Homeಮುಖಪುಟಎಂಪುರಾನ್ ವಿವಾದ| ಸಂಘ ಪರಿವಾರದಿಂದ 'ಭಯದ ವಾತಾವರಣ' ನಿರ್ಮಾಣ; ಪಿಣರಾಯಿ ವಿಜಯನ್

ಎಂಪುರಾನ್ ವಿವಾದ| ಸಂಘ ಪರಿವಾರದಿಂದ ‘ಭಯದ ವಾತಾವರಣ’ ನಿರ್ಮಾಣ; ಪಿಣರಾಯಿ ವಿಜಯನ್

- Advertisement -
- Advertisement -

ಗುಜರಾತ್ ಗಲಭೆ ಕುರಿತು ಉಲ್ಲೇಖಿಸಿ ಹಿಂದೂ ಧರ್ಮದ ಅವಹೇಳನ ಮಾಡಲಾಗಿದೆ ಎಂದು ಸಂಘ ಪರಿವಾರ ಆರೋಪಿಸಿದ ಬಳಿಕ ಮೋಹನ್‌ಲಾಲ್ ಅಭಿನಯದ ‘ಎಲ್‌2 ಎಂಪುರಾನ್’ ಚಿತ್ರ ವಿವಾದಕ್ಕೀಡಾಗಿದೆ.

ಸಂಘ ಪರಿವಾರ ಆಕ್ಷೇಪ ವ್ಯಕ್ತಪಡಿಸಿದ ಚಿತ್ರದ ಸುಮಾರು 17 ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಮಾಪಕರು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ನಡುವೆ ವಿವಾದಕ್ಕೆ ಸಂಬಂಧಿಸಿದಂತೆ ನಟ ಮೋಹನ್‌ಲಾಲ್ ಅಭಿಮಾನಿಗಳ ಕ್ಷಮೆಯಾಚಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಎಂಪುರಾನ್ ಚಿತ್ರವನ್ನು ಬೆಂಬಲಿಸಿದ್ದು, “ಚಿತ್ರದ ನಿರ್ಮಾಪಕರ ಕೋಮುವಾದದ ವಿರುದ್ದದ ನಿಲುವಿನ ಬಗ್ಗೆ ಸಂಘಪರಿವಾರ ಭಯದ ವಾತಾವರಣ ಸೃಷ್ಟಿಸುತ್ತಿದೆ ಎಂದು ಹೇಳಿದ್ದಾರೆ.

ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಪಿಣರಾಯಿ ವಿಜಯನ್ “ದೇಶಕಂಡ ಅತ್ಯಂತ ಘೋರ ನರಮೇಧಗಳಲ್ಲಿ ಒಂದನ್ನು ಈ ಚಿತ್ರ ಉಲ್ಲೇಖಿಸುತ್ತದೆ. ಅದು ಸಂಘಪರಿವಾರ ಮತ್ತು ಅದರ ಸೂತ್ರಧಾರರನ್ನು ಕೆರಳಿಸಿದೆ” ಎಂದಿದ್ದಾರೆ.

ಶನಿವಾರ (ಮಾ.29) ಸಂಜೆ ತಿರುವನಂತಪುರಂನಲ್ಲಿ ಪಿಣರಾಯಿ ವಿಜಯನ್ ಕುಟುಂಬ ಸಮೇತರಾಗಿ ಎಂಪುರಾನ್ ಸಿನಿಮಾ ವೀಕ್ಷಿಸಿದ್ದಾರೆ.

ಮಲಯಾಳಂ ಚಲನಚಿತ್ರೋದ್ಯಮವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಚಿತ್ರ ಎಂದು ಎಂಪುರಾನ್ ಕುರಿತು ಶ್ಲಾಘಿಸಿದ ಪಿಣರಾಯಿ ವಿಜಯನ್, “ಸಂಘ ಪರಿವಾರ ಚಿತ್ರ, ಅದರ ನಟರು ಮತ್ತು ಸಿಬ್ಬಂದಿಯ ವಿರುದ್ಧ ವ್ಯಾಪಕ ದ್ವೇಷ ಹರಡುತ್ತಿರುವ ಹಿನ್ನೆಲೆ ಚಿತ್ರ ವೀಕ್ಷಿಸಿದೆ” ಎಂದಿದ್ದಾರೆ.

ಕೇವಲ ಕಾರ್ಯಕರ್ತರು ಮಾತ್ರವಲ್ಲ, ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರು ಕೂಡ ಚಿತ್ರದ ನಿರ್ಮಾಪಕರಿಗೆ ಸಾರ್ವಜನಿಕವಾಗಿ ಬೆದರಿಕೆ ಹಾಕುತ್ತಿದ್ದಾರೆ. ಚಿತ್ರವನ್ನು ಮರು ಸೆನ್ಸಾರ್ ಮಾಡಲು ಮತ್ತು ದೃಶ್ಯಗಳಿಗೆ ಕತ್ತರಿ ಹಾಕಲು ಒತ್ತಾಯಿಸಲಾಗುತ್ತಿದೆ ಎಂಬ ವರದಿಗಳು ಬಂದಿವೆ. ಸಂಘ ಪರಿವಾರ ಸೃಷ್ಟಿಸಿರುವ ಈ ಭಯದ ವಾತಾವರಣವು ಕಳವಳಕಾರಿ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ಕೋಮುವಾದಿಗಳು, ಕೋಮುವಾದದ ವಿರುದ್ಧ ನಿಲುವು ತೆಗೆದುಕೊಂಡು ಅದರ ಭಯಾನಕತೆಯನ್ನು ಚಿತ್ರಿಸಿದ್ದಾರೆ ಎಂಬ ಕಾರಣಕ್ಕಾಗಿ ಚಿತ್ರ ಮತ್ತು ಅದರ ಕಲಾವಿದರ ಮೇಲೆ ದಾಳಿ ಮಾಡಲಾಗುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಎಂದಿದ್ದಾರೆ.

