Homeಕ್ರೀಡೆಒಲಂಪಿಕ್41 ವರ್ಷಗಳ ಕಾಯುವಿಕೆ ಅಂತ್ಯ | ಕೊನೆಗೂ ಪದಕಕ್ಕೆ ಮುತ್ತಿಟ್ಟ ಭಾರತೀಯ ಹಾಕಿ ತಂಡ!

41 ವರ್ಷಗಳ ಕಾಯುವಿಕೆ ಅಂತ್ಯ | ಕೊನೆಗೂ ಪದಕಕ್ಕೆ ಮುತ್ತಿಟ್ಟ ಭಾರತೀಯ ಹಾಕಿ ತಂಡ!

- Advertisement -
- Advertisement -

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿಗಾಗಿ ನಡೆದ ಪುರುಷರ ಹಾಕಿ ಪಂದ್ಯಾಟದಲ್ಲಿ ಭಾರತೀಯ ತಂಡವು ಜರ್ಮನಿ ವಿರುದ್ದ 5-4 ಅಂತರದಲ್ಲಿ ಗೆದ್ದು ಕೊಂಡಿತು. ಈ ಮೂಲಕ ಭಾರತೀಯ ತಂಡವು ಕಳೆದ 41 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದುಕೊಂಡಿತು.

ಮಂಗಳವಾರ ನಡೆದ ಸೆಮಿಫೈನಲ್‌ನಲ್ಲಿ ಭಾರತವು ಬೆಲ್ಜಿಯಂ ವಿರುದ್ದ 2-5 ಅಂತರದಲ್ಲಿ ಸೋಲುಂಡು ಚಿನ್ನದ ಕನಸನ್ನು ಕೈಬಿಟ್ಟಿತ್ತು. 1980 ರಲ್ಲಿ ಮಾಸ್ಕೋ ಕ್ರೀಡಾಕೂಟದಲ್ಲಿ ಭಾರತವು ಕೊನೆಯ ಬಾರಿಗೆ ಹಾಕಿಯಲ್ಲಿ ಪದಕ ಗೆದ್ದಿತ್ತು.

ಇದನ್ನೂ ಓದಿ: ಜಾವಲಿನ್ ಥ್ರೋ: 86.65 ಮೀ ದೂರ ಎಸೆದು ಮೊದಲಿಗರಾಗಿ ಫೈನಲ್ ತಲುಪಿದ ಭಾರತದ ನೀರಜ್!

ಸಿಮ್ರಂಜಿತ್ ಸಿಂಗ್ ಎರಡು ಗೋಲ್‌ ಮತ್ತು ಹಾರ್ದಿಕ್ ಸಿಂಗ್, ಹರ್ಮನ್‌ಪ್ರೀತ್ ಸಿಂಗ್ ಮತ್ತು ರೂಪಿಂದರ್ ಪಾಲ್ ಸಿಂಗ್ ತಲಾ ಒಂದೊಂದು ಗೋಲ್‌ ದಾಖಲಿಸಿದರು. ಮೊದಲ ಕ್ವಾರ್ಟರ್‌ನ ಎರಡನೇ ನಿಮಿಷದಲ್ಲಿ ಜರ್ಮನಿಯ ತೈಮೂರ್ ಒರುಜ್ ಗೋಲು ಗಳಿಸುವುದರೊಂದಿಗೆ ಜರ್ಮನಿ ತಂಡವು ಆರಂಭಿಕ ಮುನ್ನಡೆ ಸಾಧಿಸಿತ್ತು.

ಸಿಮ್ರಂಜಿತ್ ಸಿಂಗ್ ಆಟದ 17 ನೇ ನಿಮಿಷದಲ್ಲಿ ಗೋಲು ಗಳಿಸುವುದರೊಂದಿಗೆ ಭಾರತದ ಅಂಕವನ್ನು 1-1 ಕ್ಕೆ ಏರಿಸಿದರು. ಆದಾಗ್ಯೂ ಎರಡನೆ ಕ್ವಾರ್ಟರ್‌ನಲ್ಲಿ ಜರ್ಮನಿ ಮತ್ತೆ ಎರಡು ಗೋಲುಗಳನ್ನು ಗಳಿಸಿ 3-1 ಮುನ್ನಡೆ ಸಾಧಿಸಿತು.

