Homeಕ್ರೀಡೆಒಲಂಪಿಕ್41 ವರ್ಷಗಳ ಕಾಯುವಿಕೆ ಅಂತ್ಯ | ಕೊನೆಗೂ ಪದಕಕ್ಕೆ ಮುತ್ತಿಟ್ಟ ಭಾರತೀಯ ಹಾಕಿ ತಂಡ!

41 ವರ್ಷಗಳ ಕಾಯುವಿಕೆ ಅಂತ್ಯ | ಕೊನೆಗೂ ಪದಕಕ್ಕೆ ಮುತ್ತಿಟ್ಟ ಭಾರತೀಯ ಹಾಕಿ ತಂಡ!

- Advertisement -
- Advertisement -

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿಗಾಗಿ ನಡೆದ ಪುರುಷರ ಹಾಕಿ ಪಂದ್ಯಾಟದಲ್ಲಿ ಭಾರತೀಯ ತಂಡವು ಜರ್ಮನಿ ವಿರುದ್ದ 5-4 ಅಂತರದಲ್ಲಿ ಗೆದ್ದು ಕೊಂಡಿತು. ಈ ಮೂಲಕ ಭಾರತೀಯ ತಂಡವು ಕಳೆದ 41 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದುಕೊಂಡಿತು.

ಮಂಗಳವಾರ ನಡೆದ ಸೆಮಿಫೈನಲ್‌ನಲ್ಲಿ ಭಾರತವು ಬೆಲ್ಜಿಯಂ ವಿರುದ್ದ 2-5 ಅಂತರದಲ್ಲಿ ಸೋಲುಂಡು ಚಿನ್ನದ ಕನಸನ್ನು ಕೈಬಿಟ್ಟಿತ್ತು. 1980 ರಲ್ಲಿ ಮಾಸ್ಕೋ ಕ್ರೀಡಾಕೂಟದಲ್ಲಿ ಭಾರತವು ಕೊನೆಯ ಬಾರಿಗೆ ಹಾಕಿಯಲ್ಲಿ ಪದಕ ಗೆದ್ದಿತ್ತು.

ಇದನ್ನೂ ಓದಿ: ಜಾವಲಿನ್ ಥ್ರೋ: 86.65 ಮೀ ದೂರ ಎಸೆದು ಮೊದಲಿಗರಾಗಿ ಫೈನಲ್ ತಲುಪಿದ ಭಾರತದ ನೀರಜ್!

ಸಿಮ್ರಂಜಿತ್ ಸಿಂಗ್ ಎರಡು ಗೋಲ್‌ ಮತ್ತು ಹಾರ್ದಿಕ್ ಸಿಂಗ್, ಹರ್ಮನ್‌ಪ್ರೀತ್ ಸಿಂಗ್ ಮತ್ತು ರೂಪಿಂದರ್ ಪಾಲ್ ಸಿಂಗ್ ತಲಾ ಒಂದೊಂದು ಗೋಲ್‌ ದಾಖಲಿಸಿದರು. ಮೊದಲ ಕ್ವಾರ್ಟರ್‌ನ ಎರಡನೇ ನಿಮಿಷದಲ್ಲಿ ಜರ್ಮನಿಯ ತೈಮೂರ್ ಒರುಜ್ ಗೋಲು ಗಳಿಸುವುದರೊಂದಿಗೆ ಜರ್ಮನಿ ತಂಡವು ಆರಂಭಿಕ ಮುನ್ನಡೆ ಸಾಧಿಸಿತ್ತು.

ಸಿಮ್ರಂಜಿತ್ ಸಿಂಗ್ ಆಟದ 17 ನೇ ನಿಮಿಷದಲ್ಲಿ ಗೋಲು ಗಳಿಸುವುದರೊಂದಿಗೆ ಭಾರತದ ಅಂಕವನ್ನು 1-1 ಕ್ಕೆ ಏರಿಸಿದರು. ಆದಾಗ್ಯೂ ಎರಡನೆ ಕ್ವಾರ್ಟರ್‌ನಲ್ಲಿ ಜರ್ಮನಿ ಮತ್ತೆ ಎರಡು ಗೋಲುಗಳನ್ನು ಗಳಿಸಿ 3-1 ಮುನ್ನಡೆ ಸಾಧಿಸಿತು.

