Homeಮುಖಪುಟಟಾರ್ಗೆಟ್ ತಲುಪದ ಉದ್ಯೋಗಿಗೆ ನಾಯಿಯಂತೆ ತೆವಳುವ ಶಿಕ್ಷೆ; ವ್ಯವಸ್ಥಾಪಕನ ಅಮಾನವೀಯ ವರ್ತನೆ

ಟಾರ್ಗೆಟ್ ತಲುಪದ ಉದ್ಯೋಗಿಗೆ ನಾಯಿಯಂತೆ ತೆವಳುವ ಶಿಕ್ಷೆ; ವ್ಯವಸ್ಥಾಪಕನ ಅಮಾನವೀಯ ವರ್ತನೆ

- Advertisement -
- Advertisement -

ಕೇರಳದ ಕೊಚ್ಚಿಯಲ್ಲಿರುವ ಖಾಸಗಿ ಮಾರ್ಕೆಟಿಂಗ್ ಸಂಸ್ಥೆಯ ಉದ್ಯೋಗಿಯೊಬ್ಬರು ಟಾರ್ಗೆಟ್ ತಲುಪಲಿಲ್ಲ ಎಂಬ ಕಾರಣಕ್ಕೆ ವ್ಯವಸ್ಥಾಪಕನೊಬ್ಬ ಅಮಾನವೀಯವಾಗಿ ನಡೆಸಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಸಂತ್ರಸ್ತನ ಕೊರಳಿಗೆ ಸರಪಳಿಯಿಂದ ಬಂಧಿಸಿ, ನಾಯಿಗಳಂತೆ ಮೊಣಕಾಲುಗಳ ಮೇಲೆ ನಡೆಯುವಂತೆ ಮಾಡಲಾಗಿದೆ.

ಪೊಲೀಸರ ಪ್ರಕಾರ, ಕಂಪನಿಯ ಮಾಜಿ ವ್ಯವಸ್ಥಾಪಕರೊಬ್ಬರು ಕಂಪನಿಯ ಮಾಲೀಕರೊಂದಿಗೆ ಅಸಮಾಧಾನ ಹೊಂದಿದ್ದರು. ಹೊಸದಾಗಿ ಕೆಲಸಕ್ಕೆ ಸೇರಿದ್ದ ಸಿಬ್ಬಂದಿಗೆ ಶಿಕ್ಷೆ ನೀಡಿ ವೀಡಿಯೊ ಚಿತ್ರೀಕರಿಸಿಕೊಂಡಿದ್ದಾನೆ. ತನ್ನ ಕೃತ್ಯ ಸಮರ್ಥಿಸಿಕೊಂಡಿದ್ದ ಆತ ಇದು ತರಬೇತಿಯ ಭಾಗವಾಗಿದೆ ಎಂದು ಹೇಳಿಕೊಂಡಿದ್ದಾನೆ.

ವ್ಯಕ್ತಿಯ ಕುತ್ತಿಗೆಗೆ ಚೈನ್ ಕಟ್ಟಿದ್ದು, ಮತ್ತೋರ್ವ ವ್ಯಕ್ತಿ ನಾಯಿಯಂತೆ ಮೊಣಕಾಲುಗಳ ಮೇಲೆ ನಡೆಯುವಂತೆ ಮಾಡುವುದನ್ನು ತೋರಿಸುವ ವೈರಲ್ ವೀಡಿಯೊವನ್ನು ಸುಮಾರು ನಾಲ್ಕು ತಿಂಗಳ ಹಿಂದೆ ಚಿತ್ರೀಕರಿಸಲಾಗಿದೆ. ಆರೋಪಿತ ವ್ಯವಸ್ಥಾಪಕ ಈಗ ಕಂಪನಿಯನ್ನು ತೊರೆದಿದ್ದಾನೆ ಎಂದು ತಿಳಿದುಬಂದಿದೆ.

ಮತ್ತೊಂದು ವೀಡಿಯೊದಲ್ಲಿ ಶಿಕ್ಷೆಯಾಗಿ ನೌಕರರನ್ನು ಬಲವಂತವಾಗಿ ವಿವಸ್ತ್ರಗೊಳಿಸುವುದನ್ನು ತೋರಿಸಲಾಗಿದೆ.

ವೀಡಿಯೊಗಳು ವೈರಲ್ ಆಗುತ್ತಿದ್ದಂತೆ, ರಾಜ್ಯ ಕಾರ್ಮಿಕ ಇಲಾಖೆಯು ಕೆಲಸದ ಸ್ಥಳದಲ್ಲಿ ನಡೆದ ಅಮಾನವೀಯ ಕಿರುಕುಳದ ಬಗ್ಗೆ ತನಿಖೆಗೆ ಆದೇಶಿಸಿತು. ಈ ವಿಷಯದ ಬಗ್ಗೆ ವಿವರವಾದ ವರದಿಯನ್ನು ಕೋರಿತು.

ವೈರಲ್ ವೀಡಿಯೊಗಳಲ್ಲಿ ಕಂಡುಬರುವ ನೌಕರರ ಹೇಳಿಕೆಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ, ಘಟನೆಗೆ ಮಾಜಿ ವ್ಯವಸ್ಥಾಪಕರನ್ನು ದೂಷಿಸಿದ್ದಾರೆ.

