Homeಅಂತರಾಷ್ಟ್ರೀಯ‘ಜಾತಿ ಸಮಾನತೆ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯ’ ಎಂದ ಉದ್ಯೋಗಿಗಳು: ದಲಿತ ಹೋರಾಟಗಾರ್ತಿಯ ಭಾಷಣ ರದ್ದು...

‘ಜಾತಿ ಸಮಾನತೆ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯ’ ಎಂದ ಉದ್ಯೋಗಿಗಳು: ದಲಿತ ಹೋರಾಟಗಾರ್ತಿಯ ಭಾಷಣ ರದ್ದು ಮಾಡಿದ ಗೂಗಲ್!

ಗೂಗಲ್‌ ಜಾತಿ ಧರ್ಮಾಂಧತೆ ಮತ್ತು ಕಿರುಕುಳವನ್ನು ಅತಿರೇಕವಾಗಿ ನಡೆಸಲು ಅವಕಾಶ ಮಾಡಿಕೊಟ್ಟಿದೆ ತೆನ್ಮೋಳಿ ಸೌಂದರರಾಜನ್ ಅವರ ಸಂಸ್ಥೆ ಆಕ್ರೋಶ ವ್ಯಕ್ತಪಡಿಸಿದೆ

- Advertisement -
- Advertisement -

“ಜಾತಿ ಸಮಾನತೆಯ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯವಿದೆ” ಎಂದು ಹೇಳಿಕೊಂಡ ಉದ್ಯೋಗಿಗಳ ಒತ್ತಡಕ್ಕೆ ಮಣಿದು ಅಮೆರಿಕಾ ಮೂಲದ ದಲಿತ ಹೋರಾಟಗಾರ್ತಿ “ತೆನ್ಮೋಳಿ ಸೌಂದರರಾಜನ್’’ ಅವರ ನಿಗದಿತ ಭಾಷಣವನ್ನು ಗೂಗಲ್ ರದ್ದುಮಾಡಿದೆ. ಕಂಪನಿಯ ಡೈವರ್ಸಿಟಿ ಇಕ್ವಿಟಿ ಇನ್ಕ್ಲೂಸಿವಿಟಿ (DEI) ಕಾರ್ಯಕ್ರಮದ ಭಾಗವಾಗಿ ಉದ್ಯೋಗಿಗಳ ಸಂವೇದನಾಶೀಲತೆಗಾಗಿ ಅವರು ಈ ಭಾಷಣವನ್ನು ಮಾಡಬೇಕಾಗಿತ್ತು.

ಈಕ್ವಾಲಿಟಿ ಲ್ಯಾಬ್ಸ್‌ನ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿರುವ ತೆನ್ಮೋಳಿ ಅವರನ್ನು ‘‘ಹಿಂದೂ ಫೋಬಿಕ್’’ ಮತ್ತು “ಹಿಂದೂ ವಿರೋಧಿ” ಎಂದು ಕರೆದಿರುವ ಗೂಗಲ್‌ನ ಉದ್ಯೋಗಿಗಳ ಗುಂಪುಗಳು ಕಂಪನಿಯ ಇಂಟ್ರಾನೆಟ್ ಮೂಲಕ ಸಾಮೂಹಿಕ ಇಮೇಲ್‌ಗಳನ್ನು ಕಳುಹಿಸಿದ್ದಾರೆ ಎಂದು ವಾಷಿಂಗ್ಟನ್ ಪೋಸ್ಟ್ ಬಹಿರಂಗಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದುತ್ವ ಪರ ಗುಂಪುಗಳ ಅಪಪ್ರಚಾರದಿಂದಾಗಿ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ ಎಂದು ವರದಿಯಾಗಿದೆ. ಗೂಗಲ್‌ನ ಹಿರಿಯ ಮ್ಯಾನೇಜರ್ ತನುಜಾ ಗುಪ್ತಾ ಅವರು ತೆನ್ಮೋಳಿ ಅವರನ್ನು ಭಾಷಣಕ್ಕೆ ಆಹ್ವಾನಿಸಿದ್ದನ್ನು ವಿರೋಧಿಸಿ ಗೂಗಲ್‌ನಿಂದ ಹೊರಬಂದ ನಂತರ ಈ ಸಮಸ್ಯೆಯು ಮತ್ತಷ್ಟು ಬಿಗಡಾಯಿಸಿತ್ತು.

ಇದನ್ನೂ ಓದಿ: ಉತ್ತರಾಖಾಂಡ್‌: ದಲಿತ ಮಹಿಳೆ ಬೇಯಿಸಿದ ಆಹಾರ ಸೇವಿಸಲು ಮತ್ತೆ ನಿರಾಕರಿಸಿದ ಸವರ್ಣೀಯ ವಿದ್ಯಾರ್ಥಿಗಳು

ತೇನ್ಮೋಳಿ ಅವರ ಭಾಷಣವನ್ನು ವಿರೋಧಿಸಿರುವ ಗೂಗಲ್ ಉದ್ಯೋಗಿಗಳು ‘‘ಜಾತಿ ಸಮಾನತೆಯ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯವಿದೆ’’ ಎಂದು ಹೇಳಿದ್ದಾಗಿ ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ. 8,000 ಜನರಿರುವ ದಕ್ಷಿಣ ಏಷ್ಯಾದ ಉದ್ಯೋಗಿಗಳ ಗುಂಪಿಗೆ ಮೇಲ್ ಹೋಗಿದೆ ಎಂದು ವರದಿ ಹೇಳಿದೆ.

