Homeಅಂತರಾಷ್ಟ್ರೀಯ‘ಜಾತಿ ಸಮಾನತೆ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯ’ ಎಂದ ಉದ್ಯೋಗಿಗಳು: ದಲಿತ ಹೋರಾಟಗಾರ್ತಿಯ ಭಾಷಣ ರದ್ದು...

‘ಜಾತಿ ಸಮಾನತೆ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯ’ ಎಂದ ಉದ್ಯೋಗಿಗಳು: ದಲಿತ ಹೋರಾಟಗಾರ್ತಿಯ ಭಾಷಣ ರದ್ದು ಮಾಡಿದ ಗೂಗಲ್!

ಗೂಗಲ್‌ ಜಾತಿ ಧರ್ಮಾಂಧತೆ ಮತ್ತು ಕಿರುಕುಳವನ್ನು ಅತಿರೇಕವಾಗಿ ನಡೆಸಲು ಅವಕಾಶ ಮಾಡಿಕೊಟ್ಟಿದೆ ತೆನ್ಮೋಳಿ ಸೌಂದರರಾಜನ್ ಅವರ ಸಂಸ್ಥೆ ಆಕ್ರೋಶ ವ್ಯಕ್ತಪಡಿಸಿದೆ

- Advertisement -
- Advertisement -

“ಜಾತಿ ಸಮಾನತೆಯ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯವಿದೆ” ಎಂದು ಹೇಳಿಕೊಂಡ ಉದ್ಯೋಗಿಗಳ ಒತ್ತಡಕ್ಕೆ ಮಣಿದು ಅಮೆರಿಕಾ ಮೂಲದ ದಲಿತ ಹೋರಾಟಗಾರ್ತಿ “ತೆನ್ಮೋಳಿ ಸೌಂದರರಾಜನ್’’ ಅವರ ನಿಗದಿತ ಭಾಷಣವನ್ನು ಗೂಗಲ್ ರದ್ದುಮಾಡಿದೆ. ಕಂಪನಿಯ ಡೈವರ್ಸಿಟಿ ಇಕ್ವಿಟಿ ಇನ್ಕ್ಲೂಸಿವಿಟಿ (DEI) ಕಾರ್ಯಕ್ರಮದ ಭಾಗವಾಗಿ ಉದ್ಯೋಗಿಗಳ ಸಂವೇದನಾಶೀಲತೆಗಾಗಿ ಅವರು ಈ ಭಾಷಣವನ್ನು ಮಾಡಬೇಕಾಗಿತ್ತು.

ಈಕ್ವಾಲಿಟಿ ಲ್ಯಾಬ್ಸ್‌ನ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿರುವ ತೆನ್ಮೋಳಿ ಅವರನ್ನು ‘‘ಹಿಂದೂ ಫೋಬಿಕ್’’ ಮತ್ತು “ಹಿಂದೂ ವಿರೋಧಿ” ಎಂದು ಕರೆದಿರುವ ಗೂಗಲ್‌ನ ಉದ್ಯೋಗಿಗಳ ಗುಂಪುಗಳು ಕಂಪನಿಯ ಇಂಟ್ರಾನೆಟ್ ಮೂಲಕ ಸಾಮೂಹಿಕ ಇಮೇಲ್‌ಗಳನ್ನು ಕಳುಹಿಸಿದ್ದಾರೆ ಎಂದು ವಾಷಿಂಗ್ಟನ್ ಪೋಸ್ಟ್ ಬಹಿರಂಗಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದುತ್ವ ಪರ ಗುಂಪುಗಳ ಅಪಪ್ರಚಾರದಿಂದಾಗಿ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ ಎಂದು ವರದಿಯಾಗಿದೆ. ಗೂಗಲ್‌ನ ಹಿರಿಯ ಮ್ಯಾನೇಜರ್ ತನುಜಾ ಗುಪ್ತಾ ಅವರು ತೆನ್ಮೋಳಿ ಅವರನ್ನು ಭಾಷಣಕ್ಕೆ ಆಹ್ವಾನಿಸಿದ್ದನ್ನು ವಿರೋಧಿಸಿ ಗೂಗಲ್‌ನಿಂದ ಹೊರಬಂದ ನಂತರ ಈ ಸಮಸ್ಯೆಯು ಮತ್ತಷ್ಟು ಬಿಗಡಾಯಿಸಿತ್ತು.

ಇದನ್ನೂ ಓದಿ: ಉತ್ತರಾಖಾಂಡ್‌: ದಲಿತ ಮಹಿಳೆ ಬೇಯಿಸಿದ ಆಹಾರ ಸೇವಿಸಲು ಮತ್ತೆ ನಿರಾಕರಿಸಿದ ಸವರ್ಣೀಯ ವಿದ್ಯಾರ್ಥಿಗಳು

ತೇನ್ಮೋಳಿ ಅವರ ಭಾಷಣವನ್ನು ವಿರೋಧಿಸಿರುವ ಗೂಗಲ್ ಉದ್ಯೋಗಿಗಳು ‘‘ಜಾತಿ ಸಮಾನತೆಯ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯವಿದೆ’’ ಎಂದು ಹೇಳಿದ್ದಾಗಿ ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ. 8,000 ಜನರಿರುವ ದಕ್ಷಿಣ ಏಷ್ಯಾದ ಉದ್ಯೋಗಿಗಳ ಗುಂಪಿಗೆ ಮೇಲ್ ಹೋಗಿದೆ ಎಂದು ವರದಿ ಹೇಳಿದೆ.

