Homeಅಂತರಾಷ್ಟ್ರೀಯ‘ಜಾತಿ ಸಮಾನತೆ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯ’ ಎಂದ ಉದ್ಯೋಗಿಗಳು: ದಲಿತ ಹೋರಾಟಗಾರ್ತಿಯ ಭಾಷಣ ರದ್ದು...

‘ಜಾತಿ ಸಮಾನತೆ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯ’ ಎಂದ ಉದ್ಯೋಗಿಗಳು: ದಲಿತ ಹೋರಾಟಗಾರ್ತಿಯ ಭಾಷಣ ರದ್ದು ಮಾಡಿದ ಗೂಗಲ್!

ಗೂಗಲ್‌ ಜಾತಿ ಧರ್ಮಾಂಧತೆ ಮತ್ತು ಕಿರುಕುಳವನ್ನು ಅತಿರೇಕವಾಗಿ ನಡೆಸಲು ಅವಕಾಶ ಮಾಡಿಕೊಟ್ಟಿದೆ ತೆನ್ಮೋಳಿ ಸೌಂದರರಾಜನ್ ಅವರ ಸಂಸ್ಥೆ ಆಕ್ರೋಶ ವ್ಯಕ್ತಪಡಿಸಿದೆ

- Advertisement -
- Advertisement -

“ಜಾತಿ ಸಮಾನತೆಯ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯವಿದೆ” ಎಂದು ಹೇಳಿಕೊಂಡ ಉದ್ಯೋಗಿಗಳ ಒತ್ತಡಕ್ಕೆ ಮಣಿದು ಅಮೆರಿಕಾ ಮೂಲದ ದಲಿತ ಹೋರಾಟಗಾರ್ತಿ “ತೆನ್ಮೋಳಿ ಸೌಂದರರಾಜನ್’’ ಅವರ ನಿಗದಿತ ಭಾಷಣವನ್ನು ಗೂಗಲ್ ರದ್ದುಮಾಡಿದೆ. ಕಂಪನಿಯ ಡೈವರ್ಸಿಟಿ ಇಕ್ವಿಟಿ ಇನ್ಕ್ಲೂಸಿವಿಟಿ (DEI) ಕಾರ್ಯಕ್ರಮದ ಭಾಗವಾಗಿ ಉದ್ಯೋಗಿಗಳ ಸಂವೇದನಾಶೀಲತೆಗಾಗಿ ಅವರು ಈ ಭಾಷಣವನ್ನು ಮಾಡಬೇಕಾಗಿತ್ತು.

ಈಕ್ವಾಲಿಟಿ ಲ್ಯಾಬ್ಸ್‌ನ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿರುವ ತೆನ್ಮೋಳಿ ಅವರನ್ನು ‘‘ಹಿಂದೂ ಫೋಬಿಕ್’’ ಮತ್ತು “ಹಿಂದೂ ವಿರೋಧಿ” ಎಂದು ಕರೆದಿರುವ ಗೂಗಲ್‌ನ ಉದ್ಯೋಗಿಗಳ ಗುಂಪುಗಳು ಕಂಪನಿಯ ಇಂಟ್ರಾನೆಟ್ ಮೂಲಕ ಸಾಮೂಹಿಕ ಇಮೇಲ್‌ಗಳನ್ನು ಕಳುಹಿಸಿದ್ದಾರೆ ಎಂದು ವಾಷಿಂಗ್ಟನ್ ಪೋಸ್ಟ್ ಬಹಿರಂಗಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದುತ್ವ ಪರ ಗುಂಪುಗಳ ಅಪಪ್ರಚಾರದಿಂದಾಗಿ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ ಎಂದು ವರದಿಯಾಗಿದೆ. ಗೂಗಲ್‌ನ ಹಿರಿಯ ಮ್ಯಾನೇಜರ್ ತನುಜಾ ಗುಪ್ತಾ ಅವರು ತೆನ್ಮೋಳಿ ಅವರನ್ನು ಭಾಷಣಕ್ಕೆ ಆಹ್ವಾನಿಸಿದ್ದನ್ನು ವಿರೋಧಿಸಿ ಗೂಗಲ್‌ನಿಂದ ಹೊರಬಂದ ನಂತರ ಈ ಸಮಸ್ಯೆಯು ಮತ್ತಷ್ಟು ಬಿಗಡಾಯಿಸಿತ್ತು.

ಇದನ್ನೂ ಓದಿ: ಉತ್ತರಾಖಾಂಡ್‌: ದಲಿತ ಮಹಿಳೆ ಬೇಯಿಸಿದ ಆಹಾರ ಸೇವಿಸಲು ಮತ್ತೆ ನಿರಾಕರಿಸಿದ ಸವರ್ಣೀಯ ವಿದ್ಯಾರ್ಥಿಗಳು

ತೇನ್ಮೋಳಿ ಅವರ ಭಾಷಣವನ್ನು ವಿರೋಧಿಸಿರುವ ಗೂಗಲ್ ಉದ್ಯೋಗಿಗಳು ‘‘ಜಾತಿ ಸಮಾನತೆಯ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯವಿದೆ’’ ಎಂದು ಹೇಳಿದ್ದಾಗಿ ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ. 8,000 ಜನರಿರುವ ದಕ್ಷಿಣ ಏಷ್ಯಾದ ಉದ್ಯೋಗಿಗಳ ಗುಂಪಿಗೆ ಮೇಲ್ ಹೋಗಿದೆ ಎಂದು ವರದಿ ಹೇಳಿದೆ.

