Homeಮುಖಪುಟಕೈದಿಗಳಿಗೆ ಜಾತಿ ಆಧಾರಿತ ಕೆಲಸ ಹಂಚಿಕೆ ನಿಲ್ಲಿಸಿ, ಜೈಲು ನೋಂದಣಿಯಿಂದ ಜಾತಿ ಕಾಲಂ ಅಳಿಸಿ :...

ಕೈದಿಗಳಿಗೆ ಜಾತಿ ಆಧಾರಿತ ಕೆಲಸ ಹಂಚಿಕೆ ನಿಲ್ಲಿಸಿ, ಜೈಲು ನೋಂದಣಿಯಿಂದ ಜಾತಿ ಕಾಲಂ ಅಳಿಸಿ : ಸುಪ್ರೀಂ ಕೋರ್ಟ್

- Advertisement -
- Advertisement -

ಜಾತಿ ಆಧಾರಿತ ತಾರತಮ್ಯ ಮಾಡಲಾಗ್ತಿದೆ, ಜಾತಿ ನೋಡಿ ಜೈಲುಗಳಲ್ಲಿ ಕೈದಿಗಳನ್ನು ಪ್ರತ್ಯೇಕಿಸಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು (ಅ.3) ಮಹತ್ವದ ತೀರ್ಪು ಪ್ರಕಟಿಸಿದೆ.

ಎಲ್ಲಾ ಜಾತಿಗಳ ಕೈದಿಗಳನ್ನು ಮಾನವೀಯ ರೀತಿಯಲ್ಲಿ ಮತ್ತು ಏಕರೂಪವಾಗಿ ಪರಿಗಣಿಸಬೇಕು. ಕೆಳ ವರ್ಗದ ಕೈದಿಗಳನ್ನು ಜಾತಿ ಆಧಾರದಲ್ಲಿ ತಾರತಮ್ಯ ಮಾಡಬಾರದು ಎಂದು ನಿರ್ದೇಶಿಸಿದೆ.

ದಿ ವೈರ್‌ನಲ್ಲಿ ಪ್ರಕಟವಾದ ಲೇಖನವನ್ನು ಆಧರಿಸಿ ಪತ್ರಕರ್ತೆ ಸುಕನ್ಯಾ ಶಾಂತಾ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ, ಮನೋಜ್ ಮಿಶ್ರಾ ಅವರ ಪೀಠವು ತೀರ್ಪು ನೀಡಿದೆ.

ಕೆಳ ವರ್ಗದ ಕೈದಿಗಳನ್ನು ಸ್ವಚ್ಛತೆ ಮತ್ತು ಕಸಗುಡಿಸಲು ನಿಯೋಜಿಸುವುದು. ಉನ್ನತ ಜಾತಿಯ ಕೈದಿಗಳನ್ನು ಅಡುಗೆ ಮಾಡಲು ನಿಯೋಜಿಸುವುದು ನೇರ ಜಾತಿ ತಾರತಮ್ಯವಾಗಿದೆ. ಇದು ಆರ್ಟಿಕಲ್ 15 ರ ಉಲ್ಲಂಘನೆಯಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಸರಳ ಜೈಲು ಶಿಕ್ಷೆಗೆ ಒಳಗಾದ ವ್ಯಕ್ತಿಗೆ, ಆತನ ಜಾತಿಯವರು ಮಾಡದ ಕೆಲಸವನ್ನು ನೀಡಬೇಕಾಗಿಲ್ಲ ಎಂಬ ಉತ್ತರ ಪ್ರದೇಶದ ಜೈಲು ಕೈಪಿಡಿಯ ನಿಯಮಕ್ಕೆ ನ್ಯಾಯಾಲಯ ಆಕ್ಷೇಪಣೆ ವ್ಯಕ್ತಪಡಿಸಿದೆ.

