Homeಅಂತರಾಷ್ಟ್ರೀಯ‘ಜಾತಿ ಸಮಾನತೆ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯ’ ಎಂದ ಉದ್ಯೋಗಿಗಳು: ದಲಿತ ಹೋರಾಟಗಾರ್ತಿಯ ಭಾಷಣ ರದ್ದು...

‘ಜಾತಿ ಸಮಾನತೆ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯ’ ಎಂದ ಉದ್ಯೋಗಿಗಳು: ದಲಿತ ಹೋರಾಟಗಾರ್ತಿಯ ಭಾಷಣ ರದ್ದು ಮಾಡಿದ ಗೂಗಲ್!

ಗೂಗಲ್‌ ಜಾತಿ ಧರ್ಮಾಂಧತೆ ಮತ್ತು ಕಿರುಕುಳವನ್ನು ಅತಿರೇಕವಾಗಿ ನಡೆಸಲು ಅವಕಾಶ ಮಾಡಿಕೊಟ್ಟಿದೆ ತೆನ್ಮೋಳಿ ಸೌಂದರರಾಜನ್ ಅವರ ಸಂಸ್ಥೆ ಆಕ್ರೋಶ ವ್ಯಕ್ತಪಡಿಸಿದೆ

- Advertisement -
- Advertisement -

“ಜಾತಿ ಸಮಾನತೆಯ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯವಿದೆ” ಎಂದು ಹೇಳಿಕೊಂಡ ಉದ್ಯೋಗಿಗಳ ಒತ್ತಡಕ್ಕೆ ಮಣಿದು ಅಮೆರಿಕಾ ಮೂಲದ ದಲಿತ ಹೋರಾಟಗಾರ್ತಿ “ತೆನ್ಮೋಳಿ ಸೌಂದರರಾಜನ್’’ ಅವರ ನಿಗದಿತ ಭಾಷಣವನ್ನು ಗೂಗಲ್ ರದ್ದುಮಾಡಿದೆ. ಕಂಪನಿಯ ಡೈವರ್ಸಿಟಿ ಇಕ್ವಿಟಿ ಇನ್ಕ್ಲೂಸಿವಿಟಿ (DEI) ಕಾರ್ಯಕ್ರಮದ ಭಾಗವಾಗಿ ಉದ್ಯೋಗಿಗಳ ಸಂವೇದನಾಶೀಲತೆಗಾಗಿ ಅವರು ಈ ಭಾಷಣವನ್ನು ಮಾಡಬೇಕಾಗಿತ್ತು.

ಈಕ್ವಾಲಿಟಿ ಲ್ಯಾಬ್ಸ್‌ನ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿರುವ ತೆನ್ಮೋಳಿ ಅವರನ್ನು ‘‘ಹಿಂದೂ ಫೋಬಿಕ್’’ ಮತ್ತು “ಹಿಂದೂ ವಿರೋಧಿ” ಎಂದು ಕರೆದಿರುವ ಗೂಗಲ್‌ನ ಉದ್ಯೋಗಿಗಳ ಗುಂಪುಗಳು ಕಂಪನಿಯ ಇಂಟ್ರಾನೆಟ್ ಮೂಲಕ ಸಾಮೂಹಿಕ ಇಮೇಲ್‌ಗಳನ್ನು ಕಳುಹಿಸಿದ್ದಾರೆ ಎಂದು ವಾಷಿಂಗ್ಟನ್ ಪೋಸ್ಟ್ ಬಹಿರಂಗಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದುತ್ವ ಪರ ಗುಂಪುಗಳ ಅಪಪ್ರಚಾರದಿಂದಾಗಿ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ ಎಂದು ವರದಿಯಾಗಿದೆ. ಗೂಗಲ್‌ನ ಹಿರಿಯ ಮ್ಯಾನೇಜರ್ ತನುಜಾ ಗುಪ್ತಾ ಅವರು ತೆನ್ಮೋಳಿ ಅವರನ್ನು ಭಾಷಣಕ್ಕೆ ಆಹ್ವಾನಿಸಿದ್ದನ್ನು ವಿರೋಧಿಸಿ ಗೂಗಲ್‌ನಿಂದ ಹೊರಬಂದ ನಂತರ ಈ ಸಮಸ್ಯೆಯು ಮತ್ತಷ್ಟು ಬಿಗಡಾಯಿಸಿತ್ತು.

ಇದನ್ನೂ ಓದಿ: ಉತ್ತರಾಖಾಂಡ್‌: ದಲಿತ ಮಹಿಳೆ ಬೇಯಿಸಿದ ಆಹಾರ ಸೇವಿಸಲು ಮತ್ತೆ ನಿರಾಕರಿಸಿದ ಸವರ್ಣೀಯ ವಿದ್ಯಾರ್ಥಿಗಳು

ತೇನ್ಮೋಳಿ ಅವರ ಭಾಷಣವನ್ನು ವಿರೋಧಿಸಿರುವ ಗೂಗಲ್ ಉದ್ಯೋಗಿಗಳು ‘‘ಜಾತಿ ಸಮಾನತೆಯ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯವಿದೆ’’ ಎಂದು ಹೇಳಿದ್ದಾಗಿ ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ. 8,000 ಜನರಿರುವ ದಕ್ಷಿಣ ಏಷ್ಯಾದ ಉದ್ಯೋಗಿಗಳ ಗುಂಪಿಗೆ ಮೇಲ್ ಹೋಗಿದೆ ಎಂದು ವರದಿ ಹೇಳಿದೆ.

