Homeಮುಖಪುಟಉದ್ಯೋಗ ನಗದು ಹಗರಣ | ಪಶ್ಚಿಮ ಬಂಗಾಳ ಮಾಜಿ ಸಚಿವ ಪಾರ್ಥ ಚಟರ್ಜಿಗೆ ಜಾಮೀನು

ಉದ್ಯೋಗ ನಗದು ಹಗರಣ | ಪಶ್ಚಿಮ ಬಂಗಾಳ ಮಾಜಿ ಸಚಿವ ಪಾರ್ಥ ಚಟರ್ಜಿಗೆ ಜಾಮೀನು

- Advertisement -
- Advertisement -

ಉದ್ಯೋಗಕ್ಕಾಗಿ ನಗದು ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಷರತ್ತುಬದ್ಧ ಜಾಮೀನು ನೀಡಿದೆ. ಬಿಡುಗಡೆಯಾದ ನಂತರ ಚಟರ್ಜಿ ಯಾವುದೇ ಸಾರ್ವಜನಿಕ ಹುದ್ದೆಯನ್ನು ಹೊಂದಿರಬಾರದು ಆದರೆ ಶಾಸಕರಾಗಿ ಮುಂದುವರಿಯಬಹುದು ಎಂದು ಸುಪ್ರೀಂಕೋರ್ಟ್ ಈ ವೇಳೆ ಹೇಳಿದೆ. ಉದ್ಯೋಗ ನಗದು ಹಗರಣ

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಫೆಬ್ರವರಿ 1, 2025 ರಂದು ಚಟರ್ಜಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದೆ. ಶಂಕಿತ ಆರೋಪಿಗಳನ್ನು ಅನಿರ್ದಿಷ್ಟಾವಧಿಯವರೆಗೆ ಬಂಧಿಸಲು ಸಾಧ್ಯವಿಲ್ಲ ಮತ್ತು ಆದ್ದರಿಂದ, ಆರೋಪಿ ಮತ್ತು ಸಂತ್ರಸ್ತರ ಹಕ್ಕುಗಳನ್ನು ಸಮತೋಲನಗೊಳಿಸಬೇಕು ಎಂದು ಪೀಠ ಈ ವೇಳೆ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಿಸೆಂಬರ್ 4 ರಂದು, ಸುಪ್ರೀಂ ಕೋರ್ಟ್ ಅವರ ಜಾಮೀನು ಅರ್ಜಿಯ ತೀರ್ಪನ್ನು ಕಾಯ್ದಿರಿಸಿತ್ತು ಮತ್ತು “ಮೇಲ್ನೋಟಕ್ಕೆ ನೀವು ಭ್ರಷ್ಟ ವ್ಯಕ್ತಿ. ನಿಮ್ಮ ನಿವೇಶನದಿಂದ ಕೋಟ್ಯಂತರ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಹೇಳಿತ್ತು.

ಏಪ್ರಿಲ್ 30ರ ಕಲ್ಕತ್ತಾ ಹೈಕೋರ್ಟ್ ಆದೇಶದ ವಿರುದ್ಧ ಚಟರ್ಜಿ ಸಲ್ಲಿಸಿದ ಮೇಲ್ಮನವಿಯ ಮೇಲೆ ಅಕ್ಟೋಬರ್‌ನಲ್ಲಿ ಸುಪ್ರೀಂ ಕೋರ್ಟ್ ಇಡಿಗೆ ನೋಟಿಸ್ ಜಾರಿ ಮಾಡಿತ್ತು. ಪಿಎಂಎಲ್‌ಎ ಅಡಿಯಲ್ಲಿ ಅವರ ವಿರುದ್ಧ ಪ್ರಾಥಮಿಕ ಪ್ರಕರಣವನ್ನು ದಾಖಲಿಸಲಾಗಿದೆ ಎಂಬ ಆಧಾರದ ಮೇಲೆ ಜಾಮೀನು ನಿರಾಕರಿಸಿತ್ತು. ಉದ್ಯೋಗ ನಗದು ಹಗರಣ

