Homeಕರ್ನಾಟಕಹೆಚ್ಚಿದ ನಿರುದ್ಯೋಗ: 15 ಹುದ್ದೆಗಳಿಗೆ 25,000ಕ್ಕೂ ಅಧಿಕ ಮಂದಿ ಅರ್ಜಿ ಸಲ್ಲಿಕೆ

ಹೆಚ್ಚಿದ ನಿರುದ್ಯೋಗ: 15 ಹುದ್ದೆಗಳಿಗೆ 25,000ಕ್ಕೂ ಅಧಿಕ ಮಂದಿ ಅರ್ಜಿ ಸಲ್ಲಿಕೆ

- Advertisement -
- Advertisement -

ದೇಶದಲ್ಲಿ ನಿರುದ್ಯೋಗ ಸಮಸ್ಯೆ ಮುಂದುವರಿಯುತ್ತಲೇ ಇದೆ. ಲಕ್ಷಾಂತರ ಯುವಜನತೆ ಅರ್ಹ ಉದ್ಯೋಗವೇ ಇಲ್ಲವಾಗಿದೆ. ಉನ್ನತ ಪದವೀಧರರು ಈ ಮೊದಲು ಡೈವರ್‌ಗಳಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವುದು ಕಂಡು ಬಂದಿತ್ತು. ಇದೀಗ ಕಲ್ಯಾಣ ಕರ್ನಾಟಕದ ವಾಣಿಜ್ಯ ತೆರಿಗೆ ಇಲಾಖೆಯಲ್ಲಿದ್ದ ಕೇವಲ 15 ಸೂಪರಿಂಟೆಂಡೆಂಟ್ ಹುದ್ದೆಗಳಿಗೆ 25,000ಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿದ್ದು, ದೇಶದಲ್ಲಿನ ನಿರುದ್ಯೋಗದ ಚಿತ್ರಣವನ್ನು ಬಿಚ್ಚಿಟ್ಟಿದೆ.

15 ಸೂಪರಿಂಟೆಂಡೆಂಟ್ ಹುದ್ದೆಗಳಿಗೆ ಜನವರಿ 6 ಮತ್ತು 7 ರಂದು ಪರೀಕ್ಷೆಗಳನ್ನು ನಡೆಯಲಿದೆ. ಇದಕ್ಕೆ 25,000ಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ಖಾಲಿ ಹುದ್ದೆಗಳಿದ್ದರೂ, ಹುದ್ದೆಗಳು ಭರ್ತಿಯಾಗದೆ ಖಾಲಿ ಉಳಿದಿದೆ. ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ರಾಜ್ಯದಲ್ಲಿ 2.56 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇವೆ. ಆದರೆ, ಹೆಚ್ಚಿನ ಸಂಖ್ಯೆಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಪ್ರಸ್ತಾವನೆಗೆ ಹಣಕಾಸು ಇಲಾಖೆಯು ಒಪ್ಪಿಗೆಯನ್ನು ನೀಡಲು ಸಾಧ್ಯವಾಗದ ಕಾರಣ ನೇಮಕಾತಿ ಬಾಕಿ ಉಳಿದಿದೆ.

ರಾಜ್ಯದ ಸರಕಾರಿ ಇಲಾಖೆಗಳು ಗಣನೀಯವಾಗಿ ಸಿಬ್ಬಂದಿಗಳ ಕೊರತೆಯನ್ನು ಎದುರಿಸುತ್ತಿವೆ. ಶಿಕ್ಷಣ ಕ್ಷೇತ್ರದಲ್ಲಿ 75,000 ಖಾಲಿ ಹುದ್ದೆಗಳು, ಆರೋಗ್ಯ ಕ್ಷೇತ್ರದಲ್ಲಿ 35,000 ಮತ್ತು ಗೃಹ ಇಲಾಖೆಯಲ್ಲಿ 22,000 ಹುದ್ದೆಗಳು ಖಾಲಿ ಇದೆ. ಕಂದಾಯ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಪಶುಸಂಗೋಪನೆ, ಹಣಕಾಸು ಇಲಾಖೆಗಳಲ್ಲಿ ತಲಾ 10,000 ಖಾಲಿ ಹುದ್ದೆಗಳು ಖಾಲಿ ಇದೆ.

