Homeಅಂತರಾಷ್ಟ್ರೀಯ‘ಜಾತಿ ಸಮಾನತೆ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯ’ ಎಂದ ಉದ್ಯೋಗಿಗಳು: ದಲಿತ ಹೋರಾಟಗಾರ್ತಿಯ ಭಾಷಣ ರದ್ದು...

‘ಜಾತಿ ಸಮಾನತೆ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯ’ ಎಂದ ಉದ್ಯೋಗಿಗಳು: ದಲಿತ ಹೋರಾಟಗಾರ್ತಿಯ ಭಾಷಣ ರದ್ದು ಮಾಡಿದ ಗೂಗಲ್!

ಗೂಗಲ್‌ ಜಾತಿ ಧರ್ಮಾಂಧತೆ ಮತ್ತು ಕಿರುಕುಳವನ್ನು ಅತಿರೇಕವಾಗಿ ನಡೆಸಲು ಅವಕಾಶ ಮಾಡಿಕೊಟ್ಟಿದೆ ತೆನ್ಮೋಳಿ ಸೌಂದರರಾಜನ್ ಅವರ ಸಂಸ್ಥೆ ಆಕ್ರೋಶ ವ್ಯಕ್ತಪಡಿಸಿದೆ

- Advertisement -
- Advertisement -

“ಜಾತಿ ಸಮಾನತೆಯ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯವಿದೆ” ಎಂದು ಹೇಳಿಕೊಂಡ ಉದ್ಯೋಗಿಗಳ ಒತ್ತಡಕ್ಕೆ ಮಣಿದು ಅಮೆರಿಕಾ ಮೂಲದ ದಲಿತ ಹೋರಾಟಗಾರ್ತಿ “ತೆನ್ಮೋಳಿ ಸೌಂದರರಾಜನ್’’ ಅವರ ನಿಗದಿತ ಭಾಷಣವನ್ನು ಗೂಗಲ್ ರದ್ದುಮಾಡಿದೆ. ಕಂಪನಿಯ ಡೈವರ್ಸಿಟಿ ಇಕ್ವಿಟಿ ಇನ್ಕ್ಲೂಸಿವಿಟಿ (DEI) ಕಾರ್ಯಕ್ರಮದ ಭಾಗವಾಗಿ ಉದ್ಯೋಗಿಗಳ ಸಂವೇದನಾಶೀಲತೆಗಾಗಿ ಅವರು ಈ ಭಾಷಣವನ್ನು ಮಾಡಬೇಕಾಗಿತ್ತು.

ಈಕ್ವಾಲಿಟಿ ಲ್ಯಾಬ್ಸ್‌ನ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿರುವ ತೆನ್ಮೋಳಿ ಅವರನ್ನು ‘‘ಹಿಂದೂ ಫೋಬಿಕ್’’ ಮತ್ತು “ಹಿಂದೂ ವಿರೋಧಿ” ಎಂದು ಕರೆದಿರುವ ಗೂಗಲ್‌ನ ಉದ್ಯೋಗಿಗಳ ಗುಂಪುಗಳು ಕಂಪನಿಯ ಇಂಟ್ರಾನೆಟ್ ಮೂಲಕ ಸಾಮೂಹಿಕ ಇಮೇಲ್‌ಗಳನ್ನು ಕಳುಹಿಸಿದ್ದಾರೆ ಎಂದು ವಾಷಿಂಗ್ಟನ್ ಪೋಸ್ಟ್ ಬಹಿರಂಗಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದುತ್ವ ಪರ ಗುಂಪುಗಳ ಅಪಪ್ರಚಾರದಿಂದಾಗಿ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ ಎಂದು ವರದಿಯಾಗಿದೆ. ಗೂಗಲ್‌ನ ಹಿರಿಯ ಮ್ಯಾನೇಜರ್ ತನುಜಾ ಗುಪ್ತಾ ಅವರು ತೆನ್ಮೋಳಿ ಅವರನ್ನು ಭಾಷಣಕ್ಕೆ ಆಹ್ವಾನಿಸಿದ್ದನ್ನು ವಿರೋಧಿಸಿ ಗೂಗಲ್‌ನಿಂದ ಹೊರಬಂದ ನಂತರ ಈ ಸಮಸ್ಯೆಯು ಮತ್ತಷ್ಟು ಬಿಗಡಾಯಿಸಿತ್ತು.

ಇದನ್ನೂ ಓದಿ: ಉತ್ತರಾಖಾಂಡ್‌: ದಲಿತ ಮಹಿಳೆ ಬೇಯಿಸಿದ ಆಹಾರ ಸೇವಿಸಲು ಮತ್ತೆ ನಿರಾಕರಿಸಿದ ಸವರ್ಣೀಯ ವಿದ್ಯಾರ್ಥಿಗಳು

ತೇನ್ಮೋಳಿ ಅವರ ಭಾಷಣವನ್ನು ವಿರೋಧಿಸಿರುವ ಗೂಗಲ್ ಉದ್ಯೋಗಿಗಳು ‘‘ಜಾತಿ ಸಮಾನತೆಯ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯವಿದೆ’’ ಎಂದು ಹೇಳಿದ್ದಾಗಿ ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ. 8,000 ಜನರಿರುವ ದಕ್ಷಿಣ ಏಷ್ಯಾದ ಉದ್ಯೋಗಿಗಳ ಗುಂಪಿಗೆ ಮೇಲ್ ಹೋಗಿದೆ ಎಂದು ವರದಿ ಹೇಳಿದೆ.