ಸಣ್ಣ ಕೆಲಸಗಳನ್ನು ಯಾರು ಮಾಡಬೇಕು, ಯಾರು ಮಾಡಬಾರದು ಎಂದು ನಿರ್ಧರಿಸಲು, ಇಲ್ಲಿ ಯಾವುದೇ ಗುಂಪು ಸ್ಕ್ಯಾವೆಂಜರ್ ವರ್ಗವಾಗಿ ಹುಟ್ಟಿಲ್ಲ. ಹಾಗಾಗಿ, ಕಸ ಗುಡಿಸುವ ಕೆಲಸ ಯಾರು ಮಾಡಬೇಕು, ಅಡುಗೆ ಕೆಲಸ ಯಾರು ಮಾಡಬೇಕು ಎಂದು ಜಾತಿ, ವರ್ಗ ನೋಡಿ ನಿರ್ಧರಿಸುವುದು ಅಸ್ಪೃಶ್ಯತೆಯ ಆಚರಣೆಯಾಗಿದೆ. ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಡಿನೋಟಿಫೈಡ್ ಬುಡಕಟ್ಟುಗಳನ್ನು ಉಲ್ಲೇಖಿಸುವ ರಾಜಸ್ಥಾನದ ಜೈಲು ಕೈಪಿಡಿಯ ನಿಬಂಧನೆಗಳನ್ನು ಕೂಡ ನ್ಯಾಯಾಲಯ ಎತ್ತಿ ತೋರಿಸಿದೆ.

ಜಾತಿ ಆಧಾರಿತ ಕೆಲಸದ ಹಂಚಿಕೆಯನ್ನು ಕೊನೆಗೊಳಿಸಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ಜೈಲು ಕೈಪಿಡಿಗಳನ್ನು ಪರಿಷ್ಕರಿಸುವಂತೆ ಕೋರ್ಟ್ ನಿರ್ದೇಶಿಸಿದೆ. ಜಾತಿ ಆಧಾರಿತ ಪ್ರತ್ಯೇಕತೆಯನ್ನು ಪರಿಹರಿಸಲು ತನ್ನ ಮಾದರಿ ಜೈಲು ನಿಯಮಗಳಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ. ಜೈಲು ಕೈಪಿಡಿಗಳಲ್ಲಿ ವಾಡಿಕೆಯ ಅಪರಾಧಿಗಳ ಉಲ್ಲೇಖವು ಅವರ ಜಾತಿ ಅಥವಾ ಪಂಗಡವನ್ನು ಉಲ್ಲೇಖಿಸದೆ ಶಾಸಕಾಂಗ ವ್ಯಾಖ್ಯಾನಗಳಿಗೆ ಅನುಗುಣವಾಗಿರಬೇಕು ಎಂದು ನ್ಯಾಯಾಲಯವು ನಿರ್ದೇಶಿಸಿದೆ.

ಮುಖ್ಯವಾಗಿ, ಜೈಲು ರಿಜಿಸ್ಟರ್‌ಗಳಲ್ಲಿನ ಜಾತಿ ಕಾಲಂಗಳನ್ನು ಅಳಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ತೀರ್ಪು ಪ್ರಕಟಿಸುವ ಮೊದಲು, ಸಿಜೆಐ ಚಂದ್ರಚೂಡ್ ಅವರು “ಸುಂದರವಾಗಿ ಸಂಶೋಧಿಸಲಾದ ಅರ್ಜಿ” ಎಂದು ಹೇಳಿದ್ದು, ವಿಷಯವನ್ನು ಪರಿಣಾಮಕಾರಿಯಾಗಿ ವಾದಿಸಿದಕ್ಕಾಗಿ ವಕೀಲರನ್ನು ಅಭಿನಂದಿಸಿದ್ದಾರೆ.

ಪ್ರಕರಣದ ಹಿನ್ನೆಲೆ : ‘ಭಾರತದ ಜೈಲು ಕೈಪಿಡಿಗಳ ಮೂಲಕ ರಾಜ್ಯ ಪ್ರಾಯೋಜಿತ ಜಾತಿ ತಾರತಮ್ಯ ನಡೆಸಲಾಗ್ತಿದೆ’ ಎಂಬ ತನ್ನ ತನಿಖಾ ವರದಿ ಆಧರಿಸಿ ದಿ ವೈರ್‌ನ ಪತ್ರಕರ್ತೆ ಸುಕನ್ಯಾ ಶಾಂತಾ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ರಾಜ್ಯಗಳ ಜೈಲು ಕೈಪಿಡಿಗಳು ಕೆಲಸ ನೀಡುವಲ್ಲಿ ಮತ್ತು ಬ್ಯಾರಕ್‌ಗಳ ಹಂಚಿಕೆ ವೇಳೆ ಕೈದಿಗಳನ್ನು ಜಾತಿ ಆಧಾರದ ಮೇಲೆ ಪ್ರತ್ಯೇಕಿಸಲು ಉತ್ತೇಜನ ನೀಡುವಂತಿದೆ. ಅಲ್ಲದೆ, ದುರ್ಬಲ ಜಾತಿಯ ಕೈದಿಗಳಿಂದ ಬಲವಂತದ ದುಡಿಮೆ ಮಾಡಿಸಿಕೊಂಡು ದೌರ್ಜನ್ಯ ಎಸಗುತ್ತಿದೆ ಎಂದು ಸುಕನ್ಯಾ ತನ್ನ ಅರ್ಜಿಯಲ್ಲಿ ಹೇಳಿದ್ದರು.

