಾತಕಾರಿ’ ಎಂದು ಬಣ್ಣಿಸಿದ್ದಾರೆ. ಕೇರಳದಂತಹ ರಾಜ್ಯದಲ್ಲಿ ಇದನ್ನು ಯಾವುದೇ ಕಾರಣಕ್ಕೂ ಸ್ವೀಕರಿಸಲು ಸಾಧ್ಯವಿಲ್ಲ ಎಂದು ಹೇಳಿದರು.

“ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದೇನೆ, ತನಿಖೆ ನಡೆಸಿದ ನಂತರ ಘಟನೆಗೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಸೂಚಿಸಿದ್ದೇನೆ” ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ಹೈಕೋರ್ಟ್ ವಕೀಲ ಕುಲತ್ತೂರ್ ಜೈಸಿಂಗ್ ಅವರ ದೂರಿನ ಆಧಾರದ ಮೇಲೆ ರಾಜ್ಯ ಮಾನವ ಹಕ್ಕುಗಳ ಆಯೋಗವು ಘಟನೆಯ ಬಗ್ಗೆ ಪ್ರಕರಣ ದಾಖಲಿಸಿದೆ.

ಈ ಮಧ್ಯೆ, ಕೇರಳ ರಾಜ್ಯ ಯುವ ಆಯೋಗವು ಸಹ ಮಧ್ಯಪ್ರವೇಶಿಸಿ ಕಿರುಕುಳ ಘಟನೆಯ ಬಗ್ಗೆ ಸ್ವತಃ ಪ್ರಕರಣ ದಾಖಲಿಸಿದೆ. ಈ ಸಂಬಂಧ ವರದಿ ಸಲ್ಲಿಸುವಂತೆ ಸಮಿತಿಯು ಜಿಲ್ಲಾ ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಿದೆ.

ನಾಗರಿಕ ಮತ್ತು ಪ್ರಜಾಪ್ರಭುತ್ವ ಸಮಾಜದಲ್ಲಿ ಸ್ವೀಕಾರಾರ್ಹವಲ್ಲದ ಇಂತಹ ಪದ್ಧತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಯೋಗದ ಅಧ್ಯಕ್ಷ ಎಂ ಶಾಜರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತೆಲಂಗಾಣ| 20 ಮಹಿಳೆಯರು ಸೇರಿದಂತೆ 86 ಮಾವೋವಾದಿಗಳ ಶರಣಾಗತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...