Homeಮುಖಪುಟಎಂಪುರಾನ್ ವಿವಾದ| ಸಂಘ ಪರಿವಾರದಿಂದ 'ಭಯದ ವಾತಾವರಣ' ನಿರ್ಮಾಣ; ಪಿಣರಾಯಿ ವಿಜಯನ್

ಎಂಪುರಾನ್ ವಿವಾದ| ಸಂಘ ಪರಿವಾರದಿಂದ ‘ಭಯದ ವಾತಾವರಣ’ ನಿರ್ಮಾಣ; ಪಿಣರಾಯಿ ವಿಜಯನ್

- Advertisement -
- Advertisement -

ಗುಜರಾತ್ ಗಲಭೆ ಕುರಿತು ಉಲ್ಲೇಖಿಸಿ ಹಿಂದೂ ಧರ್ಮದ ಅವಹೇಳನ ಮಾಡಲಾಗಿದೆ ಎಂದು ಸಂಘ ಪರಿವಾರ ಆರೋಪಿಸಿದ ಬಳಿಕ ಮೋಹನ್‌ಲಾಲ್ ಅಭಿನಯದ ‘ಎಲ್‌2 ಎಂಪುರಾನ್’ ಚಿತ್ರ ವಿವಾದಕ್ಕೀಡಾಗಿದೆ.

ಸಂಘ ಪರಿವಾರ ಆಕ್ಷೇಪ ವ್ಯಕ್ತಪಡಿಸಿದ ಚಿತ್ರದ ಸುಮಾರು 17 ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಮಾಪಕರು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ನಡುವೆ ವಿವಾದಕ್ಕೆ ಸಂಬಂಧಿಸಿದಂತೆ ನಟ ಮೋಹನ್‌ಲಾಲ್ ಅಭಿಮಾನಿಗಳ ಕ್ಷಮೆಯಾಚಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಎಂಪುರಾನ್ ಚಿತ್ರವನ್ನು ಬೆಂಬಲಿಸಿದ್ದು, “ಚಿತ್ರದ ನಿರ್ಮಾಪಕರ ಕೋಮುವಾದದ ವಿರುದ್ದದ ನಿಲುವಿನ ಬಗ್ಗೆ ಸಂಘಪರಿವಾರ ಭಯದ ವಾತಾವರಣ ಸೃಷ್ಟಿಸುತ್ತಿದೆ ಎಂದು ಹೇಳಿದ್ದಾರೆ.

ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಪಿಣರಾಯಿ ವಿಜಯನ್ “ದೇಶಕಂಡ ಅತ್ಯಂತ ಘೋರ ನರಮೇಧಗಳಲ್ಲಿ ಒಂದನ್ನು ಈ ಚಿತ್ರ ಉಲ್ಲೇಖಿಸುತ್ತದೆ. ಅದು ಸಂಘಪರಿವಾರ ಮತ್ತು ಅದರ ಸೂತ್ರಧಾರರನ್ನು ಕೆರಳಿಸಿದೆ” ಎಂದಿದ್ದಾರೆ.

ಶನಿವಾರ (ಮಾ.29) ಸಂಜೆ ತಿರುವನಂತಪುರಂನಲ್ಲಿ ಪಿಣರಾಯಿ ವಿಜಯನ್ ಕುಟುಂಬ ಸಮೇತರಾಗಿ ಎಂಪುರಾನ್ ಸಿನಿಮಾ ವೀಕ್ಷಿಸಿದ್ದಾರೆ.

ಮಲಯಾಳಂ ಚಲನಚಿತ್ರೋದ್ಯಮವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಚಿತ್ರ ಎಂದು ಎಂಪುರಾನ್ ಕುರಿತು ಶ್ಲಾಘಿಸಿದ ಪಿಣರಾಯಿ ವಿಜಯನ್, “ಸಂಘ ಪರಿವಾರ ಚಿತ್ರ, ಅದರ ನಟರು ಮತ್ತು ಸಿಬ್ಬಂದಿಯ ವಿರುದ್ಧ ವ್ಯಾಪಕ ದ್ವೇಷ ಹರಡುತ್ತಿರುವ ಹಿನ್ನೆಲೆ ಚಿತ್ರ ವೀಕ್ಷಿಸಿದೆ” ಎಂದಿದ್ದಾರೆ.

ಕೇವಲ ಕಾರ್ಯಕರ್ತರು ಮಾತ್ರವಲ್ಲ, ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರು ಕೂಡ ಚಿತ್ರದ ನಿರ್ಮಾಪಕರಿಗೆ ಸಾರ್ವಜನಿಕವಾಗಿ ಬೆದರಿಕೆ ಹಾಕುತ್ತಿದ್ದಾರೆ. ಚಿತ್ರವನ್ನು ಮರು ಸೆನ್ಸಾರ್ ಮಾಡಲು ಮತ್ತು ದೃಶ್ಯಗಳಿಗೆ ಕತ್ತರಿ ಹಾಕಲು ಒತ್ತಾಯಿಸಲಾಗುತ್ತಿದೆ ಎಂಬ ವರದಿಗಳು ಬಂದಿವೆ. ಸಂಘ ಪರಿವಾರ ಸೃಷ್ಟಿಸಿರುವ ಈ ಭಯದ ವಾತಾವರಣವು ಕಳವಳಕಾರಿ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ಕೋಮುವಾದಿಗಳು, ಕೋಮುವಾದದ ವಿರುದ್ಧ ನಿಲುವು ತೆಗೆದುಕೊಂಡು ಅದರ ಭಯಾನಕತೆಯನ್ನು ಚಿತ್ರಿಸಿದ್ದಾರೆ ಎಂಬ ಕಾರಣಕ್ಕಾಗಿ ಚಿತ್ರ ಮತ್ತು ಅದರ ಕಲಾವಿದರ ಮೇಲೆ ದಾಳಿ ಮಾಡಲಾಗುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಎಂದಿದ್ದಾರೆ.

