Homeಮುಖಪುಟಅತ್ಯಾಚಾರಿಗಳನ್ನು ಎನ್‌ಕೌಂಟರ್ ಮಾಡಿ: ಬಂಗಾಳದಲ್ಲಿ ಆದಿತ್ಯನಾಥ್ ಆಡಳಿತ ಮಾದರಿಗೆ ಸುವೇಂದು ಅಧಿಕಾರಿ ಕರೆ

ಅತ್ಯಾಚಾರಿಗಳನ್ನು ಎನ್‌ಕೌಂಟರ್ ಮಾಡಿ: ಬಂಗಾಳದಲ್ಲಿ ಆದಿತ್ಯನಾಥ್ ಆಡಳಿತ ಮಾದರಿಗೆ ಸುವೇಂದು ಅಧಿಕಾರಿ ಕರೆ

- Advertisement -
- Advertisement -

ಅತ್ಯಾಚಾರಿಗಳನ್ನು “ಪೊಲೀಸ್ ಎನ್‌ಕೌಂಟರ್” ಮೂಲಕ ಶಿಕ್ಷಿಸಬೇಕು. ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಅಳವಡಿಸಿಕೊಂಡಿರುವ ಮಾದರಿಯನ್ನು ರಾಜ್ಯದಲ್ಲಿ ಜಾರಿಗೆ ತರಬೇಕು ಎಂದು ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಗುರುವಾರ ಹೇಳಿದ್ದಾರೆ.

ಮಾನ್ಸೂನ್ ಅಧಿವೇಶನದಲ್ಲಿ ಬಿಜೆಪಿ ಶಾಸಕರು ಸದನದಿಂದ ಹೊರನಡೆದ ನಂತರ ಸುವೇಂದು ಅಧಿಕಾರಿ ಈ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ ನಡೆದ ಸರಣಿ ಅತ್ಯಾರ ಪ್ರಕರಣಗಳನ್ನು ಉಲ್ಲೇಖಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಕೇವಲ ಎರಡು ದಿನಗಳಲ್ಲಿ ಮೂವರು ಮಹಿಳೆಯರ ಮೇಲೆ ಅತ್ಯಾಚಾರ ನಡೆದಿದೆ. ಇತ್ತೀಚೆಗೆ ಮತ್ತಿಗಾರದಲ್ಲಿ ಶಾಲಾ ಬಾಲಕಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಹಿಂದೆ ಕಲಿಯಾಗಂಜ್ ಮತ್ತು ಹಂಸಖಾಲಿಯಲ್ಲಿ ಇಂತಹ ಘಟನೆಗಳು ನಡೆದಿದ್ದವು. ಕಾನೂನು ಮತ್ತು ಸುವ್ಯವಸ್ಥೆ ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಯುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಸೋಮವಾರ ಸಿಲಿಗುರಿ ಜಿಲ್ಲೆಯಲ್ಲಿ 11ನೇ ತರಗತಿಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಮಾಡಲಾಗಿದೆ. ಘಟನೆ ನಡೆದ ಎರಡು ದಿನಗಳ ನಂತರ, ಶಂಕಿತ ಮೊಹಮ್ಮದ್ ಅಬ್ಬಾಸ್ ಅವರ ಮನೆಯನ್ನು ಗುಂಪೊಂದು ಧ್ವಂಸಗೊಳಿಸಿದ್ದು, ಅವರನ್ನು ಬಂಧಿಸಲಾಗಿದೆ” ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಘಟನೆ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಗುರುವಾರ 12 ಗಂಟೆಗಳ ಬಂದ್‌ಗೆ ಕರೆ ನೀಡಿತ್ತು. ”ದುಷ್ಕರ್ಮಿಗಳ ವಿರುದ್ಧ ಇನ್ನೂ ಪ್ರಕರಣ ದಾಖಲಿಸಿಕೊಂಡಿಲ್ಲ. ಬದಲಾಗಿ ಹಿಂದುತ್ವ ಸಂಘಟನೆಯ ಸದಸ್ಯರ ಮೇಲೆ ಲಾಠಿ ಚಾರ್ಜ್ ಮಾಡಿ ಬಂಧನ ಮಾಡಿರುವುದು ದಿಗಿಲು ಹುಟ್ಟಿಸಿದೆ” ಎಂದು ಅಧಿಕಾರಿ ಹೇಳಿದ್ದಾರೆ.

