Homeಮುಖಪುಟ'ಎಂಪುರಾನ್' ವಿರುದ್ಧ ಕೋರ್ಟ್ ಮಟ್ಟಿಲೇರಿದ್ದ ಬಿಜೆಪಿ ನಾಯಕ ಪಕ್ಷದಿಂದ ಅಮಾನತು!

‘ಎಂಪುರಾನ್’ ವಿರುದ್ಧ ಕೋರ್ಟ್ ಮಟ್ಟಿಲೇರಿದ್ದ ಬಿಜೆಪಿ ನಾಯಕ ಪಕ್ಷದಿಂದ ಅಮಾನತು!

- Advertisement -
- Advertisement -

ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ ಲಾಲ್ ನಟಿಸಿರುವ ‘L2:ಎಂಪುರಾನ್’ ಚಿತ್ರವನ್ನು ನಿಷೇಧಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ಬಿಜೆಪಿಯ ತ್ರಿಶೂರ್ ಜಿಲ್ಲಾ ಸಮಿತಿಯ ಮಾಜಿ ಸದಸ್ಯ ವಿಜೀಶ್ ವೆಟ್ಟತ್ ಅವರನ್ನು ಪಕ್ಷವೂ ತನ್ನ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ತಾನು ಈಗಲೂ ಪಕ್ಷದ ಜಿಲ್ಲಾ ಸಮಿತಿ ಸದಸ್ಯ ಎಂದು ಪ್ರತಿಪಾದಿಸಿ ವಿಜೀಶ್ ಅವರು ಈ ಅರ್ಜಿಯನ್ನು ಸಲ್ಲಿಸಿದ್ದರು. ಎಂಪುರಾನ್ ವಿರುದ್ಧ ಕೋರ್ಟ್

ಆದಾಗ್ಯೂ, ನ್ಯಾಯಾಲಯದ ಮೆಟ್ಟಿಲೇರಿರುವ ತನ್ನ ನಿರ್ಧಾರ ವೈಯಕ್ತಿಕ ಎಂದು ವಿಜೀಶ್ ಸ್ಪಷ್ಟಪಡಿಸಿದ್ದು, ಪಕ್ಷ ತನ್ನ ವಿರುದ್ಧ ತೆಗೆದುಕೊಂಡ ನಿರ್ಧಾರವನ್ನು ಒಪ್ಪಿಕೊಂಡಿದ್ದಾರೆ. ಜೊತೆಗೆ ಚಿತ್ರದ ವಿರುದ್ಧ ಕಾನೂನು ಕ್ರಮಗಳನ್ನು ಮುಂದುವರಿಸುವುದಾಗಿಯೂ ಅವರು ದೃಢಪಡಿಸಿದ್ದಾರೆ. ಎಂಪುರಾನ್ ವಿರುದ್ಧ ಕೋರ್ಟ್

ಚಿತ್ರವು ಕೋಮು ಧ್ರುವೀಕರಣದ ಮೂಲಕ ಆರ್ಥಿಕ ಲಾಭವನ್ನು ಗಳಿಸುವ ಗುರಿಯನ್ನು ಹೊಂದಿದೆ ಎಂದು ವಿಜೀಶ್ ಅವರು ದೂರಿಕೊಂಡಿದ್ದಾರೆ. ಕೋಮು ಧ್ರುವೀಕರಣದ ಕಾರಣಕ್ಕೆ ತಳಮಟ್ಟದಲ್ಲಿ ಕೆಲಸ ಮಾಡುವ ತನ್ನಂತಹ ವ್ಯಕ್ತಿಗಳು ಈ ಚಿತ್ರಕ್ಕೆ ಪ್ರತಿಕ್ರಿಯಿಸುವಂತೆ ಮಾಡಿದೆ ಎಂದು ಅವರು ಸಮರ್ಥಿಸಿಕೊಂಡಿದ್ದು, ಪಕ್ಷದ ಶಿಸ್ತು ಕ್ರಮದ ಹೊರತಾಗಿಯೂ, ತಾನು ಪಕ್ಷದ ನಿಷ್ಠೆ ಹೊಂದಿದ್ದೇನೆ ಎಂದು ಹೇಳಿದ್ದಾರೆ.

ಈ ಮಧ್ಯೆ, ಬಿಜೆಪಿ ತ್ರಿಶೂರ್ ಜಿಲ್ಲಾಧ್ಯಕ್ಷ ಜಸ್ಟಿನ್ ಜಾಕೋಬ್ ಅವರು ಪ್ರತಿಕ್ರಿಯಿಸಿ, ವಿಜೀಶ್ ಅವರು ಜಿಲ್ಲಾ ಸಮಿತಿ ಸದಸ್ಯರಂತೆ ನಟಿಸಿ ದೂರು ದಾಖಲಿಸಿದ್ದಾರೆ ಎಂದು ವಿವರಿಸಿದ್ದಾರೆ. ಹಾಗಾಗಿ ಪಕ್ಷವು ಅವರ ವಿರುದ್ಧ ಕ್ರಮ ಕೈಗೊಂಡಿದೆ ಎಂದು ಅವರು ತಿಳಿಸಿದ್ದಾರೆ. ಪಕ್ಷವು ತನ್ನ ನೀತಿಗಳಿಗೆ ವಿರುದ್ಧವಾಗಿ ವರ್ತಿಸುವ ಯಾರ ವಿರುದ್ಧವೂ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಮತ್ತು ಈ ವಿಷಯವನ್ನು ಮತ್ತಷ್ಟು ಪರಿಶೀಲಿಸಲಾಗುವುದು ಎಂದು ಅವರು ಒತ್ತಿ ಹೇಳಿದ್ದಾರೆ.

ಈ ನಡುವೆ ಮಂಗಳವಾರ ಕೇರಳ ಹೈಕೋರ್ಟ್ ಚಿತ್ರದ ಪ್ರದರ್ಶನಕ್ಕೆ ತಡೆ ನೀಡಲು ನಿರಾಕರಿಸಿದ್ದು, ಸ್ಥಳೀಯ ಬಿಜೆಪಿ ನಾಯಕ ಸಲ್ಲಿಸಿದ ಈ ಅರ್ಜಿಯು ಪ್ರಚಾರ ಆಧಾರಿತ ಕ್ರಮವಾಗಿದೆ ಎಂದು ಹೇಳಿದೆ. ನ್ಯಾಯಮೂರ್ತಿ ಸಿ.ಎಸ್. ಡಯಾಸ್ ಅವರು ಅರ್ಜಿದಾರರ ಪ್ರಾಮಾಣಿಕತೆಯ ಬಗ್ಗೆ ಅನುಮಾನಗಳನ್ನು ವ್ಯಕ್ತಪಡಿಸಿದ್ದು, ಪ್ರಕರಣವನ್ನು ಆದ್ಯತೆಯ ಮೇಲೆ ಪಟ್ಟಿ ಮಾಡಲು ನಿರಾಕರಿಸಿದ್ದಾರೆ.

“ನೀವು ಈ ಎಂಪೂರಾನ್ ಚಿತ್ರವನ್ನು ನೋಡಿದ್ದೀರಾ? ನಿಮ್ಮ ಆಕ್ಷೇಪಣೆ ಏನು? ಅದನ್ನು ಸೆನ್ಸಾರ್ ಮಂಡಳಿ ಪ್ರಮಾಣೀಕರಿಸಿದೆಯೇ?… ನಿಮ್ಮ ಪ್ರಾಮಾಣಿಕತೆಯ ಬಗ್ಗೆ ನನಗೆ ಅನುಮಾನವಿದೆ. ಈ ಚಲನಚಿತ್ರದಿಂದಾಗಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಕುರಿತು ಒಂದು ದೂರನ್ನು ನನಗೆ ತೋರಿಸಿ. ಪೊಲೀಸರು ದಾಖಲಿಸಿದ ಎಫ್‌ಐಆರ್ ಅನ್ನು ನನಗೆ ತೋರಿಸಿ. ಇವೆಲ್ಲವೂ ಪ್ರಚಾರ ಆಧಾರಿತ ಅರ್ಜಿಗಳಲ್ಲದೆ ಬೇರೇನೂ ಅಲ್ಲ” ಎಂದು ನ್ಯಾಯಾಲಯ ಹೇಳಿರುವುದಾಗಿ ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಎಂಪುರಾನ್‌’ ಪ್ರದರ್ಶನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ; ಬಿಜೆಪಿಗೆ ಮುಖಭಂಗ

‘ಎಂಪುರಾನ್‌’ ಪ್ರದರ್ಶನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ; ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...