ಕಾರ್ಯಕ್ರಮವನ್ನು ರದ್ದು ಮಾಡಿದ ನಂತರ ತನುಜಾ ಗುಪ್ತಾ ಅವರು ಅರ್ಜಿಯ ಲಿಂಕ್ ಅನ್ನು ಮತ್ತೊಮ್ಮೆ ಪೋಸ್ಟ್ ಮಾಡಿದಾಗ, ಗ್ರೂಪ್‌ನಲ್ಲಿರುವ ಜನರು ‘ಅಮೆರಿಕದಲ್ಲಿ ಜಾತಿ ಇಲ್ಲ, ಜಾತಿ ತಾರತಮ್ಯ ಅಸ್ತಿತ್ವದಲ್ಲಿಲ್ಲ, ತುಳಿತಕ್ಕೊಳಗಾದ ಜಾತಿಗಳ ಜನರು ಕಡಿಮೆ ವಿದ್ಯಾವಂತರು’ ಸೇರಿದಂತೆ ಹಲವು ಚರ್ಚೆಗಳನ್ನು ನಡೆಸಿದ್ದಾರೆ ಎಂದು ವಾಶಿಂಗ್ಟನ್‌ ಪೋಸ್ಟ್‌ ತನ್ನ ವರದಿಯಲ್ಲಿ ಹೇಳಿದೆ. ಭಾರತದ ಮೀಸಲಾತಿ ವ್ಯವಸ್ಥೆಯು ‘ಮೇಲ್ಜಾತಿಗಳ ವಿರುದ್ಧ ಹಿಮ್ಮುಖ ತಾರತಮ್ಯ’ ಎಂದು ಅವರು ಕರೆದಿದ್ದಾರೆ ಎಂದು ವರದಿ ಹೇಳಿದೆ.

ಅಮೆರಿಕ, ಮೆಕ್ಸಿಕೊ ಮತ್ತು ಕೆನಡಾದಾದ್ಯಂತ ಘಟಕಗಳನ್ನು ಹೊಂದಿರುವ ಅಂಬೇಡ್ಕರ್‌ವಾದಿಗಳ ಸಂಘದ (AANA) ಅಧ್ಯಕ್ಷರಾಗಿರುವ ತೇನ್ಮೋಳಿ ಅವರು ಜಾಗತಿಕವಾಗಿ ಗುರುತಿಸಲ್ಪಟ್ಟ ಜಾತಿ ವಿರೋಧಿ ಹೋರಾಟಗಾರ್ತಿಯಾಗಿದ್ದು, ದಕ್ಷಿಣ ಏಷ್ಯಾದಲ್ಲಿನ ಜಾತಿ ತಾರತಮ್ಯವನ್ನು ಅಂತರರಾಷ್ಟ್ರೀಯ ಗಮನಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮಾತು ಮರೆತ ಭಾರತ; ಸ್ವತಂತ್ರ ಪೂರ್ವ ಭಾರತದ ಕೆಲವು ದಲಿತ್ ಫೈಲ್ಸ್

ಗೂಗಲ್‌ನ ನಡೆಯನ್ನು ವಿರೋಧಿಸಿರುವ ತೇನ್ಮೋಳಿ, “ಗೂಗಲ್‌ ಕಾನೂನು ಬಾಹಿರವಾಗಿ ಜಾತಿ ಇಕ್ವಿಟಿಯ ಬಗ್ಗೆ ಮಾತನಾಡುವುದನ್ನು ರದ್ದುಗೊಳಿಸಿದೆ. ಅದರ ಕ್ರಮಗಳು ತನ್ನ ಉದ್ಯೋಗಿಗಳಿಗೆ ಮತ್ತು ನನ್ನ ಕಡೆಗೆ ಎಷ್ಟು ಆಘಾತಕಾರಿ ಮತ್ತು ತಾರತಮ್ಯದಿಂದ ಕೂಡಿವೆ ಎಂಬುದನ್ನು ವ್ಯಕ್ತಪಡಿಸಲು ನನಗೆ ಪದಗಳು ಸಿಗುತ್ತಿಲ್ಲ. ಈ ದಾಳಿಗಳು ಸಂಭವಿಸಲು ಮತ್ತು ಮುಂದುವರೆಯಲು ಅನುವು ಮಾಡಿಕೊಡುವ ತನ್ನ ಉದ್ಯೋಗಿಗಳ ಜಾತೀಯತೆಯನ್ನು ಗೂಗಲ್ ಪರಿಹರಿಸಬೇಕು” ಎಂದು ಹೇಳಿದ್ದಾರೆ.