ಕಾರ್ಯಕ್ರಮವನ್ನು ರದ್ದು ಮಾಡಿದ ನಂತರ ತನುಜಾ ಗುಪ್ತಾ ಅವರು ಅರ್ಜಿಯ ಲಿಂಕ್ ಅನ್ನು ಮತ್ತೊಮ್ಮೆ ಪೋಸ್ಟ್ ಮಾಡಿದಾಗ, ಗ್ರೂಪ್‌ನಲ್ಲಿರುವ ಜನರು ‘ಅಮೆರಿಕದಲ್ಲಿ ಜಾತಿ ಇಲ್ಲ, ಜಾತಿ ತಾರತಮ್ಯ ಅಸ್ತಿತ್ವದಲ್ಲಿಲ್ಲ, ತುಳಿತಕ್ಕೊಳಗಾದ ಜಾತಿಗಳ ಜನರು ಕಡಿಮೆ ವಿದ್ಯಾವಂತರು’ ಸೇರಿದಂತೆ ಹಲವು ಚರ್ಚೆಗಳನ್ನು ನಡೆಸಿದ್ದಾರೆ ಎಂದು ವಾಶಿಂಗ್ಟನ್‌ ಪೋಸ್ಟ್‌ ತನ್ನ ವರದಿಯಲ್ಲಿ ಹೇಳಿದೆ. ಭಾರತದ ಮೀಸಲಾತಿ ವ್ಯವಸ್ಥೆಯು ‘ಮೇಲ್ಜಾತಿಗಳ ವಿರುದ್ಧ ಹಿಮ್ಮುಖ ತಾರತಮ್ಯ’ ಎಂದು ಅವರು ಕರೆದಿದ್ದಾರೆ ಎಂದು ವರದಿ ಹೇಳಿದೆ.

ಅಮೆರಿಕ, ಮೆಕ್ಸಿಕೊ ಮತ್ತು ಕೆನಡಾದಾದ್ಯಂತ ಘಟಕಗಳನ್ನು ಹೊಂದಿರುವ ಅಂಬೇಡ್ಕರ್‌ವಾದಿಗಳ ಸಂಘದ (AANA) ಅಧ್ಯಕ್ಷರಾಗಿರುವ ತೇನ್ಮೋಳಿ ಅವರು ಜಾಗತಿಕವಾಗಿ ಗುರುತಿಸಲ್ಪಟ್ಟ ಜಾತಿ ವಿರೋಧಿ ಹೋರಾಟಗಾರ್ತಿಯಾಗಿದ್ದು, ದಕ್ಷಿಣ ಏಷ್ಯಾದಲ್ಲಿನ ಜಾತಿ ತಾರತಮ್ಯವನ್ನು ಅಂತರರಾಷ್ಟ್ರೀಯ ಗಮನಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮಾತು ಮರೆತ ಭಾರತ; ಸ್ವತಂತ್ರ ಪೂರ್ವ ಭಾರತದ ಕೆಲವು ದಲಿತ್ ಫೈಲ್ಸ್

ಗೂಗಲ್‌ನ ನಡೆಯನ್ನು ವಿರೋಧಿಸಿರುವ ತೇನ್ಮೋಳಿ, “ಗೂಗಲ್‌ ಕಾನೂನು ಬಾಹಿರವಾಗಿ ಜಾತಿ ಇಕ್ವಿಟಿಯ ಬಗ್ಗೆ ಮಾತನಾಡುವುದನ್ನು ರದ್ದುಗೊಳಿಸಿದೆ. ಅದರ ಕ್ರಮಗಳು ತನ್ನ ಉದ್ಯೋಗಿಗಳಿಗೆ ಮತ್ತು ನನ್ನ ಕಡೆಗೆ ಎಷ್ಟು ಆಘಾತಕಾರಿ ಮತ್ತು ತಾರತಮ್ಯದಿಂದ ಕೂಡಿವೆ ಎಂಬುದನ್ನು ವ್ಯಕ್ತಪಡಿಸಲು ನನಗೆ ಪದಗಳು ಸಿಗುತ್ತಿಲ್ಲ. ಈ ದಾಳಿಗಳು ಸಂಭವಿಸಲು ಮತ್ತು ಮುಂದುವರೆಯಲು ಅನುವು ಮಾಡಿಕೊಡುವ ತನ್ನ ಉದ್ಯೋಗಿಗಳ ಜಾತೀಯತೆಯನ್ನು ಗೂಗಲ್ ಪರಿಹರಿಸಬೇಕು” ಎಂದು ಹೇಳಿದ್ದಾರೆ.