ಕಾರ್ಯಕ್ರಮವನ್ನು ರದ್ದು ಮಾಡಿದ ನಂತರ ತನುಜಾ ಗುಪ್ತಾ ಅವರು ಅರ್ಜಿಯ ಲಿಂಕ್ ಅನ್ನು ಮತ್ತೊಮ್ಮೆ ಪೋಸ್ಟ್ ಮಾಡಿದಾಗ, ಗ್ರೂಪ್‌ನಲ್ಲಿರುವ ಜನರು ‘ಅಮೆರಿಕದಲ್ಲಿ ಜಾತಿ ಇಲ್ಲ, ಜಾತಿ ತಾರತಮ್ಯ ಅಸ್ತಿತ್ವದಲ್ಲಿಲ್ಲ, ತುಳಿತಕ್ಕೊಳಗಾದ ಜಾತಿಗಳ ಜನರು ಕಡಿಮೆ ವಿದ್ಯಾವಂತರು’ ಸೇರಿದಂತೆ ಹಲವು ಚರ್ಚೆಗಳನ್ನು ನಡೆಸಿದ್ದಾರೆ ಎಂದು ವಾಶಿಂಗ್ಟನ್‌ ಪೋಸ್ಟ್‌ ತನ್ನ ವರದಿಯಲ್ಲಿ ಹೇಳಿದೆ. ಭಾರತದ ಮೀಸಲಾತಿ ವ್ಯವಸ್ಥೆಯು ‘ಮೇಲ್ಜಾತಿಗಳ ವಿರುದ್ಧ ಹಿಮ್ಮುಖ ತಾರತಮ್ಯ’ ಎಂದು ಅವರು ಕರೆದಿದ್ದಾರೆ ಎಂದು ವರದಿ ಹೇಳಿದೆ.

ಅಮೆರಿಕ, ಮೆಕ್ಸಿಕೊ ಮತ್ತು ಕೆನಡಾದಾದ್ಯಂತ ಘಟಕಗಳನ್ನು ಹೊಂದಿರುವ ಅಂಬೇಡ್ಕರ್‌ವಾದಿಗಳ ಸಂಘದ (AANA) ಅಧ್ಯಕ್ಷರಾಗಿರುವ ತೇನ್ಮೋಳಿ ಅವರು ಜಾಗತಿಕವಾಗಿ ಗುರುತಿಸಲ್ಪಟ್ಟ ಜಾತಿ ವಿರೋಧಿ ಹೋರಾಟಗಾರ್ತಿಯಾಗಿದ್ದು, ದಕ್ಷಿಣ ಏಷ್ಯಾದಲ್ಲಿನ ಜಾತಿ ತಾರತಮ್ಯವನ್ನು ಅಂತರರಾಷ್ಟ್ರೀಯ ಗಮನಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮಾತು ಮರೆತ ಭಾರತ; ಸ್ವತಂತ್ರ ಪೂರ್ವ ಭಾರತದ ಕೆಲವು ದಲಿತ್ ಫೈಲ್ಸ್

ಗೂಗಲ್‌ನ ನಡೆಯನ್ನು ವಿರೋಧಿಸಿರುವ ತೇನ್ಮೋಳಿ, “ಗೂಗಲ್‌ ಕಾನೂನು ಬಾಹಿರವಾಗಿ ಜಾತಿ ಇಕ್ವಿಟಿಯ ಬಗ್ಗೆ ಮಾತನಾಡುವುದನ್ನು ರದ್ದುಗೊಳಿಸಿದೆ. ಅದರ ಕ್ರಮಗಳು ತನ್ನ ಉದ್ಯೋಗಿಗಳಿಗೆ ಮತ್ತು ನನ್ನ ಕಡೆಗೆ ಎಷ್ಟು ಆಘಾತಕಾರಿ ಮತ್ತು ತಾರತಮ್ಯದಿಂದ ಕೂಡಿವೆ ಎಂಬುದನ್ನು ವ್ಯಕ್ತಪಡಿಸಲು ನನಗೆ ಪದಗಳು ಸಿಗುತ್ತಿಲ್ಲ. ಈ ದಾಳಿಗಳು ಸಂಭವಿಸಲು ಮತ್ತು ಮುಂದುವರೆಯಲು ಅನುವು ಮಾಡಿಕೊಡುವ ತನ್ನ ಉದ್ಯೋಗಿಗಳ ಜಾತೀಯತೆಯನ್ನು ಗೂಗಲ್ ಪರಿಹರಿಸಬೇಕು” ಎಂದು ಹೇಳಿದ್ದಾರೆ.

