Homeಅಂತರಾಷ್ಟ್ರೀಯ‘ಜಾತಿ ಸಮಾನತೆ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯ’ ಎಂದ ಉದ್ಯೋಗಿಗಳು: ದಲಿತ ಹೋರಾಟಗಾರ್ತಿಯ ಭಾಷಣ ರದ್ದು...

‘ಜಾತಿ ಸಮಾನತೆ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯ’ ಎಂದ ಉದ್ಯೋಗಿಗಳು: ದಲಿತ ಹೋರಾಟಗಾರ್ತಿಯ ಭಾಷಣ ರದ್ದು ಮಾಡಿದ ಗೂಗಲ್!

ಗೂಗಲ್‌ ಜಾತಿ ಧರ್ಮಾಂಧತೆ ಮತ್ತು ಕಿರುಕುಳವನ್ನು ಅತಿರೇಕವಾಗಿ ನಡೆಸಲು ಅವಕಾಶ ಮಾಡಿಕೊಟ್ಟಿದೆ ತೆನ್ಮೋಳಿ ಸೌಂದರರಾಜನ್ ಅವರ ಸಂಸ್ಥೆ ಆಕ್ರೋಶ ವ್ಯಕ್ತಪಡಿಸಿದೆ

- Advertisement -
- Advertisement -

“ಜಾತಿ ಸಮಾನತೆಯ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯವಿದೆ” ಎಂದು ಹೇಳಿಕೊಂಡ ಉದ್ಯೋಗಿಗಳ ಒತ್ತಡಕ್ಕೆ ಮಣಿದು ಅಮೆರಿಕಾ ಮೂಲದ ದಲಿತ ಹೋರಾಟಗಾರ್ತಿ “ತೆನ್ಮೋಳಿ ಸೌಂದರರಾಜನ್’’ ಅವರ ನಿಗದಿತ ಭಾಷಣವನ್ನು ಗೂಗಲ್ ರದ್ದುಮಾಡಿದೆ. ಕಂಪನಿಯ ಡೈವರ್ಸಿಟಿ ಇಕ್ವಿಟಿ ಇನ್ಕ್ಲೂಸಿವಿಟಿ (DEI) ಕಾರ್ಯಕ್ರಮದ ಭಾಗವಾಗಿ ಉದ್ಯೋಗಿಗಳ ಸಂವೇದನಾಶೀಲತೆಗಾಗಿ ಅವರು ಈ ಭಾಷಣವನ್ನು ಮಾಡಬೇಕಾಗಿತ್ತು.

ಈಕ್ವಾಲಿಟಿ ಲ್ಯಾಬ್ಸ್‌ನ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿರುವ ತೆನ್ಮೋಳಿ ಅವರನ್ನು ‘‘ಹಿಂದೂ ಫೋಬಿಕ್’’ ಮತ್ತು “ಹಿಂದೂ ವಿರೋಧಿ” ಎಂದು ಕರೆದಿರುವ ಗೂಗಲ್‌ನ ಉದ್ಯೋಗಿಗಳ ಗುಂಪುಗಳು ಕಂಪನಿಯ ಇಂಟ್ರಾನೆಟ್ ಮೂಲಕ ಸಾಮೂಹಿಕ ಇಮೇಲ್‌ಗಳನ್ನು ಕಳುಹಿಸಿದ್ದಾರೆ ಎಂದು ವಾಷಿಂಗ್ಟನ್ ಪೋಸ್ಟ್ ಬಹಿರಂಗಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದುತ್ವ ಪರ ಗುಂಪುಗಳ ಅಪಪ್ರಚಾರದಿಂದಾಗಿ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ ಎಂದು ವರದಿಯಾಗಿದೆ. ಗೂಗಲ್‌ನ ಹಿರಿಯ ಮ್ಯಾನೇಜರ್ ತನುಜಾ ಗುಪ್ತಾ ಅವರು ತೆನ್ಮೋಳಿ ಅವರನ್ನು ಭಾಷಣಕ್ಕೆ ಆಹ್ವಾನಿಸಿದ್ದನ್ನು ವಿರೋಧಿಸಿ ಗೂಗಲ್‌ನಿಂದ ಹೊರಬಂದ ನಂತರ ಈ ಸಮಸ್ಯೆಯು ಮತ್ತಷ್ಟು ಬಿಗಡಾಯಿಸಿತ್ತು.

ಇದನ್ನೂ ಓದಿ: ಉತ್ತರಾಖಾಂಡ್‌: ದಲಿತ ಮಹಿಳೆ ಬೇಯಿಸಿದ ಆಹಾರ ಸೇವಿಸಲು ಮತ್ತೆ ನಿರಾಕರಿಸಿದ ಸವರ್ಣೀಯ ವಿದ್ಯಾರ್ಥಿಗಳು

ತೇನ್ಮೋಳಿ ಅವರ ಭಾಷಣವನ್ನು ವಿರೋಧಿಸಿರುವ ಗೂಗಲ್ ಉದ್ಯೋಗಿಗಳು ‘‘ಜಾತಿ ಸಮಾನತೆಯ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯವಿದೆ’’ ಎಂದು ಹೇಳಿದ್ದಾಗಿ ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ. 8,000 ಜನರಿರುವ ದಕ್ಷಿಣ ಏಷ್ಯಾದ ಉದ್ಯೋಗಿಗಳ ಗುಂಪಿಗೆ ಮೇಲ್ ಹೋಗಿದೆ ಎಂದು ವರದಿ ಹೇಳಿದೆ.

