Homeಮುಖಪುಟ'ಉದ್ಯೋಗ ಸಂಬಂಧಿತ ಪ್ರೋತ್ಸಾಹ' ಯೋಜನೆಯನ್ನು 'ಮತ್ತೊಂದು ಜುಮ್ಲಾ' ಎಂದ ರಾಹುಲ್ ಗಾಂಧಿ

‘ಉದ್ಯೋಗ ಸಂಬಂಧಿತ ಪ್ರೋತ್ಸಾಹ’ ಯೋಜನೆಯನ್ನು ‘ಮತ್ತೊಂದು ಜುಮ್ಲಾ’ ಎಂದ ರಾಹುಲ್ ಗಾಂಧಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ‘ಉದ್ಯೋಗ ಸಂಬಂಧಿತ ಪ್ರೋತ್ಸಾಹ’ (Employment Linked Incentive) ಯೋಜನೆಯ ಬಗ್ಗೆ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಪ್ರತಿದಿನ ಹೊಸ ಘೋಷಣೆಗಳನ್ನು ನೀಡುತ್ತಿದ್ದರೂ, ಯುವಕರು ಇನ್ನೂ ನಿಜವಾದ ಅವಕಾಶಗಳಿಗಾಗಿ ಕಾಯುತ್ತಿದ್ದಾರೆ ಎಂದು ಹೇಳಿದ್ದು, ಹೊಸ ಘೋಷಣೆಯನ್ನು “ಮತ್ತೊಂದು ಜುಮ್ಲಾ” ಎಂದು ಶುಕ್ರವಾರ ಕರೆದಿದ್ದಾರೆ.

“2024 ರ ಚುನಾವಣೆಯ ನಂತರ, ಪ್ರಧಾನಿ ಮೋದಿ “ಉದ್ಯೋಗ ಸಂಬಂಧಿತ ಪ್ರೋತ್ಸಾಹ” ಯೋಜನೆಯನ್ನು ಬಹಳ ಅಬ್ಬರದಿಂದ ಘೋಷಿಸಿದರು, ನಮ್ಮ ಯುವಕರಿಗೆ ಉದ್ಯೋಗ ಒದಗಿಸುವುದಾಗಿ ಭರವಸೆ ನೀಡಿದರು. ಆದರೆ, ಯೋಜನೆಯನ್ನು ಘೋಷಿಸಿ ಸುಮಾರು ಒಂದು ವರ್ಷವಾಗಿದೆ. ಸರ್ಕಾರ ಇನ್ನೂ ಅದನ್ನು ವ್ಯಾಖ್ಯಾನಿಸಿಲ್ಲ ಮತ್ತು ಅದಕ್ಕೆ ನಿಗದಿಪಡಿಸಿದ 10,000 ಕೋಟಿ ರೂ.ಗಳನ್ನು ಹಿಂದಿರುಗಿಸಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಸರ್ಕಾರದ ಈ ನಡೆಯೆ ಪ್ರಧಾನಿ ನಿರುದ್ಯೋಗದ ಬಗ್ಗೆ ಎಷ್ಟು ಗಂಭೀರವಾಗಿದ್ದಾರೆ ಎಂಬುದನ್ನು ತೋರಿಸುತ್ತದೆ ಎಂದು ರಾಹುಲ್ ಅವರು ಹೇಳಿದ್ದಾರೆ. ರಾಹುಲ್ ಗಾಂಧಿ ಅವರ ಹೇಳಿಕೆಗೆ ಕೇಂದ್ರ ಸರ್ಕಾರ ಇನ್ನೂ ಪ್ರತಿಕ್ರಿಯೆ ನೀಡಿಲ್ಲ.

