Homeಅಂತರಾಷ್ಟ್ರೀಯ‘ಜಾತಿ ಸಮಾನತೆ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯ’ ಎಂದ ಉದ್ಯೋಗಿಗಳು: ದಲಿತ ಹೋರಾಟಗಾರ್ತಿಯ ಭಾಷಣ ರದ್ದು...

‘ಜಾತಿ ಸಮಾನತೆ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯ’ ಎಂದ ಉದ್ಯೋಗಿಗಳು: ದಲಿತ ಹೋರಾಟಗಾರ್ತಿಯ ಭಾಷಣ ರದ್ದು ಮಾಡಿದ ಗೂಗಲ್!

ಗೂಗಲ್‌ ಜಾತಿ ಧರ್ಮಾಂಧತೆ ಮತ್ತು ಕಿರುಕುಳವನ್ನು ಅತಿರೇಕವಾಗಿ ನಡೆಸಲು ಅವಕಾಶ ಮಾಡಿಕೊಟ್ಟಿದೆ ತೆನ್ಮೋಳಿ ಸೌಂದರರಾಜನ್ ಅವರ ಸಂಸ್ಥೆ ಆಕ್ರೋಶ ವ್ಯಕ್ತಪಡಿಸಿದೆ

- Advertisement -
- Advertisement -

“ಜಾತಿ ಸಮಾನತೆಯ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯವಿದೆ” ಎಂದು ಹೇಳಿಕೊಂಡ ಉದ್ಯೋಗಿಗಳ ಒತ್ತಡಕ್ಕೆ ಮಣಿದು ಅಮೆರಿಕಾ ಮೂಲದ ದಲಿತ ಹೋರಾಟಗಾರ್ತಿ “ತೆನ್ಮೋಳಿ ಸೌಂದರರಾಜನ್’’ ಅವರ ನಿಗದಿತ ಭಾಷಣವನ್ನು ಗೂಗಲ್ ರದ್ದುಮಾಡಿದೆ. ಕಂಪನಿಯ ಡೈವರ್ಸಿಟಿ ಇಕ್ವಿಟಿ ಇನ್ಕ್ಲೂಸಿವಿಟಿ (DEI) ಕಾರ್ಯಕ್ರಮದ ಭಾಗವಾಗಿ ಉದ್ಯೋಗಿಗಳ ಸಂವೇದನಾಶೀಲತೆಗಾಗಿ ಅವರು ಈ ಭಾಷಣವನ್ನು ಮಾಡಬೇಕಾಗಿತ್ತು.

ಈಕ್ವಾಲಿಟಿ ಲ್ಯಾಬ್ಸ್‌ನ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿರುವ ತೆನ್ಮೋಳಿ ಅವರನ್ನು ‘‘ಹಿಂದೂ ಫೋಬಿಕ್’’ ಮತ್ತು “ಹಿಂದೂ ವಿರೋಧಿ” ಎಂದು ಕರೆದಿರುವ ಗೂಗಲ್‌ನ ಉದ್ಯೋಗಿಗಳ ಗುಂಪುಗಳು ಕಂಪನಿಯ ಇಂಟ್ರಾನೆಟ್ ಮೂಲಕ ಸಾಮೂಹಿಕ ಇಮೇಲ್‌ಗಳನ್ನು ಕಳುಹಿಸಿದ್ದಾರೆ ಎಂದು ವಾಷಿಂಗ್ಟನ್ ಪೋಸ್ಟ್ ಬಹಿರಂಗಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದುತ್ವ ಪರ ಗುಂಪುಗಳ ಅಪಪ್ರಚಾರದಿಂದಾಗಿ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ ಎಂದು ವರದಿಯಾಗಿದೆ. ಗೂಗಲ್‌ನ ಹಿರಿಯ ಮ್ಯಾನೇಜರ್ ತನುಜಾ ಗುಪ್ತಾ ಅವರು ತೆನ್ಮೋಳಿ ಅವರನ್ನು ಭಾಷಣಕ್ಕೆ ಆಹ್ವಾನಿಸಿದ್ದನ್ನು ವಿರೋಧಿಸಿ ಗೂಗಲ್‌ನಿಂದ ಹೊರಬಂದ ನಂತರ ಈ ಸಮಸ್ಯೆಯು ಮತ್ತಷ್ಟು ಬಿಗಡಾಯಿಸಿತ್ತು.

ಇದನ್ನೂ ಓದಿ: ಉತ್ತರಾಖಾಂಡ್‌: ದಲಿತ ಮಹಿಳೆ ಬೇಯಿಸಿದ ಆಹಾರ ಸೇವಿಸಲು ಮತ್ತೆ ನಿರಾಕರಿಸಿದ ಸವರ್ಣೀಯ ವಿದ್ಯಾರ್ಥಿಗಳು

ತೇನ್ಮೋಳಿ ಅವರ ಭಾಷಣವನ್ನು ವಿರೋಧಿಸಿರುವ ಗೂಗಲ್ ಉದ್ಯೋಗಿಗಳು ‘‘ಜಾತಿ ಸಮಾನತೆಯ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯವಿದೆ’’ ಎಂದು ಹೇಳಿದ್ದಾಗಿ ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ. 8,000 ಜನರಿರುವ ದಕ್ಷಿಣ ಏಷ್ಯಾದ ಉದ್ಯೋಗಿಗಳ ಗುಂಪಿಗೆ ಮೇಲ್ ಹೋಗಿದೆ ಎಂದು ವರದಿ ಹೇಳಿದೆ.

