Homeಮುಖಪುಟಕೈದಿಗಳಿಗೆ ಜಾತಿ ಆಧಾರಿತ ಕೆಲಸ ಹಂಚಿಕೆ ನಿಲ್ಲಿಸಿ, ಜೈಲು ನೋಂದಣಿಯಿಂದ ಜಾತಿ ಕಾಲಂ ಅಳಿಸಿ :...

ಕೈದಿಗಳಿಗೆ ಜಾತಿ ಆಧಾರಿತ ಕೆಲಸ ಹಂಚಿಕೆ ನಿಲ್ಲಿಸಿ, ಜೈಲು ನೋಂದಣಿಯಿಂದ ಜಾತಿ ಕಾಲಂ ಅಳಿಸಿ : ಸುಪ್ರೀಂ ಕೋರ್ಟ್

- Advertisement -
- Advertisement -

ಜಾತಿ ಆಧಾರಿತ ತಾರತಮ್ಯ ಮಾಡಲಾಗ್ತಿದೆ, ಜಾತಿ ನೋಡಿ ಜೈಲುಗಳಲ್ಲಿ ಕೈದಿಗಳನ್ನು ಪ್ರತ್ಯೇಕಿಸಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು (ಅ.3) ಮಹತ್ವದ ತೀರ್ಪು ಪ್ರಕಟಿಸಿದೆ.

ಎಲ್ಲಾ ಜಾತಿಗಳ ಕೈದಿಗಳನ್ನು ಮಾನವೀಯ ರೀತಿಯಲ್ಲಿ ಮತ್ತು ಏಕರೂಪವಾಗಿ ಪರಿಗಣಿಸಬೇಕು. ಕೆಳ ವರ್ಗದ ಕೈದಿಗಳನ್ನು ಜಾತಿ ಆಧಾರದಲ್ಲಿ ತಾರತಮ್ಯ ಮಾಡಬಾರದು ಎಂದು ನಿರ್ದೇಶಿಸಿದೆ.

ದಿ ವೈರ್‌ನಲ್ಲಿ ಪ್ರಕಟವಾದ ಲೇಖನವನ್ನು ಆಧರಿಸಿ ಪತ್ರಕರ್ತೆ ಸುಕನ್ಯಾ ಶಾಂತಾ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ, ಮನೋಜ್ ಮಿಶ್ರಾ ಅವರ ಪೀಠವು ತೀರ್ಪು ನೀಡಿದೆ.

ಕೆಳ ವರ್ಗದ ಕೈದಿಗಳನ್ನು ಸ್ವಚ್ಛತೆ ಮತ್ತು ಕಸಗುಡಿಸಲು ನಿಯೋಜಿಸುವುದು. ಉನ್ನತ ಜಾತಿಯ ಕೈದಿಗಳನ್ನು ಅಡುಗೆ ಮಾಡಲು ನಿಯೋಜಿಸುವುದು ನೇರ ಜಾತಿ ತಾರತಮ್ಯವಾಗಿದೆ. ಇದು ಆರ್ಟಿಕಲ್ 15 ರ ಉಲ್ಲಂಘನೆಯಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಸರಳ ಜೈಲು ಶಿಕ್ಷೆಗೆ ಒಳಗಾದ ವ್ಯಕ್ತಿಗೆ, ಆತನ ಜಾತಿಯವರು ಮಾಡದ ಕೆಲಸವನ್ನು ನೀಡಬೇಕಾಗಿಲ್ಲ ಎಂಬ ಉತ್ತರ ಪ್ರದೇಶದ ಜೈಲು ಕೈಪಿಡಿಯ ನಿಯಮಕ್ಕೆ ನ್ಯಾಯಾಲಯ ಆಕ್ಷೇಪಣೆ ವ್ಯಕ್ತಪಡಿಸಿದೆ.

