Homeಅಂತರಾಷ್ಟ್ರೀಯಸೌದಿ ಅರೇಬಿಯಾದಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಖಾಲಿ ವಿಮಾನ!

ಸೌದಿ ಅರೇಬಿಯಾದಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಖಾಲಿ ವಿಮಾನ!

- Advertisement -
- Advertisement -

ಕೊರೊನಾ ಕಾರಣಕ್ಕೆ ಸಿಲುಕಿರುವ ನಾಗರಿಕರನ್ನು ಮರಳಿ ಕರೆತರಲು ಭಾರತವು ಸೌದಿ ಅರೇಬಿಯಾಕ್ಕೆ ಖಾಲಿ ವಿಮಾನಗಳನ್ನು ಕಳುಹಿಸುತ್ತಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಮಂಗಳವಾರ ಹೇಳಿದ್ದಾರೆ. ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣಗಳನ್ನು ತಡೆಯುವ ಪ್ರಯತ್ನವಾಗಿ ಭಾರತ ಸೇರಿದಂತೆ 20 ದೇಶಗಳ ಅಂತರರಾಷ್ಟ್ರೀಯ ವಿಮಾನಯಾನಗಳನ್ನು ಸೌದಿ ಅರೇಬಿಯಾ ಕಳೆದ ತಿಂಗಳು ನಿಷೇಧಿಸಿದ್ದವು.

“ಸೌದಿ ಅರೇಬಿಯಾ ಸೇರಿದಂತೆ ಕೆಲವು ದೇಶಗಳು ಭಾರತೀಯ ನಾಗರಿಕರ ಮೇಲೆ ಪ್ರವೇಶ ನಿರ್ಬಂಧಗಳನ್ನು ವಿಧಿಸಿವೆ. ಆದಾಗ್ಯೂ, ವಂದೇ ಭಾರತ್‌ ವಿಮಾನಗಳು ಸೌದಿ ಅರೇಬಿಯಾದಿಂದ ಭಾರತೀಯರನ್ನು ಮರಳಿ ಕರೆತರುತ್ತಿವೆ” ಎಂದು ಪುರಿ ಟ್ವಿಟ್ಟ‌ರ್‌‌ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಹಣ ವಂಚನೆ ಆರೋಪಿ ನೀರವ್‌ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸಿ – ಇಂಗ್ಲೇಂಡ್ ಕೋರ್ಟ್‌ ತೀರ್ಪು

“ನಮ್ಮ ವಿಮಾನಗಳು ಸೌದಿ ಅರೇಬಿಯಾಕ್ಕೆ ಖಾಲಿಯಾಗಿ ಹಾರುತ್ತಿವೆ ಮತ್ತು ಅಲ್ಲಿ ಸಿಲುಕಿರುವ ನಮ್ಮ ನಾಗರಿಕರನ್ನು ಮರಳಿ ಕರೆತರುತ್ತಿವೆ. ಸೌದಿ ಅರೇಬಿಯಾದಿಂದ ಭಾರತೀಯರ ಪ್ರಯಾಣದ ನಿರ್ಬಂಧವನ್ನು ಸಡಿಲಿಸಿದ ನಂತರ ನಾವು ಸೌದಿ ಅರೇಬಿಯಾಕ್ಕೆ ಪ್ರಯಾಣಿಸುವ ಪ್ರಯಾಣಿಕರನ್ನು ಸಾಗಿಸಲು ಸಾಧ್ಯವಾಗುತ್ತದೆ” ಎಂದು ಅವರು ನಂತರದ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಸೌದಿ ಅರೇಬಿಯಾದ ಆಂತರಿಕ ಸಚಿವಾಲಯವು ಒಂದು ತಿಂಗಳ ಹಿಂದೆ, ಭಾರತದ ವಿಮಾನಗಳಿಗೆ “ತಾತ್ಕಾಲಿಕ ಅಮಾನತು” ಘೋಷಿಸಿತು.

ಭಾರತವನ್ನು ಹೊರತುಪಡಿಸಿ, ಅಮೆರಿಕ, ಈಜಿಪ್ಟ್, ಪಾಕಿಸ್ತಾನ, ಅರ್ಜೆಂಟೀನಾ, ಜರ್ಮನಿ, ಐರ್ಲೆಂಡ್, ಸ್ವಿಟ್ಜರ್ಲೆಂಡ್, ಫ್ರಾನ್ಸ್, ಇಟಲಿ, ಪೋರ್ಚುಗಲ್, ಇಂಡೋನೇಷ್ಯಾ, ಜಪಾನ್, ದಕ್ಷಿಣ ಆಫ್ರಿಕಾ, ಯುನೈಟೆಡ್ ಕಿಂಗ್‌ಡಮ್, ಜರ್ಮನಿ, ಸ್ವೀಡನ್, ಲೆಬನಾನ್, ಯುಎಇ ಮತ್ತು ಟರ್ಕಿಯಿಂದ ವಿಮಾನಗಳನ್ನು ನಿಷೇಧಿಸಲಾಗಿದೆ.

ಕಳೆದ ವರ್ಷ ಡಿಸೆಂಬರ್ ಮತ್ತು ಸೆಪ್ಟೆಂಬರ್‌ನಲ್ಲಿ, ಹೆಚ್ಚುತ್ತಿರುವ ಕೊರೊನಾ ವೈರಸ್ ಸಾಂಕ್ರಮಿಕದ ತಪಾಸಣೆ ನಡೆಸಲು ದೇಶವು ಇದೇ ರೀತಿಯ ಕ್ರಮಗಳನ್ನು ಘೋಷಿಸಿತ್ತು. ಸೌದಿ ಅರೇಬಿಯಾವು ಮಾರ್ಚ್ 31 ರವರೆಗೆ ಅಂತರರಾಷ್ಟ್ರೀಯ ವಿಮಾನಯಾನಗಳನ್ನು ನಿಷೇಧಿಸಿದೆ ಎಂದು ದೇಶದ ಸುದ್ದಿ ಸಂಸ್ಥೆ ಎಸ್‌ಪಿಎ ತಿಳಿಸಿದೆ.

ಇದನ್ನೂ ಓದಿ: ಭಾರತದ ಪವರ್‌ಗ್ರಿಡ್‌ಗಳು ಚೀನಾ ಹ್ಯಾಕರ್‌ಗಳ ಟಾರ್ಗೆಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...