ಜೈಲುಗಳಲ್ಲಿ ಜಾತಿ ಆಧಾರಿತ ಕೈದಿ ಕಾರ್ಮಿಕರ ಪ್ರತ್ಯೇಕತೆಯು ವಸಾಹತುಶಾಹಿ ಭಾರತದ ಅವಶೇಷವಾಗಿದೆ. ಜಾತಿ ಆಧಾರಿತ ಕೈದಿ ಕಾರ್ಮಿಕರ ಹಂಚಿಕೆ ಅವಮಾನಕರ ಮತ್ತು ಅನಾರೋಗ್ಯಕರವಾಗಿದೆ. ಇದು ಘನತೆಯಿಂದ ಬದುಕುವ ಕೈದಿಗಳ ಹಕ್ಕಿನ ವಿರುದ್ಧವಾಗಿದೆ ಎಂದಿದ್ದರು.

ತಮಿಳುನಾಡಿನ ಪಾಲಯಂಕೊಟ್ಟೈ ಕೇಂದ್ರ ಕಾರಾಗೃಹದಲ್ಲಿ ತೇವರ್‌, ನಾಡಾರ್‌ ಮತ್ತು ಪಲ್ಲರ್‌ ಕೈದಿಗಳನ್ನು ಅವರ ಜಾತಿಯ ಆಧಾರದ ಮೇಲೆ ವಿವಿಧ ಬ್ಯಾರಕ್‌ಗಳಲ್ಲಿ ಪ್ರತ್ಯೇಕಿಸಿರುವುದು ಕಾರಾಗೃಹಗಳಲ್ಲಿ ಜಾತಿ ಆಧಾರಿತ ತಾರತಮ್ಯಕ್ಕೆ ಸ್ಪಷ್ಟ ಉದಾಹರಣೆಯಾಗಿದೆ. ಜೈಲಿನೊಳಗೆ ಕಾಲಿಟ್ಟ ಕೂಡಲೇ ಕೈದಿಗಳು ಇಂತಹ ತಾರತಮ್ಯವನ್ನು ಎದುರಿಸುತ್ತಿದ್ದಾರೆ ಎಂದು ತಿಳಿಸಿದ್ದರು.

ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಆಂಧ್ರ ಪ್ರದೇಶ, ತೆಲಂಗಾಣ, ಪಂಜಾಬ್, ಒಡಿಶಾ, ಜಾರ್ಖಂಡ್, ಕೇರಳ, ತಮಿಳುನಾಡು ಮತ್ತು ಮಹಾರಾಷ್ಟ್ರದ ಜೈಲು ಕೈಪಿಡಿಗಳಲ್ಲಿ ಕಂಡುಬರುವ ತಾರತಮ್ಯದ ನಿಬಂಧನೆಗಳನ್ನು ರದ್ದುಗೊಳಿಸಬೇಕೆಂದು ಅರ್ಜಿಯಲ್ಲಿ ಕೋರಿದ್ದರು.

ಇದನ್ನೂ ಓದಿ : ತೆಲಂಗಾಣ | ಸಮಂತಾ-ನಾಗಚೈತನ್ಯ ವಿಚ್ಛೇದನ ವಿಷಯದಲ್ಲಿ ರಾಜಕೀಯ ಕಾಳಗ : ಸಚಿವೆ ಸುರೇಖಾಗೆ ಕೆಟಿಆರ್ ಲೀಗಲ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...