ಕಾರ್ಯಕ್ರಮವನ್ನು ರದ್ದು ಮಾಡಿದ ನಂತರ ತನುಜಾ ಗುಪ್ತಾ ಅವರು ಅರ್ಜಿಯ ಲಿಂಕ್ ಅನ್ನು ಮತ್ತೊಮ್ಮೆ ಪೋಸ್ಟ್ ಮಾಡಿದಾಗ, ಗ್ರೂಪ್‌ನಲ್ಲಿರುವ ಜನರು ‘ಅಮೆರಿಕದಲ್ಲಿ ಜಾತಿ ಇಲ್ಲ, ಜಾತಿ ತಾರತಮ್ಯ ಅಸ್ತಿತ್ವದಲ್ಲಿಲ್ಲ, ತುಳಿತಕ್ಕೊಳಗಾದ ಜಾತಿಗಳ ಜನರು ಕಡಿಮೆ ವಿದ್ಯಾವಂತರು’ ಸೇರಿದಂತೆ ಹಲವು ಚರ್ಚೆಗಳನ್ನು ನಡೆಸಿದ್ದಾರೆ ಎಂದು ವಾಶಿಂಗ್ಟನ್‌ ಪೋಸ್ಟ್‌ ತನ್ನ ವರದಿಯಲ್ಲಿ ಹೇಳಿದೆ. ಭಾರತದ ಮೀಸಲಾತಿ ವ್ಯವಸ್ಥೆಯು ‘ಮೇಲ್ಜಾತಿಗಳ ವಿರುದ್ಧ ಹಿಮ್ಮುಖ ತಾರತಮ್ಯ’ ಎಂದು ಅವರು ಕರೆದಿದ್ದಾರೆ ಎಂದು ವರದಿ ಹೇಳಿದೆ.

ಅಮೆರಿಕ, ಮೆಕ್ಸಿಕೊ ಮತ್ತು ಕೆನಡಾದಾದ್ಯಂತ ಘಟಕಗಳನ್ನು ಹೊಂದಿರುವ ಅಂಬೇಡ್ಕರ್‌ವಾದಿಗಳ ಸಂಘದ (AANA) ಅಧ್ಯಕ್ಷರಾಗಿರುವ ತೇನ್ಮೋಳಿ ಅವರು ಜಾಗತಿಕವಾಗಿ ಗುರುತಿಸಲ್ಪಟ್ಟ ಜಾತಿ ವಿರೋಧಿ ಹೋರಾಟಗಾರ್ತಿಯಾಗಿದ್ದು, ದಕ್ಷಿಣ ಏಷ್ಯಾದಲ್ಲಿನ ಜಾತಿ ತಾರತಮ್ಯವನ್ನು ಅಂತರರಾಷ್ಟ್ರೀಯ ಗಮನಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮಾತು ಮರೆತ ಭಾರತ; ಸ್ವತಂತ್ರ ಪೂರ್ವ ಭಾರತದ ಕೆಲವು ದಲಿತ್ ಫೈಲ್ಸ್

ಗೂಗಲ್‌ನ ನಡೆಯನ್ನು ವಿರೋಧಿಸಿರುವ ತೇನ್ಮೋಳಿ, “ಗೂಗಲ್‌ ಕಾನೂನು ಬಾಹಿರವಾಗಿ ಜಾತಿ ಇಕ್ವಿಟಿಯ ಬಗ್ಗೆ ಮಾತನಾಡುವುದನ್ನು ರದ್ದುಗೊಳಿಸಿದೆ. ಅದರ ಕ್ರಮಗಳು ತನ್ನ ಉದ್ಯೋಗಿಗಳಿಗೆ ಮತ್ತು ನನ್ನ ಕಡೆಗೆ ಎಷ್ಟು ಆಘಾತಕಾರಿ ಮತ್ತು ತಾರತಮ್ಯದಿಂದ ಕೂಡಿವೆ ಎಂಬುದನ್ನು ವ್ಯಕ್ತಪಡಿಸಲು ನನಗೆ ಪದಗಳು ಸಿಗುತ್ತಿಲ್ಲ. ಈ ದಾಳಿಗಳು ಸಂಭವಿಸಲು ಮತ್ತು ಮುಂದುವರೆಯಲು ಅನುವು ಮಾಡಿಕೊಡುವ ತನ್ನ ಉದ್ಯೋಗಿಗಳ ಜಾತೀಯತೆಯನ್ನು ಗೂಗಲ್ ಪರಿಹರಿಸಬೇಕು” ಎಂದು ಹೇಳಿದ್ದಾರೆ.

