Homeಮುಖಪುಟಕೈದಿಗಳಿಗೆ ಜಾತಿ ಆಧಾರಿತ ಕೆಲಸ ಹಂಚಿಕೆ ನಿಲ್ಲಿಸಿ, ಜೈಲು ನೋಂದಣಿಯಿಂದ ಜಾತಿ ಕಾಲಂ ಅಳಿಸಿ :...

ಕೈದಿಗಳಿಗೆ ಜಾತಿ ಆಧಾರಿತ ಕೆಲಸ ಹಂಚಿಕೆ ನಿಲ್ಲಿಸಿ, ಜೈಲು ನೋಂದಣಿಯಿಂದ ಜಾತಿ ಕಾಲಂ ಅಳಿಸಿ : ಸುಪ್ರೀಂ ಕೋರ್ಟ್

- Advertisement -
- Advertisement -

ಜಾತಿ ಆಧಾರಿತ ತಾರತಮ್ಯ ಮಾಡಲಾಗ್ತಿದೆ, ಜಾತಿ ನೋಡಿ ಜೈಲುಗಳಲ್ಲಿ ಕೈದಿಗಳನ್ನು ಪ್ರತ್ಯೇಕಿಸಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು (ಅ.3) ಮಹತ್ವದ ತೀರ್ಪು ಪ್ರಕಟಿಸಿದೆ.

ಎಲ್ಲಾ ಜಾತಿಗಳ ಕೈದಿಗಳನ್ನು ಮಾನವೀಯ ರೀತಿಯಲ್ಲಿ ಮತ್ತು ಏಕರೂಪವಾಗಿ ಪರಿಗಣಿಸಬೇಕು. ಕೆಳ ವರ್ಗದ ಕೈದಿಗಳನ್ನು ಜಾತಿ ಆಧಾರದಲ್ಲಿ ತಾರತಮ್ಯ ಮಾಡಬಾರದು ಎಂದು ನಿರ್ದೇಶಿಸಿದೆ.

ದಿ ವೈರ್‌ನಲ್ಲಿ ಪ್ರಕಟವಾದ ಲೇಖನವನ್ನು ಆಧರಿಸಿ ಪತ್ರಕರ್ತೆ ಸುಕನ್ಯಾ ಶಾಂತಾ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ, ಮನೋಜ್ ಮಿಶ್ರಾ ಅವರ ಪೀಠವು ತೀರ್ಪು ನೀಡಿದೆ.

ಕೆಳ ವರ್ಗದ ಕೈದಿಗಳನ್ನು ಸ್ವಚ್ಛತೆ ಮತ್ತು ಕಸಗುಡಿಸಲು ನಿಯೋಜಿಸುವುದು. ಉನ್ನತ ಜಾತಿಯ ಕೈದಿಗಳನ್ನು ಅಡುಗೆ ಮಾಡಲು ನಿಯೋಜಿಸುವುದು ನೇರ ಜಾತಿ ತಾರತಮ್ಯವಾಗಿದೆ. ಇದು ಆರ್ಟಿಕಲ್ 15 ರ ಉಲ್ಲಂಘನೆಯಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಸರಳ ಜೈಲು ಶಿಕ್ಷೆಗೆ ಒಳಗಾದ ವ್ಯಕ್ತಿಗೆ, ಆತನ ಜಾತಿಯವರು ಮಾಡದ ಕೆಲಸವನ್ನು ನೀಡಬೇಕಾಗಿಲ್ಲ ಎಂಬ ಉತ್ತರ ಪ್ರದೇಶದ ಜೈಲು ಕೈಪಿಡಿಯ ನಿಯಮಕ್ಕೆ ನ್ಯಾಯಾಲಯ ಆಕ್ಷೇಪಣೆ ವ್ಯಕ್ತಪಡಿಸಿದೆ.

