Homeಮುಖಪುಟಕೈದಿಗಳಿಗೆ ಜಾತಿ ಆಧಾರಿತ ಕೆಲಸ ಹಂಚಿಕೆ ನಿಲ್ಲಿಸಿ, ಜೈಲು ನೋಂದಣಿಯಿಂದ ಜಾತಿ ಕಾಲಂ ಅಳಿಸಿ :...

ಕೈದಿಗಳಿಗೆ ಜಾತಿ ಆಧಾರಿತ ಕೆಲಸ ಹಂಚಿಕೆ ನಿಲ್ಲಿಸಿ, ಜೈಲು ನೋಂದಣಿಯಿಂದ ಜಾತಿ ಕಾಲಂ ಅಳಿಸಿ : ಸುಪ್ರೀಂ ಕೋರ್ಟ್

- Advertisement -
- Advertisement -

ಜಾತಿ ಆಧಾರಿತ ತಾರತಮ್ಯ ಮಾಡಲಾಗ್ತಿದೆ, ಜಾತಿ ನೋಡಿ ಜೈಲುಗಳಲ್ಲಿ ಕೈದಿಗಳನ್ನು ಪ್ರತ್ಯೇಕಿಸಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು (ಅ.3) ಮಹತ್ವದ ತೀರ್ಪು ಪ್ರಕಟಿಸಿದೆ.

ಎಲ್ಲಾ ಜಾತಿಗಳ ಕೈದಿಗಳನ್ನು ಮಾನವೀಯ ರೀತಿಯಲ್ಲಿ ಮತ್ತು ಏಕರೂಪವಾಗಿ ಪರಿಗಣಿಸಬೇಕು. ಕೆಳ ವರ್ಗದ ಕೈದಿಗಳನ್ನು ಜಾತಿ ಆಧಾರದಲ್ಲಿ ತಾರತಮ್ಯ ಮಾಡಬಾರದು ಎಂದು ನಿರ್ದೇಶಿಸಿದೆ.

ದಿ ವೈರ್‌ನಲ್ಲಿ ಪ್ರಕಟವಾದ ಲೇಖನವನ್ನು ಆಧರಿಸಿ ಪತ್ರಕರ್ತೆ ಸುಕನ್ಯಾ ಶಾಂತಾ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ, ಮನೋಜ್ ಮಿಶ್ರಾ ಅವರ ಪೀಠವು ತೀರ್ಪು ನೀಡಿದೆ.

ಕೆಳ ವರ್ಗದ ಕೈದಿಗಳನ್ನು ಸ್ವಚ್ಛತೆ ಮತ್ತು ಕಸಗುಡಿಸಲು ನಿಯೋಜಿಸುವುದು. ಉನ್ನತ ಜಾತಿಯ ಕೈದಿಗಳನ್ನು ಅಡುಗೆ ಮಾಡಲು ನಿಯೋಜಿಸುವುದು ನೇರ ಜಾತಿ ತಾರತಮ್ಯವಾಗಿದೆ. ಇದು ಆರ್ಟಿಕಲ್ 15 ರ ಉಲ್ಲಂಘನೆಯಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಸರಳ ಜೈಲು ಶಿಕ್ಷೆಗೆ ಒಳಗಾದ ವ್ಯಕ್ತಿಗೆ, ಆತನ ಜಾತಿಯವರು ಮಾಡದ ಕೆಲಸವನ್ನು ನೀಡಬೇಕಾಗಿಲ್ಲ ಎಂಬ ಉತ್ತರ ಪ್ರದೇಶದ ಜೈಲು ಕೈಪಿಡಿಯ ನಿಯಮಕ್ಕೆ ನ್ಯಾಯಾಲಯ ಆಕ್ಷೇಪಣೆ ವ್ಯಕ್ತಪಡಿಸಿದೆ.