ಸಂಸ್ಥೆಯ ಉದ್ಯೋಗಿಗಳೆಂದು ನಂಬಲಾದ ಕೆಲವು ಜನರು ಸ್ಥಳೀಯ ಟಿವಿ ಚಾನೆಲ್‌ಗೆ ನೀಡಿದ ಹೇಳಿಕೆಯಲ್ಲಿ, ಟಾರ್ಗೆಟ್ ಸಾಧಿಸುವಲ್ಲಿ ವಿಫಲರಾದವರಿಗೆ ಆಡಳಿತ ಮಂಡಳಿಯು ಇಂತಹ ಶಿಕ್ಷೆಗಳನ್ನು ವಿಧಿಸುತ್ತಿದೆ ಎಂದು ಹೇಳಿದ್ದಾರೆ.

ಪೊಲೀಸರ ಪ್ರಕಾರ, ಈ ಘಟನೆ ಕಲೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಮಾರ್ಕೆಟಿಂಗ್ ಸಂಸ್ಥೆಯಲ್ಲಿ ನಡೆದಿದೆ; ಅಪರಾಧವು ಹತ್ತಿರದ ಪೆರುಂಬವೂರಿನಲ್ಲಿ ನಡೆದಿದೆ ಎಂದು ಹೇಳಲಾಗಿದೆ.

ದೃಶ್ಯಗಳಲ್ಲಿ ಕಿರುಕುಳ ಮತ್ತು ಚಿತ್ರಹಿಂಸೆ ನೀಡಲಾಗಿದೆ ಎಂದು ಹೇಳಲಾದ ವ್ಯಕ್ತಿ ಮಾತನಾಡಿ, ದೃಶ್ಯಗಳಲ್ಲಿ ಚಿತ್ರಿಸಿದ್ದಕ್ಕೆ ವಿರುದ್ಧವಾಗಿ ಹೇಳಿಕೆ ನೀಡಿದ್ದಾರೆ. ಸಂಸ್ಥೆಯಲ್ಲಿ ಯಾವುದೇ ಕಿರುಕುಳ ಇಲ್ಲ ಎಂದಿದ್ದಾರೆ.

“ನಾನು ಇನ್ನೂ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದೇನೆ. ಈ ದೃಶ್ಯಗಳು ಕೆಲವು ತಿಂಗಳ ಹಿಂದಿನವು ಮತ್ತು ಆಗ ಸಂಸ್ಥೆಯ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಬಲವಂತವಾಗಿ ತೆಗೆದುಕೊಂಡಿದ್ದಾರೆ. ನಂತರ ಅವರನ್ನು ಆಡಳಿತ ಮಂಡಳಿಯು ರಾಜೀನಾಮೆ ನೀಡುವಂತೆ ಕೇಳಿಕೊಂಡಿತು. ಅವರು ಈಗ ಸಂಸ್ಥೆಯ ಮಾಲೀಕರನ್ನು ಕೆಣಕಲು ಈ ದೃಶ್ಯಗಳನ್ನು ಬಳಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಅವರು ಪೊಲೀಸರು ಮತ್ತು ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಅದೇ ಹೇಳಿಕೆಯನ್ನು ನೀಡಿದ್ದಾರೆ ಎಂದು ವರದಿಯಾಗಿದೆ.

ರಾಜ್ಯ ಕಾರ್ಮಿಕ ಸಚಿವ ವಿ ಶಿವನ್‌ಕುಟ್ಟಿ ಈ ದೃಶ್ಯಗಳನ್ನು ‘ಆಘಾತಕಾರಿ’ ಎಂದು ಬಣ್ಣಿಸಿದ್ದಾರೆ. ಕೇರಳದಂತಹ ರಾಜ್ಯದಲ್ಲಿ ಇದನ್ನು ಯಾವುದೇ ಕಾರಣಕ್ಕೂ ಸ್ವೀಕರಿಸಲು ಸಾಧ್ಯವಿಲ್ಲ ಎಂದು ಹೇಳಿದರು.

“ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದೇನೆ, ತನಿಖೆ ನಡೆಸಿದ ನಂತರ ಘಟನೆಗೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಸೂಚಿಸಿದ್ದೇನೆ” ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ಹೈಕೋರ್ಟ್ ವಕೀಲ ಕುಲತ್ತೂರ್ ಜೈಸಿಂಗ್ ಅವರ ದೂರಿನ ಆಧಾರದ ಮೇಲೆ ರಾಜ್ಯ ಮಾನವ ಹಕ್ಕುಗಳ ಆಯೋಗವು ಘಟನೆಯ ಬಗ್ಗೆ ಪ್ರಕರಣ ದಾಖಲಿಸಿದೆ.

ಈ ಮಧ್ಯೆ, ಕೇರಳ ರಾಜ್ಯ ಯುವ ಆಯೋಗವು ಸಹ ಮಧ್ಯಪ್ರವೇಶಿಸಿ ಕಿರುಕುಳ ಘಟನೆಯ ಬಗ್ಗೆ ಸ್ವತಃ ಪ್ರಕರಣ ದಾಖಲಿಸಿದೆ. ಈ ಸಂಬಂಧ ವರದಿ ಸಲ್ಲಿಸುವಂತೆ ಸಮಿತಿಯು ಜಿಲ್ಲಾ ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಿದೆ.

ನಾಗರಿಕ ಮತ್ತು ಪ್ರಜಾಪ್ರಭುತ್ವ ಸಮಾಜದಲ್ಲಿ ಸ್ವೀಕಾರಾರ್ಹವಲ್ಲದ ಇಂತಹ ಪದ್ಧತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಯೋಗದ ಅಧ್ಯಕ್ಷ ಎಂ ಶಾಜರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತೆಲಂಗಾಣ| 20 ಮಹಿಳೆಯರು ಸೇರಿದಂತೆ 86 ಮಾವೋವಾದಿಗಳ ಶರಣಾಗತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...