ಸಣ್ಣ ಕೆಲಸಗಳನ್ನು ಯಾರು ಮಾಡಬೇಕು, ಯಾರು ಮಾಡಬಾರದು ಎಂದು ನಿರ್ಧರಿಸಲು, ಇಲ್ಲಿ ಯಾವುದೇ ಗುಂಪು ಸ್ಕ್ಯಾವೆಂಜರ್ ವರ್ಗವಾಗಿ ಹುಟ್ಟಿಲ್ಲ. ಹಾಗಾಗಿ, ಕಸ ಗುಡಿಸುವ ಕೆಲಸ ಯಾರು ಮಾಡಬೇಕು, ಅಡುಗೆ ಕೆಲಸ ಯಾರು ಮಾಡಬೇಕು ಎಂದು ಜಾತಿ, ವರ್ಗ ನೋಡಿ ನಿರ್ಧರಿಸುವುದು ಅಸ್ಪೃಶ್ಯತೆಯ ಆಚರಣೆಯಾಗಿದೆ. ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಡಿನೋಟಿಫೈಡ್ ಬುಡಕಟ್ಟುಗಳನ್ನು ಉಲ್ಲೇಖಿಸುವ ರಾಜಸ್ಥಾನದ ಜೈಲು ಕೈಪಿಡಿಯ ನಿಬಂಧನೆಗಳನ್ನು ಕೂಡ ನ್ಯಾಯಾಲಯ ಎತ್ತಿ ತೋರಿಸಿದೆ.

ಜಾತಿ ಆಧಾರಿತ ಕೆಲಸದ ಹಂಚಿಕೆಯನ್ನು ಕೊನೆಗೊಳಿಸಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ಜೈಲು ಕೈಪಿಡಿಗಳನ್ನು ಪರಿಷ್ಕರಿಸುವಂತೆ ಕೋರ್ಟ್ ನಿರ್ದೇಶಿಸಿದೆ. ಜಾತಿ ಆಧಾರಿತ ಪ್ರತ್ಯೇಕತೆಯನ್ನು ಪರಿಹರಿಸಲು ತನ್ನ ಮಾದರಿ ಜೈಲು ನಿಯಮಗಳಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ. ಜೈಲು ಕೈಪಿಡಿಗಳಲ್ಲಿ ವಾಡಿಕೆಯ ಅಪರಾಧಿಗಳ ಉಲ್ಲೇಖವು ಅವರ ಜಾತಿ ಅಥವಾ ಪಂಗಡವನ್ನು ಉಲ್ಲೇಖಿಸದೆ ಶಾಸಕಾಂಗ ವ್ಯಾಖ್ಯಾನಗಳಿಗೆ ಅನುಗುಣವಾಗಿರಬೇಕು ಎಂದು ನ್ಯಾಯಾಲಯವು ನಿರ್ದೇಶಿಸಿದೆ.

ಮುಖ್ಯವಾಗಿ, ಜೈಲು ರಿಜಿಸ್ಟರ್‌ಗಳಲ್ಲಿನ ಜಾತಿ ಕಾಲಂಗಳನ್ನು ಅಳಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ತೀರ್ಪು ಪ್ರಕಟಿಸುವ ಮೊದಲು, ಸಿಜೆಐ ಚಂದ್ರಚೂಡ್ ಅವರು “ಸುಂದರವಾಗಿ ಸಂಶೋಧಿಸಲಾದ ಅರ್ಜಿ” ಎಂದು ಹೇಳಿದ್ದು, ವಿಷಯವನ್ನು ಪರಿಣಾಮಕಾರಿಯಾಗಿ ವಾದಿಸಿದಕ್ಕಾಗಿ ವಕೀಲರನ್ನು ಅಭಿನಂದಿಸಿದ್ದಾರೆ.

ಪ್ರಕರಣದ ಹಿನ್ನೆಲೆ : ‘ಭಾರತದ ಜೈಲು ಕೈಪಿಡಿಗಳ ಮೂಲಕ ರಾಜ್ಯ ಪ್ರಾಯೋಜಿತ ಜಾತಿ ತಾರತಮ್ಯ ನಡೆಸಲಾಗ್ತಿದೆ’ ಎಂಬ ತನ್ನ ತನಿಖಾ ವರದಿ ಆಧರಿಸಿ ದಿ ವೈರ್‌ನ ಪತ್ರಕರ್ತೆ ಸುಕನ್ಯಾ ಶಾಂತಾ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ರಾಜ್ಯಗಳ ಜೈಲು ಕೈಪಿಡಿಗಳು ಕೆಲಸ ನೀಡುವಲ್ಲಿ ಮತ್ತು ಬ್ಯಾರಕ್‌ಗಳ ಹಂಚಿಕೆ ವೇಳೆ ಕೈದಿಗಳನ್ನು ಜಾತಿ ಆಧಾರದ ಮೇಲೆ ಪ್ರತ್ಯೇಕಿಸಲು ಉತ್ತೇಜನ ನೀಡುವಂತಿದೆ. ಅಲ್ಲದೆ, ದುರ್ಬಲ ಜಾತಿಯ ಕೈದಿಗಳಿಂದ ಬಲವಂತದ ದುಡಿಮೆ ಮಾಡಿಸಿಕೊಂಡು ದೌರ್ಜನ್ಯ ಎಸಗುತ್ತಿದೆ ಎಂದು ಸುಕನ್ಯಾ ತನ್ನ ಅರ್ಜಿಯಲ್ಲಿ ಹೇಳಿದ್ದರು.