ಏಪ್ರಿಲ್ 18ರ ‘ದಲಿತ ಇತಿಹಾಸ ಮಾಸ’ದ ಅಂಗವಾಗಿ ತೇನ್ಮೋಳಿ ಅವರು ಈ ಭಾಷಣವನ್ನು ನೀಡಲು ನಿರ್ಧರಿಸಿದ್ದರು ಆದರೆ ಅದನ್ನು ಮುಂದೂಡಲಾಗಿದೆ ಎಂದು ಮೊದಲಿಗೆ ತಿಳಿಸಲಾಗಿತ್ತು. ಈ ಬೆಳವಣಿಗೆಯಿಂದ ತಾನು ತೊಂದರೆಗೀಡಾಗಿದ್ದು, ತನ್ನ ಮಾತುಗಳು ಗೂಗಲ್‌‌ನ ಉದ್ಯೋಗಿಗಳಿಗೆ ಸಮಸ್ಯೆಯನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಅವರು ನಂತರ ಗೂಗಲ್ ಸಿಇಒ ಸುಂದರ್ ಪಿಚೈ ಅವರಿಗೆ ಪತ್ರ ಬರೆದಿದ್ದರು.

“ಜಾತಿ ತಾರತಮ್ಯವನ್ನು ಗುರುತಿಸಲಾಗದಿದ್ದರೆ ಅದು ವ್ಯಾಪಾರಕ್ಕೆ ಕೆಟ್ಟದು ಮಾಡುತ್ತದೆ. ಇದು ಕೆಲಸದ ಸ್ಥಳಗಳನ್ನು ಅಸುರಕ್ಷಿತ ಮತ್ತು ಪ್ರತಿಕೂಲವಾಗಿಸುತ್ತದೆ. ಗೂಗಲ್‌ನ ಅತಿದೊಡ್ಡ ಮಾರುಕಟ್ಟೆಗಳಲ್ಲಿ ಒಂದಾದ ಭಾರತದಲ್ಲಿ, ದಲಿತರು ಕನಿಷ್ಠ 25 ರಿಂದ 30% ಮಾರುಕಟ್ಟೆಯನ್ನು ಹೊಂದಿದ್ದಾರೆ” ಎಂದು ಅವರು ಪಿಚೈಗೆ ಬರೆದಿರುವ ಪತ್ರದಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿ: ಬ್ರಿಟನ್‌ನ ಮೊದಲ ದಲಿತ ಮಹಿಳಾ ಮೇಯರ್ ಆಗಿ ಮೊಹಿಂದರ್ ಮಿಧಾ ಆಯ್ಕೆ

ಆದಾಗ್ಯೂ, ಉದ್ಯೋಗಿಗಳ ಗುಂಪಿನ ಪ್ರತಿರೋಧದಿಂದಾಗಿ ಅವರ ಭಾಷಣವನ್ನು ರದ್ದುಗೊಳಿಸಲಾಗಿದೆ. ಇದಲ್ಲದೆ, ತನುಜಾ ಗುಪ್ತಾ ಅವರು ತೇನ್ಮೋಳಿ ಅವರ ಭಾಷಣವನ್ನು ಸಂಘಟಿಸಲು ಸಹಕರಿಸುತ್ತಿದ್ದ ಗೂಗಲ್ ಉದ್ಯೋಗಿಯನ್ನು ಗುರಿ ಮಾಡಲಾಗಿದೆ.

ತೇನ್ಮೋಳಿ ಅವರ ಭಾಷಣವನ್ನು ರದ್ದು ಮಾಡಿರುವುದನ್ನು ‘ಈಕ್ವಾಲಿಟಿ ಲ್ಯಾಬ್ಸ್’ ಖಂಡಿಸಿದ್ದು, ಗೂಗಲ್‌ನ ಈ ವರ್ತನೆಯು ಜಾತಿವಾದಿಯಾಗಿದೆ ಎಂದು ಬಣ್ಣಿಸಿದೆ. ಗೂಗಲ್‌ನ ವೈವಿಧ್ಯತೆ ಮತ್ತು ಒಳಗೊಳ್ಳುವಿಕೆಯ ಉಪಕ್ರಮದ ನ್ಯಾಯಸಮ್ಮತತೆಯನ್ನು ಅದು ಪ್ರಶ್ನಿಸಿದ್ದು, “ಗೂಗಲ್‌ ಜಾತಿ ಧರ್ಮಾಂಧತೆ ಮತ್ತು ಕಿರುಕುಳವನ್ನು ಅತಿರೇಕವಾಗಿ ನಡೆಸಲು ಅವಕಾಶ ಮಾಡಿಕೊಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ಮನುವಾದಿಗಳು ಪ್ರಬಲರಾಗುತ್ತಿರುವುದಕ್ಕೆ ಇದೊಂದು ಉದಾಹರಣೆ.

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...