Homeಮುಖಪುಟಕೈದಿಗಳಿಗೆ ಜಾತಿ ಆಧಾರಿತ ಕೆಲಸ ಹಂಚಿಕೆ ನಿಲ್ಲಿಸಿ, ಜೈಲು ನೋಂದಣಿಯಿಂದ ಜಾತಿ ಕಾಲಂ ಅಳಿಸಿ :...

ಕೈದಿಗಳಿಗೆ ಜಾತಿ ಆಧಾರಿತ ಕೆಲಸ ಹಂಚಿಕೆ ನಿಲ್ಲಿಸಿ, ಜೈಲು ನೋಂದಣಿಯಿಂದ ಜಾತಿ ಕಾಲಂ ಅಳಿಸಿ : ಸುಪ್ರೀಂ ಕೋರ್ಟ್

- Advertisement -
- Advertisement -

ಜಾತಿ ಆಧಾರಿತ ತಾರತಮ್ಯ ಮಾಡಲಾಗ್ತಿದೆ, ಜಾತಿ ನೋಡಿ ಜೈಲುಗಳಲ್ಲಿ ಕೈದಿಗಳನ್ನು ಪ್ರತ್ಯೇಕಿಸಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು (ಅ.3) ಮಹತ್ವದ ತೀರ್ಪು ಪ್ರಕಟಿಸಿದೆ.

ಎಲ್ಲಾ ಜಾತಿಗಳ ಕೈದಿಗಳನ್ನು ಮಾನವೀಯ ರೀತಿಯಲ್ಲಿ ಮತ್ತು ಏಕರೂಪವಾಗಿ ಪರಿಗಣಿಸಬೇಕು. ಕೆಳ ವರ್ಗದ ಕೈದಿಗಳನ್ನು ಜಾತಿ ಆಧಾರದಲ್ಲಿ ತಾರತಮ್ಯ ಮಾಡಬಾರದು ಎಂದು ನಿರ್ದೇಶಿಸಿದೆ.

ದಿ ವೈರ್‌ನಲ್ಲಿ ಪ್ರಕಟವಾದ ಲೇಖನವನ್ನು ಆಧರಿಸಿ ಪತ್ರಕರ್ತೆ ಸುಕನ್ಯಾ ಶಾಂತಾ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ, ಮನೋಜ್ ಮಿಶ್ರಾ ಅವರ ಪೀಠವು ತೀರ್ಪು ನೀಡಿದೆ.

ಕೆಳ ವರ್ಗದ ಕೈದಿಗಳನ್ನು ಸ್ವಚ್ಛತೆ ಮತ್ತು ಕಸಗುಡಿಸಲು ನಿಯೋಜಿಸುವುದು. ಉನ್ನತ ಜಾತಿಯ ಕೈದಿಗಳನ್ನು ಅಡುಗೆ ಮಾಡಲು ನಿಯೋಜಿಸುವುದು ನೇರ ಜಾತಿ ತಾರತಮ್ಯವಾಗಿದೆ. ಇದು ಆರ್ಟಿಕಲ್ 15 ರ ಉಲ್ಲಂಘನೆಯಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಸರಳ ಜೈಲು ಶಿಕ್ಷೆಗೆ ಒಳಗಾದ ವ್ಯಕ್ತಿಗೆ, ಆತನ ಜಾತಿಯವರು ಮಾಡದ ಕೆಲಸವನ್ನು ನೀಡಬೇಕಾಗಿಲ್ಲ ಎಂಬ ಉತ್ತರ ಪ್ರದೇಶದ ಜೈಲು ಕೈಪಿಡಿಯ ನಿಯಮಕ್ಕೆ ನ್ಯಾಯಾಲಯ ಆಕ್ಷೇಪಣೆ ವ್ಯಕ್ತಪಡಿಸಿದೆ.

