HomeUncategorizedಮಾನವೀಯ ಮೌಲ್ಯಗಳನ್ನ ಸಂವಿಧಾನದಾಗ ಬರೆಯದೇ ಇದ್ದರೂ ಪಾಲಿಸಬೇಕು: ಎನ್‌ಕೌಂಟರ್ ಬೈ ಡೇಟಾಮ್ಯಾಟಿಕ್ಸ್

ಮಾನವೀಯ ಮೌಲ್ಯಗಳನ್ನ ಸಂವಿಧಾನದಾಗ ಬರೆಯದೇ ಇದ್ದರೂ ಪಾಲಿಸಬೇಕು: ಎನ್‌ಕೌಂಟರ್ ಬೈ ಡೇಟಾಮ್ಯಾಟಿಕ್ಸ್

- Advertisement -
- Advertisement -

’ಎನ್ನನ್ನೇ ಕೌಂಟರ್ ಮಾಡತೀಯಾ, ನೀನು ಕೌಂಟ್ ಆಗದಂಗ ಮಾಡತೀನಿ’

ಸೈಬರಾಬಾದು ಪೊಲೀಸರು ಪಶುವೈದ್ಯರ ಮೇಲೆ ನಡೆಸಿದ ಅತ್ಯಾಚಾರ, ಬರ್ಬರ ಕೊಲೆ ಹಾಗೂ ದಹನದ ಆರೋಪಿಗಳನ್ನು ನೇರ ಮುಖಾಮುಖಿಯಲ್ಲಿ ಕೊಂದು ಹಾಕಿದ್ದು ಅದಕ್ಕೆ ಅವರಿಗೆ ಷಹಬ್ಬಾಸುಗೀರಿ, ಆಫ್ ಸೀಸನ್ ರಕ್ಷಾ ಬಂಧನ ಹಾಗೂ ಪುಷ್ಪವೃಷ್ಟಿ ಎಲ್ಲಾ ಜೋರು ನಡದದ. ಹೈದರಾಬಾದಿಗೆ ಹೋಗಲಾರದವರು ಅಲ್ಲಿನ ಪೊಲೀಸರಿಗೆ ವಾಟ್ಸಪ್ಪಿನಿಂದನ ಕಾಲು ಬೀಳಲಿಕ್ಕೆ ಹತ್ಯಾರ.

“ಆ ಘಟನಾ ಭಾಳ ಕ್ರೂರ ಇತ್ತು. ಆ ಅಪರಾಧಿಗಳು ಕ್ಷಮೆಗೆ ಅರ್ಹರಿರಲಿಲ್ಲ. ಕೋರ್ಟು, ಕಚೇರಿ ಅಂತ ಯಾವಾ ಕಾಯತಾನ? ಅದಕ್ಕೆ ಸಾಕ್ಷಿ ಹುಡುಕುವುದು ಕಷ್ಟ ಇತ್ತು. ಅಪರಾಧಕ್ಕ ಒಳಗಾದವಳು ಜೀವಂತ ಉಳಿಯಲಿಲ್ಲ. ಭಾರತೀಯ ಸಾಕ್ಷಿ ಕಾನೂನು ಪ್ರತ್ಯಕ್ಷ ಸಾಕ್ಷಿಗಳನ್ನಷ್ಟ ನಂಬತದ. ಅದಕ್ಕ ಹಂಗ ಮಾಡಬೇಕಾತು” ಅಂತ ಹೇಳೋರು ಇದ್ದಾರ.

