Homeಮುಖಪುಟರಾಜ್‌ ಕುಂದ್ರಾ ವಿರುದ್ದ ಸಾಕ್ಷಿ ಹೇಳಲಿರುವ ಅವರದೇ ಕಂಪನಿಯ ಉದ್ಯೋಗಿಗಳು!

ರಾಜ್‌ ಕುಂದ್ರಾ ವಿರುದ್ದ ಸಾಕ್ಷಿ ಹೇಳಲಿರುವ ಅವರದೇ ಕಂಪನಿಯ ಉದ್ಯೋಗಿಗಳು!

- Advertisement -
- Advertisement -

ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಉದ್ಯಮಿ ರಾಜ್‌ ಕುಂದ್ರಾಗೆ ಇದೀಗ ಮತ್ತೊಂದು ಅಘಾತ ಎದುರಾಗಿದೆ. ತನ್ನ ವಿರುದ್ದ ಪ್ರಮುಖ ಸಾಕ್ಷಿಗಳಾಗಿ ತನ್ನದೆ ಕಂಪನಿಯ ನಾಲ್ಕು ಉದ್ಯೋಗಿಗಳು ಮುಂದೆ ಬಂದಿದ್ದಾರೆ ಎಂದು ವರದಿಯಾಗಿದೆ. ರಾಜ್‌ ಕುಂದ್ರಾರನ್ನು ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಜುಲೈ 19 ರಂದು ಪೊಲೀಸರು ಬಂಧಿಸಿದ್ದರು.

ಪ್ರಕರಣದಲ್ಲಿ ಈ ನಾಲ್ಕು ನೌಕರರು ಪ್ರಮುಖ ವ್ಯಕ್ತಿಗಳಾಗಿದ್ದಾರೆ ಎಂದು ಕ್ರೈಂ ಬ್ರಾಂಚ್‌ ಮೂಲಗಳು ತಿಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ರಾಜ್‌ ಕುಂದ್ರಾ ಮತ್ತು ಇತರರು ತನಿಖೆಗೆ ಸರಿಯಾಗಿ ಸಹಕರಿಸದ ಕಾರಣ ಪ್ರಸ್ತುತ ಕಂಪನಿಯ ನಾಲ್ಕು ಉದ್ಯೋಗಿಗಳು ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಹೊರಗೆಡಹುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅಶ್ಲೀಲ ಚಿತ್ರ ತಯಾರಿಸಿ ಪ್ರಸಾರ: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್‌ ಕುಂದ್ರಾ ಬಂಧನ

ವ್ಯವಹಾರ ಒಪ್ಪಂದಗಳು, ಹಣಕಾಸಿನ ವ್ಯವಹಾರಗಳು, ದಂಧೆಯ ಕಾರ್ಯಚಟುವಟಿಕೆಗಳ ವಿವರಗಳನ್ನು ನಾಲ್ಕು ಉದ್ಯೋಗಿಗಳಿಂದ ಕ್ರೈಂ ಬ್ರಾಂಚ್‌ ಪಡೆಯುವ ಸಾಧ್ಯತೆಯಿದೆ. ದಂಧೆಯ ಕಾರ್ಯಚಟುವಟಿಕೆ ಮತ್ತು ಆಪಾದಿತ ಅಶ್ಲೀಲ ವಿಡಿಯೊಗಳ ಉತ್ಪಾದನೆಗಾಗಿ ಹಣವನ್ನು ಹೇಗೆ ಹರಿಸಲಾಗುತ್ತಿತ್ತು ಎಂದು ಕೂಡಾ ಕ್ರೈಂ ಬ್ರಾಂಚ್‌ ಕಂಡುಹಿಡಿಯಲಿದೆ ಎನ್ನಲಾಗಿದೆ.

ನಾಲ್ವರು ಸಾಕ್ಷಿಗಳ ಹೇಳಿಕೆಯನ್ನು ಶೀಘ್ರದಲ್ಲೇ ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸುವ ಸಾಧ್ಯತೆಯಿದೆ. ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್‌ ವಿಭಾಗವು ಶನಿವಾರ ಪಶ್ಚಿಮ ಅಂಧೇರಿಯಲ್ಲಿರುವ ರಾಜ್ ಕುಂದ್ರಾರ ವಯಾನ್ ಕಚೇರಿಯಲ್ಲಿ ಮತ್ತೊಂದು ಶೋಧ ಕಾರ್ಯಾಚರಣೆ ನಡೆಸಿತ್ತು.

ಇದನ್ನೂ ಓದಿ: ರಾಜ್ ಕುಂದ್ರಾ ಅಶ್ಲೀಲ ಚಿತ್ರಗಳಿಂದ ಪ್ರತಿದಿನ 6 ರಿಂದ 8 ಲಕ್ಷ ಗಳಿಸುತ್ತಿದ್ದರು: ಪೊಲೀಸರು

ಕಚೇರಿಯೊಳಗಿದ್ದ ಲಾಕರ್‌ ಅನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಲಾಕರ್‌ನಲ್ಲಿ ವ್ಯವಹಾರಗಳು ಮತ್ತು ಕ್ರಿಪ್ಟೋಕರೆನ್ಸಿಗೆ ಸಂಬಂಧಿಸಿದ ಹಲವಾರು ದಾಖಲೆಗಳನ್ನು ಒಳಗೊಂಡಿದೆ. ಲಾಕರ್‌ನಿಂದ ವಶಪಡಿಸಿಕೊಂಡ ಎಲ್ಲಾ ದಾಖಲೆಗಳನ್ನು ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್‌ ಪರಿಶೀಲಿಸುತ್ತಿದೆ.

ಈ ಹಿಂದಿನ ದಾಳಿಯ ಸಮಯದಲ್ಲೆ, ಎಲ್ಲಾ ಪ್ರಮುಖ ದಾಖಲೆಗಳನ್ನು ಹೊಂದಿರುವ ಲಾಕರ್‌ಗಾಗಿ ಕ್ರೈಂ ಬ್ರಾಂಚ್‌ ಹುಡುಕಾಟದಲ್ಲಿತ್ತು. ಆದರೆ ಅಂದು ಈ ಲಾಕರ್‌ಗಳನ್ನು ಅಡಗಿಸಿಡಲಾಗಿತ್ತು ಎನ್ನಲಾಗಿದೆ.


 

ಇದನ್ನೂ ಓದಿ: ರಾಜ್ ಕುಂದ್ರಾ ಬಂಧನ: ಶೃಂಗಾರ ಅಶ್ಲೀಲವಲ್ಲ, ನನ್ನ ಪತಿ ನಿರಪರಾಧಿ ಎಂದ ನಟಿ ಶಿಲ್ಪಾ ಶೆಟ್ಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...