Homeಮುಖಪುಟಎಂಪುರಾನ್ ವಿವಾದ| ಸಂಘ ಪರಿವಾರದಿಂದ 'ಭಯದ ವಾತಾವರಣ' ನಿರ್ಮಾಣ; ಪಿಣರಾಯಿ ವಿಜಯನ್

ಎಂಪುರಾನ್ ವಿವಾದ| ಸಂಘ ಪರಿವಾರದಿಂದ ‘ಭಯದ ವಾತಾವರಣ’ ನಿರ್ಮಾಣ; ಪಿಣರಾಯಿ ವಿಜಯನ್

- Advertisement -
- Advertisement -

ಗುಜರಾತ್ ಗಲಭೆ ಕುರಿತು ಉಲ್ಲೇಖಿಸಿ ಹಿಂದೂ ಧರ್ಮದ ಅವಹೇಳನ ಮಾಡಲಾಗಿದೆ ಎಂದು ಸಂಘ ಪರಿವಾರ ಆರೋಪಿಸಿದ ಬಳಿಕ ಮೋಹನ್‌ಲಾಲ್ ಅಭಿನಯದ ‘ಎಲ್‌2 ಎಂಪುರಾನ್’ ಚಿತ್ರ ವಿವಾದಕ್ಕೀಡಾಗಿದೆ.

ಸಂಘ ಪರಿವಾರ ಆಕ್ಷೇಪ ವ್ಯಕ್ತಪಡಿಸಿದ ಚಿತ್ರದ ಸುಮಾರು 17 ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಮಾಪಕರು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ನಡುವೆ ವಿವಾದಕ್ಕೆ ಸಂಬಂಧಿಸಿದಂತೆ ನಟ ಮೋಹನ್‌ಲಾಲ್ ಅಭಿಮಾನಿಗಳ ಕ್ಷಮೆಯಾಚಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಎಂಪುರಾನ್ ಚಿತ್ರವನ್ನು ಬೆಂಬಲಿಸಿದ್ದು, “ಚಿತ್ರದ ನಿರ್ಮಾಪಕರ ಕೋಮುವಾದದ ವಿರುದ್ದದ ನಿಲುವಿನ ಬಗ್ಗೆ ಸಂಘಪರಿವಾರ ಭಯದ ವಾತಾವರಣ ಸೃಷ್ಟಿಸುತ್ತಿದೆ ಎಂದು ಹೇಳಿದ್ದಾರೆ.

ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಪಿಣರಾಯಿ ವಿಜಯನ್ “ದೇಶಕಂಡ ಅತ್ಯಂತ ಘೋರ ನರಮೇಧಗಳಲ್ಲಿ ಒಂದನ್ನು ಈ ಚಿತ್ರ ಉಲ್ಲೇಖಿಸುತ್ತದೆ. ಅದು ಸಂಘಪರಿವಾರ ಮತ್ತು ಅದರ ಸೂತ್ರಧಾರರನ್ನು ಕೆರಳಿಸಿದೆ” ಎಂದಿದ್ದಾರೆ.

ಶನಿವಾರ (ಮಾ.29) ಸಂಜೆ ತಿರುವನಂತಪುರಂನಲ್ಲಿ ಪಿಣರಾಯಿ ವಿಜಯನ್ ಕುಟುಂಬ ಸಮೇತರಾಗಿ ಎಂಪುರಾನ್ ಸಿನಿಮಾ ವೀಕ್ಷಿಸಿದ್ದಾರೆ.

ಮಲಯಾಳಂ ಚಲನಚಿತ್ರೋದ್ಯಮವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಚಿತ್ರ ಎಂದು ಎಂಪುರಾನ್ ಕುರಿತು ಶ್ಲಾಘಿಸಿದ ಪಿಣರಾಯಿ ವಿಜಯನ್, “ಸಂಘ ಪರಿವಾರ ಚಿತ್ರ, ಅದರ ನಟರು ಮತ್ತು ಸಿಬ್ಬಂದಿಯ ವಿರುದ್ಧ ವ್ಯಾಪಕ ದ್ವೇಷ ಹರಡುತ್ತಿರುವ ಹಿನ್ನೆಲೆ ಚಿತ್ರ ವೀಕ್ಷಿಸಿದೆ” ಎಂದಿದ್ದಾರೆ.

ಕೇವಲ ಕಾರ್ಯಕರ್ತರು ಮಾತ್ರವಲ್ಲ, ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರು ಕೂಡ ಚಿತ್ರದ ನಿರ್ಮಾಪಕರಿಗೆ ಸಾರ್ವಜನಿಕವಾಗಿ ಬೆದರಿಕೆ ಹಾಕುತ್ತಿದ್ದಾರೆ. ಚಿತ್ರವನ್ನು ಮರು ಸೆನ್ಸಾರ್ ಮಾಡಲು ಮತ್ತು ದೃಶ್ಯಗಳಿಗೆ ಕತ್ತರಿ ಹಾಕಲು ಒತ್ತಾಯಿಸಲಾಗುತ್ತಿದೆ ಎಂಬ ವರದಿಗಳು ಬಂದಿವೆ. ಸಂಘ ಪರಿವಾರ ಸೃಷ್ಟಿಸಿರುವ ಈ ಭಯದ ವಾತಾವರಣವು ಕಳವಳಕಾರಿ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ಕೋಮುವಾದಿಗಳು, ಕೋಮುವಾದದ ವಿರುದ್ಧ ನಿಲುವು ತೆಗೆದುಕೊಂಡು ಅದರ ಭಯಾನಕತೆಯನ್ನು ಚಿತ್ರಿಸಿದ್ದಾರೆ ಎಂಬ ಕಾರಣಕ್ಕಾಗಿ ಚಿತ್ರ ಮತ್ತು ಅದರ ಕಲಾವಿದರ ಮೇಲೆ ದಾಳಿ ಮಾಡಲಾಗುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಎಂದಿದ್ದಾರೆ.

