Homeಕರ್ನಾಟಕಕೋಗಿಲು ಬಳಿ ಒತ್ತುವರಿ ತೆರವು: ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್ ಹೈಕಮಾಂಡ್: ಪರಿಹಾರ ಕ್ರಮ ಜಾರಿಗೆ ತರುವಂತೆ...

ಕೋಗಿಲು ಬಳಿ ಒತ್ತುವರಿ ತೆರವು: ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್ ಹೈಕಮಾಂಡ್: ಪರಿಹಾರ ಕ್ರಮ ಜಾರಿಗೆ ತರುವಂತೆ ಸಿಎಂ, ಡಿಸಿಎಂಗೆ ಒತ್ತಾಯ 

- Advertisement -
- Advertisement -

ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಪ್ರಕರಣ ಇದೀಗ ಕಾಂಗ್ರೆಸ್ ಪಕ್ಷದೊಳಗೆ ಬಿರುಕಿಗೂ ಕಾರಣವಾಗಿದೆ. ಮನೆಗಳ ತೆರವು ವಿಚಾರ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಆಡಳಿತ ಪಕ್ಷಕ್ಕೆ ಅಹಿತಕರವಾಗಿ ಪರಿಣಮಿಸುತ್ತಿದ್ದಂತೆಯೇ ಕಾಂಗ್ರೆಸ್ ಹೈಕಮಾಂಡ್ ಮಧ್ಯ ಪ್ರವೇಶಿಸಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಮಾತನಾಡಿದ್ದಾರೆ.

ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿರುವ ರೀತಿ ಬಗ್ಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯು ತೀವ್ರ ಕಳವಳ ವ್ಯಕ್ತಪಡಿಸಿದೆ. ಅಂತಹ ಕ್ರಮಗಳಿಗೆ ಹೆಚ್ಚಿನ ಎಚ್ಚರಿಕೆ, ಸೂಕ್ಷ್ಮತೆ ಮತ್ತು ಸಹಾನುಭೂತಿ ಅಗತ್ಯವೆಂದು ತಿಳಿಸಿರುವುದಾಗಿ ವೇಣುಗೋಪಾಲ್ ಹೇಳಿದ್ದಾರೆ.

ಸಂತ್ರಸ್ತ ಕುಟುಂಬಗಳಿಗೆ ಪುನರ್ವಸತಿ ಮತ್ತು ಪರಿಹಾರವನ್ನು ಖಚಿತಪಡಿಸಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಭರವಸೆ ನೀಡಿರುವುದಾಗಿ ವೇಣುಗೋಪಾಲ್ ತಿಳಿಸಿದ್ದಾರೆ. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮತ್ತು ಸ್ಥಳೀಯ ನಿವಾಸಿಗಳ ಪ್ರತಿಭಟನೆಯ ನಡುವೆ ಸರ್ಕಾರದಿಂದ ಈ ಭರವಸೆ ನೀಡಲಾಗಿದೆ.

ಸರ್ಕಾರವು ದುರ್ಬಲ ಕುಟುಂಬಗಳನ್ನು ಬೇರೆ ವ್ಯವಸ್ಥೆ ಮಾಡದೆ ಸ್ಥಳಾಂತರಿಸುತ್ತಿದೆ. ನಿರಾಶ್ರಿತರಿಗೆ ತಕ್ಷಣ ಪುನರ್ವಸತಿ, ವಸತಿ ಮತ್ತು ಮೂಲಭೂತ ಅಗತ್ಯಗಳನ್ನು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣದಲ್ಲಿ ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸುತ್ತೇವೆ: ಭಟ್ಟಿ ವಿಕ್ರಮಾರ್ಕ ಮಲ್ಲು

ರಾಜ್ಯದಲ್ಲಿ ರೋಹಿತ್ ವೇಮುಲಾ ಕಾಯ್ದೆಯನ್ನು ಆದಷ್ಟು ಬೇಗ ಜಾರಿಗೆ ತರಲಾಗುವುದು ಎಂದು ತೆಲಂಗಾಣ ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಮಲ್ಲು ಶನಿವಾರ ಹೇಳಿದ್ದಾರೆ. ಪ್ರಜಾ ಭವನದಲ್ಲಿ ಜಸ್ಟೀಸ್ ಫಾರ್ ರೋಹಿತ್ ವೇಮುಲಾ ಅಭಿಯಾನ ಸಮಿತಿಯ...

88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ : ಸಿಎಂ ಸಿದ್ದರಾಮಯ್ಯ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶನಿವಾರ (ಜ.17) ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಪೋಲೀಸ್ ಇಲಾಖೆ ಕೆಲವು...