”ಈ ರಾಜ್ಯಕ್ಕೆ ಯೋಗಿ ಆದಿತ್ಯನಾಥ್ ಅವರಂತಹ ಕಟ್ಟುನಿಟ್ಟಾದ ಆಡಳಿತಗಾರರ ಅಗತ್ಯವಿದೆ. ಇಂತಹ ಅಪರಾಧಗಳನ್ನು ಮಾಡುವವರಿಗೆ ಬದುಕುವ ಹಕ್ಕಿಲ್ಲ. ಅಗತ್ಯವಿದ್ದರೆ ಅವರನ್ನು ಎನ್‌ಕೌಂಟರ್‌ನಲ್ಲಿ ಕೊಲ್ಲಬೇಕು” ಎಂದು ಸುವೇಂದು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅವರು ಅಧಿಕಾರಕ್ಕೆ ಬಂದ ನಂತರ ಕಾನೂನು ಉಲ್ಲಂಘಿಸಿದ ಮತ್ತು ಪೊಲೀಸರಿಂದ ಕಾನೂನುಬಾಹಿರ ಹತ್ಯೆಗಳ ಹೆಚ್ಚಾಗಿವೆ ಎನ್ನುವ ಆರೋಪವಿದೆ. ಹೆಚ್ಚಾಗಿ ಮುಸ್ಲಿಂ ಸಮುದಾಯದವರ ಮನೆಗಳನ್ನು ಅಕ್ರಮ ಕಟ್ಟಡದ ಹೆಸರಿನಲ್ಲಿ ಬುಲ್ಡೋಜರ್‌ನಿಂದ ಕೆಡವಲಾಗಿದೆ. ಆದಿತ್ಯನಾಥ್ ಅವರ ಈ ಕ್ರಮವನ್ನು ಬಿಜೆಪಿ ನಾಯಕರು ಮತ್ತು ಹಿಂದುತ್ವವಾದಿಗಳು ಹೊಗಳಿದ್ದಾರೆ.

ಸುವೇಂದು ಅಧಿಕಾರಿ ಅವರು ಎನ್‌ಕೌಂಟರ್‌ ಕ್ರಮವನ್ನು ಪ್ರತಿಪಾದಿಸಿದ್ದಕ್ಕಾಗಿ ಅವರ ಮೇಲೆ ಎಫ್‌ಐಆರ್ ದಾಖಲಿಸಬೇಕು ಎಂದು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಹೇಳಿದೆ.

”ಸುವೇಂದು ಅಧಿಕಾರಿ ಒಬ್ಬ ಜನಪ್ರತಿನಿಧಿಯಾಗಿರುವುದರಿಂದ ಮತ್ತು ಸಂವಿಧಾನದ ಅಡಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದವರಾಗಿದ್ದು, ದೇಶದ ಕಾನೂನನ್ನು ಮೀರಿ ಹೋಗುವಂತಿಲ್ಲ” ಎಂದು ಟಿಎಂಸಿ ವಕ್ತಾರ ಜಾಯ್ ಪ್ರಕಾಶ್ ಮಜುಂದಾರ್ ಹೇಳಿದ್ದಾರೆ.

”ಅವರು ಎನ್‌ಕೌಂಟರ್‌ಗಳು ಮತ್ತು ಬುಲ್ಡೋಜರ್ ರಾಜಕೀಯದ ಪ್ರತಿಪಾದಕರಾಗಿದ್ದಾರೆ, ಇದು ಪ್ರಜಾಪ್ರಭುತ್ವ ಸಂಪ್ರದಾಯಗಳ ವಿರುದ್ಧ ಸಮಾಜದಲ್ಲಿ ಭಯ ಮತ್ತು ಅರಾಜಕತೆಯನ್ನು ಹುಟ್ಟುಹಾಕುತ್ತದೆ” ಎಂದು ಹೇಳಿದ್ದಾರೆ.

”ಎನ್‌ಕೌಂಟರ್‌ಗಳು ಮತ್ತು ಬುಲ್ಡೋಜರ್ ರಾಜಕೀಯದಿಂದ ಗುರುತಿಸಲ್ಪಟ್ಟಿರುವ ಆದಿತ್ಯನಾಥ್ ಅವರ ಆಡಳಿತವು ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಮತ್ತು ಪ್ರಜಾಪ್ರಭುತ್ವದ ತತ್ವಗಳಿಗೆ ವಿರುದ್ಧವಾಗಿದೆ” ಎಂದು ಮಜುಂದಾರ್ ಹೇಳಿದರು.

ಇದನ್ನೂ ಓದಿ: ದೆಹಲಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಹಿರಿಯ ಅಧಿಕಾರಿ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...