Homeಮುಖಪುಟಅತ್ಯಾಚಾರಿಗಳನ್ನು ಎನ್‌ಕೌಂಟರ್ ಮಾಡಿ: ಬಂಗಾಳದಲ್ಲಿ ಆದಿತ್ಯನಾಥ್ ಆಡಳಿತ ಮಾದರಿಗೆ ಸುವೇಂದು ಅಧಿಕಾರಿ ಕರೆ

ಅತ್ಯಾಚಾರಿಗಳನ್ನು ಎನ್‌ಕೌಂಟರ್ ಮಾಡಿ: ಬಂಗಾಳದಲ್ಲಿ ಆದಿತ್ಯನಾಥ್ ಆಡಳಿತ ಮಾದರಿಗೆ ಸುವೇಂದು ಅಧಿಕಾರಿ ಕರೆ

- Advertisement -
- Advertisement -

ಅತ್ಯಾಚಾರಿಗಳನ್ನು “ಪೊಲೀಸ್ ಎನ್‌ಕೌಂಟರ್” ಮೂಲಕ ಶಿಕ್ಷಿಸಬೇಕು. ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಅಳವಡಿಸಿಕೊಂಡಿರುವ ಮಾದರಿಯನ್ನು ರಾಜ್ಯದಲ್ಲಿ ಜಾರಿಗೆ ತರಬೇಕು ಎಂದು ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಗುರುವಾರ ಹೇಳಿದ್ದಾರೆ.

ಮಾನ್ಸೂನ್ ಅಧಿವೇಶನದಲ್ಲಿ ಬಿಜೆಪಿ ಶಾಸಕರು ಸದನದಿಂದ ಹೊರನಡೆದ ನಂತರ ಸುವೇಂದು ಅಧಿಕಾರಿ ಈ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ ನಡೆದ ಸರಣಿ ಅತ್ಯಾರ ಪ್ರಕರಣಗಳನ್ನು ಉಲ್ಲೇಖಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಕೇವಲ ಎರಡು ದಿನಗಳಲ್ಲಿ ಮೂವರು ಮಹಿಳೆಯರ ಮೇಲೆ ಅತ್ಯಾಚಾರ ನಡೆದಿದೆ. ಇತ್ತೀಚೆಗೆ ಮತ್ತಿಗಾರದಲ್ಲಿ ಶಾಲಾ ಬಾಲಕಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಹಿಂದೆ ಕಲಿಯಾಗಂಜ್ ಮತ್ತು ಹಂಸಖಾಲಿಯಲ್ಲಿ ಇಂತಹ ಘಟನೆಗಳು ನಡೆದಿದ್ದವು. ಕಾನೂನು ಮತ್ತು ಸುವ್ಯವಸ್ಥೆ ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಯುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಸೋಮವಾರ ಸಿಲಿಗುರಿ ಜಿಲ್ಲೆಯಲ್ಲಿ 11ನೇ ತರಗತಿಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಮಾಡಲಾಗಿದೆ. ಘಟನೆ ನಡೆದ ಎರಡು ದಿನಗಳ ನಂತರ, ಶಂಕಿತ ಮೊಹಮ್ಮದ್ ಅಬ್ಬಾಸ್ ಅವರ ಮನೆಯನ್ನು ಗುಂಪೊಂದು ಧ್ವಂಸಗೊಳಿಸಿದ್ದು, ಅವರನ್ನು ಬಂಧಿಸಲಾಗಿದೆ” ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಘಟನೆ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಗುರುವಾರ 12 ಗಂಟೆಗಳ ಬಂದ್‌ಗೆ ಕರೆ ನೀಡಿತ್ತು. ”ದುಷ್ಕರ್ಮಿಗಳ ವಿರುದ್ಧ ಇನ್ನೂ ಪ್ರಕರಣ ದಾಖಲಿಸಿಕೊಂಡಿಲ್ಲ. ಬದಲಾಗಿ ಹಿಂದುತ್ವ ಸಂಘಟನೆಯ ಸದಸ್ಯರ ಮೇಲೆ ಲಾಠಿ ಚಾರ್ಜ್ ಮಾಡಿ ಬಂಧನ ಮಾಡಿರುವುದು ದಿಗಿಲು ಹುಟ್ಟಿಸಿದೆ” ಎಂದು ಅಧಿಕಾರಿ ಹೇಳಿದ್ದಾರೆ.