ಕಾರ್ಯಕ್ರಮವನ್ನು ರದ್ದು ಮಾಡಿದ ನಂತರ ತನುಜಾ ಗುಪ್ತಾ ಅವರು ಅರ್ಜಿಯ ಲಿಂಕ್ ಅನ್ನು ಮತ್ತೊಮ್ಮೆ ಪೋಸ್ಟ್ ಮಾಡಿದಾಗ, ಗ್ರೂಪ್‌ನಲ್ಲಿರುವ ಜನರು ‘ಅಮೆರಿಕದಲ್ಲಿ ಜಾತಿ ಇಲ್ಲ, ಜಾತಿ ತಾರತಮ್ಯ ಅಸ್ತಿತ್ವದಲ್ಲಿಲ್ಲ, ತುಳಿತಕ್ಕೊಳಗಾದ ಜಾತಿಗಳ ಜನರು ಕಡಿಮೆ ವಿದ್ಯಾವಂತರು’ ಸೇರಿದಂತೆ ಹಲವು ಚರ್ಚೆಗಳನ್ನು ನಡೆಸಿದ್ದಾರೆ ಎಂದು ವಾಶಿಂಗ್ಟನ್‌ ಪೋಸ್ಟ್‌ ತನ್ನ ವರದಿಯಲ್ಲಿ ಹೇಳಿದೆ. ಭಾರತದ ಮೀಸಲಾತಿ ವ್ಯವಸ್ಥೆಯು ‘ಮೇಲ್ಜಾತಿಗಳ ವಿರುದ್ಧ ಹಿಮ್ಮುಖ ತಾರತಮ್ಯ’ ಎಂದು ಅವರು ಕರೆದಿದ್ದಾರೆ ಎಂದು ವರದಿ ಹೇಳಿದೆ.

ಅಮೆರಿಕ, ಮೆಕ್ಸಿಕೊ ಮತ್ತು ಕೆನಡಾದಾದ್ಯಂತ ಘಟಕಗಳನ್ನು ಹೊಂದಿರುವ ಅಂಬೇಡ್ಕರ್‌ವಾದಿಗಳ ಸಂಘದ (AANA) ಅಧ್ಯಕ್ಷರಾಗಿರುವ ತೇನ್ಮೋಳಿ ಅವರು ಜಾಗತಿಕವಾಗಿ ಗುರುತಿಸಲ್ಪಟ್ಟ ಜಾತಿ ವಿರೋಧಿ ಹೋರಾಟಗಾರ್ತಿಯಾಗಿದ್ದು, ದಕ್ಷಿಣ ಏಷ್ಯಾದಲ್ಲಿನ ಜಾತಿ ತಾರತಮ್ಯವನ್ನು ಅಂತರರಾಷ್ಟ್ರೀಯ ಗಮನಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮಾತು ಮರೆತ ಭಾರತ; ಸ್ವತಂತ್ರ ಪೂರ್ವ ಭಾರತದ ಕೆಲವು ದಲಿತ್ ಫೈಲ್ಸ್

ಗೂಗಲ್‌ನ ನಡೆಯನ್ನು ವಿರೋಧಿಸಿರುವ ತೇನ್ಮೋಳಿ, “ಗೂಗಲ್‌ ಕಾನೂನು ಬಾಹಿರವಾಗಿ ಜಾತಿ ಇಕ್ವಿಟಿಯ ಬಗ್ಗೆ ಮಾತನಾಡುವುದನ್ನು ರದ್ದುಗೊಳಿಸಿದೆ. ಅದರ ಕ್ರಮಗಳು ತನ್ನ ಉದ್ಯೋಗಿಗಳಿಗೆ ಮತ್ತು ನನ್ನ ಕಡೆಗೆ ಎಷ್ಟು ಆಘಾತಕಾರಿ ಮತ್ತು ತಾರತಮ್ಯದಿಂದ ಕೂಡಿವೆ ಎಂಬುದನ್ನು ವ್ಯಕ್ತಪಡಿಸಲು ನನಗೆ ಪದಗಳು ಸಿಗುತ್ತಿಲ್ಲ. ಈ ದಾಳಿಗಳು ಸಂಭವಿಸಲು ಮತ್ತು ಮುಂದುವರೆಯಲು ಅನುವು ಮಾಡಿಕೊಡುವ ತನ್ನ ಉದ್ಯೋಗಿಗಳ ಜಾತೀಯತೆಯನ್ನು ಗೂಗಲ್ ಪರಿಹರಿಸಬೇಕು” ಎಂದು ಹೇಳಿದ್ದಾರೆ.