ಸಣ್ಣ ಕೆಲಸಗಳನ್ನು ಯಾರು ಮಾಡಬೇಕು, ಯಾರು ಮಾಡಬಾರದು ಎಂದು ನಿರ್ಧರಿಸಲು, ಇಲ್ಲಿ ಯಾವುದೇ ಗುಂಪು ಸ್ಕ್ಯಾವೆಂಜರ್ ವರ್ಗವಾಗಿ ಹುಟ್ಟಿಲ್ಲ. ಹಾಗಾಗಿ, ಕಸ ಗುಡಿಸುವ ಕೆಲಸ ಯಾರು ಮಾಡಬೇಕು, ಅಡುಗೆ ಕೆಲಸ ಯಾರು ಮಾಡಬೇಕು ಎಂದು ಜಾತಿ, ವರ್ಗ ನೋಡಿ ನಿರ್ಧರಿಸುವುದು ಅಸ್ಪೃಶ್ಯತೆಯ ಆಚರಣೆಯಾಗಿದೆ. ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಡಿನೋಟಿಫೈಡ್ ಬುಡಕಟ್ಟುಗಳನ್ನು ಉಲ್ಲೇಖಿಸುವ ರಾಜಸ್ಥಾನದ ಜೈಲು ಕೈಪಿಡಿಯ ನಿಬಂಧನೆಗಳನ್ನು ಕೂಡ ನ್ಯಾಯಾಲಯ ಎತ್ತಿ ತೋರಿಸಿದೆ.

ಜಾತಿ ಆಧಾರಿತ ಕೆಲಸದ ಹಂಚಿಕೆಯನ್ನು ಕೊನೆಗೊಳಿಸಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ಜೈಲು ಕೈಪಿಡಿಗಳನ್ನು ಪರಿಷ್ಕರಿಸುವಂತೆ ಕೋರ್ಟ್ ನಿರ್ದೇಶಿಸಿದೆ. ಜಾತಿ ಆಧಾರಿತ ಪ್ರತ್ಯೇಕತೆಯನ್ನು ಪರಿಹರಿಸಲು ತನ್ನ ಮಾದರಿ ಜೈಲು ನಿಯಮಗಳಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ. ಜೈಲು ಕೈಪಿಡಿಗಳಲ್ಲಿ ವಾಡಿಕೆಯ ಅಪರಾಧಿಗಳ ಉಲ್ಲೇಖವು ಅವರ ಜಾತಿ ಅಥವಾ ಪಂಗಡವನ್ನು ಉಲ್ಲೇಖಿಸದೆ ಶಾಸಕಾಂಗ ವ್ಯಾಖ್ಯಾನಗಳಿಗೆ ಅನುಗುಣವಾಗಿರಬೇಕು ಎಂದು ನ್ಯಾಯಾಲಯವು ನಿರ್ದೇಶಿಸಿದೆ.

ಮುಖ್ಯವಾಗಿ, ಜೈಲು ರಿಜಿಸ್ಟರ್‌ಗಳಲ್ಲಿನ ಜಾತಿ ಕಾಲಂಗಳನ್ನು ಅಳಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ತೀರ್ಪು ಪ್ರಕಟಿಸುವ ಮೊದಲು, ಸಿಜೆಐ ಚಂದ್ರಚೂಡ್ ಅವರು “ಸುಂದರವಾಗಿ ಸಂಶೋಧಿಸಲಾದ ಅರ್ಜಿ” ಎಂದು ಹೇಳಿದ್ದು, ವಿಷಯವನ್ನು ಪರಿಣಾಮಕಾರಿಯಾಗಿ ವಾದಿಸಿದಕ್ಕಾಗಿ ವಕೀಲರನ್ನು ಅಭಿನಂದಿಸಿದ್ದಾರೆ.

ಪ್ರಕರಣದ ಹಿನ್ನೆಲೆ : ‘ಭಾರತದ ಜೈಲು ಕೈಪಿಡಿಗಳ ಮೂಲಕ ರಾಜ್ಯ ಪ್ರಾಯೋಜಿತ ಜಾತಿ ತಾರತಮ್ಯ ನಡೆಸಲಾಗ್ತಿದೆ’ ಎಂಬ ತನ್ನ ತನಿಖಾ ವರದಿ ಆಧರಿಸಿ ದಿ ವೈರ್‌ನ ಪತ್ರಕರ್ತೆ ಸುಕನ್ಯಾ ಶಾಂತಾ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ರಾಜ್ಯಗಳ ಜೈಲು ಕೈಪಿಡಿಗಳು ಕೆಲಸ ನೀಡುವಲ್ಲಿ ಮತ್ತು ಬ್ಯಾರಕ್‌ಗಳ ಹಂಚಿಕೆ ವೇಳೆ ಕೈದಿಗಳನ್ನು ಜಾತಿ ಆಧಾರದ ಮೇಲೆ ಪ್ರತ್ಯೇಕಿಸಲು ಉತ್ತೇಜನ ನೀಡುವಂತಿದೆ. ಅಲ್ಲದೆ, ದುರ್ಬಲ ಜಾತಿಯ ಕೈದಿಗಳಿಂದ ಬಲವಂತದ ದುಡಿಮೆ ಮಾಡಿಸಿಕೊಂಡು ದೌರ್ಜನ್ಯ ಎಸಗುತ್ತಿದೆ ಎಂದು ಸುಕನ್ಯಾ ತನ್ನ ಅರ್ಜಿಯಲ್ಲಿ ಹೇಳಿದ್ದರು.

