Homeಮುಖಪುಟಅತ್ಯಾಚಾರಿಗಳನ್ನು ಎನ್‌ಕೌಂಟರ್ ಮಾಡಿ: ಬಂಗಾಳದಲ್ಲಿ ಆದಿತ್ಯನಾಥ್ ಆಡಳಿತ ಮಾದರಿಗೆ ಸುವೇಂದು ಅಧಿಕಾರಿ ಕರೆ

ಅತ್ಯಾಚಾರಿಗಳನ್ನು ಎನ್‌ಕೌಂಟರ್ ಮಾಡಿ: ಬಂಗಾಳದಲ್ಲಿ ಆದಿತ್ಯನಾಥ್ ಆಡಳಿತ ಮಾದರಿಗೆ ಸುವೇಂದು ಅಧಿಕಾರಿ ಕರೆ

- Advertisement -
- Advertisement -

ಅತ್ಯಾಚಾರಿಗಳನ್ನು “ಪೊಲೀಸ್ ಎನ್‌ಕೌಂಟರ್” ಮೂಲಕ ಶಿಕ್ಷಿಸಬೇಕು. ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಅಳವಡಿಸಿಕೊಂಡಿರುವ ಮಾದರಿಯನ್ನು ರಾಜ್ಯದಲ್ಲಿ ಜಾರಿಗೆ ತರಬೇಕು ಎಂದು ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಗುರುವಾರ ಹೇಳಿದ್ದಾರೆ.

ಮಾನ್ಸೂನ್ ಅಧಿವೇಶನದಲ್ಲಿ ಬಿಜೆಪಿ ಶಾಸಕರು ಸದನದಿಂದ ಹೊರನಡೆದ ನಂತರ ಸುವೇಂದು ಅಧಿಕಾರಿ ಈ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ ನಡೆದ ಸರಣಿ ಅತ್ಯಾರ ಪ್ರಕರಣಗಳನ್ನು ಉಲ್ಲೇಖಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಕೇವಲ ಎರಡು ದಿನಗಳಲ್ಲಿ ಮೂವರು ಮಹಿಳೆಯರ ಮೇಲೆ ಅತ್ಯಾಚಾರ ನಡೆದಿದೆ. ಇತ್ತೀಚೆಗೆ ಮತ್ತಿಗಾರದಲ್ಲಿ ಶಾಲಾ ಬಾಲಕಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಹಿಂದೆ ಕಲಿಯಾಗಂಜ್ ಮತ್ತು ಹಂಸಖಾಲಿಯಲ್ಲಿ ಇಂತಹ ಘಟನೆಗಳು ನಡೆದಿದ್ದವು. ಕಾನೂನು ಮತ್ತು ಸುವ್ಯವಸ್ಥೆ ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಯುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಸೋಮವಾರ ಸಿಲಿಗುರಿ ಜಿಲ್ಲೆಯಲ್ಲಿ 11ನೇ ತರಗತಿಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಮಾಡಲಾಗಿದೆ. ಘಟನೆ ನಡೆದ ಎರಡು ದಿನಗಳ ನಂತರ, ಶಂಕಿತ ಮೊಹಮ್ಮದ್ ಅಬ್ಬಾಸ್ ಅವರ ಮನೆಯನ್ನು ಗುಂಪೊಂದು ಧ್ವಂಸಗೊಳಿಸಿದ್ದು, ಅವರನ್ನು ಬಂಧಿಸಲಾಗಿದೆ” ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಘಟನೆ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಗುರುವಾರ 12 ಗಂಟೆಗಳ ಬಂದ್‌ಗೆ ಕರೆ ನೀಡಿತ್ತು. ”ದುಷ್ಕರ್ಮಿಗಳ ವಿರುದ್ಧ ಇನ್ನೂ ಪ್ರಕರಣ ದಾಖಲಿಸಿಕೊಂಡಿಲ್ಲ. ಬದಲಾಗಿ ಹಿಂದುತ್ವ ಸಂಘಟನೆಯ ಸದಸ್ಯರ ಮೇಲೆ ಲಾಠಿ ಚಾರ್ಜ್ ಮಾಡಿ ಬಂಧನ ಮಾಡಿರುವುದು ದಿಗಿಲು ಹುಟ್ಟಿಸಿದೆ” ಎಂದು ಅಧಿಕಾರಿ ಹೇಳಿದ್ದಾರೆ.