“ನಮ್ ದೇಶದಾಗ ಇರೋವೆಲ್ಲಾ ಆ ಬ್ರಿಟಿಷರ ಕಾಲದ ಅಪರಾಧಸಂಹಿತೆ, ದಂಡ ಪ್ರಕ್ರಿಯಾ ಸಂಹಿತೆ, ಸಾಕ್ಷಿ ಕಾಯಿದೆ. ಅವುಗಳಿಂದ ಎಲ್ಲಾ ನ್ಯಾಯ ಸಿಗೋದಿಲ್ಲ” ಅಂತ ಅವಲತ್ತುಗೊಳ್ಳೋರು ಅವನ್ನ ಸರ್ವಮಾನ್ಯ ಸಂಸದರು ಬದಲಾಯಿಸಬೇಕು ಅಂತ ಯಾಕ ಕೇಳಂಗಿಲ್ಲಾ? ಎಪ್ಪತ್ತು ವರ್ಷದ ನಾಗರಿಕತೆ ಕಾಯಿದೆ, ಕಾಶ್ಮೀರದ ಅಧಿನಿಯಮಗಳು, ಐವತ್ತು ವರ್ಷದ ಯೋಜನಾ ಆಯೋಗ, ಸಂಖ್ಯಾಶಾಸ್ತ್ರದ ಆಯೋಗ ಮುಂತಾದವನ್ನೆಲ್ಲಾ ನಮ್ಮ ಘನ ಸರಕಾರ ಒರಿಸಿ ಒಗೀತದ ಅಂದರ ಹೊತ್ತಿ ಉರಿತಾ ಇರೋ ಸಮಸ್ಯೆಗಳಿಗೆ ಪರಿಹಾರ ಯಾಕ ಕಂಡುಕೋಬಾರದು?

“ನಮ್ಮಲ್ಲೆ ನ್ಯಾಯಾಧೀಶರ ಸಂಖ್ಯೆ ಕಮ್ಮಿ, ಪೊಲೀಸರ ಸಂಖ್ಯೆ ಕಮ್ಮಿ. ಪೊಲೀಸರಾಗ, ವಕೀಲರು ಮತ್ತ ನ್ಯಾಯಾಧೀಶರಾಗ ಹೆಣ್ಣುಮಕ್ಕಳ ಸಂಖ್ಯೆ ಇನ್ನೂ ಕಮ್ಮಿ” ಅಂದರ ಹೆಚಿಗೆ ಸಿಬ್ಬಂದಿ ನೇಮಕ ಮಾಡರಿ, ಯಾರು ಬ್ಯಾಡಂದಾರು? “ಬೆಳೆಯೋ ಜನಸಂಖ್ಯೆಗೆ ತಕ್ಕಂತೆ ಪೊಲೀಸ್ ಠಾಣಾಗಳಿಲ್ಲ, ಅವರಿಗೆ ಆಧುನಿಕ ತಂತ್ರಜ್ಞಾನ ಇಲ್ಲ, ಅಪರಾಧ ಪ್ರಯೋಗಾಲಯಗಳು ಇಲ್ಲ, ನ್ಯಾಯಾಲಯಗಳು ಕಮ್ಮಿ”, ಅಂದರ ಅವನ್ನು ಸುರು ಮಾಡರಿ.

ಒಂದು ಸ್ವಲ್ಪ ಮೂರ್ತಿ ಕೂಡಸೋದು, ಭರ್ರ್ ಅಂತ ದೇಶ-ದೇಶ ತಿರಗ್ಯಾಡೋದು, ಸಭೆ ಸಮಾರಂಭ ಮಾಡೋದು ಕಡಮಿ ಮಾಡರಿ. ಅತಿ ಶ್ರೀಮಂತರಿಗೆ ತೆರಿಗೆ ವಿನಾಯಿತಿ ಕೊಡೋದು ನಿಲ್ಲಸರಿ, ಯಾರ ಬ್ಯಾಡಂದಾರು? ಆದರ ಈ ಥರಾ ಉಲ್ಟಾ ಮಾತಾಡೋ ವಿದ್ರೋಹಿ ಚಿಂತಕರು ಈಗ ಕಮ್ಮಿ ಆಗ್ಯಾರ.

ಇರಲಿ ಈ ತರಹದ ನಕಲಿ ಮುಖಾಮುಖಿಗಳ ಬಗ್ಗೆ ನಮ್ಮ ಸರ್ವೋಚ್ಚ ನ್ಯಾಯಾಲಯ ಏನು ಹೇಳೇದ ಅಂತ ನೋಡೋಣು.

