Homeಅಂತರಾಷ್ಟ್ರೀಯ‘ಜಾತಿ ಸಮಾನತೆ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯ’ ಎಂದ ಉದ್ಯೋಗಿಗಳು: ದಲಿತ ಹೋರಾಟಗಾರ್ತಿಯ ಭಾಷಣ ರದ್ದು...

‘ಜಾತಿ ಸಮಾನತೆ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯ’ ಎಂದ ಉದ್ಯೋಗಿಗಳು: ದಲಿತ ಹೋರಾಟಗಾರ್ತಿಯ ಭಾಷಣ ರದ್ದು ಮಾಡಿದ ಗೂಗಲ್!

ಗೂಗಲ್‌ ಜಾತಿ ಧರ್ಮಾಂಧತೆ ಮತ್ತು ಕಿರುಕುಳವನ್ನು ಅತಿರೇಕವಾಗಿ ನಡೆಸಲು ಅವಕಾಶ ಮಾಡಿಕೊಟ್ಟಿದೆ ತೆನ್ಮೋಳಿ ಸೌಂದರರಾಜನ್ ಅವರ ಸಂಸ್ಥೆ ಆಕ್ರೋಶ ವ್ಯಕ್ತಪಡಿಸಿದೆ

- Advertisement -
- Advertisement -

“ಜಾತಿ ಸಮಾನತೆಯ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯವಿದೆ” ಎಂದು ಹೇಳಿಕೊಂಡ ಉದ್ಯೋಗಿಗಳ ಒತ್ತಡಕ್ಕೆ ಮಣಿದು ಅಮೆರಿಕಾ ಮೂಲದ ದಲಿತ ಹೋರಾಟಗಾರ್ತಿ “ತೆನ್ಮೋಳಿ ಸೌಂದರರಾಜನ್’’ ಅವರ ನಿಗದಿತ ಭಾಷಣವನ್ನು ಗೂಗಲ್ ರದ್ದುಮಾಡಿದೆ. ಕಂಪನಿಯ ಡೈವರ್ಸಿಟಿ ಇಕ್ವಿಟಿ ಇನ್ಕ್ಲೂಸಿವಿಟಿ (DEI) ಕಾರ್ಯಕ್ರಮದ ಭಾಗವಾಗಿ ಉದ್ಯೋಗಿಗಳ ಸಂವೇದನಾಶೀಲತೆಗಾಗಿ ಅವರು ಈ ಭಾಷಣವನ್ನು ಮಾಡಬೇಕಾಗಿತ್ತು.

ಈಕ್ವಾಲಿಟಿ ಲ್ಯಾಬ್ಸ್‌ನ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿರುವ ತೆನ್ಮೋಳಿ ಅವರನ್ನು ‘‘ಹಿಂದೂ ಫೋಬಿಕ್’’ ಮತ್ತು “ಹಿಂದೂ ವಿರೋಧಿ” ಎಂದು ಕರೆದಿರುವ ಗೂಗಲ್‌ನ ಉದ್ಯೋಗಿಗಳ ಗುಂಪುಗಳು ಕಂಪನಿಯ ಇಂಟ್ರಾನೆಟ್ ಮೂಲಕ ಸಾಮೂಹಿಕ ಇಮೇಲ್‌ಗಳನ್ನು ಕಳುಹಿಸಿದ್ದಾರೆ ಎಂದು ವಾಷಿಂಗ್ಟನ್ ಪೋಸ್ಟ್ ಬಹಿರಂಗಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದುತ್ವ ಪರ ಗುಂಪುಗಳ ಅಪಪ್ರಚಾರದಿಂದಾಗಿ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ ಎಂದು ವರದಿಯಾಗಿದೆ. ಗೂಗಲ್‌ನ ಹಿರಿಯ ಮ್ಯಾನೇಜರ್ ತನುಜಾ ಗುಪ್ತಾ ಅವರು ತೆನ್ಮೋಳಿ ಅವರನ್ನು ಭಾಷಣಕ್ಕೆ ಆಹ್ವಾನಿಸಿದ್ದನ್ನು ವಿರೋಧಿಸಿ ಗೂಗಲ್‌ನಿಂದ ಹೊರಬಂದ ನಂತರ ಈ ಸಮಸ್ಯೆಯು ಮತ್ತಷ್ಟು ಬಿಗಡಾಯಿಸಿತ್ತು.

ಇದನ್ನೂ ಓದಿ: ಉತ್ತರಾಖಾಂಡ್‌: ದಲಿತ ಮಹಿಳೆ ಬೇಯಿಸಿದ ಆಹಾರ ಸೇವಿಸಲು ಮತ್ತೆ ನಿರಾಕರಿಸಿದ ಸವರ್ಣೀಯ ವಿದ್ಯಾರ್ಥಿಗಳು

ತೇನ್ಮೋಳಿ ಅವರ ಭಾಷಣವನ್ನು ವಿರೋಧಿಸಿರುವ ಗೂಗಲ್ ಉದ್ಯೋಗಿಗಳು ‘‘ಜಾತಿ ಸಮಾನತೆಯ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯವಿದೆ’’ ಎಂದು ಹೇಳಿದ್ದಾಗಿ ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ. 8,000 ಜನರಿರುವ ದಕ್ಷಿಣ ಏಷ್ಯಾದ ಉದ್ಯೋಗಿಗಳ ಗುಂಪಿಗೆ ಮೇಲ್ ಹೋಗಿದೆ ಎಂದು ವರದಿ ಹೇಳಿದೆ.

