Homeಕ್ರೀಡೆಒಲಂಪಿಕ್41 ವರ್ಷಗಳ ಕಾಯುವಿಕೆ ಅಂತ್ಯ | ಕೊನೆಗೂ ಪದಕಕ್ಕೆ ಮುತ್ತಿಟ್ಟ ಭಾರತೀಯ ಹಾಕಿ ತಂಡ!

41 ವರ್ಷಗಳ ಕಾಯುವಿಕೆ ಅಂತ್ಯ | ಕೊನೆಗೂ ಪದಕಕ್ಕೆ ಮುತ್ತಿಟ್ಟ ಭಾರತೀಯ ಹಾಕಿ ತಂಡ!

- Advertisement -
- Advertisement -

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿಗಾಗಿ ನಡೆದ ಪುರುಷರ ಹಾಕಿ ಪಂದ್ಯಾಟದಲ್ಲಿ ಭಾರತೀಯ ತಂಡವು ಜರ್ಮನಿ ವಿರುದ್ದ 5-4 ಅಂತರದಲ್ಲಿ ಗೆದ್ದು ಕೊಂಡಿತು. ಈ ಮೂಲಕ ಭಾರತೀಯ ತಂಡವು ಕಳೆದ 41 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದುಕೊಂಡಿತು.

ಮಂಗಳವಾರ ನಡೆದ ಸೆಮಿಫೈನಲ್‌ನಲ್ಲಿ ಭಾರತವು ಬೆಲ್ಜಿಯಂ ವಿರುದ್ದ 2-5 ಅಂತರದಲ್ಲಿ ಸೋಲುಂಡು ಚಿನ್ನದ ಕನಸನ್ನು ಕೈಬಿಟ್ಟಿತ್ತು. 1980 ರಲ್ಲಿ ಮಾಸ್ಕೋ ಕ್ರೀಡಾಕೂಟದಲ್ಲಿ ಭಾರತವು ಕೊನೆಯ ಬಾರಿಗೆ ಹಾಕಿಯಲ್ಲಿ ಪದಕ ಗೆದ್ದಿತ್ತು.

ಇದನ್ನೂ ಓದಿ: ಜಾವಲಿನ್ ಥ್ರೋ: 86.65 ಮೀ ದೂರ ಎಸೆದು ಮೊದಲಿಗರಾಗಿ ಫೈನಲ್ ತಲುಪಿದ ಭಾರತದ ನೀರಜ್!

ಸಿಮ್ರಂಜಿತ್ ಸಿಂಗ್ ಎರಡು ಗೋಲ್‌ ಮತ್ತು ಹಾರ್ದಿಕ್ ಸಿಂಗ್, ಹರ್ಮನ್‌ಪ್ರೀತ್ ಸಿಂಗ್ ಮತ್ತು ರೂಪಿಂದರ್ ಪಾಲ್ ಸಿಂಗ್ ತಲಾ ಒಂದೊಂದು ಗೋಲ್‌ ದಾಖಲಿಸಿದರು. ಮೊದಲ ಕ್ವಾರ್ಟರ್‌ನ ಎರಡನೇ ನಿಮಿಷದಲ್ಲಿ ಜರ್ಮನಿಯ ತೈಮೂರ್ ಒರುಜ್ ಗೋಲು ಗಳಿಸುವುದರೊಂದಿಗೆ ಜರ್ಮನಿ ತಂಡವು ಆರಂಭಿಕ ಮುನ್ನಡೆ ಸಾಧಿಸಿತ್ತು.

ಸಿಮ್ರಂಜಿತ್ ಸಿಂಗ್ ಆಟದ 17 ನೇ ನಿಮಿಷದಲ್ಲಿ ಗೋಲು ಗಳಿಸುವುದರೊಂದಿಗೆ ಭಾರತದ ಅಂಕವನ್ನು 1-1 ಕ್ಕೆ ಏರಿಸಿದರು. ಆದಾಗ್ಯೂ ಎರಡನೆ ಕ್ವಾರ್ಟರ್‌ನಲ್ಲಿ ಜರ್ಮನಿ ಮತ್ತೆ ಎರಡು ಗೋಲುಗಳನ್ನು ಗಳಿಸಿ 3-1 ಮುನ್ನಡೆ ಸಾಧಿಸಿತು.