“ಪ್ರಜಾಪ್ರಭುತ್ವ ಸಮಾಜದಲ್ಲಿ ನಾಗರಿಕರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸಬೇಕು. ಕಲಾಕೃತಿಗಳು ಮತ್ತು ಕಲಾವಿದರನ್ನು ನಾಶಮಾಡುವ ಮತ್ತು ನಿಷೇಧಿಸುವ ಹಿಂಸಾತ್ಮಕ ಕರೆಗಳು ಫ್ಯಾಸಿಸ್ಟ್ ಮನಸ್ಥಿತಿಯ ಹೊಸ ಅಭಿವ್ಯಕ್ತಿಗಳಾಗಿವೆ. ಇದು ಪ್ರಜಾಸತ್ತಾತ್ಮಕ ಹಕ್ಕುಗಳ ಉಲ್ಲಂಘನೆಯಾಗಿದೆ” ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ಚಲನಚಿತ್ರಗಳನ್ನು ನಿರ್ಮಿಸುವ, ವೀಕ್ಷಿಸುವ, ಆನಂದಿಸುವ ಮತ್ತು ಅವುಗಳನ್ನು ಮೌಲ್ಯಮಾಪನ ಮಾಡುವ ಅಥವಾ ಅವುಗಳನ್ನು ಒಪ್ಪುವ ಅಥವಾ ಒಪ್ಪದಿರುವ ಹಕ್ಕುಗಳನ್ನು ಕಳೆದುಕೊಳ್ಳಬಾರದು ಎಂದು ಹೇಳಿದ ವಿಜಯನ್, ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ಮೌಲ್ಯಗಳಲ್ಲಿ ಬೇರೂರಿರುವ ದೇಶದ ಒಗ್ಗಟ್ಟಿನ ಧ್ವನಿಯನ್ನು ಇದಕ್ಕಾಗಿ ಎತ್ತಬೇಕು ಎಂದಿದ್ದಾರೆ.

ಪೃಥ್ವಿರಾಜ್ ನಿರ್ದೇಶನದ ಎಂಪುರಾನ್ ಚಿತ್ರ, ಪೃಥ್ವಿರಾಜ್-ಮೋಹನ್ ಲಾಲ್ ತಂಡ ಯೋಜಿಸಿರುವ ಲೂಸಿಫರ್ ಚಿತ್ರದ ಎರಡನೇ ಭಾಗವಾಗಿದ್ದು, ಬಲಪಂಥೀಯ ರಾಜಕೀಯದ ಟೀಕೆ ಮತ್ತು ಗುಜರಾತ್ ಗಲಭೆಯ ರಹಸ್ಯ ಉಲ್ಲೇಖದಿಂದಾಗಿ ಬಿಸಿ ಚರ್ಚೆಯ ವಿಷಯವಾಗಿದೆ.

ಚಿತ್ರ ಬಿಡುಗಡೆಯಾದ ಗುರುವಾರ, ಸಂಘ ಪರಿವಾರವು ಸಾಮಾಜಿಕ ಮಾಧ್ಯಮಗಳಲ್ಲಿ ಚಿತ್ರದ ವಿರುದ್ಧ ತೀವ್ರ ಟೀಕೆಗಳನ್ನು ವ್ಯಕ್ತಪಡಿಸಿತ್ತು. ಆದರೆ, ಕಾಂಗ್ರೆಸ್ ಮತ್ತು ಎಡಪಂಥೀಯ ತಂಡಗಳು ಬಲಪಂಥೀಯ ರಾಜಕೀಯವನ್ನು ‘ವಿಲನ್‌’ ರೂಪದಲ್ಲಿ ಚಿತ್ರಿಸಿದ್ದಕ್ಕಾಗಿ ಚಿತ್ರವನ್ನು ಶ್ಲಾಘಿಸಿದೆ.

ಗುರುವಾರ ವಿಶ್ವಾದ್ಯಂತ ಬಿಡುಗಡೆಯಾದ ಎಲ್‌2: ಎಂಪುರಾನ್, ಮೊದಲ ದಿನ ಕೇರಳವೊಂದರಲ್ಲೇ 746 ಪರದೆಗಳಲ್ಲಿ 4,500 ಪ್ರದರ್ಶನಗಳನ್ನು ಕಂಡಿದೆ ಎಂದು ವರದಿಯಾಗಿದೆ.

ಬಲಪಂಥೀಯರ ಕೆಂಗಣ್ಣಿಗೆ ಗುರಿಯಾದ ‘ಎಲ್‌2 : ಎಂಪುರಾನ್‌ ಚಿತ್ರ’; ಹಲವು ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...