Homeಮುಖಪುಟ'ಎಂಪುರಾನ್' ವಿರುದ್ಧ ಕೋರ್ಟ್ ಮಟ್ಟಿಲೇರಿದ್ದ ಬಿಜೆಪಿ ನಾಯಕ ಪಕ್ಷದಿಂದ ಅಮಾನತು!

‘ಎಂಪುರಾನ್’ ವಿರುದ್ಧ ಕೋರ್ಟ್ ಮಟ್ಟಿಲೇರಿದ್ದ ಬಿಜೆಪಿ ನಾಯಕ ಪಕ್ಷದಿಂದ ಅಮಾನತು!

- Advertisement -
- Advertisement -

ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ ಲಾಲ್ ನಟಿಸಿರುವ ‘L2:ಎಂಪುರಾನ್’ ಚಿತ್ರವನ್ನು ನಿಷೇಧಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ಬಿಜೆಪಿಯ ತ್ರಿಶೂರ್ ಜಿಲ್ಲಾ ಸಮಿತಿಯ ಮಾಜಿ ಸದಸ್ಯ ವಿಜೀಶ್ ವೆಟ್ಟತ್ ಅವರನ್ನು ಪಕ್ಷವೂ ತನ್ನ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ತಾನು ಈಗಲೂ ಪಕ್ಷದ ಜಿಲ್ಲಾ ಸಮಿತಿ ಸದಸ್ಯ ಎಂದು ಪ್ರತಿಪಾದಿಸಿ ವಿಜೀಶ್ ಅವರು ಈ ಅರ್ಜಿಯನ್ನು ಸಲ್ಲಿಸಿದ್ದರು. ಎಂಪುರಾನ್ ವಿರುದ್ಧ ಕೋರ್ಟ್

ಆದಾಗ್ಯೂ, ನ್ಯಾಯಾಲಯದ ಮೆಟ್ಟಿಲೇರಿರುವ ತನ್ನ ನಿರ್ಧಾರ ವೈಯಕ್ತಿಕ ಎಂದು ವಿಜೀಶ್ ಸ್ಪಷ್ಟಪಡಿಸಿದ್ದು, ಪಕ್ಷ ತನ್ನ ವಿರುದ್ಧ ತೆಗೆದುಕೊಂಡ ನಿರ್ಧಾರವನ್ನು ಒಪ್ಪಿಕೊಂಡಿದ್ದಾರೆ. ಜೊತೆಗೆ ಚಿತ್ರದ ವಿರುದ್ಧ ಕಾನೂನು ಕ್ರಮಗಳನ್ನು ಮುಂದುವರಿಸುವುದಾಗಿಯೂ ಅವರು ದೃಢಪಡಿಸಿದ್ದಾರೆ. ಎಂಪುರಾನ್ ವಿರುದ್ಧ ಕೋರ್ಟ್

ಚಿತ್ರವು ಕೋಮು ಧ್ರುವೀಕರಣದ ಮೂಲಕ ಆರ್ಥಿಕ ಲಾಭವನ್ನು ಗಳಿಸುವ ಗುರಿಯನ್ನು ಹೊಂದಿದೆ ಎಂದು ವಿಜೀಶ್ ಅವರು ದೂರಿಕೊಂಡಿದ್ದಾರೆ. ಕೋಮು ಧ್ರುವೀಕರಣದ ಕಾರಣಕ್ಕೆ ತಳಮಟ್ಟದಲ್ಲಿ ಕೆಲಸ ಮಾಡುವ ತನ್ನಂತಹ ವ್ಯಕ್ತಿಗಳು ಈ ಚಿತ್ರಕ್ಕೆ ಪ್ರತಿಕ್ರಿಯಿಸುವಂತೆ ಮಾಡಿದೆ ಎಂದು ಅವರು ಸಮರ್ಥಿಸಿಕೊಂಡಿದ್ದು, ಪಕ್ಷದ ಶಿಸ್ತು ಕ್ರಮದ ಹೊರತಾಗಿಯೂ, ತಾನು ಪಕ್ಷದ ನಿಷ್ಠೆ ಹೊಂದಿದ್ದೇನೆ ಎಂದು ಹೇಳಿದ್ದಾರೆ.