ಕಾರ್ಯಕ್ರಮವನ್ನು ರದ್ದು ಮಾಡಿದ ನಂತರ ತನುಜಾ ಗುಪ್ತಾ ಅವರು ಅರ್ಜಿಯ ಲಿಂಕ್ ಅನ್ನು ಮತ್ತೊಮ್ಮೆ ಪೋಸ್ಟ್ ಮಾಡಿದಾಗ, ಗ್ರೂಪ್‌ನಲ್ಲಿರುವ ಜನರು ‘ಅಮೆರಿಕದಲ್ಲಿ ಜಾತಿ ಇಲ್ಲ, ಜಾತಿ ತಾರತಮ್ಯ ಅಸ್ತಿತ್ವದಲ್ಲಿಲ್ಲ, ತುಳಿತಕ್ಕೊಳಗಾದ ಜಾತಿಗಳ ಜನರು ಕಡಿಮೆ ವಿದ್ಯಾವಂತರು’ ಸೇರಿದಂತೆ ಹಲವು ಚರ್ಚೆಗಳನ್ನು ನಡೆಸಿದ್ದಾರೆ ಎಂದು ವಾಶಿಂಗ್ಟನ್‌ ಪೋಸ್ಟ್‌ ತನ್ನ ವರದಿಯಲ್ಲಿ ಹೇಳಿದೆ. ಭಾರತದ ಮೀಸಲಾತಿ ವ್ಯವಸ್ಥೆಯು ‘ಮೇಲ್ಜಾತಿಗಳ ವಿರುದ್ಧ ಹಿಮ್ಮುಖ ತಾರತಮ್ಯ’ ಎಂದು ಅವರು ಕರೆದಿದ್ದಾರೆ ಎಂದು ವರದಿ ಹೇಳಿದೆ.

ಅಮೆರಿಕ, ಮೆಕ್ಸಿಕೊ ಮತ್ತು ಕೆನಡಾದಾದ್ಯಂತ ಘಟಕಗಳನ್ನು ಹೊಂದಿರುವ ಅಂಬೇಡ್ಕರ್‌ವಾದಿಗಳ ಸಂಘದ (AANA) ಅಧ್ಯಕ್ಷರಾಗಿರುವ ತೇನ್ಮೋಳಿ ಅವರು ಜಾಗತಿಕವಾಗಿ ಗುರುತಿಸಲ್ಪಟ್ಟ ಜಾತಿ ವಿರೋಧಿ ಹೋರಾಟಗಾರ್ತಿಯಾಗಿದ್ದು, ದಕ್ಷಿಣ ಏಷ್ಯಾದಲ್ಲಿನ ಜಾತಿ ತಾರತಮ್ಯವನ್ನು ಅಂತರರಾಷ್ಟ್ರೀಯ ಗಮನಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮಾತು ಮರೆತ ಭಾರತ; ಸ್ವತಂತ್ರ ಪೂರ್ವ ಭಾರತದ ಕೆಲವು ದಲಿತ್ ಫೈಲ್ಸ್

ಗೂಗಲ್‌ನ ನಡೆಯನ್ನು ವಿರೋಧಿಸಿರುವ ತೇನ್ಮೋಳಿ, “ಗೂಗಲ್‌ ಕಾನೂನು ಬಾಹಿರವಾಗಿ ಜಾತಿ ಇಕ್ವಿಟಿಯ ಬಗ್ಗೆ ಮಾತನಾಡುವುದನ್ನು ರದ್ದುಗೊಳಿಸಿದೆ. ಅದರ ಕ್ರಮಗಳು ತನ್ನ ಉದ್ಯೋಗಿಗಳಿಗೆ ಮತ್ತು ನನ್ನ ಕಡೆಗೆ ಎಷ್ಟು ಆಘಾತಕಾರಿ ಮತ್ತು ತಾರತಮ್ಯದಿಂದ ಕೂಡಿವೆ ಎಂಬುದನ್ನು ವ್ಯಕ್ತಪಡಿಸಲು ನನಗೆ ಪದಗಳು ಸಿಗುತ್ತಿಲ್ಲ. ಈ ದಾಳಿಗಳು ಸಂಭವಿಸಲು ಮತ್ತು ಮುಂದುವರೆಯಲು ಅನುವು ಮಾಡಿಕೊಡುವ ತನ್ನ ಉದ್ಯೋಗಿಗಳ ಜಾತೀಯತೆಯನ್ನು ಗೂಗಲ್ ಪರಿಹರಿಸಬೇಕು” ಎಂದು ಹೇಳಿದ್ದಾರೆ.

