Homeಮುಖಪುಟಅತ್ಯಾಚಾರಿಗಳನ್ನು ಎನ್‌ಕೌಂಟರ್ ಮಾಡಿ: ಬಂಗಾಳದಲ್ಲಿ ಆದಿತ್ಯನಾಥ್ ಆಡಳಿತ ಮಾದರಿಗೆ ಸುವೇಂದು ಅಧಿಕಾರಿ ಕರೆ

ಅತ್ಯಾಚಾರಿಗಳನ್ನು ಎನ್‌ಕೌಂಟರ್ ಮಾಡಿ: ಬಂಗಾಳದಲ್ಲಿ ಆದಿತ್ಯನಾಥ್ ಆಡಳಿತ ಮಾದರಿಗೆ ಸುವೇಂದು ಅಧಿಕಾರಿ ಕರೆ

- Advertisement -
- Advertisement -

ಅತ್ಯಾಚಾರಿಗಳನ್ನು “ಪೊಲೀಸ್ ಎನ್‌ಕೌಂಟರ್” ಮೂಲಕ ಶಿಕ್ಷಿಸಬೇಕು. ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಅಳವಡಿಸಿಕೊಂಡಿರುವ ಮಾದರಿಯನ್ನು ರಾಜ್ಯದಲ್ಲಿ ಜಾರಿಗೆ ತರಬೇಕು ಎಂದು ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಗುರುವಾರ ಹೇಳಿದ್ದಾರೆ.

ಮಾನ್ಸೂನ್ ಅಧಿವೇಶನದಲ್ಲಿ ಬಿಜೆಪಿ ಶಾಸಕರು ಸದನದಿಂದ ಹೊರನಡೆದ ನಂತರ ಸುವೇಂದು ಅಧಿಕಾರಿ ಈ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ ನಡೆದ ಸರಣಿ ಅತ್ಯಾರ ಪ್ರಕರಣಗಳನ್ನು ಉಲ್ಲೇಖಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಕೇವಲ ಎರಡು ದಿನಗಳಲ್ಲಿ ಮೂವರು ಮಹಿಳೆಯರ ಮೇಲೆ ಅತ್ಯಾಚಾರ ನಡೆದಿದೆ. ಇತ್ತೀಚೆಗೆ ಮತ್ತಿಗಾರದಲ್ಲಿ ಶಾಲಾ ಬಾಲಕಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಹಿಂದೆ ಕಲಿಯಾಗಂಜ್ ಮತ್ತು ಹಂಸಖಾಲಿಯಲ್ಲಿ ಇಂತಹ ಘಟನೆಗಳು ನಡೆದಿದ್ದವು. ಕಾನೂನು ಮತ್ತು ಸುವ್ಯವಸ್ಥೆ ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಯುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಸೋಮವಾರ ಸಿಲಿಗುರಿ ಜಿಲ್ಲೆಯಲ್ಲಿ 11ನೇ ತರಗತಿಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಮಾಡಲಾಗಿದೆ. ಘಟನೆ ನಡೆದ ಎರಡು ದಿನಗಳ ನಂತರ, ಶಂಕಿತ ಮೊಹಮ್ಮದ್ ಅಬ್ಬಾಸ್ ಅವರ ಮನೆಯನ್ನು ಗುಂಪೊಂದು ಧ್ವಂಸಗೊಳಿಸಿದ್ದು, ಅವರನ್ನು ಬಂಧಿಸಲಾಗಿದೆ” ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಘಟನೆ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಗುರುವಾರ 12 ಗಂಟೆಗಳ ಬಂದ್‌ಗೆ ಕರೆ ನೀಡಿತ್ತು. ”ದುಷ್ಕರ್ಮಿಗಳ ವಿರುದ್ಧ ಇನ್ನೂ ಪ್ರಕರಣ ದಾಖಲಿಸಿಕೊಂಡಿಲ್ಲ. ಬದಲಾಗಿ ಹಿಂದುತ್ವ ಸಂಘಟನೆಯ ಸದಸ್ಯರ ಮೇಲೆ ಲಾಠಿ ಚಾರ್ಜ್ ಮಾಡಿ ಬಂಧನ ಮಾಡಿರುವುದು ದಿಗಿಲು ಹುಟ್ಟಿಸಿದೆ” ಎಂದು ಅಧಿಕಾರಿ ಹೇಳಿದ್ದಾರೆ.