ಕಾರ್ಯಕ್ರಮವನ್ನು ರದ್ದು ಮಾಡಿದ ನಂತರ ತನುಜಾ ಗುಪ್ತಾ ಅವರು ಅರ್ಜಿಯ ಲಿಂಕ್ ಅನ್ನು ಮತ್ತೊಮ್ಮೆ ಪೋಸ್ಟ್ ಮಾಡಿದಾಗ, ಗ್ರೂಪ್‌ನಲ್ಲಿರುವ ಜನರು ‘ಅಮೆರಿಕದಲ್ಲಿ ಜಾತಿ ಇಲ್ಲ, ಜಾತಿ ತಾರತಮ್ಯ ಅಸ್ತಿತ್ವದಲ್ಲಿಲ್ಲ, ತುಳಿತಕ್ಕೊಳಗಾದ ಜಾತಿಗಳ ಜನರು ಕಡಿಮೆ ವಿದ್ಯಾವಂತರು’ ಸೇರಿದಂತೆ ಹಲವು ಚರ್ಚೆಗಳನ್ನು ನಡೆಸಿದ್ದಾರೆ ಎಂದು ವಾಶಿಂಗ್ಟನ್‌ ಪೋಸ್ಟ್‌ ತನ್ನ ವರದಿಯಲ್ಲಿ ಹೇಳಿದೆ. ಭಾರತದ ಮೀಸಲಾತಿ ವ್ಯವಸ್ಥೆಯು ‘ಮೇಲ್ಜಾತಿಗಳ ವಿರುದ್ಧ ಹಿಮ್ಮುಖ ತಾರತಮ್ಯ’ ಎಂದು ಅವರು ಕರೆದಿದ್ದಾರೆ ಎಂದು ವರದಿ ಹೇಳಿದೆ.

ಅಮೆರಿಕ, ಮೆಕ್ಸಿಕೊ ಮತ್ತು ಕೆನಡಾದಾದ್ಯಂತ ಘಟಕಗಳನ್ನು ಹೊಂದಿರುವ ಅಂಬೇಡ್ಕರ್‌ವಾದಿಗಳ ಸಂಘದ (AANA) ಅಧ್ಯಕ್ಷರಾಗಿರುವ ತೇನ್ಮೋಳಿ ಅವರು ಜಾಗತಿಕವಾಗಿ ಗುರುತಿಸಲ್ಪಟ್ಟ ಜಾತಿ ವಿರೋಧಿ ಹೋರಾಟಗಾರ್ತಿಯಾಗಿದ್ದು, ದಕ್ಷಿಣ ಏಷ್ಯಾದಲ್ಲಿನ ಜಾತಿ ತಾರತಮ್ಯವನ್ನು ಅಂತರರಾಷ್ಟ್ರೀಯ ಗಮನಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮಾತು ಮರೆತ ಭಾರತ; ಸ್ವತಂತ್ರ ಪೂರ್ವ ಭಾರತದ ಕೆಲವು ದಲಿತ್ ಫೈಲ್ಸ್

ಗೂಗಲ್‌ನ ನಡೆಯನ್ನು ವಿರೋಧಿಸಿರುವ ತೇನ್ಮೋಳಿ, “ಗೂಗಲ್‌ ಕಾನೂನು ಬಾಹಿರವಾಗಿ ಜಾತಿ ಇಕ್ವಿಟಿಯ ಬಗ್ಗೆ ಮಾತನಾಡುವುದನ್ನು ರದ್ದುಗೊಳಿಸಿದೆ. ಅದರ ಕ್ರಮಗಳು ತನ್ನ ಉದ್ಯೋಗಿಗಳಿಗೆ ಮತ್ತು ನನ್ನ ಕಡೆಗೆ ಎಷ್ಟು ಆಘಾತಕಾರಿ ಮತ್ತು ತಾರತಮ್ಯದಿಂದ ಕೂಡಿವೆ ಎಂಬುದನ್ನು ವ್ಯಕ್ತಪಡಿಸಲು ನನಗೆ ಪದಗಳು ಸಿಗುತ್ತಿಲ್ಲ. ಈ ದಾಳಿಗಳು ಸಂಭವಿಸಲು ಮತ್ತು ಮುಂದುವರೆಯಲು ಅನುವು ಮಾಡಿಕೊಡುವ ತನ್ನ ಉದ್ಯೋಗಿಗಳ ಜಾತೀಯತೆಯನ್ನು ಗೂಗಲ್ ಪರಿಹರಿಸಬೇಕು” ಎಂದು ಹೇಳಿದ್ದಾರೆ.