ಎರಡನೇ ಕ್ವಾರ್ಟರ್‌‌ನಲ್ಲಿ ಹಾರ್ದಿಕ್ ಸಿಂಗ್‌ ಮತ್ತು ಹರ್ಮನ್‌ಪ್ರೀತ್ ಸಿಂಗ್ ಮತ್ತೊಮ್ಮೆ ಭಾರತಕ್ಕೆ ತಲಾ ಒಂದೊಂದು ಗೋಲ್‌ ನೀಡುವುದರೊಂದಿಗೆ ತಂಡವನ್ನು 3-3 ಕ್ಕೆ ತಂದು ಸಮಬಲ ಗೊಳಿಸಿದರು.

ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ

ಮೂರನೆಯ ಕ್ವಾರ್ಟರ್‌‌ನಲ್ಲಿ ರುಪಿಂದರ್ ಪಾಲ್ ಸಿಂಗ್ ತನ್ನ ಪೆನಾಲ್ಟಿ ಸ್ಟ್ರೋಕ್ ನಲ್ಲಿ ಭಾರತಕ್ಕೆ 4-3 ಮುನ್ನಡೆಯ ಗೋಲ್ ದಾಖಲಿಸಿದರು ನೀಡಿದರು. ನಂತರ ಸಿಮ್ರಂಜಿತ್ ಸಿಂಗ್ ಪಂದ್ಯದ ಎರಡನೇ ಗೋಲು ಗಳಿಸಿ ಭಾರತಕ್ಕೆ 5-3 ಮುನ್ನಡೆ ತಂದುಕೊಟ್ಟರು.

ಜರ್ಮನಿ ಅಂತಿಮ ಕ್ವಾರ್ಟರ್‌ನಲ್ಲಿ ಪೆನಾಲ್ಟಿ ಕಾರ್ನರ್‌ ಮೂಲಕ ಒಂದು ಗೋಲ್ ಪಡೆಯಲು ಯಶಸ್ವಿಯಾಯಿತು. ಆದಾಗ್ಯೂ, ಭಾರತೀಯ ಆಟಗಾರರು ಸಮರ್ಥವಾಗಿ ಜರ್ಮನಿಯನ್ನು ಎದುರಿಸಿ ಒಂದು ಅಂಕಗಳ ಮುನ್ನಡೆಯನ್ನು ಕಾಯ್ದು ಕೊಳ್ಳುವಲ್ಲಿ ಯಶಸ್ವಿಯಾದರು.

ಆಟ ಮುಗಿಯಲು ಕೆಲವೇ ಸೆಕೆಂಡುಗಳು ಬಾಕಿ ಇರುವಾಗ, ಜರ್ಮನಿಗೆ ಪೆನಾಲ್ಟಿ ಕಾರ್ನರ್‌ ಪಡೆಯುವಲ್ಲಿ ಯಶಸ್ವಿಯಾದರೂ, ಗೋಲಿ ಪಿಆರ್ ಶ್ರೀಜೇಶ್ ಅದನ್ನು ತಡೆದು ಭಾರತವನ್ನು ಗೆಲುವಿನ ದಡಕ್ಕೆ ತಲುಪಿಸಿದರು. ಶ್ರೀಜೇಶ್‌‌ ಪಂದ್ಯದಲ್ಲಿ ಒಟ್ಟು ಒಂಬತ್ತು ಗೋಲ್‌ಗಳನ್ನು ತಡೆದು ಗೆಲುವಿಗೆ ನೆರವಾಗಿ ಭಾರತದ 41 ವರ್ಷಗಳ ಕಾಯುವಿಕೆಗೆ ಅಂತ್ಯ ಹಾಡಿದರು.