ಏಪ್ರಿಲ್ 18ರ ‘ದಲಿತ ಇತಿಹಾಸ ಮಾಸ’ದ ಅಂಗವಾಗಿ ತೇನ್ಮೋಳಿ ಅವರು ಈ ಭಾಷಣವನ್ನು ನೀಡಲು ನಿರ್ಧರಿಸಿದ್ದರು ಆದರೆ ಅದನ್ನು ಮುಂದೂಡಲಾಗಿದೆ ಎಂದು ಮೊದಲಿಗೆ ತಿಳಿಸಲಾಗಿತ್ತು. ಈ ಬೆಳವಣಿಗೆಯಿಂದ ತಾನು ತೊಂದರೆಗೀಡಾಗಿದ್ದು, ತನ್ನ ಮಾತುಗಳು ಗೂಗಲ್‌‌ನ ಉದ್ಯೋಗಿಗಳಿಗೆ ಸಮಸ್ಯೆಯನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಅವರು ನಂತರ ಗೂಗಲ್ ಸಿಇಒ ಸುಂದರ್ ಪಿಚೈ ಅವರಿಗೆ ಪತ್ರ ಬರೆದಿದ್ದರು.

“ಜಾತಿ ತಾರತಮ್ಯವನ್ನು ಗುರುತಿಸಲಾಗದಿದ್ದರೆ ಅದು ವ್ಯಾಪಾರಕ್ಕೆ ಕೆಟ್ಟದು ಮಾಡುತ್ತದೆ. ಇದು ಕೆಲಸದ ಸ್ಥಳಗಳನ್ನು ಅಸುರಕ್ಷಿತ ಮತ್ತು ಪ್ರತಿಕೂಲವಾಗಿಸುತ್ತದೆ. ಗೂಗಲ್‌ನ ಅತಿದೊಡ್ಡ ಮಾರುಕಟ್ಟೆಗಳಲ್ಲಿ ಒಂದಾದ ಭಾರತದಲ್ಲಿ, ದಲಿತರು ಕನಿಷ್ಠ 25 ರಿಂದ 30% ಮಾರುಕಟ್ಟೆಯನ್ನು ಹೊಂದಿದ್ದಾರೆ” ಎಂದು ಅವರು ಪಿಚೈಗೆ ಬರೆದಿರುವ ಪತ್ರದಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿ: ಬ್ರಿಟನ್‌ನ ಮೊದಲ ದಲಿತ ಮಹಿಳಾ ಮೇಯರ್ ಆಗಿ ಮೊಹಿಂದರ್ ಮಿಧಾ ಆಯ್ಕೆ

ಆದಾಗ್ಯೂ, ಉದ್ಯೋಗಿಗಳ ಗುಂಪಿನ ಪ್ರತಿರೋಧದಿಂದಾಗಿ ಅವರ ಭಾಷಣವನ್ನು ರದ್ದುಗೊಳಿಸಲಾಗಿದೆ. ಇದಲ್ಲದೆ, ತನುಜಾ ಗುಪ್ತಾ ಅವರು ತೇನ್ಮೋಳಿ ಅವರ ಭಾಷಣವನ್ನು ಸಂಘಟಿಸಲು ಸಹಕರಿಸುತ್ತಿದ್ದ ಗೂಗಲ್ ಉದ್ಯೋಗಿಯನ್ನು ಗುರಿ ಮಾಡಲಾಗಿದೆ.

ತೇನ್ಮೋಳಿ ಅವರ ಭಾಷಣವನ್ನು ರದ್ದು ಮಾಡಿರುವುದನ್ನು ‘ಈಕ್ವಾಲಿಟಿ ಲ್ಯಾಬ್ಸ್’ ಖಂಡಿಸಿದ್ದು, ಗೂಗಲ್‌ನ ಈ ವರ್ತನೆಯು ಜಾತಿವಾದಿಯಾಗಿದೆ ಎಂದು ಬಣ್ಣಿಸಿದೆ. ಗೂಗಲ್‌ನ ವೈವಿಧ್ಯತೆ ಮತ್ತು ಒಳಗೊಳ್ಳುವಿಕೆಯ ಉಪಕ್ರಮದ ನ್ಯಾಯಸಮ್ಮತತೆಯನ್ನು ಅದು ಪ್ರಶ್ನಿಸಿದ್ದು, “ಗೂಗಲ್‌ ಜಾತಿ ಧರ್ಮಾಂಧತೆ ಮತ್ತು ಕಿರುಕುಳವನ್ನು ಅತಿರೇಕವಾಗಿ ನಡೆಸಲು ಅವಕಾಶ ಮಾಡಿಕೊಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ಮನುವಾದಿಗಳು ಪ್ರಬಲರಾಗುತ್ತಿರುವುದಕ್ಕೆ ಇದೊಂದು ಉದಾಹರಣೆ.

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...