ಜೈಲುಗಳಲ್ಲಿ ಜಾತಿ ಆಧಾರಿತ ಕೈದಿ ಕಾರ್ಮಿಕರ ಪ್ರತ್ಯೇಕತೆಯು ವಸಾಹತುಶಾಹಿ ಭಾರತದ ಅವಶೇಷವಾಗಿದೆ. ಜಾತಿ ಆಧಾರಿತ ಕೈದಿ ಕಾರ್ಮಿಕರ ಹಂಚಿಕೆ ಅವಮಾನಕರ ಮತ್ತು ಅನಾರೋಗ್ಯಕರವಾಗಿದೆ. ಇದು ಘನತೆಯಿಂದ ಬದುಕುವ ಕೈದಿಗಳ ಹಕ್ಕಿನ ವಿರುದ್ಧವಾಗಿದೆ ಎಂದಿದ್ದರು.

ತಮಿಳುನಾಡಿನ ಪಾಲಯಂಕೊಟ್ಟೈ ಕೇಂದ್ರ ಕಾರಾಗೃಹದಲ್ಲಿ ತೇವರ್‌, ನಾಡಾರ್‌ ಮತ್ತು ಪಲ್ಲರ್‌ ಕೈದಿಗಳನ್ನು ಅವರ ಜಾತಿಯ ಆಧಾರದ ಮೇಲೆ ವಿವಿಧ ಬ್ಯಾರಕ್‌ಗಳಲ್ಲಿ ಪ್ರತ್ಯೇಕಿಸಿರುವುದು ಕಾರಾಗೃಹಗಳಲ್ಲಿ ಜಾತಿ ಆಧಾರಿತ ತಾರತಮ್ಯಕ್ಕೆ ಸ್ಪಷ್ಟ ಉದಾಹರಣೆಯಾಗಿದೆ. ಜೈಲಿನೊಳಗೆ ಕಾಲಿಟ್ಟ ಕೂಡಲೇ ಕೈದಿಗಳು ಇಂತಹ ತಾರತಮ್ಯವನ್ನು ಎದುರಿಸುತ್ತಿದ್ದಾರೆ ಎಂದು ತಿಳಿಸಿದ್ದರು.

ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಆಂಧ್ರ ಪ್ರದೇಶ, ತೆಲಂಗಾಣ, ಪಂಜಾಬ್, ಒಡಿಶಾ, ಜಾರ್ಖಂಡ್, ಕೇರಳ, ತಮಿಳುನಾಡು ಮತ್ತು ಮಹಾರಾಷ್ಟ್ರದ ಜೈಲು ಕೈಪಿಡಿಗಳಲ್ಲಿ ಕಂಡುಬರುವ ತಾರತಮ್ಯದ ನಿಬಂಧನೆಗಳನ್ನು ರದ್ದುಗೊಳಿಸಬೇಕೆಂದು ಅರ್ಜಿಯಲ್ಲಿ ಕೋರಿದ್ದರು.

ಇದನ್ನೂ ಓದಿ : ತೆಲಂಗಾಣ | ಸಮಂತಾ-ನಾಗಚೈತನ್ಯ ವಿಚ್ಛೇದನ ವಿಷಯದಲ್ಲಿ ರಾಜಕೀಯ ಕಾಳಗ : ಸಚಿವೆ ಸುರೇಖಾಗೆ ಕೆಟಿಆರ್ ಲೀಗಲ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...