Homeಮುಖಪುಟಎಂಪುರಾನ್ ವಿವಾದ| ಸಂಘ ಪರಿವಾರದಿಂದ 'ಭಯದ ವಾತಾವರಣ' ನಿರ್ಮಾಣ; ಪಿಣರಾಯಿ ವಿಜಯನ್

ಎಂಪುರಾನ್ ವಿವಾದ| ಸಂಘ ಪರಿವಾರದಿಂದ ‘ಭಯದ ವಾತಾವರಣ’ ನಿರ್ಮಾಣ; ಪಿಣರಾಯಿ ವಿಜಯನ್

- Advertisement -
- Advertisement -

ಗುಜರಾತ್ ಗಲಭೆ ಕುರಿತು ಉಲ್ಲೇಖಿಸಿ ಹಿಂದೂ ಧರ್ಮದ ಅವಹೇಳನ ಮಾಡಲಾಗಿದೆ ಎಂದು ಸಂಘ ಪರಿವಾರ ಆರೋಪಿಸಿದ ಬಳಿಕ ಮೋಹನ್‌ಲಾಲ್ ಅಭಿನಯದ ‘ಎಲ್‌2 ಎಂಪುರಾನ್’ ಚಿತ್ರ ವಿವಾದಕ್ಕೀಡಾಗಿದೆ.

ಸಂಘ ಪರಿವಾರ ಆಕ್ಷೇಪ ವ್ಯಕ್ತಪಡಿಸಿದ ಚಿತ್ರದ ಸುಮಾರು 17 ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಮಾಪಕರು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ನಡುವೆ ವಿವಾದಕ್ಕೆ ಸಂಬಂಧಿಸಿದಂತೆ ನಟ ಮೋಹನ್‌ಲಾಲ್ ಅಭಿಮಾನಿಗಳ ಕ್ಷಮೆಯಾಚಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಎಂಪುರಾನ್ ಚಿತ್ರವನ್ನು ಬೆಂಬಲಿಸಿದ್ದು, “ಚಿತ್ರದ ನಿರ್ಮಾಪಕರ ಕೋಮುವಾದದ ವಿರುದ್ದದ ನಿಲುವಿನ ಬಗ್ಗೆ ಸಂಘಪರಿವಾರ ಭಯದ ವಾತಾವರಣ ಸೃಷ್ಟಿಸುತ್ತಿದೆ ಎಂದು ಹೇಳಿದ್ದಾರೆ.

ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಪಿಣರಾಯಿ ವಿಜಯನ್ “ದೇಶಕಂಡ ಅತ್ಯಂತ ಘೋರ ನರಮೇಧಗಳಲ್ಲಿ ಒಂದನ್ನು ಈ ಚಿತ್ರ ಉಲ್ಲೇಖಿಸುತ್ತದೆ. ಅದು ಸಂಘಪರಿವಾರ ಮತ್ತು ಅದರ ಸೂತ್ರಧಾರರನ್ನು ಕೆರಳಿಸಿದೆ” ಎಂದಿದ್ದಾರೆ.

ಶನಿವಾರ (ಮಾ.29) ಸಂಜೆ ತಿರುವನಂತಪುರಂನಲ್ಲಿ ಪಿಣರಾಯಿ ವಿಜಯನ್ ಕುಟುಂಬ ಸಮೇತರಾಗಿ ಎಂಪುರಾನ್ ಸಿನಿಮಾ ವೀಕ್ಷಿಸಿದ್ದಾರೆ.

ಮಲಯಾಳಂ ಚಲನಚಿತ್ರೋದ್ಯಮವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಚಿತ್ರ ಎಂದು ಎಂಪುರಾನ್ ಕುರಿತು ಶ್ಲಾಘಿಸಿದ ಪಿಣರಾಯಿ ವಿಜಯನ್, “ಸಂಘ ಪರಿವಾರ ಚಿತ್ರ, ಅದರ ನಟರು ಮತ್ತು ಸಿಬ್ಬಂದಿಯ ವಿರುದ್ಧ ವ್ಯಾಪಕ ದ್ವೇಷ ಹರಡುತ್ತಿರುವ ಹಿನ್ನೆಲೆ ಚಿತ್ರ ವೀಕ್ಷಿಸಿದೆ” ಎಂದಿದ್ದಾರೆ.

ಕೇವಲ ಕಾರ್ಯಕರ್ತರು ಮಾತ್ರವಲ್ಲ, ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರು ಕೂಡ ಚಿತ್ರದ ನಿರ್ಮಾಪಕರಿಗೆ ಸಾರ್ವಜನಿಕವಾಗಿ ಬೆದರಿಕೆ ಹಾಕುತ್ತಿದ್ದಾರೆ. ಚಿತ್ರವನ್ನು ಮರು ಸೆನ್ಸಾರ್ ಮಾಡಲು ಮತ್ತು ದೃಶ್ಯಗಳಿಗೆ ಕತ್ತರಿ ಹಾಕಲು ಒತ್ತಾಯಿಸಲಾಗುತ್ತಿದೆ ಎಂಬ ವರದಿಗಳು ಬಂದಿವೆ. ಸಂಘ ಪರಿವಾರ ಸೃಷ್ಟಿಸಿರುವ ಈ ಭಯದ ವಾತಾವರಣವು ಕಳವಳಕಾರಿ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ಕೋಮುವಾದಿಗಳು, ಕೋಮುವಾದದ ವಿರುದ್ಧ ನಿಲುವು ತೆಗೆದುಕೊಂಡು ಅದರ ಭಯಾನಕತೆಯನ್ನು ಚಿತ್ರಿಸಿದ್ದಾರೆ ಎಂಬ ಕಾರಣಕ್ಕಾಗಿ ಚಿತ್ರ ಮತ್ತು ಅದರ ಕಲಾವಿದರ ಮೇಲೆ ದಾಳಿ ಮಾಡಲಾಗುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಎಂದಿದ್ದಾರೆ.