ಇತ್ತೀಚಿನ ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (CMIE) ಡೇಟಾ ಪ್ರಕಾರ, ಭಾರತದ ನಿರುದ್ಯೋಗ ದರವು ನವೆಂಬರ್ 2023ರಲ್ಲಿ 10.09%ಕ್ಕೆ ಹೆಚ್ಚಳವಾಗಿದ್ದು, ಇದು ಎರಡು ವರ್ಷಗಳಲ್ಲೇ ಗರಿಷ್ಠ ಮಟ್ಟವನ್ನು ತಲುಪಿರುವುದಾಗಿದೆ. ಸೆಪ್ಟೆಂಬರ್ 2023ರ ವೇಳೆ ನಿರುದ್ಯೋಗದ ದರವು 7.09% ಆಗಿತ್ತು. ಇದು ನವಂಬರ್‌ಗೆ ತಲುಪಿದಾಗ ಮೂರು ಶೇಕಡಾವಾರು ಹೆಚ್ಚಳವನ್ನು ಸೂಚಿಸುತ್ತದೆ. ಗ್ರಾಮೀಣ ನಿರುದ್ಯೋಗವು 6.2% ರಿಂದ 10.82% ಕ್ಕೆ ಏರಿದೆ ಮತ್ತು ನಗರ ಪ್ರದೇಶದಲ್ಲಿನ ನಿರುದ್ಯೋಗದ ದರವು ನವೆಂಬರ್‌ನಲ್ಲಿ 8.44% ಕ್ಕೆ ತಲುಪಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಈ ಕುರಿತು ಮಾತನಾಡಿದ್ದು, ಬಿಲ್ ಕಲೆಕ್ಟರ್‌ಗಳಂತಹ ಹುದ್ದೆಗಳಿಗೆ  ಇಂಜಿನಿಯರ್‌ಗಳು, ಎಂಬಿಎ ಪದವೀಧರರು ಸೇರಿ ಉನ್ನತ ಪದವಿ ಪಡೆದ ಯುವ ಜನತೆ ಅರ್ಜಿ ಸಲ್ಲಿಸುವುದನ್ನು ಕಾಣಬಹುದು. ಕಳೆದ ವರ್ಷ ಜಲಸಂಪನ್ಮೂಲ ಇಲಾಖೆಯಲ್ಲಿ 10 ಚಾಲಕರ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದ್ದು, 1.8 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದರು. ಕೋವಿಡ್ ನಂತರ ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವವರ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ ಎಂದು ಹೇಳಿದ್ದಾರೆ.

ಈ ಕುರಿತು ಹೆಸರು ಹೇಳಲಿಚ್ಚಿಸದ ಹಿರಿಯ ಅಧಿಕಾರಿಯೋರ್ವರು ಪ್ರತಿಕ್ರಿಯಿಸಿದ್ದು, ನಾವು ದೊಡ್ಡ ಮಟ್ಟದಲ್ಲಿ ಹುದ್ದೆಗಳನ್ನು ತುಂಬಲು ಸಾಧ್ಯವಾಗುತ್ತಿಲ್ಲ. ಒಂದು ಇಲಾಖೆಯಲ್ಲಿ 100 ಹುದ್ದೆಗಳು ಖಾಲಿಯಿದ್ದರೆ, ಹಣಕಾಸು ಇಲಾಖೆ ಅನುಮತಿ ನೀಡದ ಕಾರಣ ನಾವು ಕನಿಷ್ಠ 10 ಹುದ್ದೆಯನ್ನು ಕೂಡ ಭರ್ತಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಕೆಲ ದಿನಗಳ ಹಿಂದೆ ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿಗೆ ಸರ್ಕಾರ ಅರ್ಜಿ ಆಹ್ವಾನಿಸಿತ್ತು. 50,000 ಖಾಲಿ ಹುದ್ದೆಗಳಿದ್ದರೂ, ಹಣಕಾಸು ಇಲಾಖೆಯು 15,000ಕ್ಕೆ ಮಾತ್ರ ತನ್ನ ಒಪ್ಪಿಗೆ ನೀಡಿದೆ. 1.3 ಲಕ್ಷಕ್ಕೂ ಹೆಚ್ಚು ಜನರು ಪರೀಕ್ಷೆಯನ್ನು ಬರೆಯುತ್ತಾರೆ ಎಂದು ವರದಿಯು ತಿಳಿಸಿದೆ.

ಇದನ್ನು ಓದಿ: ಭಾರತದ ಪ್ರಧಾನಿಯೋರ್ವರು ಕೊನೆಯ ಪತ್ರಿಕಾಗೋಷ್ಟಿ ನಡೆಸಿ ಇಂದಿಗೆ 10 ವರ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...