Homeಮುಖಪುಟಕೈದಿಗಳಿಗೆ ಜಾತಿ ಆಧಾರಿತ ಕೆಲಸ ಹಂಚಿಕೆ ನಿಲ್ಲಿಸಿ, ಜೈಲು ನೋಂದಣಿಯಿಂದ ಜಾತಿ ಕಾಲಂ ಅಳಿಸಿ :...

ಕೈದಿಗಳಿಗೆ ಜಾತಿ ಆಧಾರಿತ ಕೆಲಸ ಹಂಚಿಕೆ ನಿಲ್ಲಿಸಿ, ಜೈಲು ನೋಂದಣಿಯಿಂದ ಜಾತಿ ಕಾಲಂ ಅಳಿಸಿ : ಸುಪ್ರೀಂ ಕೋರ್ಟ್

- Advertisement -
- Advertisement -

ಜಾತಿ ಆಧಾರಿತ ತಾರತಮ್ಯ ಮಾಡಲಾಗ್ತಿದೆ, ಜಾತಿ ನೋಡಿ ಜೈಲುಗಳಲ್ಲಿ ಕೈದಿಗಳನ್ನು ಪ್ರತ್ಯೇಕಿಸಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು (ಅ.3) ಮಹತ್ವದ ತೀರ್ಪು ಪ್ರಕಟಿಸಿದೆ.

ಎಲ್ಲಾ ಜಾತಿಗಳ ಕೈದಿಗಳನ್ನು ಮಾನವೀಯ ರೀತಿಯಲ್ಲಿ ಮತ್ತು ಏಕರೂಪವಾಗಿ ಪರಿಗಣಿಸಬೇಕು. ಕೆಳ ವರ್ಗದ ಕೈದಿಗಳನ್ನು ಜಾತಿ ಆಧಾರದಲ್ಲಿ ತಾರತಮ್ಯ ಮಾಡಬಾರದು ಎಂದು ನಿರ್ದೇಶಿಸಿದೆ.

ದಿ ವೈರ್‌ನಲ್ಲಿ ಪ್ರಕಟವಾದ ಲೇಖನವನ್ನು ಆಧರಿಸಿ ಪತ್ರಕರ್ತೆ ಸುಕನ್ಯಾ ಶಾಂತಾ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ, ಮನೋಜ್ ಮಿಶ್ರಾ ಅವರ ಪೀಠವು ತೀರ್ಪು ನೀಡಿದೆ.

ಕೆಳ ವರ್ಗದ ಕೈದಿಗಳನ್ನು ಸ್ವಚ್ಛತೆ ಮತ್ತು ಕಸಗುಡಿಸಲು ನಿಯೋಜಿಸುವುದು. ಉನ್ನತ ಜಾತಿಯ ಕೈದಿಗಳನ್ನು ಅಡುಗೆ ಮಾಡಲು ನಿಯೋಜಿಸುವುದು ನೇರ ಜಾತಿ ತಾರತಮ್ಯವಾಗಿದೆ. ಇದು ಆರ್ಟಿಕಲ್ 15 ರ ಉಲ್ಲಂಘನೆಯಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಸರಳ ಜೈಲು ಶಿಕ್ಷೆಗೆ ಒಳಗಾದ ವ್ಯಕ್ತಿಗೆ, ಆತನ ಜಾತಿಯವರು ಮಾಡದ ಕೆಲಸವನ್ನು ನೀಡಬೇಕಾಗಿಲ್ಲ ಎಂಬ ಉತ್ತರ ಪ್ರದೇಶದ ಜೈಲು ಕೈಪಿಡಿಯ ನಿಯಮಕ್ಕೆ ನ್ಯಾಯಾಲಯ ಆಕ್ಷೇಪಣೆ ವ್ಯಕ್ತಪಡಿಸಿದೆ.

