Homeಮುಖಪುಟ'ಉದ್ಯೋಗ ಸಂಬಂಧಿತ ಪ್ರೋತ್ಸಾಹ' ಯೋಜನೆಯನ್ನು 'ಮತ್ತೊಂದು ಜುಮ್ಲಾ' ಎಂದ ರಾಹುಲ್ ಗಾಂಧಿ

‘ಉದ್ಯೋಗ ಸಂಬಂಧಿತ ಪ್ರೋತ್ಸಾಹ’ ಯೋಜನೆಯನ್ನು ‘ಮತ್ತೊಂದು ಜುಮ್ಲಾ’ ಎಂದ ರಾಹುಲ್ ಗಾಂಧಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ‘ಉದ್ಯೋಗ ಸಂಬಂಧಿತ ಪ್ರೋತ್ಸಾಹ’ (Employment Linked Incentive) ಯೋಜನೆಯ ಬಗ್ಗೆ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಪ್ರತಿದಿನ ಹೊಸ ಘೋಷಣೆಗಳನ್ನು ನೀಡುತ್ತಿದ್ದರೂ, ಯುವಕರು ಇನ್ನೂ ನಿಜವಾದ ಅವಕಾಶಗಳಿಗಾಗಿ ಕಾಯುತ್ತಿದ್ದಾರೆ ಎಂದು ಹೇಳಿದ್ದು, ಹೊಸ ಘೋಷಣೆಯನ್ನು “ಮತ್ತೊಂದು ಜುಮ್ಲಾ” ಎಂದು ಶುಕ್ರವಾರ ಕರೆದಿದ್ದಾರೆ.

“2024 ರ ಚುನಾವಣೆಯ ನಂತರ, ಪ್ರಧಾನಿ ಮೋದಿ “ಉದ್ಯೋಗ ಸಂಬಂಧಿತ ಪ್ರೋತ್ಸಾಹ” ಯೋಜನೆಯನ್ನು ಬಹಳ ಅಬ್ಬರದಿಂದ ಘೋಷಿಸಿದರು, ನಮ್ಮ ಯುವಕರಿಗೆ ಉದ್ಯೋಗ ಒದಗಿಸುವುದಾಗಿ ಭರವಸೆ ನೀಡಿದರು. ಆದರೆ, ಯೋಜನೆಯನ್ನು ಘೋಷಿಸಿ ಸುಮಾರು ಒಂದು ವರ್ಷವಾಗಿದೆ. ಸರ್ಕಾರ ಇನ್ನೂ ಅದನ್ನು ವ್ಯಾಖ್ಯಾನಿಸಿಲ್ಲ ಮತ್ತು ಅದಕ್ಕೆ ನಿಗದಿಪಡಿಸಿದ 10,000 ಕೋಟಿ ರೂ.ಗಳನ್ನು ಹಿಂದಿರುಗಿಸಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಸರ್ಕಾರದ ಈ ನಡೆಯೆ ಪ್ರಧಾನಿ ನಿರುದ್ಯೋಗದ ಬಗ್ಗೆ ಎಷ್ಟು ಗಂಭೀರವಾಗಿದ್ದಾರೆ ಎಂಬುದನ್ನು ತೋರಿಸುತ್ತದೆ ಎಂದು ರಾಹುಲ್ ಅವರು ಹೇಳಿದ್ದಾರೆ. ರಾಹುಲ್ ಗಾಂಧಿ ಅವರ ಹೇಳಿಕೆಗೆ ಕೇಂದ್ರ ಸರ್ಕಾರ ಇನ್ನೂ ಪ್ರತಿಕ್ರಿಯೆ ನೀಡಿಲ್ಲ.