ಪ್ರಜೆಗಳ ಸಾಮಾಜಿಕ ಹಕ್ಕುಗಳ ಸಂಘಟನೆ ಪ್ರಕರಣದಾಗ ನ್ಯಾಯಮೂರ್ತಿ ನಾರಿಮನ್ ಹಾಗೂ ಲೋಧಾ ಅವರು “ನಮ್ಮ ಸಂವಿಧಾನ ಕೆಲವು ಹಕ್ಕುಗಳನ್ನು ಪ್ರಜೆಗಳಿಗೆ ಕೊಡಲಾಗಿದೆ. ಕೆಲವೇ ಕೆಲವು ಹಕ್ಕುಗಳನ್ನು ಎಲ್ಲರಿಗೂ ಕೊಟ್ಟಿದೆ. ಅದರಲ್ಲಿ ಜೀವ, ಆತ್ಮಗೌರವ ಹಾಗೂ ಸ್ವಾತಂತ್ರ್ಯದ ಹಕ್ಕು ಮುಖ್ಯ. ಈ ಹಕ್ಕುಗಳನ್ನು ಯಾರೂ ಕಿತ್ತುಕೊಳ್ಳಲು ಸಾಧ್ಯ ಇಲ್ಲ. ಸರಕಾರವೂ ಕಿತ್ತುಕೊಳ್ಳಲಿಕ್ಕೆ ಬರೋದಿಲ್ಲ. ದೇಶದ್ರೋಹಿಗಳು, ಶತ್ರುದೇಶದವರು, ದೇಶದ ವಿರೋಧಿಗಳು ಅನ್ನಿಸಿಕೊಂಡವರನ್ನು ಸಹಿತ ನ್ಯಾಯಿಕ ಪ್ರಕ್ರಿಯೆಗೆ ಒಳಪಡಿಸಬೇಕು,” ಅಂತ ಹೇಳಿದರು.

ಅದರಲ್ಲಿ ಪ್ರಮುಖವಾದದ್ದು- ಸಂವಿಧಾನದ 21ನೇ ಕಲಮು. ಅದು ಹೀಗಿದೆ – “ಕಾನೂನುರೀತ್ಯಾ ಸಿದ್ಧಪಡಿಸಿದ ಪ್ರಕ್ರಿಯೆಯ ಹೊರತುಪಡಿಸಿ ಯಾವುದೇ ವ್ಯಕ್ತಿಯ ಪ್ರಾಣ ಹಾಗೂ ಸ್ವಾತಂತ್ರ್ಯದ ಹರಣ ಸಲ್ಲದು”. ಇದನ್ನು ಯಾರೂ ಮೀರಬಾರದು ಅಂತ ಅದರಾಗ ಅದ. ಅದು ತೆಲಂಗಾಣ ಪೊಲೀಸರಿಗೂ ಅನ್ವಯಸತದ ಅಂತ ಬ್ಯಾರೆ ಹೇಳಬೇಕಿಲ್ಲ.