”ಈ ರಾಜ್ಯಕ್ಕೆ ಯೋಗಿ ಆದಿತ್ಯನಾಥ್ ಅವರಂತಹ ಕಟ್ಟುನಿಟ್ಟಾದ ಆಡಳಿತಗಾರರ ಅಗತ್ಯವಿದೆ. ಇಂತಹ ಅಪರಾಧಗಳನ್ನು ಮಾಡುವವರಿಗೆ ಬದುಕುವ ಹಕ್ಕಿಲ್ಲ. ಅಗತ್ಯವಿದ್ದರೆ ಅವರನ್ನು ಎನ್‌ಕೌಂಟರ್‌ನಲ್ಲಿ ಕೊಲ್ಲಬೇಕು” ಎಂದು ಸುವೇಂದು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅವರು ಅಧಿಕಾರಕ್ಕೆ ಬಂದ ನಂತರ ಕಾನೂನು ಉಲ್ಲಂಘಿಸಿದ ಮತ್ತು ಪೊಲೀಸರಿಂದ ಕಾನೂನುಬಾಹಿರ ಹತ್ಯೆಗಳ ಹೆಚ್ಚಾಗಿವೆ ಎನ್ನುವ ಆರೋಪವಿದೆ. ಹೆಚ್ಚಾಗಿ ಮುಸ್ಲಿಂ ಸಮುದಾಯದವರ ಮನೆಗಳನ್ನು ಅಕ್ರಮ ಕಟ್ಟಡದ ಹೆಸರಿನಲ್ಲಿ ಬುಲ್ಡೋಜರ್‌ನಿಂದ ಕೆಡವಲಾಗಿದೆ. ಆದಿತ್ಯನಾಥ್ ಅವರ ಈ ಕ್ರಮವನ್ನು ಬಿಜೆಪಿ ನಾಯಕರು ಮತ್ತು ಹಿಂದುತ್ವವಾದಿಗಳು ಹೊಗಳಿದ್ದಾರೆ.

ಸುವೇಂದು ಅಧಿಕಾರಿ ಅವರು ಎನ್‌ಕೌಂಟರ್‌ ಕ್ರಮವನ್ನು ಪ್ರತಿಪಾದಿಸಿದ್ದಕ್ಕಾಗಿ ಅವರ ಮೇಲೆ ಎಫ್‌ಐಆರ್ ದಾಖಲಿಸಬೇಕು ಎಂದು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಹೇಳಿದೆ.

”ಸುವೇಂದು ಅಧಿಕಾರಿ ಒಬ್ಬ ಜನಪ್ರತಿನಿಧಿಯಾಗಿರುವುದರಿಂದ ಮತ್ತು ಸಂವಿಧಾನದ ಅಡಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದವರಾಗಿದ್ದು, ದೇಶದ ಕಾನೂನನ್ನು ಮೀರಿ ಹೋಗುವಂತಿಲ್ಲ” ಎಂದು ಟಿಎಂಸಿ ವಕ್ತಾರ ಜಾಯ್ ಪ್ರಕಾಶ್ ಮಜುಂದಾರ್ ಹೇಳಿದ್ದಾರೆ.

”ಅವರು ಎನ್‌ಕೌಂಟರ್‌ಗಳು ಮತ್ತು ಬುಲ್ಡೋಜರ್ ರಾಜಕೀಯದ ಪ್ರತಿಪಾದಕರಾಗಿದ್ದಾರೆ, ಇದು ಪ್ರಜಾಪ್ರಭುತ್ವ ಸಂಪ್ರದಾಯಗಳ ವಿರುದ್ಧ ಸಮಾಜದಲ್ಲಿ ಭಯ ಮತ್ತು ಅರಾಜಕತೆಯನ್ನು ಹುಟ್ಟುಹಾಕುತ್ತದೆ” ಎಂದು ಹೇಳಿದ್ದಾರೆ.

”ಎನ್‌ಕೌಂಟರ್‌ಗಳು ಮತ್ತು ಬುಲ್ಡೋಜರ್ ರಾಜಕೀಯದಿಂದ ಗುರುತಿಸಲ್ಪಟ್ಟಿರುವ ಆದಿತ್ಯನಾಥ್ ಅವರ ಆಡಳಿತವು ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಮತ್ತು ಪ್ರಜಾಪ್ರಭುತ್ವದ ತತ್ವಗಳಿಗೆ ವಿರುದ್ಧವಾಗಿದೆ” ಎಂದು ಮಜುಂದಾರ್ ಹೇಳಿದರು.

ಇದನ್ನೂ ಓದಿ: ದೆಹಲಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಹಿರಿಯ ಅಧಿಕಾರಿ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...