ಏಪ್ರಿಲ್ 18ರ ‘ದಲಿತ ಇತಿಹಾಸ ಮಾಸ’ದ ಅಂಗವಾಗಿ ತೇನ್ಮೋಳಿ ಅವರು ಈ ಭಾಷಣವನ್ನು ನೀಡಲು ನಿರ್ಧರಿಸಿದ್ದರು ಆದರೆ ಅದನ್ನು ಮುಂದೂಡಲಾಗಿದೆ ಎಂದು ಮೊದಲಿಗೆ ತಿಳಿಸಲಾಗಿತ್ತು. ಈ ಬೆಳವಣಿಗೆಯಿಂದ ತಾನು ತೊಂದರೆಗೀಡಾಗಿದ್ದು, ತನ್ನ ಮಾತುಗಳು ಗೂಗಲ್‌‌ನ ಉದ್ಯೋಗಿಗಳಿಗೆ ಸಮಸ್ಯೆಯನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಅವರು ನಂತರ ಗೂಗಲ್ ಸಿಇಒ ಸುಂದರ್ ಪಿಚೈ ಅವರಿಗೆ ಪತ್ರ ಬರೆದಿದ್ದರು.

“ಜಾತಿ ತಾರತಮ್ಯವನ್ನು ಗುರುತಿಸಲಾಗದಿದ್ದರೆ ಅದು ವ್ಯಾಪಾರಕ್ಕೆ ಕೆಟ್ಟದು ಮಾಡುತ್ತದೆ. ಇದು ಕೆಲಸದ ಸ್ಥಳಗಳನ್ನು ಅಸುರಕ್ಷಿತ ಮತ್ತು ಪ್ರತಿಕೂಲವಾಗಿಸುತ್ತದೆ. ಗೂಗಲ್‌ನ ಅತಿದೊಡ್ಡ ಮಾರುಕಟ್ಟೆಗಳಲ್ಲಿ ಒಂದಾದ ಭಾರತದಲ್ಲಿ, ದಲಿತರು ಕನಿಷ್ಠ 25 ರಿಂದ 30% ಮಾರುಕಟ್ಟೆಯನ್ನು ಹೊಂದಿದ್ದಾರೆ” ಎಂದು ಅವರು ಪಿಚೈಗೆ ಬರೆದಿರುವ ಪತ್ರದಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿ: ಬ್ರಿಟನ್‌ನ ಮೊದಲ ದಲಿತ ಮಹಿಳಾ ಮೇಯರ್ ಆಗಿ ಮೊಹಿಂದರ್ ಮಿಧಾ ಆಯ್ಕೆ

ಆದಾಗ್ಯೂ, ಉದ್ಯೋಗಿಗಳ ಗುಂಪಿನ ಪ್ರತಿರೋಧದಿಂದಾಗಿ ಅವರ ಭಾಷಣವನ್ನು ರದ್ದುಗೊಳಿಸಲಾಗಿದೆ. ಇದಲ್ಲದೆ, ತನುಜಾ ಗುಪ್ತಾ ಅವರು ತೇನ್ಮೋಳಿ ಅವರ ಭಾಷಣವನ್ನು ಸಂಘಟಿಸಲು ಸಹಕರಿಸುತ್ತಿದ್ದ ಗೂಗಲ್ ಉದ್ಯೋಗಿಯನ್ನು ಗುರಿ ಮಾಡಲಾಗಿದೆ.

ತೇನ್ಮೋಳಿ ಅವರ ಭಾಷಣವನ್ನು ರದ್ದು ಮಾಡಿರುವುದನ್ನು ‘ಈಕ್ವಾಲಿಟಿ ಲ್ಯಾಬ್ಸ್’ ಖಂಡಿಸಿದ್ದು, ಗೂಗಲ್‌ನ ಈ ವರ್ತನೆಯು ಜಾತಿವಾದಿಯಾಗಿದೆ ಎಂದು ಬಣ್ಣಿಸಿದೆ. ಗೂಗಲ್‌ನ ವೈವಿಧ್ಯತೆ ಮತ್ತು ಒಳಗೊಳ್ಳುವಿಕೆಯ ಉಪಕ್ರಮದ ನ್ಯಾಯಸಮ್ಮತತೆಯನ್ನು ಅದು ಪ್ರಶ್ನಿಸಿದ್ದು, “ಗೂಗಲ್‌ ಜಾತಿ ಧರ್ಮಾಂಧತೆ ಮತ್ತು ಕಿರುಕುಳವನ್ನು ಅತಿರೇಕವಾಗಿ ನಡೆಸಲು ಅವಕಾಶ ಮಾಡಿಕೊಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ಮನುವಾದಿಗಳು ಪ್ರಬಲರಾಗುತ್ತಿರುವುದಕ್ಕೆ ಇದೊಂದು ಉದಾಹರಣೆ.

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...