ಸಣ್ಣ ಕೆಲಸಗಳನ್ನು ಯಾರು ಮಾಡಬೇಕು, ಯಾರು ಮಾಡಬಾರದು ಎಂದು ನಿರ್ಧರಿಸಲು, ಇಲ್ಲಿ ಯಾವುದೇ ಗುಂಪು ಸ್ಕ್ಯಾವೆಂಜರ್ ವರ್ಗವಾಗಿ ಹುಟ್ಟಿಲ್ಲ. ಹಾಗಾಗಿ, ಕಸ ಗುಡಿಸುವ ಕೆಲಸ ಯಾರು ಮಾಡಬೇಕು, ಅಡುಗೆ ಕೆಲಸ ಯಾರು ಮಾಡಬೇಕು ಎಂದು ಜಾತಿ, ವರ್ಗ ನೋಡಿ ನಿರ್ಧರಿಸುವುದು ಅಸ್ಪೃಶ್ಯತೆಯ ಆಚರಣೆಯಾಗಿದೆ. ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಡಿನೋಟಿಫೈಡ್ ಬುಡಕಟ್ಟುಗಳನ್ನು ಉಲ್ಲೇಖಿಸುವ ರಾಜಸ್ಥಾನದ ಜೈಲು ಕೈಪಿಡಿಯ ನಿಬಂಧನೆಗಳನ್ನು ಕೂಡ ನ್ಯಾಯಾಲಯ ಎತ್ತಿ ತೋರಿಸಿದೆ.

ಜಾತಿ ಆಧಾರಿತ ಕೆಲಸದ ಹಂಚಿಕೆಯನ್ನು ಕೊನೆಗೊಳಿಸಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ಜೈಲು ಕೈಪಿಡಿಗಳನ್ನು ಪರಿಷ್ಕರಿಸುವಂತೆ ಕೋರ್ಟ್ ನಿರ್ದೇಶಿಸಿದೆ. ಜಾತಿ ಆಧಾರಿತ ಪ್ರತ್ಯೇಕತೆಯನ್ನು ಪರಿಹರಿಸಲು ತನ್ನ ಮಾದರಿ ಜೈಲು ನಿಯಮಗಳಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ. ಜೈಲು ಕೈಪಿಡಿಗಳಲ್ಲಿ ವಾಡಿಕೆಯ ಅಪರಾಧಿಗಳ ಉಲ್ಲೇಖವು ಅವರ ಜಾತಿ ಅಥವಾ ಪಂಗಡವನ್ನು ಉಲ್ಲೇಖಿಸದೆ ಶಾಸಕಾಂಗ ವ್ಯಾಖ್ಯಾನಗಳಿಗೆ ಅನುಗುಣವಾಗಿರಬೇಕು ಎಂದು ನ್ಯಾಯಾಲಯವು ನಿರ್ದೇಶಿಸಿದೆ.

ಮುಖ್ಯವಾಗಿ, ಜೈಲು ರಿಜಿಸ್ಟರ್‌ಗಳಲ್ಲಿನ ಜಾತಿ ಕಾಲಂಗಳನ್ನು ಅಳಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ತೀರ್ಪು ಪ್ರಕಟಿಸುವ ಮೊದಲು, ಸಿಜೆಐ ಚಂದ್ರಚೂಡ್ ಅವರು “ಸುಂದರವಾಗಿ ಸಂಶೋಧಿಸಲಾದ ಅರ್ಜಿ” ಎಂದು ಹೇಳಿದ್ದು, ವಿಷಯವನ್ನು ಪರಿಣಾಮಕಾರಿಯಾಗಿ ವಾದಿಸಿದಕ್ಕಾಗಿ ವಕೀಲರನ್ನು ಅಭಿನಂದಿಸಿದ್ದಾರೆ.

ಪ್ರಕರಣದ ಹಿನ್ನೆಲೆ : ‘ಭಾರತದ ಜೈಲು ಕೈಪಿಡಿಗಳ ಮೂಲಕ ರಾಜ್ಯ ಪ್ರಾಯೋಜಿತ ಜಾತಿ ತಾರತಮ್ಯ ನಡೆಸಲಾಗ್ತಿದೆ’ ಎಂಬ ತನ್ನ ತನಿಖಾ ವರದಿ ಆಧರಿಸಿ ದಿ ವೈರ್‌ನ ಪತ್ರಕರ್ತೆ ಸುಕನ್ಯಾ ಶಾಂತಾ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ರಾಜ್ಯಗಳ ಜೈಲು ಕೈಪಿಡಿಗಳು ಕೆಲಸ ನೀಡುವಲ್ಲಿ ಮತ್ತು ಬ್ಯಾರಕ್‌ಗಳ ಹಂಚಿಕೆ ವೇಳೆ ಕೈದಿಗಳನ್ನು ಜಾತಿ ಆಧಾರದ ಮೇಲೆ ಪ್ರತ್ಯೇಕಿಸಲು ಉತ್ತೇಜನ ನೀಡುವಂತಿದೆ. ಅಲ್ಲದೆ, ದುರ್ಬಲ ಜಾತಿಯ ಕೈದಿಗಳಿಂದ ಬಲವಂತದ ದುಡಿಮೆ ಮಾಡಿಸಿಕೊಂಡು ದೌರ್ಜನ್ಯ ಎಸಗುತ್ತಿದೆ ಎಂದು ಸುಕನ್ಯಾ ತನ್ನ ಅರ್ಜಿಯಲ್ಲಿ ಹೇಳಿದ್ದರು.