ಏಪ್ರಿಲ್ 18ರ ‘ದಲಿತ ಇತಿಹಾಸ ಮಾಸ’ದ ಅಂಗವಾಗಿ ತೇನ್ಮೋಳಿ ಅವರು ಈ ಭಾಷಣವನ್ನು ನೀಡಲು ನಿರ್ಧರಿಸಿದ್ದರು ಆದರೆ ಅದನ್ನು ಮುಂದೂಡಲಾಗಿದೆ ಎಂದು ಮೊದಲಿಗೆ ತಿಳಿಸಲಾಗಿತ್ತು. ಈ ಬೆಳವಣಿಗೆಯಿಂದ ತಾನು ತೊಂದರೆಗೀಡಾಗಿದ್ದು, ತನ್ನ ಮಾತುಗಳು ಗೂಗಲ್‌‌ನ ಉದ್ಯೋಗಿಗಳಿಗೆ ಸಮಸ್ಯೆಯನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಅವರು ನಂತರ ಗೂಗಲ್ ಸಿಇಒ ಸುಂದರ್ ಪಿಚೈ ಅವರಿಗೆ ಪತ್ರ ಬರೆದಿದ್ದರು.

“ಜಾತಿ ತಾರತಮ್ಯವನ್ನು ಗುರುತಿಸಲಾಗದಿದ್ದರೆ ಅದು ವ್ಯಾಪಾರಕ್ಕೆ ಕೆಟ್ಟದು ಮಾಡುತ್ತದೆ. ಇದು ಕೆಲಸದ ಸ್ಥಳಗಳನ್ನು ಅಸುರಕ್ಷಿತ ಮತ್ತು ಪ್ರತಿಕೂಲವಾಗಿಸುತ್ತದೆ. ಗೂಗಲ್‌ನ ಅತಿದೊಡ್ಡ ಮಾರುಕಟ್ಟೆಗಳಲ್ಲಿ ಒಂದಾದ ಭಾರತದಲ್ಲಿ, ದಲಿತರು ಕನಿಷ್ಠ 25 ರಿಂದ 30% ಮಾರುಕಟ್ಟೆಯನ್ನು ಹೊಂದಿದ್ದಾರೆ” ಎಂದು ಅವರು ಪಿಚೈಗೆ ಬರೆದಿರುವ ಪತ್ರದಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿ: ಬ್ರಿಟನ್‌ನ ಮೊದಲ ದಲಿತ ಮಹಿಳಾ ಮೇಯರ್ ಆಗಿ ಮೊಹಿಂದರ್ ಮಿಧಾ ಆಯ್ಕೆ

ಆದಾಗ್ಯೂ, ಉದ್ಯೋಗಿಗಳ ಗುಂಪಿನ ಪ್ರತಿರೋಧದಿಂದಾಗಿ ಅವರ ಭಾಷಣವನ್ನು ರದ್ದುಗೊಳಿಸಲಾಗಿದೆ. ಇದಲ್ಲದೆ, ತನುಜಾ ಗುಪ್ತಾ ಅವರು ತೇನ್ಮೋಳಿ ಅವರ ಭಾಷಣವನ್ನು ಸಂಘಟಿಸಲು ಸಹಕರಿಸುತ್ತಿದ್ದ ಗೂಗಲ್ ಉದ್ಯೋಗಿಯನ್ನು ಗುರಿ ಮಾಡಲಾಗಿದೆ.

ತೇನ್ಮೋಳಿ ಅವರ ಭಾಷಣವನ್ನು ರದ್ದು ಮಾಡಿರುವುದನ್ನು ‘ಈಕ್ವಾಲಿಟಿ ಲ್ಯಾಬ್ಸ್’ ಖಂಡಿಸಿದ್ದು, ಗೂಗಲ್‌ನ ಈ ವರ್ತನೆಯು ಜಾತಿವಾದಿಯಾಗಿದೆ ಎಂದು ಬಣ್ಣಿಸಿದೆ. ಗೂಗಲ್‌ನ ವೈವಿಧ್ಯತೆ ಮತ್ತು ಒಳಗೊಳ್ಳುವಿಕೆಯ ಉಪಕ್ರಮದ ನ್ಯಾಯಸಮ್ಮತತೆಯನ್ನು ಅದು ಪ್ರಶ್ನಿಸಿದ್ದು, “ಗೂಗಲ್‌ ಜಾತಿ ಧರ್ಮಾಂಧತೆ ಮತ್ತು ಕಿರುಕುಳವನ್ನು ಅತಿರೇಕವಾಗಿ ನಡೆಸಲು ಅವಕಾಶ ಮಾಡಿಕೊಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ಮನುವಾದಿಗಳು ಪ್ರಬಲರಾಗುತ್ತಿರುವುದಕ್ಕೆ ಇದೊಂದು ಉದಾಹರಣೆ.

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...