ಎರಡನೇ ಕ್ವಾರ್ಟರ್‌‌ನಲ್ಲಿ ಹಾರ್ದಿಕ್ ಸಿಂಗ್‌ ಮತ್ತು ಹರ್ಮನ್‌ಪ್ರೀತ್ ಸಿಂಗ್ ಮತ್ತೊಮ್ಮೆ ಭಾರತಕ್ಕೆ ತಲಾ ಒಂದೊಂದು ಗೋಲ್‌ ನೀಡುವುದರೊಂದಿಗೆ ತಂಡವನ್ನು 3-3 ಕ್ಕೆ ತಂದು ಸಮಬಲ ಗೊಳಿಸಿದರು.

ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ

ಮೂರನೆಯ ಕ್ವಾರ್ಟರ್‌‌ನಲ್ಲಿ ರುಪಿಂದರ್ ಪಾಲ್ ಸಿಂಗ್ ತನ್ನ ಪೆನಾಲ್ಟಿ ಸ್ಟ್ರೋಕ್ ನಲ್ಲಿ ಭಾರತಕ್ಕೆ 4-3 ಮುನ್ನಡೆಯ ಗೋಲ್ ದಾಖಲಿಸಿದರು ನೀಡಿದರು. ನಂತರ ಸಿಮ್ರಂಜಿತ್ ಸಿಂಗ್ ಪಂದ್ಯದ ಎರಡನೇ ಗೋಲು ಗಳಿಸಿ ಭಾರತಕ್ಕೆ 5-3 ಮುನ್ನಡೆ ತಂದುಕೊಟ್ಟರು.

ಜರ್ಮನಿ ಅಂತಿಮ ಕ್ವಾರ್ಟರ್‌ನಲ್ಲಿ ಪೆನಾಲ್ಟಿ ಕಾರ್ನರ್‌ ಮೂಲಕ ಒಂದು ಗೋಲ್ ಪಡೆಯಲು ಯಶಸ್ವಿಯಾಯಿತು. ಆದಾಗ್ಯೂ, ಭಾರತೀಯ ಆಟಗಾರರು ಸಮರ್ಥವಾಗಿ ಜರ್ಮನಿಯನ್ನು ಎದುರಿಸಿ ಒಂದು ಅಂಕಗಳ ಮುನ್ನಡೆಯನ್ನು ಕಾಯ್ದು ಕೊಳ್ಳುವಲ್ಲಿ ಯಶಸ್ವಿಯಾದರು.

ಆಟ ಮುಗಿಯಲು ಕೆಲವೇ ಸೆಕೆಂಡುಗಳು ಬಾಕಿ ಇರುವಾಗ, ಜರ್ಮನಿಗೆ ಪೆನಾಲ್ಟಿ ಕಾರ್ನರ್‌ ಪಡೆಯುವಲ್ಲಿ ಯಶಸ್ವಿಯಾದರೂ, ಗೋಲಿ ಪಿಆರ್ ಶ್ರೀಜೇಶ್ ಅದನ್ನು ತಡೆದು ಭಾರತವನ್ನು ಗೆಲುವಿನ ದಡಕ್ಕೆ ತಲುಪಿಸಿದರು. ಶ್ರೀಜೇಶ್‌‌ ಪಂದ್ಯದಲ್ಲಿ ಒಟ್ಟು ಒಂಬತ್ತು ಗೋಲ್‌ಗಳನ್ನು ತಡೆದು ಗೆಲುವಿಗೆ ನೆರವಾಗಿ ಭಾರತದ 41 ವರ್ಷಗಳ ಕಾಯುವಿಕೆಗೆ ಅಂತ್ಯ ಹಾಡಿದರು.

ಮತ್ತೊಂದು ಕಡೆ ಭಾರತದ ಮಹಿಳಾ ಹಾಕಿ ತಂಡವು ಬುಧವಾರ ನಡೆದಿದ್ದ ಸೆಮಿಫೈನಲ್‌‌ನಲ್ಲಿ ಅರ್ಜೆಂಟೀನಾ ವಿರುದ್ದ 1-2 ಅಂತರದಲ್ಲಿ ಸೋಲುಂಡಿತ್ತು. ಮಹಿಳಾ ತಂಡವು ಶುಕ್ರವಾರ (ನಾಳೆ) ಗ್ರೇಟ್‌ ಬ್ರಿಟನ್‌ ತಂಡದ ವಿರುದ್ದ ಕಂಚಿಗಾಗಿ ಆಡಲಿದೆ.

ಇದನ್ನೂ ಓದಿ: ಒಲಂಪಿಕ್ ಮಹಿಳೆಯರ 100 ಮೀಟರ್ ಓಟದ ಸ್ಪರ್ಧೆ: ಮೂರು ಪದಕ ಜಮೈಕಾ ಪಾಲಿಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...