ಜೈಲುಗಳಲ್ಲಿ ಜಾತಿ ಆಧಾರಿತ ಕೈದಿ ಕಾರ್ಮಿಕರ ಪ್ರತ್ಯೇಕತೆಯು ವಸಾಹತುಶಾಹಿ ಭಾರತದ ಅವಶೇಷವಾಗಿದೆ. ಜಾತಿ ಆಧಾರಿತ ಕೈದಿ ಕಾರ್ಮಿಕರ ಹಂಚಿಕೆ ಅವಮಾನಕರ ಮತ್ತು ಅನಾರೋಗ್ಯಕರವಾಗಿದೆ. ಇದು ಘನತೆಯಿಂದ ಬದುಕುವ ಕೈದಿಗಳ ಹಕ್ಕಿನ ವಿರುದ್ಧವಾಗಿದೆ ಎಂದಿದ್ದರು.

ತಮಿಳುನಾಡಿನ ಪಾಲಯಂಕೊಟ್ಟೈ ಕೇಂದ್ರ ಕಾರಾಗೃಹದಲ್ಲಿ ತೇವರ್‌, ನಾಡಾರ್‌ ಮತ್ತು ಪಲ್ಲರ್‌ ಕೈದಿಗಳನ್ನು ಅವರ ಜಾತಿಯ ಆಧಾರದ ಮೇಲೆ ವಿವಿಧ ಬ್ಯಾರಕ್‌ಗಳಲ್ಲಿ ಪ್ರತ್ಯೇಕಿಸಿರುವುದು ಕಾರಾಗೃಹಗಳಲ್ಲಿ ಜಾತಿ ಆಧಾರಿತ ತಾರತಮ್ಯಕ್ಕೆ ಸ್ಪಷ್ಟ ಉದಾಹರಣೆಯಾಗಿದೆ. ಜೈಲಿನೊಳಗೆ ಕಾಲಿಟ್ಟ ಕೂಡಲೇ ಕೈದಿಗಳು ಇಂತಹ ತಾರತಮ್ಯವನ್ನು ಎದುರಿಸುತ್ತಿದ್ದಾರೆ ಎಂದು ತಿಳಿಸಿದ್ದರು.

ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಆಂಧ್ರ ಪ್ರದೇಶ, ತೆಲಂಗಾಣ, ಪಂಜಾಬ್, ಒಡಿಶಾ, ಜಾರ್ಖಂಡ್, ಕೇರಳ, ತಮಿಳುನಾಡು ಮತ್ತು ಮಹಾರಾಷ್ಟ್ರದ ಜೈಲು ಕೈಪಿಡಿಗಳಲ್ಲಿ ಕಂಡುಬರುವ ತಾರತಮ್ಯದ ನಿಬಂಧನೆಗಳನ್ನು ರದ್ದುಗೊಳಿಸಬೇಕೆಂದು ಅರ್ಜಿಯಲ್ಲಿ ಕೋರಿದ್ದರು.

ಇದನ್ನೂ ಓದಿ : ತೆಲಂಗಾಣ | ಸಮಂತಾ-ನಾಗಚೈತನ್ಯ ವಿಚ್ಛೇದನ ವಿಷಯದಲ್ಲಿ ರಾಜಕೀಯ ಕಾಳಗ : ಸಚಿವೆ ಸುರೇಖಾಗೆ ಕೆಟಿಆರ್ ಲೀಗಲ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...