ಸಣ್ಣ ಕೆಲಸಗಳನ್ನು ಯಾರು ಮಾಡಬೇಕು, ಯಾರು ಮಾಡಬಾರದು ಎಂದು ನಿರ್ಧರಿಸಲು, ಇಲ್ಲಿ ಯಾವುದೇ ಗುಂಪು ಸ್ಕ್ಯಾವೆಂಜರ್ ವರ್ಗವಾಗಿ ಹುಟ್ಟಿಲ್ಲ. ಹಾಗಾಗಿ, ಕಸ ಗುಡಿಸುವ ಕೆಲಸ ಯಾರು ಮಾಡಬೇಕು, ಅಡುಗೆ ಕೆಲಸ ಯಾರು ಮಾಡಬೇಕು ಎಂದು ಜಾತಿ, ವರ್ಗ ನೋಡಿ ನಿರ್ಧರಿಸುವುದು ಅಸ್ಪೃಶ್ಯತೆಯ ಆಚರಣೆಯಾಗಿದೆ. ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಡಿನೋಟಿಫೈಡ್ ಬುಡಕಟ್ಟುಗಳನ್ನು ಉಲ್ಲೇಖಿಸುವ ರಾಜಸ್ಥಾನದ ಜೈಲು ಕೈಪಿಡಿಯ ನಿಬಂಧನೆಗಳನ್ನು ಕೂಡ ನ್ಯಾಯಾಲಯ ಎತ್ತಿ ತೋರಿಸಿದೆ.

ಜಾತಿ ಆಧಾರಿತ ಕೆಲಸದ ಹಂಚಿಕೆಯನ್ನು ಕೊನೆಗೊಳಿಸಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ಜೈಲು ಕೈಪಿಡಿಗಳನ್ನು ಪರಿಷ್ಕರಿಸುವಂತೆ ಕೋರ್ಟ್ ನಿರ್ದೇಶಿಸಿದೆ. ಜಾತಿ ಆಧಾರಿತ ಪ್ರತ್ಯೇಕತೆಯನ್ನು ಪರಿಹರಿಸಲು ತನ್ನ ಮಾದರಿ ಜೈಲು ನಿಯಮಗಳಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ. ಜೈಲು ಕೈಪಿಡಿಗಳಲ್ಲಿ ವಾಡಿಕೆಯ ಅಪರಾಧಿಗಳ ಉಲ್ಲೇಖವು ಅವರ ಜಾತಿ ಅಥವಾ ಪಂಗಡವನ್ನು ಉಲ್ಲೇಖಿಸದೆ ಶಾಸಕಾಂಗ ವ್ಯಾಖ್ಯಾನಗಳಿಗೆ ಅನುಗುಣವಾಗಿರಬೇಕು ಎಂದು ನ್ಯಾಯಾಲಯವು ನಿರ್ದೇಶಿಸಿದೆ.

ಮುಖ್ಯವಾಗಿ, ಜೈಲು ರಿಜಿಸ್ಟರ್‌ಗಳಲ್ಲಿನ ಜಾತಿ ಕಾಲಂಗಳನ್ನು ಅಳಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ತೀರ್ಪು ಪ್ರಕಟಿಸುವ ಮೊದಲು, ಸಿಜೆಐ ಚಂದ್ರಚೂಡ್ ಅವರು “ಸುಂದರವಾಗಿ ಸಂಶೋಧಿಸಲಾದ ಅರ್ಜಿ” ಎಂದು ಹೇಳಿದ್ದು, ವಿಷಯವನ್ನು ಪರಿಣಾಮಕಾರಿಯಾಗಿ ವಾದಿಸಿದಕ್ಕಾಗಿ ವಕೀಲರನ್ನು ಅಭಿನಂದಿಸಿದ್ದಾರೆ.

ಪ್ರಕರಣದ ಹಿನ್ನೆಲೆ : ‘ಭಾರತದ ಜೈಲು ಕೈಪಿಡಿಗಳ ಮೂಲಕ ರಾಜ್ಯ ಪ್ರಾಯೋಜಿತ ಜಾತಿ ತಾರತಮ್ಯ ನಡೆಸಲಾಗ್ತಿದೆ’ ಎಂಬ ತನ್ನ ತನಿಖಾ ವರದಿ ಆಧರಿಸಿ ದಿ ವೈರ್‌ನ ಪತ್ರಕರ್ತೆ ಸುಕನ್ಯಾ ಶಾಂತಾ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ರಾಜ್ಯಗಳ ಜೈಲು ಕೈಪಿಡಿಗಳು ಕೆಲಸ ನೀಡುವಲ್ಲಿ ಮತ್ತು ಬ್ಯಾರಕ್‌ಗಳ ಹಂಚಿಕೆ ವೇಳೆ ಕೈದಿಗಳನ್ನು ಜಾತಿ ಆಧಾರದ ಮೇಲೆ ಪ್ರತ್ಯೇಕಿಸಲು ಉತ್ತೇಜನ ನೀಡುವಂತಿದೆ. ಅಲ್ಲದೆ, ದುರ್ಬಲ ಜಾತಿಯ ಕೈದಿಗಳಿಂದ ಬಲವಂತದ ದುಡಿಮೆ ಮಾಡಿಸಿಕೊಂಡು ದೌರ್ಜನ್ಯ ಎಸಗುತ್ತಿದೆ ಎಂದು ಸುಕನ್ಯಾ ತನ್ನ ಅರ್ಜಿಯಲ್ಲಿ ಹೇಳಿದ್ದರು.