ಮತ್ತೊಂದು ಕಡೆ ಭಾರತದ ಮಹಿಳಾ ಹಾಕಿ ತಂಡವು ಬುಧವಾರ ನಡೆದಿದ್ದ ಸೆಮಿಫೈನಲ್‌‌ನಲ್ಲಿ ಅರ್ಜೆಂಟೀನಾ ವಿರುದ್ದ 1-2 ಅಂತರದಲ್ಲಿ ಸೋಲುಂಡಿತ್ತು. ಮಹಿಳಾ ತಂಡವು ಶುಕ್ರವಾರ (ನಾಳೆ) ಗ್ರೇಟ್‌ ಬ್ರಿಟನ್‌ ತಂಡದ ವಿರುದ್ದ ಕಂಚಿಗಾಗಿ ಆಡಲಿದೆ.

ಇದನ್ನೂ ಓದಿ: ಒಲಂಪಿಕ್ ಮಹಿಳೆಯರ 100 ಮೀಟರ್ ಓಟದ ಸ್ಪರ್ಧೆ: ಮೂರು ಪದಕ ಜಮೈಕಾ ಪಾಲಿಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...

ಚೆನ್ನೈನಲ್ಲಿ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಹೋರಾಟ ನಡೆಸುತ್ತಿದ್ದ ಅಂಗವಿಕಲರ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ

ಚೆನ್ನೈ: ರಾಜ್ಯ ಸರ್ಕಾರದಿಂದ ನೀಡುತ್ತಿರುವ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಒತ್ತಾಯಿಸಿ ಚೆನ್ನೈನಲ್ಲಿ ಅಂಗವಿಕಲರು ನಡೆಸುತ್ತಿರುವ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದೆ.  ಅಂಗವಿಕಲರು ನಡೆಸುತ್ತಿದ್ದ ಈ ಪ್ರತಿಭಟನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹಲವಾರು ಪ್ರತಿಭಟನಾಕಾರರನ್ನು...

ರಾಜ್ಯಸಭೆ 37 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ; ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ

10 ರಾಜ್ಯಗಳಿಂದ ಖಾಲಿ ಇರುವ 37 ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಗೆ ಭಾರತೀಯ ಚುನಾವಣಾ ಆಯೋಗ (ಇಸಿಐ) ಬುಧವಾರ ವೇಳಾಪಟ್ಟಿ ಪ್ರಕಟಿಸಿದೆ. ಆಯೋಗದ ಪ್ರಕಾರ, ಮಾರ್ಚ್ 16 ರಂದು ಬೆಳಿಗ್ಗೆ 9:00...

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಮಂಗಳವಾರ ಲಕ್ನೋದ ಸರಸ್ವತಿ ಶಿಶು ಮಂದಿರದಲ್ಲಿ ನಡೆದ ಸಾಮಾಜಿಕ ಸಾಮರಸ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, ಹಿಂದೂ...

5% ಮುಸ್ಲಿಂ ಮೀಸಲಾತಿ ಪ್ರಕ್ರಿಯೆ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿಗಾಗಿ ಜಾತಿ ಪರಿಶೀಲನೆ ಮತ್ತು ಪ್ರಮಾಣೀಕರಣ ಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ ಮಂಗಳವಾರ (ಫೆ.17) ರದ್ದುಗೊಳಿಸಿ ಆದೇಶ ಹೊರಡಿಸಿದೆ. ಇದು ಪ್ರಸ್ತುತ ಪರಿಸ್ಥಿತಿಯಲ್ಲಿ ಯಾವುದೇ ತಕ್ಷಣದ ಬದಲಾವಣೆಯನ್ನು ತರದಿದ್ದರೂ,...

‘ಆರ್‌ಎಸ್‌ಎಸ್ ನೋಂದಣಿಗೆ ಕಾಂಗ್ರೆಸ್ ಕಾನೂನು ತರಲಿದೆ’: ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕುರಿತ ತಮ್ಮ ಹೇಳಿಕೆಗಳನ್ನು ಮತ್ತು ಕರಾವಳಿ ಕರ್ನಾಟಕದ ಹೂಡಿಕೆಗಳ ಮೇಲೆ ಕೋಮು ಉದ್ವಿಗ್ನತೆ ಪರಿಣಾಮ...