ಕಾರ್ಯಕ್ರಮವನ್ನು ರದ್ದು ಮಾಡಿದ ನಂತರ ತನುಜಾ ಗುಪ್ತಾ ಅವರು ಅರ್ಜಿಯ ಲಿಂಕ್ ಅನ್ನು ಮತ್ತೊಮ್ಮೆ ಪೋಸ್ಟ್ ಮಾಡಿದಾಗ, ಗ್ರೂಪ್‌ನಲ್ಲಿರುವ ಜನರು ‘ಅಮೆರಿಕದಲ್ಲಿ ಜಾತಿ ಇಲ್ಲ, ಜಾತಿ ತಾರತಮ್ಯ ಅಸ್ತಿತ್ವದಲ್ಲಿಲ್ಲ, ತುಳಿತಕ್ಕೊಳಗಾದ ಜಾತಿಗಳ ಜನರು ಕಡಿಮೆ ವಿದ್ಯಾವಂತರು’ ಸೇರಿದಂತೆ ಹಲವು ಚರ್ಚೆಗಳನ್ನು ನಡೆಸಿದ್ದಾರೆ ಎಂದು ವಾಶಿಂಗ್ಟನ್‌ ಪೋಸ್ಟ್‌ ತನ್ನ ವರದಿಯಲ್ಲಿ ಹೇಳಿದೆ. ಭಾರತದ ಮೀಸಲಾತಿ ವ್ಯವಸ್ಥೆಯು ‘ಮೇಲ್ಜಾತಿಗಳ ವಿರುದ್ಧ ಹಿಮ್ಮುಖ ತಾರತಮ್ಯ’ ಎಂದು ಅವರು ಕರೆದಿದ್ದಾರೆ ಎಂದು ವರದಿ ಹೇಳಿದೆ.

ಅಮೆರಿಕ, ಮೆಕ್ಸಿಕೊ ಮತ್ತು ಕೆನಡಾದಾದ್ಯಂತ ಘಟಕಗಳನ್ನು ಹೊಂದಿರುವ ಅಂಬೇಡ್ಕರ್‌ವಾದಿಗಳ ಸಂಘದ (AANA) ಅಧ್ಯಕ್ಷರಾಗಿರುವ ತೇನ್ಮೋಳಿ ಅವರು ಜಾಗತಿಕವಾಗಿ ಗುರುತಿಸಲ್ಪಟ್ಟ ಜಾತಿ ವಿರೋಧಿ ಹೋರಾಟಗಾರ್ತಿಯಾಗಿದ್ದು, ದಕ್ಷಿಣ ಏಷ್ಯಾದಲ್ಲಿನ ಜಾತಿ ತಾರತಮ್ಯವನ್ನು ಅಂತರರಾಷ್ಟ್ರೀಯ ಗಮನಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮಾತು ಮರೆತ ಭಾರತ; ಸ್ವತಂತ್ರ ಪೂರ್ವ ಭಾರತದ ಕೆಲವು ದಲಿತ್ ಫೈಲ್ಸ್

ಗೂಗಲ್‌ನ ನಡೆಯನ್ನು ವಿರೋಧಿಸಿರುವ ತೇನ್ಮೋಳಿ, “ಗೂಗಲ್‌ ಕಾನೂನು ಬಾಹಿರವಾಗಿ ಜಾತಿ ಇಕ್ವಿಟಿಯ ಬಗ್ಗೆ ಮಾತನಾಡುವುದನ್ನು ರದ್ದುಗೊಳಿಸಿದೆ. ಅದರ ಕ್ರಮಗಳು ತನ್ನ ಉದ್ಯೋಗಿಗಳಿಗೆ ಮತ್ತು ನನ್ನ ಕಡೆಗೆ ಎಷ್ಟು ಆಘಾತಕಾರಿ ಮತ್ತು ತಾರತಮ್ಯದಿಂದ ಕೂಡಿವೆ ಎಂಬುದನ್ನು ವ್ಯಕ್ತಪಡಿಸಲು ನನಗೆ ಪದಗಳು ಸಿಗುತ್ತಿಲ್ಲ. ಈ ದಾಳಿಗಳು ಸಂಭವಿಸಲು ಮತ್ತು ಮುಂದುವರೆಯಲು ಅನುವು ಮಾಡಿಕೊಡುವ ತನ್ನ ಉದ್ಯೋಗಿಗಳ ಜಾತೀಯತೆಯನ್ನು ಗೂಗಲ್ ಪರಿಹರಿಸಬೇಕು” ಎಂದು ಹೇಳಿದ್ದಾರೆ.