ಏಪ್ರಿಲ್ 18ರ ‘ದಲಿತ ಇತಿಹಾಸ ಮಾಸ’ದ ಅಂಗವಾಗಿ ತೇನ್ಮೋಳಿ ಅವರು ಈ ಭಾಷಣವನ್ನು ನೀಡಲು ನಿರ್ಧರಿಸಿದ್ದರು ಆದರೆ ಅದನ್ನು ಮುಂದೂಡಲಾಗಿದೆ ಎಂದು ಮೊದಲಿಗೆ ತಿಳಿಸಲಾಗಿತ್ತು. ಈ ಬೆಳವಣಿಗೆಯಿಂದ ತಾನು ತೊಂದರೆಗೀಡಾಗಿದ್ದು, ತನ್ನ ಮಾತುಗಳು ಗೂಗಲ್‌‌ನ ಉದ್ಯೋಗಿಗಳಿಗೆ ಸಮಸ್ಯೆಯನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಅವರು ನಂತರ ಗೂಗಲ್ ಸಿಇಒ ಸುಂದರ್ ಪಿಚೈ ಅವರಿಗೆ ಪತ್ರ ಬರೆದಿದ್ದರು.

“ಜಾತಿ ತಾರತಮ್ಯವನ್ನು ಗುರುತಿಸಲಾಗದಿದ್ದರೆ ಅದು ವ್ಯಾಪಾರಕ್ಕೆ ಕೆಟ್ಟದು ಮಾಡುತ್ತದೆ. ಇದು ಕೆಲಸದ ಸ್ಥಳಗಳನ್ನು ಅಸುರಕ್ಷಿತ ಮತ್ತು ಪ್ರತಿಕೂಲವಾಗಿಸುತ್ತದೆ. ಗೂಗಲ್‌ನ ಅತಿದೊಡ್ಡ ಮಾರುಕಟ್ಟೆಗಳಲ್ಲಿ ಒಂದಾದ ಭಾರತದಲ್ಲಿ, ದಲಿತರು ಕನಿಷ್ಠ 25 ರಿಂದ 30% ಮಾರುಕಟ್ಟೆಯನ್ನು ಹೊಂದಿದ್ದಾರೆ” ಎಂದು ಅವರು ಪಿಚೈಗೆ ಬರೆದಿರುವ ಪತ್ರದಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿ: ಬ್ರಿಟನ್‌ನ ಮೊದಲ ದಲಿತ ಮಹಿಳಾ ಮೇಯರ್ ಆಗಿ ಮೊಹಿಂದರ್ ಮಿಧಾ ಆಯ್ಕೆ

ಆದಾಗ್ಯೂ, ಉದ್ಯೋಗಿಗಳ ಗುಂಪಿನ ಪ್ರತಿರೋಧದಿಂದಾಗಿ ಅವರ ಭಾಷಣವನ್ನು ರದ್ದುಗೊಳಿಸಲಾಗಿದೆ. ಇದಲ್ಲದೆ, ತನುಜಾ ಗುಪ್ತಾ ಅವರು ತೇನ್ಮೋಳಿ ಅವರ ಭಾಷಣವನ್ನು ಸಂಘಟಿಸಲು ಸಹಕರಿಸುತ್ತಿದ್ದ ಗೂಗಲ್ ಉದ್ಯೋಗಿಯನ್ನು ಗುರಿ ಮಾಡಲಾಗಿದೆ.

ತೇನ್ಮೋಳಿ ಅವರ ಭಾಷಣವನ್ನು ರದ್ದು ಮಾಡಿರುವುದನ್ನು ‘ಈಕ್ವಾಲಿಟಿ ಲ್ಯಾಬ್ಸ್’ ಖಂಡಿಸಿದ್ದು, ಗೂಗಲ್‌ನ ಈ ವರ್ತನೆಯು ಜಾತಿವಾದಿಯಾಗಿದೆ ಎಂದು ಬಣ್ಣಿಸಿದೆ. ಗೂಗಲ್‌ನ ವೈವಿಧ್ಯತೆ ಮತ್ತು ಒಳಗೊಳ್ಳುವಿಕೆಯ ಉಪಕ್ರಮದ ನ್ಯಾಯಸಮ್ಮತತೆಯನ್ನು ಅದು ಪ್ರಶ್ನಿಸಿದ್ದು, “ಗೂಗಲ್‌ ಜಾತಿ ಧರ್ಮಾಂಧತೆ ಮತ್ತು ಕಿರುಕುಳವನ್ನು ಅತಿರೇಕವಾಗಿ ನಡೆಸಲು ಅವಕಾಶ ಮಾಡಿಕೊಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ಮನುವಾದಿಗಳು ಪ್ರಬಲರಾಗುತ್ತಿರುವುದಕ್ಕೆ ಇದೊಂದು ಉದಾಹರಣೆ.

LEAVE A REPLY

Please enter your comment!
Please enter your name here

- Advertisment -

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...