“ಪ್ರಜಾಪ್ರಭುತ್ವ ಸಮಾಜದಲ್ಲಿ ನಾಗರಿಕರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸಬೇಕು. ಕಲಾಕೃತಿಗಳು ಮತ್ತು ಕಲಾವಿದರನ್ನು ನಾಶಮಾಡುವ ಮತ್ತು ನಿಷೇಧಿಸುವ ಹಿಂಸಾತ್ಮಕ ಕರೆಗಳು ಫ್ಯಾಸಿಸ್ಟ್ ಮನಸ್ಥಿತಿಯ ಹೊಸ ಅಭಿವ್ಯಕ್ತಿಗಳಾಗಿವೆ. ಇದು ಪ್ರಜಾಸತ್ತಾತ್ಮಕ ಹಕ್ಕುಗಳ ಉಲ್ಲಂಘನೆಯಾಗಿದೆ” ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ಚಲನಚಿತ್ರಗಳನ್ನು ನಿರ್ಮಿಸುವ, ವೀಕ್ಷಿಸುವ, ಆನಂದಿಸುವ ಮತ್ತು ಅವುಗಳನ್ನು ಮೌಲ್ಯಮಾಪನ ಮಾಡುವ ಅಥವಾ ಅವುಗಳನ್ನು ಒಪ್ಪುವ ಅಥವಾ ಒಪ್ಪದಿರುವ ಹಕ್ಕುಗಳನ್ನು ಕಳೆದುಕೊಳ್ಳಬಾರದು ಎಂದು ಹೇಳಿದ ವಿಜಯನ್, ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ಮೌಲ್ಯಗಳಲ್ಲಿ ಬೇರೂರಿರುವ ದೇಶದ ಒಗ್ಗಟ್ಟಿನ ಧ್ವನಿಯನ್ನು ಇದಕ್ಕಾಗಿ ಎತ್ತಬೇಕು ಎಂದಿದ್ದಾರೆ.

ಪೃಥ್ವಿರಾಜ್ ನಿರ್ದೇಶನದ ಎಂಪುರಾನ್ ಚಿತ್ರ, ಪೃಥ್ವಿರಾಜ್-ಮೋಹನ್ ಲಾಲ್ ತಂಡ ಯೋಜಿಸಿರುವ ಲೂಸಿಫರ್ ಚಿತ್ರದ ಎರಡನೇ ಭಾಗವಾಗಿದ್ದು, ಬಲಪಂಥೀಯ ರಾಜಕೀಯದ ಟೀಕೆ ಮತ್ತು ಗುಜರಾತ್ ಗಲಭೆಯ ರಹಸ್ಯ ಉಲ್ಲೇಖದಿಂದಾಗಿ ಬಿಸಿ ಚರ್ಚೆಯ ವಿಷಯವಾಗಿದೆ.

ಚಿತ್ರ ಬಿಡುಗಡೆಯಾದ ಗುರುವಾರ, ಸಂಘ ಪರಿವಾರವು ಸಾಮಾಜಿಕ ಮಾಧ್ಯಮಗಳಲ್ಲಿ ಚಿತ್ರದ ವಿರುದ್ಧ ತೀವ್ರ ಟೀಕೆಗಳನ್ನು ವ್ಯಕ್ತಪಡಿಸಿತ್ತು. ಆದರೆ, ಕಾಂಗ್ರೆಸ್ ಮತ್ತು ಎಡಪಂಥೀಯ ತಂಡಗಳು ಬಲಪಂಥೀಯ ರಾಜಕೀಯವನ್ನು ‘ವಿಲನ್‌’ ರೂಪದಲ್ಲಿ ಚಿತ್ರಿಸಿದ್ದಕ್ಕಾಗಿ ಚಿತ್ರವನ್ನು ಶ್ಲಾಘಿಸಿದೆ.

ಗುರುವಾರ ವಿಶ್ವಾದ್ಯಂತ ಬಿಡುಗಡೆಯಾದ ಎಲ್‌2: ಎಂಪುರಾನ್, ಮೊದಲ ದಿನ ಕೇರಳವೊಂದರಲ್ಲೇ 746 ಪರದೆಗಳಲ್ಲಿ 4,500 ಪ್ರದರ್ಶನಗಳನ್ನು ಕಂಡಿದೆ ಎಂದು ವರದಿಯಾಗಿದೆ.

ಬಲಪಂಥೀಯರ ಕೆಂಗಣ್ಣಿಗೆ ಗುರಿಯಾದ ‘ಎಲ್‌2 : ಎಂಪುರಾನ್‌ ಚಿತ್ರ’; ಹಲವು ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...