“ಪ್ರಜಾಪ್ರಭುತ್ವ ಸಮಾಜದಲ್ಲಿ ನಾಗರಿಕರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸಬೇಕು. ಕಲಾಕೃತಿಗಳು ಮತ್ತು ಕಲಾವಿದರನ್ನು ನಾಶಮಾಡುವ ಮತ್ತು ನಿಷೇಧಿಸುವ ಹಿಂಸಾತ್ಮಕ ಕರೆಗಳು ಫ್ಯಾಸಿಸ್ಟ್ ಮನಸ್ಥಿತಿಯ ಹೊಸ ಅಭಿವ್ಯಕ್ತಿಗಳಾಗಿವೆ. ಇದು ಪ್ರಜಾಸತ್ತಾತ್ಮಕ ಹಕ್ಕುಗಳ ಉಲ್ಲಂಘನೆಯಾಗಿದೆ” ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ಚಲನಚಿತ್ರಗಳನ್ನು ನಿರ್ಮಿಸುವ, ವೀಕ್ಷಿಸುವ, ಆನಂದಿಸುವ ಮತ್ತು ಅವುಗಳನ್ನು ಮೌಲ್ಯಮಾಪನ ಮಾಡುವ ಅಥವಾ ಅವುಗಳನ್ನು ಒಪ್ಪುವ ಅಥವಾ ಒಪ್ಪದಿರುವ ಹಕ್ಕುಗಳನ್ನು ಕಳೆದುಕೊಳ್ಳಬಾರದು ಎಂದು ಹೇಳಿದ ವಿಜಯನ್, ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ಮೌಲ್ಯಗಳಲ್ಲಿ ಬೇರೂರಿರುವ ದೇಶದ ಒಗ್ಗಟ್ಟಿನ ಧ್ವನಿಯನ್ನು ಇದಕ್ಕಾಗಿ ಎತ್ತಬೇಕು ಎಂದಿದ್ದಾರೆ.

ಪೃಥ್ವಿರಾಜ್ ನಿರ್ದೇಶನದ ಎಂಪುರಾನ್ ಚಿತ್ರ, ಪೃಥ್ವಿರಾಜ್-ಮೋಹನ್ ಲಾಲ್ ತಂಡ ಯೋಜಿಸಿರುವ ಲೂಸಿಫರ್ ಚಿತ್ರದ ಎರಡನೇ ಭಾಗವಾಗಿದ್ದು, ಬಲಪಂಥೀಯ ರಾಜಕೀಯದ ಟೀಕೆ ಮತ್ತು ಗುಜರಾತ್ ಗಲಭೆಯ ರಹಸ್ಯ ಉಲ್ಲೇಖದಿಂದಾಗಿ ಬಿಸಿ ಚರ್ಚೆಯ ವಿಷಯವಾಗಿದೆ.

ಚಿತ್ರ ಬಿಡುಗಡೆಯಾದ ಗುರುವಾರ, ಸಂಘ ಪರಿವಾರವು ಸಾಮಾಜಿಕ ಮಾಧ್ಯಮಗಳಲ್ಲಿ ಚಿತ್ರದ ವಿರುದ್ಧ ತೀವ್ರ ಟೀಕೆಗಳನ್ನು ವ್ಯಕ್ತಪಡಿಸಿತ್ತು. ಆದರೆ, ಕಾಂಗ್ರೆಸ್ ಮತ್ತು ಎಡಪಂಥೀಯ ತಂಡಗಳು ಬಲಪಂಥೀಯ ರಾಜಕೀಯವನ್ನು ‘ವಿಲನ್‌’ ರೂಪದಲ್ಲಿ ಚಿತ್ರಿಸಿದ್ದಕ್ಕಾಗಿ ಚಿತ್ರವನ್ನು ಶ್ಲಾಘಿಸಿದೆ.

ಗುರುವಾರ ವಿಶ್ವಾದ್ಯಂತ ಬಿಡುಗಡೆಯಾದ ಎಲ್‌2: ಎಂಪುರಾನ್, ಮೊದಲ ದಿನ ಕೇರಳವೊಂದರಲ್ಲೇ 746 ಪರದೆಗಳಲ್ಲಿ 4,500 ಪ್ರದರ್ಶನಗಳನ್ನು ಕಂಡಿದೆ ಎಂದು ವರದಿಯಾಗಿದೆ.

ಬಲಪಂಥೀಯರ ಕೆಂಗಣ್ಣಿಗೆ ಗುರಿಯಾದ ‘ಎಲ್‌2 : ಎಂಪುರಾನ್‌ ಚಿತ್ರ’; ಹಲವು ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...