ಜೈಲುಗಳಲ್ಲಿ ಜಾತಿ ಆಧಾರಿತ ಕೈದಿ ಕಾರ್ಮಿಕರ ಪ್ರತ್ಯೇಕತೆಯು ವಸಾಹತುಶಾಹಿ ಭಾರತದ ಅವಶೇಷವಾಗಿದೆ. ಜಾತಿ ಆಧಾರಿತ ಕೈದಿ ಕಾರ್ಮಿಕರ ಹಂಚಿಕೆ ಅವಮಾನಕರ ಮತ್ತು ಅನಾರೋಗ್ಯಕರವಾಗಿದೆ. ಇದು ಘನತೆಯಿಂದ ಬದುಕುವ ಕೈದಿಗಳ ಹಕ್ಕಿನ ವಿರುದ್ಧವಾಗಿದೆ ಎಂದಿದ್ದರು.

ತಮಿಳುನಾಡಿನ ಪಾಲಯಂಕೊಟ್ಟೈ ಕೇಂದ್ರ ಕಾರಾಗೃಹದಲ್ಲಿ ತೇವರ್‌, ನಾಡಾರ್‌ ಮತ್ತು ಪಲ್ಲರ್‌ ಕೈದಿಗಳನ್ನು ಅವರ ಜಾತಿಯ ಆಧಾರದ ಮೇಲೆ ವಿವಿಧ ಬ್ಯಾರಕ್‌ಗಳಲ್ಲಿ ಪ್ರತ್ಯೇಕಿಸಿರುವುದು ಕಾರಾಗೃಹಗಳಲ್ಲಿ ಜಾತಿ ಆಧಾರಿತ ತಾರತಮ್ಯಕ್ಕೆ ಸ್ಪಷ್ಟ ಉದಾಹರಣೆಯಾಗಿದೆ. ಜೈಲಿನೊಳಗೆ ಕಾಲಿಟ್ಟ ಕೂಡಲೇ ಕೈದಿಗಳು ಇಂತಹ ತಾರತಮ್ಯವನ್ನು ಎದುರಿಸುತ್ತಿದ್ದಾರೆ ಎಂದು ತಿಳಿಸಿದ್ದರು.

ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಆಂಧ್ರ ಪ್ರದೇಶ, ತೆಲಂಗಾಣ, ಪಂಜಾಬ್, ಒಡಿಶಾ, ಜಾರ್ಖಂಡ್, ಕೇರಳ, ತಮಿಳುನಾಡು ಮತ್ತು ಮಹಾರಾಷ್ಟ್ರದ ಜೈಲು ಕೈಪಿಡಿಗಳಲ್ಲಿ ಕಂಡುಬರುವ ತಾರತಮ್ಯದ ನಿಬಂಧನೆಗಳನ್ನು ರದ್ದುಗೊಳಿಸಬೇಕೆಂದು ಅರ್ಜಿಯಲ್ಲಿ ಕೋರಿದ್ದರು.

ಇದನ್ನೂ ಓದಿ : ತೆಲಂಗಾಣ | ಸಮಂತಾ-ನಾಗಚೈತನ್ಯ ವಿಚ್ಛೇದನ ವಿಷಯದಲ್ಲಿ ರಾಜಕೀಯ ಕಾಳಗ : ಸಚಿವೆ ಸುರೇಖಾಗೆ ಕೆಟಿಆರ್ ಲೀಗಲ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....