Homeಮುಖಪುಟಅತ್ಯಾಚಾರಿಗಳನ್ನು ಎನ್‌ಕೌಂಟರ್ ಮಾಡಿ: ಬಂಗಾಳದಲ್ಲಿ ಆದಿತ್ಯನಾಥ್ ಆಡಳಿತ ಮಾದರಿಗೆ ಸುವೇಂದು ಅಧಿಕಾರಿ ಕರೆ

ಅತ್ಯಾಚಾರಿಗಳನ್ನು ಎನ್‌ಕೌಂಟರ್ ಮಾಡಿ: ಬಂಗಾಳದಲ್ಲಿ ಆದಿತ್ಯನಾಥ್ ಆಡಳಿತ ಮಾದರಿಗೆ ಸುವೇಂದು ಅಧಿಕಾರಿ ಕರೆ

- Advertisement -
- Advertisement -

ಅತ್ಯಾಚಾರಿಗಳನ್ನು “ಪೊಲೀಸ್ ಎನ್‌ಕೌಂಟರ್” ಮೂಲಕ ಶಿಕ್ಷಿಸಬೇಕು. ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಅಳವಡಿಸಿಕೊಂಡಿರುವ ಮಾದರಿಯನ್ನು ರಾಜ್ಯದಲ್ಲಿ ಜಾರಿಗೆ ತರಬೇಕು ಎಂದು ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಗುರುವಾರ ಹೇಳಿದ್ದಾರೆ.

ಮಾನ್ಸೂನ್ ಅಧಿವೇಶನದಲ್ಲಿ ಬಿಜೆಪಿ ಶಾಸಕರು ಸದನದಿಂದ ಹೊರನಡೆದ ನಂತರ ಸುವೇಂದು ಅಧಿಕಾರಿ ಈ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ ನಡೆದ ಸರಣಿ ಅತ್ಯಾರ ಪ್ರಕರಣಗಳನ್ನು ಉಲ್ಲೇಖಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಕೇವಲ ಎರಡು ದಿನಗಳಲ್ಲಿ ಮೂವರು ಮಹಿಳೆಯರ ಮೇಲೆ ಅತ್ಯಾಚಾರ ನಡೆದಿದೆ. ಇತ್ತೀಚೆಗೆ ಮತ್ತಿಗಾರದಲ್ಲಿ ಶಾಲಾ ಬಾಲಕಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಹಿಂದೆ ಕಲಿಯಾಗಂಜ್ ಮತ್ತು ಹಂಸಖಾಲಿಯಲ್ಲಿ ಇಂತಹ ಘಟನೆಗಳು ನಡೆದಿದ್ದವು. ಕಾನೂನು ಮತ್ತು ಸುವ್ಯವಸ್ಥೆ ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಯುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಸೋಮವಾರ ಸಿಲಿಗುರಿ ಜಿಲ್ಲೆಯಲ್ಲಿ 11ನೇ ತರಗತಿಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಮಾಡಲಾಗಿದೆ. ಘಟನೆ ನಡೆದ ಎರಡು ದಿನಗಳ ನಂತರ, ಶಂಕಿತ ಮೊಹಮ್ಮದ್ ಅಬ್ಬಾಸ್ ಅವರ ಮನೆಯನ್ನು ಗುಂಪೊಂದು ಧ್ವಂಸಗೊಳಿಸಿದ್ದು, ಅವರನ್ನು ಬಂಧಿಸಲಾಗಿದೆ” ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಘಟನೆ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಗುರುವಾರ 12 ಗಂಟೆಗಳ ಬಂದ್‌ಗೆ ಕರೆ ನೀಡಿತ್ತು. ”ದುಷ್ಕರ್ಮಿಗಳ ವಿರುದ್ಧ ಇನ್ನೂ ಪ್ರಕರಣ ದಾಖಲಿಸಿಕೊಂಡಿಲ್ಲ. ಬದಲಾಗಿ ಹಿಂದುತ್ವ ಸಂಘಟನೆಯ ಸದಸ್ಯರ ಮೇಲೆ ಲಾಠಿ ಚಾರ್ಜ್ ಮಾಡಿ ಬಂಧನ ಮಾಡಿರುವುದು ದಿಗಿಲು ಹುಟ್ಟಿಸಿದೆ” ಎಂದು ಅಧಿಕಾರಿ ಹೇಳಿದ್ದಾರೆ.

