Homeಮುಖಪುಟರಾಜ್‌ ಕುಂದ್ರಾ ವಿರುದ್ದ ಸಾಕ್ಷಿ ಹೇಳಲಿರುವ ಅವರದೇ ಕಂಪನಿಯ ಉದ್ಯೋಗಿಗಳು!

ರಾಜ್‌ ಕುಂದ್ರಾ ವಿರುದ್ದ ಸಾಕ್ಷಿ ಹೇಳಲಿರುವ ಅವರದೇ ಕಂಪನಿಯ ಉದ್ಯೋಗಿಗಳು!

- Advertisement -
- Advertisement -

ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಉದ್ಯಮಿ ರಾಜ್‌ ಕುಂದ್ರಾಗೆ ಇದೀಗ ಮತ್ತೊಂದು ಅಘಾತ ಎದುರಾಗಿದೆ. ತನ್ನ ವಿರುದ್ದ ಪ್ರಮುಖ ಸಾಕ್ಷಿಗಳಾಗಿ ತನ್ನದೆ ಕಂಪನಿಯ ನಾಲ್ಕು ಉದ್ಯೋಗಿಗಳು ಮುಂದೆ ಬಂದಿದ್ದಾರೆ ಎಂದು ವರದಿಯಾಗಿದೆ. ರಾಜ್‌ ಕುಂದ್ರಾರನ್ನು ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಜುಲೈ 19 ರಂದು ಪೊಲೀಸರು ಬಂಧಿಸಿದ್ದರು.

ಪ್ರಕರಣದಲ್ಲಿ ಈ ನಾಲ್ಕು ನೌಕರರು ಪ್ರಮುಖ ವ್ಯಕ್ತಿಗಳಾಗಿದ್ದಾರೆ ಎಂದು ಕ್ರೈಂ ಬ್ರಾಂಚ್‌ ಮೂಲಗಳು ತಿಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ರಾಜ್‌ ಕುಂದ್ರಾ ಮತ್ತು ಇತರರು ತನಿಖೆಗೆ ಸರಿಯಾಗಿ ಸಹಕರಿಸದ ಕಾರಣ ಪ್ರಸ್ತುತ ಕಂಪನಿಯ ನಾಲ್ಕು ಉದ್ಯೋಗಿಗಳು ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಹೊರಗೆಡಹುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅಶ್ಲೀಲ ಚಿತ್ರ ತಯಾರಿಸಿ ಪ್ರಸಾರ: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್‌ ಕುಂದ್ರಾ ಬಂಧನ

ವ್ಯವಹಾರ ಒಪ್ಪಂದಗಳು, ಹಣಕಾಸಿನ ವ್ಯವಹಾರಗಳು, ದಂಧೆಯ ಕಾರ್ಯಚಟುವಟಿಕೆಗಳ ವಿವರಗಳನ್ನು ನಾಲ್ಕು ಉದ್ಯೋಗಿಗಳಿಂದ ಕ್ರೈಂ ಬ್ರಾಂಚ್‌ ಪಡೆಯುವ ಸಾಧ್ಯತೆಯಿದೆ. ದಂಧೆಯ ಕಾರ್ಯಚಟುವಟಿಕೆ ಮತ್ತು ಆಪಾದಿತ ಅಶ್ಲೀಲ ವಿಡಿಯೊಗಳ ಉತ್ಪಾದನೆಗಾಗಿ ಹಣವನ್ನು ಹೇಗೆ ಹರಿಸಲಾಗುತ್ತಿತ್ತು ಎಂದು ಕೂಡಾ ಕ್ರೈಂ ಬ್ರಾಂಚ್‌ ಕಂಡುಹಿಡಿಯಲಿದೆ ಎನ್ನಲಾಗಿದೆ.

ನಾಲ್ವರು ಸಾಕ್ಷಿಗಳ ಹೇಳಿಕೆಯನ್ನು ಶೀಘ್ರದಲ್ಲೇ ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸುವ ಸಾಧ್ಯತೆಯಿದೆ. ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್‌ ವಿಭಾಗವು ಶನಿವಾರ ಪಶ್ಚಿಮ ಅಂಧೇರಿಯಲ್ಲಿರುವ ರಾಜ್ ಕುಂದ್ರಾರ ವಯಾನ್ ಕಚೇರಿಯಲ್ಲಿ ಮತ್ತೊಂದು ಶೋಧ ಕಾರ್ಯಾಚರಣೆ ನಡೆಸಿತ್ತು.

ಇದನ್ನೂ ಓದಿ: ರಾಜ್ ಕುಂದ್ರಾ ಅಶ್ಲೀಲ ಚಿತ್ರಗಳಿಂದ ಪ್ರತಿದಿನ 6 ರಿಂದ 8 ಲಕ್ಷ ಗಳಿಸುತ್ತಿದ್ದರು: ಪೊಲೀಸರು

ಕಚೇರಿಯೊಳಗಿದ್ದ ಲಾಕರ್‌ ಅನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಲಾಕರ್‌ನಲ್ಲಿ ವ್ಯವಹಾರಗಳು ಮತ್ತು ಕ್ರಿಪ್ಟೋಕರೆನ್ಸಿಗೆ ಸಂಬಂಧಿಸಿದ ಹಲವಾರು ದಾಖಲೆಗಳನ್ನು ಒಳಗೊಂಡಿದೆ. ಲಾಕರ್‌ನಿಂದ ವಶಪಡಿಸಿಕೊಂಡ ಎಲ್ಲಾ ದಾಖಲೆಗಳನ್ನು ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್‌ ಪರಿಶೀಲಿಸುತ್ತಿದೆ.

ಈ ಹಿಂದಿನ ದಾಳಿಯ ಸಮಯದಲ್ಲೆ, ಎಲ್ಲಾ ಪ್ರಮುಖ ದಾಖಲೆಗಳನ್ನು ಹೊಂದಿರುವ ಲಾಕರ್‌ಗಾಗಿ ಕ್ರೈಂ ಬ್ರಾಂಚ್‌ ಹುಡುಕಾಟದಲ್ಲಿತ್ತು. ಆದರೆ ಅಂದು ಈ ಲಾಕರ್‌ಗಳನ್ನು ಅಡಗಿಸಿಡಲಾಗಿತ್ತು ಎನ್ನಲಾಗಿದೆ.


 

ಇದನ್ನೂ ಓದಿ: ರಾಜ್ ಕುಂದ್ರಾ ಬಂಧನ: ಶೃಂಗಾರ ಅಶ್ಲೀಲವಲ್ಲ, ನನ್ನ ಪತಿ ನಿರಪರಾಧಿ ಎಂದ ನಟಿ ಶಿಲ್ಪಾ ಶೆಟ್ಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...