https://twitter.com/RahulGandhi/status/1910555339834949893

ದೊಡ್ಡ ಕಾರ್ಪೊರೇಟ್‌ಗಳ ಕಂಪೆನಿಗಳ ಮೇಲೆ ಮಾತ್ರ ಕೇಂದ್ರೀಕರಿಸುವ ಮೂಲಕ, ನ್ಯಾಯಯುತ ವ್ಯವಹಾರಗಳಿಗಿಂತ ಆಪ್ತಮಿತ್ರರನ್ನು ಉತ್ತೇಜಿಸುವ ಮೂಲಕ, ಉತ್ಪಾದನೆಗಿಂತ ಸಭೆಗಳಿಗೆ ಆದ್ಯತೆ ನೀಡುವ ಮೂಲಕ ಮತ್ತು ಭಾರತದ ಸ್ಥಳೀಯ ಕೌಶಲ್ಯಗಳನ್ನು ನಿರ್ಲಕ್ಷಿಸುವ ಮೂಲಕ ಉದ್ಯೋಗಗಳನ್ನು ಸೃಷ್ಟಿಸಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“MSME ಗಳಲ್ಲಿ ದೊಡ್ಡ ಪ್ರಮಾಣದ ಹೂಡಿಕೆ ಮಾಡುವುದು, ಸ್ಪರ್ಧೆ ಇರುವ ನ್ಯಾಯಯುತ ಮಾರುಕಟ್ಟೆಗಳ ನಿರ್ಮಾಣ, ಸ್ಥಳೀಯ ಉತ್ಪಾದನಾ ಜಾಲಗಳಿಗೆ ಬೆಂಬಲ ನೀಡುವುದು ಮತ್ತು ಸರಿಯಾದ ಕೌಶಲ್ಯಗಳನ್ನು ಹೊಂದಿರುವ ಯುವಕರಿಗೆ ಪ್ರೋತ್ಸಾಹ ನೀಡುವುದು ಕೋಟ್ಯಂತರ ಉದ್ಯೋಗಗಳನ್ನು ಸೃಷ್ಟಿಸುವ ಮಾರ್ಗವಾಗಿದೆ” ಎಂದು ಅವರು ಹೇಳಿದ್ದಾರೆ.

“ಪ್ರಧಾನಿ ಈ ವಿಚಾರಗಳನ್ನು ಒಪ್ಪುವುದಿಲ್ಲ. ಆದರೆ ನಾನು ಅವರನ್ನು ನೇರವಾಗಿ ಕೇಳಬೇಕು: ಪ್ರಧಾನಿ ಅವರೇ, ನೀವು ಉತ್ತಮ ಪ್ರಚಾರದೊಂದಿಗೆ Employment Linked Incentive ಅನ್ನು ಘೋಷಿಸಿದ್ದೀರಿ – ಆದರೆ ಈ 10,000 ಕೋಟಿ ರೂ. ಯೋಜನೆ ಎಲ್ಲಿ ಕಣ್ಮರೆಯಾಯಿತು?. ನೀವು ನಿಮ್ಮ ಭರವಸೆಗಳ ಜೊತೆಗೆ ನಮ್ಮ ನಿರುದ್ಯೋಗಿ ಯುವಕರನ್ನು ಕೈಬಿಟ್ಟಿದ್ದೀರಾ?. ನೀವು ಪ್ರತಿದಿನ ಹೊಸ ಘೋಷಣೆಗಳನ್ನು ನೀಡುತ್ತಿದ್ದೀರಿ. ನಮ್ಮ ಯುವಕರು ಇನ್ನೂ ನಿಜವಾದ ಅವಕಾಶಗಳಿಗಾಗಿ ಕಾಯುತ್ತಿದ್ದಾರೆ” ಎಂದು ಅವರು ಕೇಳಿದ್ದಾರೆ.

ಭಾರತಕ್ಕೆ ತೀರಾ ಅಗತ್ಯವಿರುವ ಕೋಟ್ಯಂತರ ಉದ್ಯೋಗಗಳನ್ನು ಸೃಷ್ಟಿಸಲು ನಿಮ್ಮ ಯೋಜನೆ ಏನು, ಅಥವಾ ಇದು ಮತ್ತೊಂದು ಜುಮ್ಲಾವೆ? ಎಂದು ಅವರು ಕೇಳಿದ್ದಾರೆ. ಅದಾನಿ ಮತ್ತು ಅವರ ಬಿಲಿಯನೇರ್ ಸ್ನೇಹಿತರನ್ನು ಶ್ರೀಮಂತಗೊಳಿಸುವುದರಿಂದ ತಳಮಟ್ಟದಲ್ಲಿರುವ ಸಮುದಾಯಗಳ ಯುವಜನರಿಗೆ ಉದ್ಯೋಗದಲ್ಲಿ ಸಮಾನ ಪ್ರವೇಶವನ್ನು ಖಚಿತಪಡಿಸಿಕೊಳ್ಳುವತ್ತ ಪ್ರಧಾನಿ ಯಾವಾಗ ಗಮನ ಹರಿಸುತ್ತಾರೆ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನ್ಯಾಯಾಲಯದಲ್ಲಿ ಅನುಚಿತ ವರ್ತನೆ: ವಕೀಲನಿಗೆ ಆರು ತಿಂಗಳು ಜೈಲು

ನ್ಯಾಯಾಲಯದಲ್ಲಿ ಅನುಚಿತ ವರ್ತನೆ: ವಕೀಲನಿಗೆ ಆರು ತಿಂಗಳು ಜೈಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...