https://twitter.com/RahulGandhi/status/1910555339834949893

ದೊಡ್ಡ ಕಾರ್ಪೊರೇಟ್‌ಗಳ ಕಂಪೆನಿಗಳ ಮೇಲೆ ಮಾತ್ರ ಕೇಂದ್ರೀಕರಿಸುವ ಮೂಲಕ, ನ್ಯಾಯಯುತ ವ್ಯವಹಾರಗಳಿಗಿಂತ ಆಪ್ತಮಿತ್ರರನ್ನು ಉತ್ತೇಜಿಸುವ ಮೂಲಕ, ಉತ್ಪಾದನೆಗಿಂತ ಸಭೆಗಳಿಗೆ ಆದ್ಯತೆ ನೀಡುವ ಮೂಲಕ ಮತ್ತು ಭಾರತದ ಸ್ಥಳೀಯ ಕೌಶಲ್ಯಗಳನ್ನು ನಿರ್ಲಕ್ಷಿಸುವ ಮೂಲಕ ಉದ್ಯೋಗಗಳನ್ನು ಸೃಷ್ಟಿಸಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“MSME ಗಳಲ್ಲಿ ದೊಡ್ಡ ಪ್ರಮಾಣದ ಹೂಡಿಕೆ ಮಾಡುವುದು, ಸ್ಪರ್ಧೆ ಇರುವ ನ್ಯಾಯಯುತ ಮಾರುಕಟ್ಟೆಗಳ ನಿರ್ಮಾಣ, ಸ್ಥಳೀಯ ಉತ್ಪಾದನಾ ಜಾಲಗಳಿಗೆ ಬೆಂಬಲ ನೀಡುವುದು ಮತ್ತು ಸರಿಯಾದ ಕೌಶಲ್ಯಗಳನ್ನು ಹೊಂದಿರುವ ಯುವಕರಿಗೆ ಪ್ರೋತ್ಸಾಹ ನೀಡುವುದು ಕೋಟ್ಯಂತರ ಉದ್ಯೋಗಗಳನ್ನು ಸೃಷ್ಟಿಸುವ ಮಾರ್ಗವಾಗಿದೆ” ಎಂದು ಅವರು ಹೇಳಿದ್ದಾರೆ.

“ಪ್ರಧಾನಿ ಈ ವಿಚಾರಗಳನ್ನು ಒಪ್ಪುವುದಿಲ್ಲ. ಆದರೆ ನಾನು ಅವರನ್ನು ನೇರವಾಗಿ ಕೇಳಬೇಕು: ಪ್ರಧಾನಿ ಅವರೇ, ನೀವು ಉತ್ತಮ ಪ್ರಚಾರದೊಂದಿಗೆ Employment Linked Incentive ಅನ್ನು ಘೋಷಿಸಿದ್ದೀರಿ – ಆದರೆ ಈ 10,000 ಕೋಟಿ ರೂ. ಯೋಜನೆ ಎಲ್ಲಿ ಕಣ್ಮರೆಯಾಯಿತು?. ನೀವು ನಿಮ್ಮ ಭರವಸೆಗಳ ಜೊತೆಗೆ ನಮ್ಮ ನಿರುದ್ಯೋಗಿ ಯುವಕರನ್ನು ಕೈಬಿಟ್ಟಿದ್ದೀರಾ?. ನೀವು ಪ್ರತಿದಿನ ಹೊಸ ಘೋಷಣೆಗಳನ್ನು ನೀಡುತ್ತಿದ್ದೀರಿ. ನಮ್ಮ ಯುವಕರು ಇನ್ನೂ ನಿಜವಾದ ಅವಕಾಶಗಳಿಗಾಗಿ ಕಾಯುತ್ತಿದ್ದಾರೆ” ಎಂದು ಅವರು ಕೇಳಿದ್ದಾರೆ.

ಭಾರತಕ್ಕೆ ತೀರಾ ಅಗತ್ಯವಿರುವ ಕೋಟ್ಯಂತರ ಉದ್ಯೋಗಗಳನ್ನು ಸೃಷ್ಟಿಸಲು ನಿಮ್ಮ ಯೋಜನೆ ಏನು, ಅಥವಾ ಇದು ಮತ್ತೊಂದು ಜುಮ್ಲಾವೆ? ಎಂದು ಅವರು ಕೇಳಿದ್ದಾರೆ. ಅದಾನಿ ಮತ್ತು ಅವರ ಬಿಲಿಯನೇರ್ ಸ್ನೇಹಿತರನ್ನು ಶ್ರೀಮಂತಗೊಳಿಸುವುದರಿಂದ ತಳಮಟ್ಟದಲ್ಲಿರುವ ಸಮುದಾಯಗಳ ಯುವಜನರಿಗೆ ಉದ್ಯೋಗದಲ್ಲಿ ಸಮಾನ ಪ್ರವೇಶವನ್ನು ಖಚಿತಪಡಿಸಿಕೊಳ್ಳುವತ್ತ ಪ್ರಧಾನಿ ಯಾವಾಗ ಗಮನ ಹರಿಸುತ್ತಾರೆ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನ್ಯಾಯಾಲಯದಲ್ಲಿ ಅನುಚಿತ ವರ್ತನೆ: ವಕೀಲನಿಗೆ ಆರು ತಿಂಗಳು ಜೈಲು

ನ್ಯಾಯಾಲಯದಲ್ಲಿ ಅನುಚಿತ ವರ್ತನೆ: ವಕೀಲನಿಗೆ ಆರು ತಿಂಗಳು ಜೈಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...