”ಈ ರಾಜ್ಯಕ್ಕೆ ಯೋಗಿ ಆದಿತ್ಯನಾಥ್ ಅವರಂತಹ ಕಟ್ಟುನಿಟ್ಟಾದ ಆಡಳಿತಗಾರರ ಅಗತ್ಯವಿದೆ. ಇಂತಹ ಅಪರಾಧಗಳನ್ನು ಮಾಡುವವರಿಗೆ ಬದುಕುವ ಹಕ್ಕಿಲ್ಲ. ಅಗತ್ಯವಿದ್ದರೆ ಅವರನ್ನು ಎನ್‌ಕೌಂಟರ್‌ನಲ್ಲಿ ಕೊಲ್ಲಬೇಕು” ಎಂದು ಸುವೇಂದು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅವರು ಅಧಿಕಾರಕ್ಕೆ ಬಂದ ನಂತರ ಕಾನೂನು ಉಲ್ಲಂಘಿಸಿದ ಮತ್ತು ಪೊಲೀಸರಿಂದ ಕಾನೂನುಬಾಹಿರ ಹತ್ಯೆಗಳ ಹೆಚ್ಚಾಗಿವೆ ಎನ್ನುವ ಆರೋಪವಿದೆ. ಹೆಚ್ಚಾಗಿ ಮುಸ್ಲಿಂ ಸಮುದಾಯದವರ ಮನೆಗಳನ್ನು ಅಕ್ರಮ ಕಟ್ಟಡದ ಹೆಸರಿನಲ್ಲಿ ಬುಲ್ಡೋಜರ್‌ನಿಂದ ಕೆಡವಲಾಗಿದೆ. ಆದಿತ್ಯನಾಥ್ ಅವರ ಈ ಕ್ರಮವನ್ನು ಬಿಜೆಪಿ ನಾಯಕರು ಮತ್ತು ಹಿಂದುತ್ವವಾದಿಗಳು ಹೊಗಳಿದ್ದಾರೆ.

ಸುವೇಂದು ಅಧಿಕಾರಿ ಅವರು ಎನ್‌ಕೌಂಟರ್‌ ಕ್ರಮವನ್ನು ಪ್ರತಿಪಾದಿಸಿದ್ದಕ್ಕಾಗಿ ಅವರ ಮೇಲೆ ಎಫ್‌ಐಆರ್ ದಾಖಲಿಸಬೇಕು ಎಂದು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಹೇಳಿದೆ.

”ಸುವೇಂದು ಅಧಿಕಾರಿ ಒಬ್ಬ ಜನಪ್ರತಿನಿಧಿಯಾಗಿರುವುದರಿಂದ ಮತ್ತು ಸಂವಿಧಾನದ ಅಡಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದವರಾಗಿದ್ದು, ದೇಶದ ಕಾನೂನನ್ನು ಮೀರಿ ಹೋಗುವಂತಿಲ್ಲ” ಎಂದು ಟಿಎಂಸಿ ವಕ್ತಾರ ಜಾಯ್ ಪ್ರಕಾಶ್ ಮಜುಂದಾರ್ ಹೇಳಿದ್ದಾರೆ.

”ಅವರು ಎನ್‌ಕೌಂಟರ್‌ಗಳು ಮತ್ತು ಬುಲ್ಡೋಜರ್ ರಾಜಕೀಯದ ಪ್ರತಿಪಾದಕರಾಗಿದ್ದಾರೆ, ಇದು ಪ್ರಜಾಪ್ರಭುತ್ವ ಸಂಪ್ರದಾಯಗಳ ವಿರುದ್ಧ ಸಮಾಜದಲ್ಲಿ ಭಯ ಮತ್ತು ಅರಾಜಕತೆಯನ್ನು ಹುಟ್ಟುಹಾಕುತ್ತದೆ” ಎಂದು ಹೇಳಿದ್ದಾರೆ.

”ಎನ್‌ಕೌಂಟರ್‌ಗಳು ಮತ್ತು ಬುಲ್ಡೋಜರ್ ರಾಜಕೀಯದಿಂದ ಗುರುತಿಸಲ್ಪಟ್ಟಿರುವ ಆದಿತ್ಯನಾಥ್ ಅವರ ಆಡಳಿತವು ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಮತ್ತು ಪ್ರಜಾಪ್ರಭುತ್ವದ ತತ್ವಗಳಿಗೆ ವಿರುದ್ಧವಾಗಿದೆ” ಎಂದು ಮಜುಂದಾರ್ ಹೇಳಿದರು.

ಇದನ್ನೂ ಓದಿ: ದೆಹಲಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಹಿರಿಯ ಅಧಿಕಾರಿ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...