ಇಂದೋರ್ ಕಲುಷಿತ ನೀರು ದುರಂತ : ಸಂತ್ರಸ್ತ ಕುಟುಂಬಗಳನ್ನು ಭೇಟಿಯಾದ ರಾಹುಲ್ ಗಾಂಧಿ

ಶನಿವಾರ (ಜ.17) ಮಧ್ಯಪ್ರದೇಶದ ಇಂದೋರ್‌ಗೆ ಭೇಟಿ ನೀಡಿದ ಲೋಕಸಭೆಯ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಇತ್ತೀಚೆಗೆ ಸಂಭವಿಸಿದ ಕಲುಷಿತ ನೀರು ದುರಂತದ ಸಂತ್ರಸ್ತರನ್ನು ಭೇಟಿಯಾದರು. ಕಲುಷಿತ ನೀರು ಕುಡಿದು ವಾಂತಿ ಮತ್ತು...

ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್‌ಡಿಎ ಜೊತೆ ಯಾವುದೇ ಮೈತ್ರಿ ಇಲ್ಲ: ಓವೈಸಿ

ಮಹಾರಾಷ್ಟ್ರದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಥವಾ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆ ಯಾವುದೇ ಮೈತ್ರಿ ಇರುವುದಿಲ್ಲ ಎಂದು ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಭಾರತದ ಅತ್ಯಂತ ಶ್ರೀಮಂತ ರಾಜ್ಯವಾದ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ...

ರೋಹಿತ್ ವೇಮುಲ ಕಾಯ್ದೆ ಘೋಷಣೆಯಲ್ಲ, ಅಗತ್ಯ : ರಾಹುಲ್ ಗಾಂಧಿ

ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲ ಜಾತಿ ತಾರತಮ್ಯಕ್ಕೆ ಬಲಿಯಾಗಿ ಇಂದಿಗೆ (17 ಜನವರಿ 2026) 10 ವರ್ಷಗಳಾಗಿದ್ದು, ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ರೋಹಿತ್ ಅವರನ್ನು ಸ್ಮರಿಸಿ ಸಾಮಾಜಿಕ...

ದೇವರು-ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ; ಬಿಜೆಪಿ ಕೌನ್ಸಿಲರ್‌ಗಳಿಗೆ ಕೇರಳ ಹೈಕೋರ್ಟ್ ನೋಟಿಸ್

ತಿರುವನಂತಪುರಂ ನಗರಸಭೆಯ ಬಿಜೆಪಿ ಕೌನ್ಸಿಲರ್‌ಗಳು ವಿವಿಧ ದೇವರು, ಹುತಾತ್ಮರು ಮತ್ತು ರಾಜಕೀಯ ಚಳುವಳಿಗಳ ಹೆಸರಿನಲ್ಲಿ ಮಾಡಿದ ಪ್ರಮಾಣವಚನಗಳ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯ ಕುರಿತು ಕೇರಳ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ...

ಮಧ್ಯಪ್ರದೇಶ: ಬುಡಕಟ್ಟು ವಿಶ್ವವಿದ್ಯಾಲಯ ಹಾಸ್ಟೆಲ್ ಒಳಗೆ ಅಸ್ಸಾಮಿ ವಿದ್ಯಾರ್ಥಿ ಮೇಲೆ ಗುಂಪು ಹಲ್ಲೆ

ಮಧ್ಯಪ್ರದೇಶದ ಇಂದಿರಾ ಗಾಂಧಿ ರಾಷ್ಟ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಹಾಸ್ಟೆಲ್ ಕೋಣೆಯೊಳಗೆ ಐದು ಜನ ವಿದ್ಯಾರ್ಥಿಗಳ ತಂಡವು ಅಸ್ಸಾಮಿ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಗುಂಪು ಆತನಿಗೆ ಇಲ್ಲಿಯೇ ಸಾಯಬೇಕು ಎಂದು...

ಮಹಿಳೆಯರ ಜೊತೆ ಪುರುಷರಿಗೂ ಉಚಿತ ಬಸ್‌ ಪ್ರಯಾಣ, ಗ್ರಾಮೀಣರಿಗೆ 150 ಕೂಲಿ ದಿನ : ಎಐಎಡಿಎಂಕೆ ಚುನಾವಣಾ ಭರವಸೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಶನಿವಾರ (ಜ.17) ಪಕ್ಷದ ಮೊದಲ ಹಂತದ ಪ್ರಣಾಳಿಕೆ (ಚುನಾವಣಾ ಭರವಸೆ) ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯಂತೆ ಎಲ್ಲಾ ಪಡಿತರ...

ಛತ್ತೀಸ್‌ಗಢ| ಬಿಜಾಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಸಾವು

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗಿನ ಎನ್‌ಕೌಂಟರ್‌ನಲ್ಲಿ ಕನಿಷ್ಠ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ವಾಯುವ್ಯ ಪ್ರದೇಶದ ಅರಣ್ಯ ಬೆಟ್ಟಗಳಲ್ಲಿ ಶನಿವಾರ ಬೆಳಿಗ್ಗೆ ಗುಂಡಿನ ಚಕಮಕಿ ನಡೆಯಿತು. ಹಿರಿಯ...

ಮಮತಾ ಬ್ಯಾನರ್ಜಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಸುವೇಂದು ಅಧಿಕಾರಿ

ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಶುಕ್ರವಾರ (ಜ.16) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ 100 ಕೋಟಿ ರೂ.ಗಳ ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮಮತಾ...