Homeಕರೋನಾ ತಲ್ಲಣಆಮ್ಲಜನಕ ಮತ್ತು ವ್ಯಾಕ್ಸಿನೇಷನ್‌ ಸಂಬಂಧಿಸಿ ರಾಷ್ಟ್ರೀಯ ನೀತಿ ಜಾರಿಗೆ ತನ್ನಿ: ಕೇಂದ್ರಕ್ಕೆ ಸುಪ್ರೀಂ

ಆಮ್ಲಜನಕ ಮತ್ತು ವ್ಯಾಕ್ಸಿನೇಷನ್‌ ಸಂಬಂಧಿಸಿ ರಾಷ್ಟ್ರೀಯ ನೀತಿ ಜಾರಿಗೆ ತನ್ನಿ: ಕೇಂದ್ರಕ್ಕೆ ಸುಪ್ರೀಂ

- Advertisement -
- Advertisement -

ದೇಶದಲ್ಲಿ ಚಾಲ್ತಿಯಲ್ಲಿರುವ ಕೊರೊನಾ ಸಾಂಕ್ರಾಮಿಕ ಪರಿಸ್ಥಿತಿಯ ಬಗ್ಗೆ ಅರಿವು ಮೂಡಿಸಿ, ಆಮ್ಲಜನಕ, ಚಿಕಿತ್ಸೆಗೆ ಬೇಕಾದ ಅಗತ್ಯ ಔಷಧಗಳು ಮತ್ತು ವ್ಯಾಕ್ಸಿನೇಷನ್ ವಿಧಾನಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ರಾಷ್ಟ್ರೀಯ ನೀತಿಯನ್ನು ಜಾರಿಗೆ ತರಲು ಸುಪ್ರೀಂ ಕೋರ್ಟ್ ಗುರುವಾರ ಕೇಂದ್ರವನ್ನು ಕೇಳಿದೆ.

ಕೊರೊನಾ ಲಾಕ್‌ಡೌನ್‌ ಘೋಷಿಸಲು ಹೈಕೋರ್ಟ್‌ಗಳ ನ್ಯಾಯಾಂಗ ಅಧಿಕಾರವನ್ನು ಪರಿಶೀಲಿಸುವುದಾಗಿ ವಿಚಾರಣೆಯ ವೇಳೆ ನ್ಯಾಯಾಲಯ ಹೇಳಿದೆ. ಇದಕ್ಕೂ ಮುನ್ನ ಮಂಗಳವಾರದಂದು ಸುಪ್ರೀಂಕೋರ್ಟ್, ಉತ್ತರ ಪ್ರದೇಶದ ಐದು ಪ್ರಮುಖ ನಗರಗಳಲ್ಲಿ ಸಂಪೂರ್ಣ ಲಾಕ್‌ಡೌನ್ / ಕರ್ಫ್ಯೂ ವಿಧಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ತಡೆಹಿಡಿದಿತ್ತು.

ಇದನ್ನೂ ಓದಿ: ಸರ್ಕಾರದ ಪ್ರಚಾರದ ಹುಚ್ಚು ನಾಚಿಕೆಗೇಡಿನದ್ದು: ಕುಮಾರಸ್ವಾಮಿ ಆಕ್ರೋಶ

ನ್ಯಾಯಮೂರ್ತಿಗಳಾದ ಎಲ್.ಎನ್. ರಾವ್ ಮತ್ತು ಎಸ್.ಆರ್. ಭಟ್ ಅವರನ್ನೂ ಒಳಗೊಂಡ, ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ನೇತೃತ್ವದ ನ್ಯಾಯಪೀಠವು ಕೇಂದ್ರಕ್ಕೆ ನೋಟಿಸ್ ಜಾರಿಗೊಳಿಸಿದ್ದು, ಶುಕ್ರವಾರ ಈ ವಿಷಯವನ್ನು ಆಲಿಸುವುದಾಗಿ ತಿಳಿಸಿದೆ.

ದೇಶಾದ್ಯಂತ ಆರು ಹೈಕೋರ್ಟ್‌ಗಳು ಆಸ್ಪತ್ರೆಗಳಲ್ಲಿನ ಆಮ್ಲಜನಕ, ಹಾಸಿಗೆಗಳು ಮತ್ತು ಆಂಟಿ-ವೈರಲ್ ಔಷಧ ರೆಮ್‌ಡೆಸಿವಿರ್ ಬಿಕ್ಕಟ್ಟನ್ನು ಒಳಗೊಂಡ ಸಂಬಂಧಿತ ಅರ್ಜಿಗಳನ್ನು ಆಲಿಸುತ್ತಿರುವ ಸಮಯದಲ್ಲಿ ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ಕೈಗೆತ್ತಿಕೊಂಡಿದೆ.

ಕೊರೊನಾ ನಿರ್ವಹಣೆಯ ಸ್ವಯಂ ಪ್ರೇರಿತ ಪ್ರಕರಣದಲ್ಲಿ ಸಹಾಯ ಮಾಡಲು ಇದು ಹಿರಿಯ ವಕೀಲ ಹರೀಶ್ ಸಾಲ್ವೆ ಅವರನ್ನು ಅಮಿಕಸ್ ಕ್ಯೂರಿಯಾಗಿ ಸುಪ್ರೀಂಕೋರ್ಟ್‌ ನೇಮಿಸಿದೆ. ಒಂದೇ ದಿನದಲ್ಲಿ ಅತೀ ಹೆಚ್ಚು ಸೋಂಕು ಪತ್ತೆಯಾಗಿ ಭಾರತ ಜಾಗತಿಕ ದಾಖಲೆಯನ್ನು ನಿರ್ಮಿಸಿದ ದಿನ ನ್ಯಾಯಾಲಯವು ಈ ವಿಚಾರಣೆಗಳನ್ನು ಮಾಡುತ್ತಿದೆ.

ದೇಶದಲ್ಲಿ ಒಂದೇ ದಿನಕ್ಕೆ 3 ಲಕ್ಷಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿದ್ದು, ಕೊರೊನಾ ಪ್ರಕರಣಗಳಲ್ಲಿ ವಿಶ್ವದ ಅತಿದೊಡ್ಡ ಉಲ್ಬಣವಾಗಿ ಭಾರತ ದಾಖಲೆ ಮಾಡಿದೆ.

ಇದನ್ನೂ ಓದಿ: ಭಿಕ್ಷೆ ಬೇಡಿ, ಸಾಲ ತನ್ನಿ ಇಲ್ಲವೇ ಕದ್ದುಕೊಂಡು ಬನ್ನಿ: ಆಮ್ಲಜನಕ ವಿಷಯವಾಗಿ ಕೇಂದ್ರದ ವಿರುದ್ಧ ಕೋರ್ಟ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...