ಸಣ್ಣ ಕೆಲಸಗಳನ್ನು ಯಾರು ಮಾಡಬೇಕು, ಯಾರು ಮಾಡಬಾರದು ಎಂದು ನಿರ್ಧರಿಸಲು, ಇಲ್ಲಿ ಯಾವುದೇ ಗುಂಪು ಸ್ಕ್ಯಾವೆಂಜರ್ ವರ್ಗವಾಗಿ ಹುಟ್ಟಿಲ್ಲ. ಹಾಗಾಗಿ, ಕಸ ಗುಡಿಸುವ ಕೆಲಸ ಯಾರು ಮಾಡಬೇಕು, ಅಡುಗೆ ಕೆಲಸ ಯಾರು ಮಾಡಬೇಕು ಎಂದು ಜಾತಿ, ವರ್ಗ ನೋಡಿ ನಿರ್ಧರಿಸುವುದು ಅಸ್ಪೃಶ್ಯತೆಯ ಆಚರಣೆಯಾಗಿದೆ. ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಡಿನೋಟಿಫೈಡ್ ಬುಡಕಟ್ಟುಗಳನ್ನು ಉಲ್ಲೇಖಿಸುವ ರಾಜಸ್ಥಾನದ ಜೈಲು ಕೈಪಿಡಿಯ ನಿಬಂಧನೆಗಳನ್ನು ಕೂಡ ನ್ಯಾಯಾಲಯ ಎತ್ತಿ ತೋರಿಸಿದೆ.

ಜಾತಿ ಆಧಾರಿತ ಕೆಲಸದ ಹಂಚಿಕೆಯನ್ನು ಕೊನೆಗೊಳಿಸಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ಜೈಲು ಕೈಪಿಡಿಗಳನ್ನು ಪರಿಷ್ಕರಿಸುವಂತೆ ಕೋರ್ಟ್ ನಿರ್ದೇಶಿಸಿದೆ. ಜಾತಿ ಆಧಾರಿತ ಪ್ರತ್ಯೇಕತೆಯನ್ನು ಪರಿಹರಿಸಲು ತನ್ನ ಮಾದರಿ ಜೈಲು ನಿಯಮಗಳಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ. ಜೈಲು ಕೈಪಿಡಿಗಳಲ್ಲಿ ವಾಡಿಕೆಯ ಅಪರಾಧಿಗಳ ಉಲ್ಲೇಖವು ಅವರ ಜಾತಿ ಅಥವಾ ಪಂಗಡವನ್ನು ಉಲ್ಲೇಖಿಸದೆ ಶಾಸಕಾಂಗ ವ್ಯಾಖ್ಯಾನಗಳಿಗೆ ಅನುಗುಣವಾಗಿರಬೇಕು ಎಂದು ನ್ಯಾಯಾಲಯವು ನಿರ್ದೇಶಿಸಿದೆ.

ಮುಖ್ಯವಾಗಿ, ಜೈಲು ರಿಜಿಸ್ಟರ್‌ಗಳಲ್ಲಿನ ಜಾತಿ ಕಾಲಂಗಳನ್ನು ಅಳಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ತೀರ್ಪು ಪ್ರಕಟಿಸುವ ಮೊದಲು, ಸಿಜೆಐ ಚಂದ್ರಚೂಡ್ ಅವರು “ಸುಂದರವಾಗಿ ಸಂಶೋಧಿಸಲಾದ ಅರ್ಜಿ” ಎಂದು ಹೇಳಿದ್ದು, ವಿಷಯವನ್ನು ಪರಿಣಾಮಕಾರಿಯಾಗಿ ವಾದಿಸಿದಕ್ಕಾಗಿ ವಕೀಲರನ್ನು ಅಭಿನಂದಿಸಿದ್ದಾರೆ.

ಪ್ರಕರಣದ ಹಿನ್ನೆಲೆ : ‘ಭಾರತದ ಜೈಲು ಕೈಪಿಡಿಗಳ ಮೂಲಕ ರಾಜ್ಯ ಪ್ರಾಯೋಜಿತ ಜಾತಿ ತಾರತಮ್ಯ ನಡೆಸಲಾಗ್ತಿದೆ’ ಎಂಬ ತನ್ನ ತನಿಖಾ ವರದಿ ಆಧರಿಸಿ ದಿ ವೈರ್‌ನ ಪತ್ರಕರ್ತೆ ಸುಕನ್ಯಾ ಶಾಂತಾ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ರಾಜ್ಯಗಳ ಜೈಲು ಕೈಪಿಡಿಗಳು ಕೆಲಸ ನೀಡುವಲ್ಲಿ ಮತ್ತು ಬ್ಯಾರಕ್‌ಗಳ ಹಂಚಿಕೆ ವೇಳೆ ಕೈದಿಗಳನ್ನು ಜಾತಿ ಆಧಾರದ ಮೇಲೆ ಪ್ರತ್ಯೇಕಿಸಲು ಉತ್ತೇಜನ ನೀಡುವಂತಿದೆ. ಅಲ್ಲದೆ, ದುರ್ಬಲ ಜಾತಿಯ ಕೈದಿಗಳಿಂದ ಬಲವಂತದ ದುಡಿಮೆ ಮಾಡಿಸಿಕೊಂಡು ದೌರ್ಜನ್ಯ ಎಸಗುತ್ತಿದೆ ಎಂದು ಸುಕನ್ಯಾ ತನ್ನ ಅರ್ಜಿಯಲ್ಲಿ ಹೇಳಿದ್ದರು.