ಏಪ್ರಿಲ್ 18ರ ‘ದಲಿತ ಇತಿಹಾಸ ಮಾಸ’ದ ಅಂಗವಾಗಿ ತೇನ್ಮೋಳಿ ಅವರು ಈ ಭಾಷಣವನ್ನು ನೀಡಲು ನಿರ್ಧರಿಸಿದ್ದರು ಆದರೆ ಅದನ್ನು ಮುಂದೂಡಲಾಗಿದೆ ಎಂದು ಮೊದಲಿಗೆ ತಿಳಿಸಲಾಗಿತ್ತು. ಈ ಬೆಳವಣಿಗೆಯಿಂದ ತಾನು ತೊಂದರೆಗೀಡಾಗಿದ್ದು, ತನ್ನ ಮಾತುಗಳು ಗೂಗಲ್‌‌ನ ಉದ್ಯೋಗಿಗಳಿಗೆ ಸಮಸ್ಯೆಯನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಅವರು ನಂತರ ಗೂಗಲ್ ಸಿಇಒ ಸುಂದರ್ ಪಿಚೈ ಅವರಿಗೆ ಪತ್ರ ಬರೆದಿದ್ದರು.

“ಜಾತಿ ತಾರತಮ್ಯವನ್ನು ಗುರುತಿಸಲಾಗದಿದ್ದರೆ ಅದು ವ್ಯಾಪಾರಕ್ಕೆ ಕೆಟ್ಟದು ಮಾಡುತ್ತದೆ. ಇದು ಕೆಲಸದ ಸ್ಥಳಗಳನ್ನು ಅಸುರಕ್ಷಿತ ಮತ್ತು ಪ್ರತಿಕೂಲವಾಗಿಸುತ್ತದೆ. ಗೂಗಲ್‌ನ ಅತಿದೊಡ್ಡ ಮಾರುಕಟ್ಟೆಗಳಲ್ಲಿ ಒಂದಾದ ಭಾರತದಲ್ಲಿ, ದಲಿತರು ಕನಿಷ್ಠ 25 ರಿಂದ 30% ಮಾರುಕಟ್ಟೆಯನ್ನು ಹೊಂದಿದ್ದಾರೆ” ಎಂದು ಅವರು ಪಿಚೈಗೆ ಬರೆದಿರುವ ಪತ್ರದಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿ: ಬ್ರಿಟನ್‌ನ ಮೊದಲ ದಲಿತ ಮಹಿಳಾ ಮೇಯರ್ ಆಗಿ ಮೊಹಿಂದರ್ ಮಿಧಾ ಆಯ್ಕೆ

ಆದಾಗ್ಯೂ, ಉದ್ಯೋಗಿಗಳ ಗುಂಪಿನ ಪ್ರತಿರೋಧದಿಂದಾಗಿ ಅವರ ಭಾಷಣವನ್ನು ರದ್ದುಗೊಳಿಸಲಾಗಿದೆ. ಇದಲ್ಲದೆ, ತನುಜಾ ಗುಪ್ತಾ ಅವರು ತೇನ್ಮೋಳಿ ಅವರ ಭಾಷಣವನ್ನು ಸಂಘಟಿಸಲು ಸಹಕರಿಸುತ್ತಿದ್ದ ಗೂಗಲ್ ಉದ್ಯೋಗಿಯನ್ನು ಗುರಿ ಮಾಡಲಾಗಿದೆ.

ತೇನ್ಮೋಳಿ ಅವರ ಭಾಷಣವನ್ನು ರದ್ದು ಮಾಡಿರುವುದನ್ನು ‘ಈಕ್ವಾಲಿಟಿ ಲ್ಯಾಬ್ಸ್’ ಖಂಡಿಸಿದ್ದು, ಗೂಗಲ್‌ನ ಈ ವರ್ತನೆಯು ಜಾತಿವಾದಿಯಾಗಿದೆ ಎಂದು ಬಣ್ಣಿಸಿದೆ. ಗೂಗಲ್‌ನ ವೈವಿಧ್ಯತೆ ಮತ್ತು ಒಳಗೊಳ್ಳುವಿಕೆಯ ಉಪಕ್ರಮದ ನ್ಯಾಯಸಮ್ಮತತೆಯನ್ನು ಅದು ಪ್ರಶ್ನಿಸಿದ್ದು, “ಗೂಗಲ್‌ ಜಾತಿ ಧರ್ಮಾಂಧತೆ ಮತ್ತು ಕಿರುಕುಳವನ್ನು ಅತಿರೇಕವಾಗಿ ನಡೆಸಲು ಅವಕಾಶ ಮಾಡಿಕೊಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ಮನುವಾದಿಗಳು ಪ್ರಬಲರಾಗುತ್ತಿರುವುದಕ್ಕೆ ಇದೊಂದು ಉದಾಹರಣೆ.

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...