ಎರಡನೇ ಕ್ವಾರ್ಟರ್‌‌ನಲ್ಲಿ ಹಾರ್ದಿಕ್ ಸಿಂಗ್‌ ಮತ್ತು ಹರ್ಮನ್‌ಪ್ರೀತ್ ಸಿಂಗ್ ಮತ್ತೊಮ್ಮೆ ಭಾರತಕ್ಕೆ ತಲಾ ಒಂದೊಂದು ಗೋಲ್‌ ನೀಡುವುದರೊಂದಿಗೆ ತಂಡವನ್ನು 3-3 ಕ್ಕೆ ತಂದು ಸಮಬಲ ಗೊಳಿಸಿದರು.

ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ

ಮೂರನೆಯ ಕ್ವಾರ್ಟರ್‌‌ನಲ್ಲಿ ರುಪಿಂದರ್ ಪಾಲ್ ಸಿಂಗ್ ತನ್ನ ಪೆನಾಲ್ಟಿ ಸ್ಟ್ರೋಕ್ ನಲ್ಲಿ ಭಾರತಕ್ಕೆ 4-3 ಮುನ್ನಡೆಯ ಗೋಲ್ ದಾಖಲಿಸಿದರು ನೀಡಿದರು. ನಂತರ ಸಿಮ್ರಂಜಿತ್ ಸಿಂಗ್ ಪಂದ್ಯದ ಎರಡನೇ ಗೋಲು ಗಳಿಸಿ ಭಾರತಕ್ಕೆ 5-3 ಮುನ್ನಡೆ ತಂದುಕೊಟ್ಟರು.

ಜರ್ಮನಿ ಅಂತಿಮ ಕ್ವಾರ್ಟರ್‌ನಲ್ಲಿ ಪೆನಾಲ್ಟಿ ಕಾರ್ನರ್‌ ಮೂಲಕ ಒಂದು ಗೋಲ್ ಪಡೆಯಲು ಯಶಸ್ವಿಯಾಯಿತು. ಆದಾಗ್ಯೂ, ಭಾರತೀಯ ಆಟಗಾರರು ಸಮರ್ಥವಾಗಿ ಜರ್ಮನಿಯನ್ನು ಎದುರಿಸಿ ಒಂದು ಅಂಕಗಳ ಮುನ್ನಡೆಯನ್ನು ಕಾಯ್ದು ಕೊಳ್ಳುವಲ್ಲಿ ಯಶಸ್ವಿಯಾದರು.

ಆಟ ಮುಗಿಯಲು ಕೆಲವೇ ಸೆಕೆಂಡುಗಳು ಬಾಕಿ ಇರುವಾಗ, ಜರ್ಮನಿಗೆ ಪೆನಾಲ್ಟಿ ಕಾರ್ನರ್‌ ಪಡೆಯುವಲ್ಲಿ ಯಶಸ್ವಿಯಾದರೂ, ಗೋಲಿ ಪಿಆರ್ ಶ್ರೀಜೇಶ್ ಅದನ್ನು ತಡೆದು ಭಾರತವನ್ನು ಗೆಲುವಿನ ದಡಕ್ಕೆ ತಲುಪಿಸಿದರು. ಶ್ರೀಜೇಶ್‌‌ ಪಂದ್ಯದಲ್ಲಿ ಒಟ್ಟು ಒಂಬತ್ತು ಗೋಲ್‌ಗಳನ್ನು ತಡೆದು ಗೆಲುವಿಗೆ ನೆರವಾಗಿ ಭಾರತದ 41 ವರ್ಷಗಳ ಕಾಯುವಿಕೆಗೆ ಅಂತ್ಯ ಹಾಡಿದರು.

ಮತ್ತೊಂದು ಕಡೆ ಭಾರತದ ಮಹಿಳಾ ಹಾಕಿ ತಂಡವು ಬುಧವಾರ ನಡೆದಿದ್ದ ಸೆಮಿಫೈನಲ್‌‌ನಲ್ಲಿ ಅರ್ಜೆಂಟೀನಾ ವಿರುದ್ದ 1-2 ಅಂತರದಲ್ಲಿ ಸೋಲುಂಡಿತ್ತು. ಮಹಿಳಾ ತಂಡವು ಶುಕ್ರವಾರ (ನಾಳೆ) ಗ್ರೇಟ್‌ ಬ್ರಿಟನ್‌ ತಂಡದ ವಿರುದ್ದ ಕಂಚಿಗಾಗಿ ಆಡಲಿದೆ.

ಇದನ್ನೂ ಓದಿ: ಒಲಂಪಿಕ್ ಮಹಿಳೆಯರ 100 ಮೀಟರ್ ಓಟದ ಸ್ಪರ್ಧೆ: ಮೂರು ಪದಕ ಜಮೈಕಾ ಪಾಲಿಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...