ಈ ಮಧ್ಯೆ, ಬಿಜೆಪಿ ತ್ರಿಶೂರ್ ಜಿಲ್ಲಾಧ್ಯಕ್ಷ ಜಸ್ಟಿನ್ ಜಾಕೋಬ್ ಅವರು ಪ್ರತಿಕ್ರಿಯಿಸಿ, ವಿಜೀಶ್ ಅವರು ಜಿಲ್ಲಾ ಸಮಿತಿ ಸದಸ್ಯರಂತೆ ನಟಿಸಿ ದೂರು ದಾಖಲಿಸಿದ್ದಾರೆ ಎಂದು ವಿವರಿಸಿದ್ದಾರೆ. ಹಾಗಾಗಿ ಪಕ್ಷವು ಅವರ ವಿರುದ್ಧ ಕ್ರಮ ಕೈಗೊಂಡಿದೆ ಎಂದು ಅವರು ತಿಳಿಸಿದ್ದಾರೆ. ಪಕ್ಷವು ತನ್ನ ನೀತಿಗಳಿಗೆ ವಿರುದ್ಧವಾಗಿ ವರ್ತಿಸುವ ಯಾರ ವಿರುದ್ಧವೂ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಮತ್ತು ಈ ವಿಷಯವನ್ನು ಮತ್ತಷ್ಟು ಪರಿಶೀಲಿಸಲಾಗುವುದು ಎಂದು ಅವರು ಒತ್ತಿ ಹೇಳಿದ್ದಾರೆ.

ಈ ನಡುವೆ ಮಂಗಳವಾರ ಕೇರಳ ಹೈಕೋರ್ಟ್ ಚಿತ್ರದ ಪ್ರದರ್ಶನಕ್ಕೆ ತಡೆ ನೀಡಲು ನಿರಾಕರಿಸಿದ್ದು, ಸ್ಥಳೀಯ ಬಿಜೆಪಿ ನಾಯಕ ಸಲ್ಲಿಸಿದ ಈ ಅರ್ಜಿಯು ಪ್ರಚಾರ ಆಧಾರಿತ ಕ್ರಮವಾಗಿದೆ ಎಂದು ಹೇಳಿದೆ. ನ್ಯಾಯಮೂರ್ತಿ ಸಿ.ಎಸ್. ಡಯಾಸ್ ಅವರು ಅರ್ಜಿದಾರರ ಪ್ರಾಮಾಣಿಕತೆಯ ಬಗ್ಗೆ ಅನುಮಾನಗಳನ್ನು ವ್ಯಕ್ತಪಡಿಸಿದ್ದು, ಪ್ರಕರಣವನ್ನು ಆದ್ಯತೆಯ ಮೇಲೆ ಪಟ್ಟಿ ಮಾಡಲು ನಿರಾಕರಿಸಿದ್ದಾರೆ.

“ನೀವು ಈ ಎಂಪೂರಾನ್ ಚಿತ್ರವನ್ನು ನೋಡಿದ್ದೀರಾ? ನಿಮ್ಮ ಆಕ್ಷೇಪಣೆ ಏನು? ಅದನ್ನು ಸೆನ್ಸಾರ್ ಮಂಡಳಿ ಪ್ರಮಾಣೀಕರಿಸಿದೆಯೇ?… ನಿಮ್ಮ ಪ್ರಾಮಾಣಿಕತೆಯ ಬಗ್ಗೆ ನನಗೆ ಅನುಮಾನವಿದೆ. ಈ ಚಲನಚಿತ್ರದಿಂದಾಗಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಕುರಿತು ಒಂದು ದೂರನ್ನು ನನಗೆ ತೋರಿಸಿ. ಪೊಲೀಸರು ದಾಖಲಿಸಿದ ಎಫ್‌ಐಆರ್ ಅನ್ನು ನನಗೆ ತೋರಿಸಿ. ಇವೆಲ್ಲವೂ ಪ್ರಚಾರ ಆಧಾರಿತ ಅರ್ಜಿಗಳಲ್ಲದೆ ಬೇರೇನೂ ಅಲ್ಲ” ಎಂದು ನ್ಯಾಯಾಲಯ ಹೇಳಿರುವುದಾಗಿ ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಎಂಪುರಾನ್‌’ ಪ್ರದರ್ಶನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ; ಬಿಜೆಪಿಗೆ ಮುಖಭಂಗ

‘ಎಂಪುರಾನ್‌’ ಪ್ರದರ್ಶನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ; ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...