ಓಂಪ್ರಕಾಶ ಪ್ರಕರಣ ಹಾಗೂ ಪ್ರಕಾಶ ಕದಂ ಪ್ರಕರಣದಾಗ ಕೋರ್ಟು ಸರಕಾರಕ್ಕೆ ಚಾಟಿ ಏಟು ನೀಡಿತು. ಕದಂ ಪ್ರಕರಣದಾಗ ನ್ಯಾಯಮೂರ್ತಿ ಮಾಕಾರ್ಂಡೇಯ ಕಟ್ಜು ಹಾಗೂ ಜಿ.ಎಸ್ ಶರ್ಮಾ ಅವರು ಬಂದೂಕು ಕುದುರೆ ಒತ್ತಿ ಮಜಾ ನೋಡುವ ಪೊಲೀಸರಿಗೆ ಗಲ್ಲು ಕಂಬ ಕಾದಿದೆ ಅಂತ ಹೇಳಿದರು. ಜಸ್ಪಾಲ್ ಸಿಂಗ್ ಪ್ರಕರಣದಾಗ ನ್ಯಾಯಾಧೀಶರಾದ ಮದನ ಲೋಕೂರ ಹಾಗೂ ಉದಯ ಲಲಿತ ಅವರು “ನ್ಯಾಯಿಕ ಪ್ರಕ್ರಿಯೆಯ ಭಾಗವಾಗಿರುವ ಪೊಲೀಸರೇ ಹೀಗೆ ಮಾಡಿದರೆ ಹೇಗೆ? ಅವರಿಗೆ ನ್ಯಾಯಾಲಯಗಳ ಮೇಲೆ ವಿಶ್ವಾಸ ಇಲ್ಲ ಅಂತ ಹೇಳಿ ಅವರೇ ಆರೋಪ ಮಾಡುವವರು, ತನಿಖೆ ಮಾಡುವವರು, ನ್ಯಾಯಾಧೀಶರು ಹಾಗೂ ಕುಣಿಕೆ ತೊಡಿಸುವವರು ಆದರೆ ಹೇಗೆ?. ಇದು ಅಕ್ಷಮ್ಯ. ನಾಗರಿಕ ಸಮಾಜದಲ್ಲಿ ಇಂತಹ ಹತ್ಯೆಗಳಿಗೆ ಸ್ಥಾನ ಇರಲಿಕ್ಕೆ ಸಾಧ್ಯವೇ ಇಲ್ಲ” ಅಂದರು.

ನ್ಯಾಯದಾನಾತೀತ ಕೊಲೆಗಳ ಬಲಿಪಶುಗಳ ಸಂಘ ಅಂತ ಒಂದದ. ಅವರು ವಿವಿಧ ರಾಜ್ಯಗಳ ಪೊಲೀಸರು ಮಾಡಿದ ಸುಮಾರು ಐದು ಸಾವಿರ ಇಂತಹ ಹತ್ಯೆಗಳ ಮಾಹಿತಿ ಜಮಾ ಮಾಡಿ ಸುಪ್ರೀಮ ಕೋರ್ಟಿಗೆ ಕಳಿಸಿದರು. ಆಗ ಅದು ಕೇಂದ್ರದ ಪ್ರತಿಕ್ರಿಯೆ ಕೋರಿತು. ಇನ್ನು ಮುಂದೆ ಇಂಥವುಗಳನ್ನು ತಡೆಯಲು ಕ್ರಮ ಕೈಕೊಳ್ಳುತ್ತೇವೆ ಅಂತ ಕೇಂದ್ರ ಕೋರ್ಟಿಗೆ ತಿಳಿಸಿತು. ಆದರ ಇದು ಇನ್ನೂ ಜಾರಿ ಆದಂಗಿಲ್ಲ.

ನಮ್ಮ ದೇಶದಾಗ ಸಂವಿಧಾನ ಅಂತ ಒಂದು ಅದ. ಅದು ಇರೋ ತನಕಾ ಅಂತೂ ನಾವು ಅದನ್ನ ಪಾಲಿಸಬೇಕು. ಇನ್ನೂ ಒಂದು ಹೆಜ್ಜೆ ಮುಂದ ಹೋಗಿ ಹೇಳಬೇಕಂದರ ಮಾನವೀಯ ಮೌಲ್ಯಗಳನ್ನ ಸಂವಿಧಾನದಾಗ ಬರೆಯದೇ ಇದ್ದರೂ ಪಾಲಿಸಬೇಕು.

ಇಂದಿರಾ, ನೆಹರೂ ಗಾಂಧಿ ವಿರುದ್ಧ ರಾಜನಾರಾಯಣ ಅನ್ನೋ ಪ್ರಕರಣದಾಗ ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿ ಏಚ್.ಆರ್ ಖನ್ನಾ ಅವರು ಇತರ ನ್ಯಾಯಾಧೀಶರಿಗಿಂತ ವಿಭಿನ್ನ ತೀರ್ಪು ನೀಡಿದರು. ಆ ಒಂಟಿ ದನಿ ಈಗ ಭಾರತೀಯ ನ್ಯಾಯಿಕ ಇತಿಹಾಸದಾಗ ದಾಖಲು ಆಗೇದ.