”ಈ ರಾಜ್ಯಕ್ಕೆ ಯೋಗಿ ಆದಿತ್ಯನಾಥ್ ಅವರಂತಹ ಕಟ್ಟುನಿಟ್ಟಾದ ಆಡಳಿತಗಾರರ ಅಗತ್ಯವಿದೆ. ಇಂತಹ ಅಪರಾಧಗಳನ್ನು ಮಾಡುವವರಿಗೆ ಬದುಕುವ ಹಕ್ಕಿಲ್ಲ. ಅಗತ್ಯವಿದ್ದರೆ ಅವರನ್ನು ಎನ್‌ಕೌಂಟರ್‌ನಲ್ಲಿ ಕೊಲ್ಲಬೇಕು” ಎಂದು ಸುವೇಂದು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅವರು ಅಧಿಕಾರಕ್ಕೆ ಬಂದ ನಂತರ ಕಾನೂನು ಉಲ್ಲಂಘಿಸಿದ ಮತ್ತು ಪೊಲೀಸರಿಂದ ಕಾನೂನುಬಾಹಿರ ಹತ್ಯೆಗಳ ಹೆಚ್ಚಾಗಿವೆ ಎನ್ನುವ ಆರೋಪವಿದೆ. ಹೆಚ್ಚಾಗಿ ಮುಸ್ಲಿಂ ಸಮುದಾಯದವರ ಮನೆಗಳನ್ನು ಅಕ್ರಮ ಕಟ್ಟಡದ ಹೆಸರಿನಲ್ಲಿ ಬುಲ್ಡೋಜರ್‌ನಿಂದ ಕೆಡವಲಾಗಿದೆ. ಆದಿತ್ಯನಾಥ್ ಅವರ ಈ ಕ್ರಮವನ್ನು ಬಿಜೆಪಿ ನಾಯಕರು ಮತ್ತು ಹಿಂದುತ್ವವಾದಿಗಳು ಹೊಗಳಿದ್ದಾರೆ.

ಸುವೇಂದು ಅಧಿಕಾರಿ ಅವರು ಎನ್‌ಕೌಂಟರ್‌ ಕ್ರಮವನ್ನು ಪ್ರತಿಪಾದಿಸಿದ್ದಕ್ಕಾಗಿ ಅವರ ಮೇಲೆ ಎಫ್‌ಐಆರ್ ದಾಖಲಿಸಬೇಕು ಎಂದು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಹೇಳಿದೆ.

”ಸುವೇಂದು ಅಧಿಕಾರಿ ಒಬ್ಬ ಜನಪ್ರತಿನಿಧಿಯಾಗಿರುವುದರಿಂದ ಮತ್ತು ಸಂವಿಧಾನದ ಅಡಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದವರಾಗಿದ್ದು, ದೇಶದ ಕಾನೂನನ್ನು ಮೀರಿ ಹೋಗುವಂತಿಲ್ಲ” ಎಂದು ಟಿಎಂಸಿ ವಕ್ತಾರ ಜಾಯ್ ಪ್ರಕಾಶ್ ಮಜುಂದಾರ್ ಹೇಳಿದ್ದಾರೆ.

”ಅವರು ಎನ್‌ಕೌಂಟರ್‌ಗಳು ಮತ್ತು ಬುಲ್ಡೋಜರ್ ರಾಜಕೀಯದ ಪ್ರತಿಪಾದಕರಾಗಿದ್ದಾರೆ, ಇದು ಪ್ರಜಾಪ್ರಭುತ್ವ ಸಂಪ್ರದಾಯಗಳ ವಿರುದ್ಧ ಸಮಾಜದಲ್ಲಿ ಭಯ ಮತ್ತು ಅರಾಜಕತೆಯನ್ನು ಹುಟ್ಟುಹಾಕುತ್ತದೆ” ಎಂದು ಹೇಳಿದ್ದಾರೆ.

”ಎನ್‌ಕೌಂಟರ್‌ಗಳು ಮತ್ತು ಬುಲ್ಡೋಜರ್ ರಾಜಕೀಯದಿಂದ ಗುರುತಿಸಲ್ಪಟ್ಟಿರುವ ಆದಿತ್ಯನಾಥ್ ಅವರ ಆಡಳಿತವು ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಮತ್ತು ಪ್ರಜಾಪ್ರಭುತ್ವದ ತತ್ವಗಳಿಗೆ ವಿರುದ್ಧವಾಗಿದೆ” ಎಂದು ಮಜುಂದಾರ್ ಹೇಳಿದರು.

ಇದನ್ನೂ ಓದಿ: ದೆಹಲಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಹಿರಿಯ ಅಧಿಕಾರಿ ವಿರುದ್ಧ ಪ್ರಕರಣ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ನೀಡುವ ಪ್ರಯತ್ನ ಬೆಂಬಲಿಸಿದ ಭಾರತ

0
ವಿಶ್ವಸಂಸ್ಥೆಯ ಸಂಪೂರ್ಣ ಸದಸ್ಯತ್ವ ಪಡೆಯುವ ಪ್ಯಾಲೆಸ್ತೀನ್‌ನ ಮನವಿಯನ್ನು ಮರು ಪರಿಶೀಲಿಸಿ ಅನುಮೋದಿಸುವ ವಿಶ್ವಾಸವಿದೆ ಎಂದು ಭಾರತ ಬುಧವಾರ ಹೇಳಿದೆ. ಈ ಮೂಲಕ ಪ್ಯಾಲೆಸ್ತೀನ್‌ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ಪಡೆಯುವುದಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಇಸ್ರೇಲ್ ಮತ್ತು...