“ಪ್ರಜಾಪ್ರಭುತ್ವ ಸಮಾಜದಲ್ಲಿ ನಾಗರಿಕರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸಬೇಕು. ಕಲಾಕೃತಿಗಳು ಮತ್ತು ಕಲಾವಿದರನ್ನು ನಾಶಮಾಡುವ ಮತ್ತು ನಿಷೇಧಿಸುವ ಹಿಂಸಾತ್ಮಕ ಕರೆಗಳು ಫ್ಯಾಸಿಸ್ಟ್ ಮನಸ್ಥಿತಿಯ ಹೊಸ ಅಭಿವ್ಯಕ್ತಿಗಳಾಗಿವೆ. ಇದು ಪ್ರಜಾಸತ್ತಾತ್ಮಕ ಹಕ್ಕುಗಳ ಉಲ್ಲಂಘನೆಯಾಗಿದೆ” ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ಚಲನಚಿತ್ರಗಳನ್ನು ನಿರ್ಮಿಸುವ, ವೀಕ್ಷಿಸುವ, ಆನಂದಿಸುವ ಮತ್ತು ಅವುಗಳನ್ನು ಮೌಲ್ಯಮಾಪನ ಮಾಡುವ ಅಥವಾ ಅವುಗಳನ್ನು ಒಪ್ಪುವ ಅಥವಾ ಒಪ್ಪದಿರುವ ಹಕ್ಕುಗಳನ್ನು ಕಳೆದುಕೊಳ್ಳಬಾರದು ಎಂದು ಹೇಳಿದ ವಿಜಯನ್, ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ಮೌಲ್ಯಗಳಲ್ಲಿ ಬೇರೂರಿರುವ ದೇಶದ ಒಗ್ಗಟ್ಟಿನ ಧ್ವನಿಯನ್ನು ಇದಕ್ಕಾಗಿ ಎತ್ತಬೇಕು ಎಂದಿದ್ದಾರೆ.

ಪೃಥ್ವಿರಾಜ್ ನಿರ್ದೇಶನದ ಎಂಪುರಾನ್ ಚಿತ್ರ, ಪೃಥ್ವಿರಾಜ್-ಮೋಹನ್ ಲಾಲ್ ತಂಡ ಯೋಜಿಸಿರುವ ಲೂಸಿಫರ್ ಚಿತ್ರದ ಎರಡನೇ ಭಾಗವಾಗಿದ್ದು, ಬಲಪಂಥೀಯ ರಾಜಕೀಯದ ಟೀಕೆ ಮತ್ತು ಗುಜರಾತ್ ಗಲಭೆಯ ರಹಸ್ಯ ಉಲ್ಲೇಖದಿಂದಾಗಿ ಬಿಸಿ ಚರ್ಚೆಯ ವಿಷಯವಾಗಿದೆ.

ಚಿತ್ರ ಬಿಡುಗಡೆಯಾದ ಗುರುವಾರ, ಸಂಘ ಪರಿವಾರವು ಸಾಮಾಜಿಕ ಮಾಧ್ಯಮಗಳಲ್ಲಿ ಚಿತ್ರದ ವಿರುದ್ಧ ತೀವ್ರ ಟೀಕೆಗಳನ್ನು ವ್ಯಕ್ತಪಡಿಸಿತ್ತು. ಆದರೆ, ಕಾಂಗ್ರೆಸ್ ಮತ್ತು ಎಡಪಂಥೀಯ ತಂಡಗಳು ಬಲಪಂಥೀಯ ರಾಜಕೀಯವನ್ನು ‘ವಿಲನ್‌’ ರೂಪದಲ್ಲಿ ಚಿತ್ರಿಸಿದ್ದಕ್ಕಾಗಿ ಚಿತ್ರವನ್ನು ಶ್ಲಾಘಿಸಿದೆ.

ಗುರುವಾರ ವಿಶ್ವಾದ್ಯಂತ ಬಿಡುಗಡೆಯಾದ ಎಲ್‌2: ಎಂಪುರಾನ್, ಮೊದಲ ದಿನ ಕೇರಳವೊಂದರಲ್ಲೇ 746 ಪರದೆಗಳಲ್ಲಿ 4,500 ಪ್ರದರ್ಶನಗಳನ್ನು ಕಂಡಿದೆ ಎಂದು ವರದಿಯಾಗಿದೆ.

ಬಲಪಂಥೀಯರ ಕೆಂಗಣ್ಣಿಗೆ ಗುರಿಯಾದ ‘ಎಲ್‌2 : ಎಂಪುರಾನ್‌ ಚಿತ್ರ’; ಹಲವು ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...