ಏಪ್ರಿಲ್ 18ರ ‘ದಲಿತ ಇತಿಹಾಸ ಮಾಸ’ದ ಅಂಗವಾಗಿ ತೇನ್ಮೋಳಿ ಅವರು ಈ ಭಾಷಣವನ್ನು ನೀಡಲು ನಿರ್ಧರಿಸಿದ್ದರು ಆದರೆ ಅದನ್ನು ಮುಂದೂಡಲಾಗಿದೆ ಎಂದು ಮೊದಲಿಗೆ ತಿಳಿಸಲಾಗಿತ್ತು. ಈ ಬೆಳವಣಿಗೆಯಿಂದ ತಾನು ತೊಂದರೆಗೀಡಾಗಿದ್ದು, ತನ್ನ ಮಾತುಗಳು ಗೂಗಲ್‌‌ನ ಉದ್ಯೋಗಿಗಳಿಗೆ ಸಮಸ್ಯೆಯನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಅವರು ನಂತರ ಗೂಗಲ್ ಸಿಇಒ ಸುಂದರ್ ಪಿಚೈ ಅವರಿಗೆ ಪತ್ರ ಬರೆದಿದ್ದರು.

“ಜಾತಿ ತಾರತಮ್ಯವನ್ನು ಗುರುತಿಸಲಾಗದಿದ್ದರೆ ಅದು ವ್ಯಾಪಾರಕ್ಕೆ ಕೆಟ್ಟದು ಮಾಡುತ್ತದೆ. ಇದು ಕೆಲಸದ ಸ್ಥಳಗಳನ್ನು ಅಸುರಕ್ಷಿತ ಮತ್ತು ಪ್ರತಿಕೂಲವಾಗಿಸುತ್ತದೆ. ಗೂಗಲ್‌ನ ಅತಿದೊಡ್ಡ ಮಾರುಕಟ್ಟೆಗಳಲ್ಲಿ ಒಂದಾದ ಭಾರತದಲ್ಲಿ, ದಲಿತರು ಕನಿಷ್ಠ 25 ರಿಂದ 30% ಮಾರುಕಟ್ಟೆಯನ್ನು ಹೊಂದಿದ್ದಾರೆ” ಎಂದು ಅವರು ಪಿಚೈಗೆ ಬರೆದಿರುವ ಪತ್ರದಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿ: ಬ್ರಿಟನ್‌ನ ಮೊದಲ ದಲಿತ ಮಹಿಳಾ ಮೇಯರ್ ಆಗಿ ಮೊಹಿಂದರ್ ಮಿಧಾ ಆಯ್ಕೆ

ಆದಾಗ್ಯೂ, ಉದ್ಯೋಗಿಗಳ ಗುಂಪಿನ ಪ್ರತಿರೋಧದಿಂದಾಗಿ ಅವರ ಭಾಷಣವನ್ನು ರದ್ದುಗೊಳಿಸಲಾಗಿದೆ. ಇದಲ್ಲದೆ, ತನುಜಾ ಗುಪ್ತಾ ಅವರು ತೇನ್ಮೋಳಿ ಅವರ ಭಾಷಣವನ್ನು ಸಂಘಟಿಸಲು ಸಹಕರಿಸುತ್ತಿದ್ದ ಗೂಗಲ್ ಉದ್ಯೋಗಿಯನ್ನು ಗುರಿ ಮಾಡಲಾಗಿದೆ.

ತೇನ್ಮೋಳಿ ಅವರ ಭಾಷಣವನ್ನು ರದ್ದು ಮಾಡಿರುವುದನ್ನು ‘ಈಕ್ವಾಲಿಟಿ ಲ್ಯಾಬ್ಸ್’ ಖಂಡಿಸಿದ್ದು, ಗೂಗಲ್‌ನ ಈ ವರ್ತನೆಯು ಜಾತಿವಾದಿಯಾಗಿದೆ ಎಂದು ಬಣ್ಣಿಸಿದೆ. ಗೂಗಲ್‌ನ ವೈವಿಧ್ಯತೆ ಮತ್ತು ಒಳಗೊಳ್ಳುವಿಕೆಯ ಉಪಕ್ರಮದ ನ್ಯಾಯಸಮ್ಮತತೆಯನ್ನು ಅದು ಪ್ರಶ್ನಿಸಿದ್ದು, “ಗೂಗಲ್‌ ಜಾತಿ ಧರ್ಮಾಂಧತೆ ಮತ್ತು ಕಿರುಕುಳವನ್ನು ಅತಿರೇಕವಾಗಿ ನಡೆಸಲು ಅವಕಾಶ ಮಾಡಿಕೊಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ಮನುವಾದಿಗಳು ಪ್ರಬಲರಾಗುತ್ತಿರುವುದಕ್ಕೆ ಇದೊಂದು ಉದಾಹರಣೆ.

LEAVE A REPLY

Please enter your comment!
Please enter your name here

- Advertisment -

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...