ಪಶ್ಚಿಮ ಬಂಗಾಳದ ಸರ್ಕಾರಿ ಪ್ರಾಯೋಜಿತ ಮತ್ತು ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ನೇಮಕಾತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಚಟರ್ಜಿ ಅವರನ್ನು ಬಂಧಿಸಲಾಯಿತು. ಅಕ್ರಮ ನೇಮಕಾತಿಗಳಲ್ಲಿ ಹಣದ ಜಾಡು ಹಿಡಿದಿರುವ ತನಿಖೆಗೆ ಸಂಬಂಧಿಸಿದಂತೆ ಚಟರ್ಜಿ ಮತ್ತು ಅವರ ಆಪ್ತ ಸಹಾಯಕಿ ಅರ್ಪಿತಾ ಮುಖರ್ಜಿ ಅವರನ್ನು ಇಡಿ ಬಂಧಿಸಿದೆ.

ಅರ್ಪಿತ ಮುಖರ್ಜಿಯವರ ಒಡೆತನದ ಫ್ಲಾಟ್‌ಗಳಿಂದ ಆಭರಣಗಳು, ಚಿನ್ನದ ಗಟ್ಟಿಗಳು, ಆಸ್ತಿಗಳ ದಾಖಲೆಗಳು ಮತ್ತು ಜಂಟಿ ಹೋಲ್ಡಿಂಗ್‌ನಲ್ಲಿರುವ ಕಂಪನಿಯೊಂದರ ಜೊತೆಗೆ 49.80 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿರುವುದಾಗಿ ಇಡಿ ಹೇಳಿಕೊಂಡಿದೆ.

ಇದನ್ನೂ ಓದಿ: ಮಹಾರಾಷ್ಟ್ರ| ಸಂವಿಧಾನ ಪ್ರತಿಕೃತಿ ಧ್ವಂಸ ವಿರೋಧಿಸಿ ಬಂದ್; ಪರ್ಭಾನಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

ಮಹಾರಾಷ್ಟ್ರ| ಸಂವಿಧಾನ ಪ್ರತಿಕೃತಿ ಧ್ವಂಸ ವಿರೋಧಿಸಿ ಬಂದ್; ಪರ್ಭಾನಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...

ಮಾದಕ ವ್ಯಸನ : 10 ವರ್ಷದಲ್ಲಿ ಐವರು ಗಂಡು ಮಕ್ಕಳನ್ನು ಕಳೆದುಕೊಂಡ ವೃದ್ಧ ದಂಪತಿ

ಡ್ರಗ್ ಕಾರಣದಿಂದ ವೃದ್ದ ದಂಪತಿ ತನ್ನ ಐವರು ಗಂಡು ಮಕ್ಕಳನ್ನು ಕಳೆದುಕೊಂಡ ಹೃದಯ ವಿದ್ರಾವಕ ಮತ್ತು ಆಘಾತಕಾರಿ ವರದಿ ಪಂಜಾಬ್‌ನ ಕಪುರ್ಥಲಾ ಜಿಲ್ಲೆಯ ಸುಲ್ತಾನ್‌ಪುರ ಲೋಧಿಯಿಂದ ಬಂದಿದೆ. ಸುಲ್ತಾನ್‌ಪುರ ಲೋಧಿಯ ಪಂಡೋರಿ ಮೊಹಲ್ಲಾ ಎಂಬ ಪ್ರದೇಶದಲ್ಲಿ ವಾಸಿಸುತ್ತಿರುವ...

ಜಮ್ಮು-ಕಾಶ್ಮೀರ: 28 ವರ್ಷಗಳ ಕಾಲ ಸೇನಾ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದ ಶ್ರೀನಗರ ನ್ಯಾಯಾಲಯ

1997 ರಲ್ಲಿ ಸೇನಾ ಕಸ್ಟಡಿಗೆ ತೆಗೆದುಕೊಂಡ ಸುಮಾರು 28 ವರ್ಷಗಳ ನಂತರ ಶ್ರೀನಗರ ನ್ಯಾಯಾಲಯವು ಒಬ್ಬ ವ್ಯಕ್ತಿಯನ್ನು ಸತ್ತನೆಂದು ಘೋಷಿಸಿದೆ. ಬಂಧನದಲ್ಲಿದ್ದಾಗ ಕೊಲ್ಲಲ್ಪಟ್ಟಿದ್ದಾನೆ ಎಂಬ ತನಿಖಾ ಸಂಶೋಧನೆಗಳನ್ನು ಉಲ್ಲೇಖಿಸಿ ಮತ್ತು ಸಾವಿನ ಕಾನೂನುಬದ್ಧ...