“ಸಮಾನತೆ, ಭ್ರಾತೃತ್ವ, ನ್ಯಾಯದಾನದ ಮೂಲಭೂತ ತತ್ವಗಳು ಹಾಗೂ ಪಾರದರ್ಶಕತೆ ಇವೆಲ್ಲ ನಾಗರಿಕ ಸಮಾಜದ ಲಕ್ಷಣಗಳು. ಇಂತಹ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು ಎನ್ನುವುದು ನಾಗರಿಕ ಸಮಾಜದ ಕರ್ತವ್ಯ. ಇವುಗಳನ್ನು ಪಾಲಿಸಬೇಕು ಎಂದು ನಮ್ಮ ಸಂವಿಧಾನದಲ್ಲಿ ಬರೆದಿದ್ದ ಮಾತ್ರಕ್ಕೆ ನಾವು ಅವುಗಳನ್ನು ಜಾರಿಮಾಡಬೇಕೆಂತಿಲ್ಲ. ಇವುಗಳನ್ನು ಪಾಲಿಸುವುದು ನಾಗರಿಕ ಸಮಾಜದ ಪವಿತ್ರ ಕರ್ತವ್ಯಗಳಲ್ಲಿ ಒಂದು. ಇದು ನಾವು ಮಾಡಲೇ ಬೇಕಾದ ಕೆಲಸ. ಇದಕ್ಕೆ ನಾವು ಸಬೂಬು ಹೇಳಬಾರದು” ಅಂತ.

ಇದು ನಮಗೆ ನೆನಪಿರಲಿ. “ಸಂವಿಧಾನವೇ ಪರಮ ಶ್ರೇಷ್ಠ, ಅದನ್ನು ಬಿಟ್ಟು ನಾವು ಆ ಕಡೆ ಈ ಕಡೆ ಮಿಸುಕಾಡಬಾರದು” ಅಂತ ಕೂಗುವವರು ಹಾಗೂ “ಸಂವಿಧಾನವೇನು ಮಹಾ? ಅದೊಂದು ಪುಸ್ತಕ ಅಷ್ಟೇ,  ಅದನ್ನು ನಾವು ಹೇಗೆ ಬೇಕಾದರೂ ಬದಲಾಯಿಸಬಹುದು. ಅದನ್ನು ಬದಲಾಯಿಸಲಿಕ್ಕೆಯೇ ನಾವು ಬಂದಿರುವುದು” ಅಂತ ಅನ್ನುವವರು, ಇಬ್ಬರೂ ಈ ನಿನ್ನೆಯ ನನ್ನಿಯನ್ನ ಮರಿಲಾರದಂಗ ಇರಲಿ.

ಕನ್ನಡದ ಪತ್ರಿಕೆ, ಠೀವಿ ಚಾನೆಲ್ಲುಗಳಲ್ಲಿ `ಎನಕೌಂಟರ್’ ಅನ್ನೋ ತಮಗ ಪ್ರಾಪರ್ ಚಾನಲ್ಲಿಂದ ದತ್ತವಾದ ಶಬ್ದ ಬಳಸಿದರು. ಅದರ ಬದಲೀ ಈ ಕೆಳಗಿನವು ಯಾವು ಆದರೂ ಉಪಯೋಗಿಸಬಹುದಿತ್ತು- ‘ಖೋಟಾ ಸೆಣಸಾಟ’, ’ಕಣ್ಕಟ್ಟಿನ ಕಾದಾಟ’, ‘ನಕಲಿ ಪ್ರತಿಘಾತ’, ’ಗಿಲೀಟಿನ ಗಲಾಟೆ’, ‘ಮೋಸದ ಮಾರಾಮಾರಿ’ ಇತ್ಯಾದಿ. ಅವಾಗ ಅದರ ಖರೇ ತಥ್ಯ ಹೊರಗ ಬರತಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...