ಜೈಲುಗಳಲ್ಲಿ ಜಾತಿ ಆಧಾರಿತ ಕೈದಿ ಕಾರ್ಮಿಕರ ಪ್ರತ್ಯೇಕತೆಯು ವಸಾಹತುಶಾಹಿ ಭಾರತದ ಅವಶೇಷವಾಗಿದೆ. ಜಾತಿ ಆಧಾರಿತ ಕೈದಿ ಕಾರ್ಮಿಕರ ಹಂಚಿಕೆ ಅವಮಾನಕರ ಮತ್ತು ಅನಾರೋಗ್ಯಕರವಾಗಿದೆ. ಇದು ಘನತೆಯಿಂದ ಬದುಕುವ ಕೈದಿಗಳ ಹಕ್ಕಿನ ವಿರುದ್ಧವಾಗಿದೆ ಎಂದಿದ್ದರು.

ತಮಿಳುನಾಡಿನ ಪಾಲಯಂಕೊಟ್ಟೈ ಕೇಂದ್ರ ಕಾರಾಗೃಹದಲ್ಲಿ ತೇವರ್‌, ನಾಡಾರ್‌ ಮತ್ತು ಪಲ್ಲರ್‌ ಕೈದಿಗಳನ್ನು ಅವರ ಜಾತಿಯ ಆಧಾರದ ಮೇಲೆ ವಿವಿಧ ಬ್ಯಾರಕ್‌ಗಳಲ್ಲಿ ಪ್ರತ್ಯೇಕಿಸಿರುವುದು ಕಾರಾಗೃಹಗಳಲ್ಲಿ ಜಾತಿ ಆಧಾರಿತ ತಾರತಮ್ಯಕ್ಕೆ ಸ್ಪಷ್ಟ ಉದಾಹರಣೆಯಾಗಿದೆ. ಜೈಲಿನೊಳಗೆ ಕಾಲಿಟ್ಟ ಕೂಡಲೇ ಕೈದಿಗಳು ಇಂತಹ ತಾರತಮ್ಯವನ್ನು ಎದುರಿಸುತ್ತಿದ್ದಾರೆ ಎಂದು ತಿಳಿಸಿದ್ದರು.

ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಆಂಧ್ರ ಪ್ರದೇಶ, ತೆಲಂಗಾಣ, ಪಂಜಾಬ್, ಒಡಿಶಾ, ಜಾರ್ಖಂಡ್, ಕೇರಳ, ತಮಿಳುನಾಡು ಮತ್ತು ಮಹಾರಾಷ್ಟ್ರದ ಜೈಲು ಕೈಪಿಡಿಗಳಲ್ಲಿ ಕಂಡುಬರುವ ತಾರತಮ್ಯದ ನಿಬಂಧನೆಗಳನ್ನು ರದ್ದುಗೊಳಿಸಬೇಕೆಂದು ಅರ್ಜಿಯಲ್ಲಿ ಕೋರಿದ್ದರು.

ಇದನ್ನೂ ಓದಿ : ತೆಲಂಗಾಣ | ಸಮಂತಾ-ನಾಗಚೈತನ್ಯ ವಿಚ್ಛೇದನ ವಿಷಯದಲ್ಲಿ ರಾಜಕೀಯ ಕಾಳಗ : ಸಚಿವೆ ಸುರೇಖಾಗೆ ಕೆಟಿಆರ್ ಲೀಗಲ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...