ದೆಹಲಿ: ವೇತನ ಕೇಳಿದ್ದಕ್ಕೆ ಅಪಾಯಕಾರಿ ಚರಂಡಿ ಸ್ವಚ್ಛಗೊಳಿಸಲು ಒತ್ತಾಯ; ಸುರಕ್ಷತಾ ಸಾಧನಗಳಿಲ್ಲದೆ ಚರಂಡಿಗಿಳಿದ ನೈರ್ಮಲ್ಯ ಕಾರ್ಮಿಕ ಸಾವು

ವಾಲ್ಮೀಕಿ ಸಮುದಾಯದ ಗುತ್ತಿಗೆ ನೈರ್ಮಲ್ಯ ಕಾರ್ಮಿಕ ರಾಹುಲ್ (32) ಮಾರ್ಚ್ 30 ರಂದು ದಿಲ್ಶಾದ್ ಗಾರ್ಡನ್‌ನ ತಹಿರ್‌ಪುರದಲ್ಲಿ 8 ರಿಂದ 10 ಅಡಿ ಆಳದ ಚರಂಡಿಯನ್ನು ಹಸ್ತಚಾಲಿತವಾಗಿ ಹೂಳು ತೆಗೆಯುವಾಗ ಯಾವುದೇ ಸುರಕ್ಷತಾ...

ಗಾಝಾ | ಇಸ್ರೇಲ್ ದಾಳಿಯಲ್ಲಿ ಅಲ್‌-ಜಝೀರಾ ಪತ್ರಕರ್ತ ಸಾವು : ತೀವ್ರ ಖಂಡನೆ ವ್ಯಕ್ತಪಡಿಸಿದ ಮಾಧ್ಯಮ ಸಂಸ್ಥೆ

ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಡೆಸಿದ ಡ್ರೋನ್ ದಾಳಿಯಲ್ಲಿ ಅಲ್-ಜಝೀರಾ ಮಾಧ್ಯಮ ಸಂಸ್ಥೆಯ ಪತ್ರಕರ್ತ ಮೊಹಮ್ಮದ್ ವಿಶಾಹ್ ಸಾವನ್ನಪ್ಪಿದ್ದಾರೆ. ಗಾಝಾ ನಗರದ ಪಶ್ಚಿಮ ಭಾಗದಲ್ಲಿರುವ ಕರಾವಳಿ ರಸ್ತೆಯಾದ ಅಲ್-ರಶೀದ್ ಸ್ಟ್ರೀಟ್‌ನಲ್ಲಿ ಬುಧವಾರ (ಏ.8) ಕಾರಿನ...

ಅಸ್ಸಾಂ : ಮತದಾನದ ಹಿಂದಿನ ದಿನ ಪಕ್ಷಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್ ಅಭ್ಯರ್ಥಿ!

ಅಸ್ಸಾಂ ವಿಧಾನಸಭೆ ಚುನಾವಣೆಗೆ ಕೇವಲ ಒಂದು ದಿನ ಬಾಕಿ ಇರುವಾಗ, ಉದಲ್ಗುರಿ (ಎಸ್‌ಟಿ) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುರೇನ್ ದೈಮರಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ ಎಂದು ವರದಿಯಾಗಿದೆ. ಪಕ್ಷದ ನಾಯಕತ್ವದಿಂದ...

ವಿಧಾನಸಭೆ ಚುನಾವಣೆ : ಅಸ್ಸಾಂ, ಕೇರಳ, ಪುದುಚೇರಿಯಲ್ಲಿ ಇಂದು ಮತದಾನ

ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭೆಯ ಚುನಾವಣೆಯ ಮತದಾನ ಇಂದು (ಏ.9, 2026) ಒಂದೇ ಹಂತದಲ್ಲಿ ನಡೆಯಲಿದೆ. ಈಗಾಗಲೇ ಮತದಾನ ಆರಂಭಗೊಂಡಿದೆ. ಅಸ್ಸಾಂನ 126 ಸದಸ್ಯ ಬಲದ ವಿಧಾನಸಭೆಗೆ ನಡೆಯಲಿರುವ ಚುನಾವಣೆಯು...

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...