ಏಪ್ರಿಲ್ 18ರ ‘ದಲಿತ ಇತಿಹಾಸ ಮಾಸ’ದ ಅಂಗವಾಗಿ ತೇನ್ಮೋಳಿ ಅವರು ಈ ಭಾಷಣವನ್ನು ನೀಡಲು ನಿರ್ಧರಿಸಿದ್ದರು ಆದರೆ ಅದನ್ನು ಮುಂದೂಡಲಾಗಿದೆ ಎಂದು ಮೊದಲಿಗೆ ತಿಳಿಸಲಾಗಿತ್ತು. ಈ ಬೆಳವಣಿಗೆಯಿಂದ ತಾನು ತೊಂದರೆಗೀಡಾಗಿದ್ದು, ತನ್ನ ಮಾತುಗಳು ಗೂಗಲ್‌‌ನ ಉದ್ಯೋಗಿಗಳಿಗೆ ಸಮಸ್ಯೆಯನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಅವರು ನಂತರ ಗೂಗಲ್ ಸಿಇಒ ಸುಂದರ್ ಪಿಚೈ ಅವರಿಗೆ ಪತ್ರ ಬರೆದಿದ್ದರು.

“ಜಾತಿ ತಾರತಮ್ಯವನ್ನು ಗುರುತಿಸಲಾಗದಿದ್ದರೆ ಅದು ವ್ಯಾಪಾರಕ್ಕೆ ಕೆಟ್ಟದು ಮಾಡುತ್ತದೆ. ಇದು ಕೆಲಸದ ಸ್ಥಳಗಳನ್ನು ಅಸುರಕ್ಷಿತ ಮತ್ತು ಪ್ರತಿಕೂಲವಾಗಿಸುತ್ತದೆ. ಗೂಗಲ್‌ನ ಅತಿದೊಡ್ಡ ಮಾರುಕಟ್ಟೆಗಳಲ್ಲಿ ಒಂದಾದ ಭಾರತದಲ್ಲಿ, ದಲಿತರು ಕನಿಷ್ಠ 25 ರಿಂದ 30% ಮಾರುಕಟ್ಟೆಯನ್ನು ಹೊಂದಿದ್ದಾರೆ” ಎಂದು ಅವರು ಪಿಚೈಗೆ ಬರೆದಿರುವ ಪತ್ರದಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿ: ಬ್ರಿಟನ್‌ನ ಮೊದಲ ದಲಿತ ಮಹಿಳಾ ಮೇಯರ್ ಆಗಿ ಮೊಹಿಂದರ್ ಮಿಧಾ ಆಯ್ಕೆ

ಆದಾಗ್ಯೂ, ಉದ್ಯೋಗಿಗಳ ಗುಂಪಿನ ಪ್ರತಿರೋಧದಿಂದಾಗಿ ಅವರ ಭಾಷಣವನ್ನು ರದ್ದುಗೊಳಿಸಲಾಗಿದೆ. ಇದಲ್ಲದೆ, ತನುಜಾ ಗುಪ್ತಾ ಅವರು ತೇನ್ಮೋಳಿ ಅವರ ಭಾಷಣವನ್ನು ಸಂಘಟಿಸಲು ಸಹಕರಿಸುತ್ತಿದ್ದ ಗೂಗಲ್ ಉದ್ಯೋಗಿಯನ್ನು ಗುರಿ ಮಾಡಲಾಗಿದೆ.

ತೇನ್ಮೋಳಿ ಅವರ ಭಾಷಣವನ್ನು ರದ್ದು ಮಾಡಿರುವುದನ್ನು ‘ಈಕ್ವಾಲಿಟಿ ಲ್ಯಾಬ್ಸ್’ ಖಂಡಿಸಿದ್ದು, ಗೂಗಲ್‌ನ ಈ ವರ್ತನೆಯು ಜಾತಿವಾದಿಯಾಗಿದೆ ಎಂದು ಬಣ್ಣಿಸಿದೆ. ಗೂಗಲ್‌ನ ವೈವಿಧ್ಯತೆ ಮತ್ತು ಒಳಗೊಳ್ಳುವಿಕೆಯ ಉಪಕ್ರಮದ ನ್ಯಾಯಸಮ್ಮತತೆಯನ್ನು ಅದು ಪ್ರಶ್ನಿಸಿದ್ದು, “ಗೂಗಲ್‌ ಜಾತಿ ಧರ್ಮಾಂಧತೆ ಮತ್ತು ಕಿರುಕುಳವನ್ನು ಅತಿರೇಕವಾಗಿ ನಡೆಸಲು ಅವಕಾಶ ಮಾಡಿಕೊಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ಮನುವಾದಿಗಳು ಪ್ರಬಲರಾಗುತ್ತಿರುವುದಕ್ಕೆ ಇದೊಂದು ಉದಾಹರಣೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...