”ಈ ರಾಜ್ಯಕ್ಕೆ ಯೋಗಿ ಆದಿತ್ಯನಾಥ್ ಅವರಂತಹ ಕಟ್ಟುನಿಟ್ಟಾದ ಆಡಳಿತಗಾರರ ಅಗತ್ಯವಿದೆ. ಇಂತಹ ಅಪರಾಧಗಳನ್ನು ಮಾಡುವವರಿಗೆ ಬದುಕುವ ಹಕ್ಕಿಲ್ಲ. ಅಗತ್ಯವಿದ್ದರೆ ಅವರನ್ನು ಎನ್‌ಕೌಂಟರ್‌ನಲ್ಲಿ ಕೊಲ್ಲಬೇಕು” ಎಂದು ಸುವೇಂದು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅವರು ಅಧಿಕಾರಕ್ಕೆ ಬಂದ ನಂತರ ಕಾನೂನು ಉಲ್ಲಂಘಿಸಿದ ಮತ್ತು ಪೊಲೀಸರಿಂದ ಕಾನೂನುಬಾಹಿರ ಹತ್ಯೆಗಳ ಹೆಚ್ಚಾಗಿವೆ ಎನ್ನುವ ಆರೋಪವಿದೆ. ಹೆಚ್ಚಾಗಿ ಮುಸ್ಲಿಂ ಸಮುದಾಯದವರ ಮನೆಗಳನ್ನು ಅಕ್ರಮ ಕಟ್ಟಡದ ಹೆಸರಿನಲ್ಲಿ ಬುಲ್ಡೋಜರ್‌ನಿಂದ ಕೆಡವಲಾಗಿದೆ. ಆದಿತ್ಯನಾಥ್ ಅವರ ಈ ಕ್ರಮವನ್ನು ಬಿಜೆಪಿ ನಾಯಕರು ಮತ್ತು ಹಿಂದುತ್ವವಾದಿಗಳು ಹೊಗಳಿದ್ದಾರೆ.

ಸುವೇಂದು ಅಧಿಕಾರಿ ಅವರು ಎನ್‌ಕೌಂಟರ್‌ ಕ್ರಮವನ್ನು ಪ್ರತಿಪಾದಿಸಿದ್ದಕ್ಕಾಗಿ ಅವರ ಮೇಲೆ ಎಫ್‌ಐಆರ್ ದಾಖಲಿಸಬೇಕು ಎಂದು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಹೇಳಿದೆ.

”ಸುವೇಂದು ಅಧಿಕಾರಿ ಒಬ್ಬ ಜನಪ್ರತಿನಿಧಿಯಾಗಿರುವುದರಿಂದ ಮತ್ತು ಸಂವಿಧಾನದ ಅಡಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದವರಾಗಿದ್ದು, ದೇಶದ ಕಾನೂನನ್ನು ಮೀರಿ ಹೋಗುವಂತಿಲ್ಲ” ಎಂದು ಟಿಎಂಸಿ ವಕ್ತಾರ ಜಾಯ್ ಪ್ರಕಾಶ್ ಮಜುಂದಾರ್ ಹೇಳಿದ್ದಾರೆ.

”ಅವರು ಎನ್‌ಕೌಂಟರ್‌ಗಳು ಮತ್ತು ಬುಲ್ಡೋಜರ್ ರಾಜಕೀಯದ ಪ್ರತಿಪಾದಕರಾಗಿದ್ದಾರೆ, ಇದು ಪ್ರಜಾಪ್ರಭುತ್ವ ಸಂಪ್ರದಾಯಗಳ ವಿರುದ್ಧ ಸಮಾಜದಲ್ಲಿ ಭಯ ಮತ್ತು ಅರಾಜಕತೆಯನ್ನು ಹುಟ್ಟುಹಾಕುತ್ತದೆ” ಎಂದು ಹೇಳಿದ್ದಾರೆ.

”ಎನ್‌ಕೌಂಟರ್‌ಗಳು ಮತ್ತು ಬುಲ್ಡೋಜರ್ ರಾಜಕೀಯದಿಂದ ಗುರುತಿಸಲ್ಪಟ್ಟಿರುವ ಆದಿತ್ಯನಾಥ್ ಅವರ ಆಡಳಿತವು ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಮತ್ತು ಪ್ರಜಾಪ್ರಭುತ್ವದ ತತ್ವಗಳಿಗೆ ವಿರುದ್ಧವಾಗಿದೆ” ಎಂದು ಮಜುಂದಾರ್ ಹೇಳಿದರು.

ಇದನ್ನೂ ಓದಿ: ದೆಹಲಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಹಿರಿಯ ಅಧಿಕಾರಿ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...