ಜೈಲುಗಳಲ್ಲಿ ಜಾತಿ ಆಧಾರಿತ ಕೈದಿ ಕಾರ್ಮಿಕರ ಪ್ರತ್ಯೇಕತೆಯು ವಸಾಹತುಶಾಹಿ ಭಾರತದ ಅವಶೇಷವಾಗಿದೆ. ಜಾತಿ ಆಧಾರಿತ ಕೈದಿ ಕಾರ್ಮಿಕರ ಹಂಚಿಕೆ ಅವಮಾನಕರ ಮತ್ತು ಅನಾರೋಗ್ಯಕರವಾಗಿದೆ. ಇದು ಘನತೆಯಿಂದ ಬದುಕುವ ಕೈದಿಗಳ ಹಕ್ಕಿನ ವಿರುದ್ಧವಾಗಿದೆ ಎಂದಿದ್ದರು.

ತಮಿಳುನಾಡಿನ ಪಾಲಯಂಕೊಟ್ಟೈ ಕೇಂದ್ರ ಕಾರಾಗೃಹದಲ್ಲಿ ತೇವರ್‌, ನಾಡಾರ್‌ ಮತ್ತು ಪಲ್ಲರ್‌ ಕೈದಿಗಳನ್ನು ಅವರ ಜಾತಿಯ ಆಧಾರದ ಮೇಲೆ ವಿವಿಧ ಬ್ಯಾರಕ್‌ಗಳಲ್ಲಿ ಪ್ರತ್ಯೇಕಿಸಿರುವುದು ಕಾರಾಗೃಹಗಳಲ್ಲಿ ಜಾತಿ ಆಧಾರಿತ ತಾರತಮ್ಯಕ್ಕೆ ಸ್ಪಷ್ಟ ಉದಾಹರಣೆಯಾಗಿದೆ. ಜೈಲಿನೊಳಗೆ ಕಾಲಿಟ್ಟ ಕೂಡಲೇ ಕೈದಿಗಳು ಇಂತಹ ತಾರತಮ್ಯವನ್ನು ಎದುರಿಸುತ್ತಿದ್ದಾರೆ ಎಂದು ತಿಳಿಸಿದ್ದರು.

ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಆಂಧ್ರ ಪ್ರದೇಶ, ತೆಲಂಗಾಣ, ಪಂಜಾಬ್, ಒಡಿಶಾ, ಜಾರ್ಖಂಡ್, ಕೇರಳ, ತಮಿಳುನಾಡು ಮತ್ತು ಮಹಾರಾಷ್ಟ್ರದ ಜೈಲು ಕೈಪಿಡಿಗಳಲ್ಲಿ ಕಂಡುಬರುವ ತಾರತಮ್ಯದ ನಿಬಂಧನೆಗಳನ್ನು ರದ್ದುಗೊಳಿಸಬೇಕೆಂದು ಅರ್ಜಿಯಲ್ಲಿ ಕೋರಿದ್ದರು.

ಇದನ್ನೂ ಓದಿ : ತೆಲಂಗಾಣ | ಸಮಂತಾ-ನಾಗಚೈತನ್ಯ ವಿಚ್ಛೇದನ ವಿಷಯದಲ್ಲಿ ರಾಜಕೀಯ ಕಾಳಗ : ಸಚಿವೆ ಸುರೇಖಾಗೆ ಕೆಟಿಆರ್ ಲೀಗಲ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...