Homeಕ್ರೀಡೆಒಲಂಪಿಕ್41 ವರ್ಷಗಳ ಕಾಯುವಿಕೆ ಅಂತ್ಯ | ಕೊನೆಗೂ ಪದಕಕ್ಕೆ ಮುತ್ತಿಟ್ಟ ಭಾರತೀಯ ಹಾಕಿ ತಂಡ!

41 ವರ್ಷಗಳ ಕಾಯುವಿಕೆ ಅಂತ್ಯ | ಕೊನೆಗೂ ಪದಕಕ್ಕೆ ಮುತ್ತಿಟ್ಟ ಭಾರತೀಯ ಹಾಕಿ ತಂಡ!

- Advertisement -
- Advertisement -

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿಗಾಗಿ ನಡೆದ ಪುರುಷರ ಹಾಕಿ ಪಂದ್ಯಾಟದಲ್ಲಿ ಭಾರತೀಯ ತಂಡವು ಜರ್ಮನಿ ವಿರುದ್ದ 5-4 ಅಂತರದಲ್ಲಿ ಗೆದ್ದು ಕೊಂಡಿತು. ಈ ಮೂಲಕ ಭಾರತೀಯ ತಂಡವು ಕಳೆದ 41 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದುಕೊಂಡಿತು.

ಮಂಗಳವಾರ ನಡೆದ ಸೆಮಿಫೈನಲ್‌ನಲ್ಲಿ ಭಾರತವು ಬೆಲ್ಜಿಯಂ ವಿರುದ್ದ 2-5 ಅಂತರದಲ್ಲಿ ಸೋಲುಂಡು ಚಿನ್ನದ ಕನಸನ್ನು ಕೈಬಿಟ್ಟಿತ್ತು. 1980 ರಲ್ಲಿ ಮಾಸ್ಕೋ ಕ್ರೀಡಾಕೂಟದಲ್ಲಿ ಭಾರತವು ಕೊನೆಯ ಬಾರಿಗೆ ಹಾಕಿಯಲ್ಲಿ ಪದಕ ಗೆದ್ದಿತ್ತು.

ಇದನ್ನೂ ಓದಿ: ಜಾವಲಿನ್ ಥ್ರೋ: 86.65 ಮೀ ದೂರ ಎಸೆದು ಮೊದಲಿಗರಾಗಿ ಫೈನಲ್ ತಲುಪಿದ ಭಾರತದ ನೀರಜ್!

ಸಿಮ್ರಂಜಿತ್ ಸಿಂಗ್ ಎರಡು ಗೋಲ್‌ ಮತ್ತು ಹಾರ್ದಿಕ್ ಸಿಂಗ್, ಹರ್ಮನ್‌ಪ್ರೀತ್ ಸಿಂಗ್ ಮತ್ತು ರೂಪಿಂದರ್ ಪಾಲ್ ಸಿಂಗ್ ತಲಾ ಒಂದೊಂದು ಗೋಲ್‌ ದಾಖಲಿಸಿದರು. ಮೊದಲ ಕ್ವಾರ್ಟರ್‌ನ ಎರಡನೇ ನಿಮಿಷದಲ್ಲಿ ಜರ್ಮನಿಯ ತೈಮೂರ್ ಒರುಜ್ ಗೋಲು ಗಳಿಸುವುದರೊಂದಿಗೆ ಜರ್ಮನಿ ತಂಡವು ಆರಂಭಿಕ ಮುನ್ನಡೆ ಸಾಧಿಸಿತ್ತು.

ಸಿಮ್ರಂಜಿತ್ ಸಿಂಗ್ ಆಟದ 17 ನೇ ನಿಮಿಷದಲ್ಲಿ ಗೋಲು ಗಳಿಸುವುದರೊಂದಿಗೆ ಭಾರತದ ಅಂಕವನ್ನು 1-1 ಕ್ಕೆ ಏರಿಸಿದರು. ಆದಾಗ್ಯೂ ಎರಡನೆ ಕ್ವಾರ್ಟರ್‌ನಲ್ಲಿ ಜರ್ಮನಿ ಮತ್ತೆ ಎರಡು ಗೋಲುಗಳನ್ನು ಗಳಿಸಿ 3-1 ಮುನ್ನಡೆ ಸಾಧಿಸಿತು.

ಎರಡನೇ ಕ್ವಾರ್ಟರ್‌‌ನಲ್ಲಿ ಹಾರ್ದಿಕ್ ಸಿಂಗ್‌ ಮತ್ತು ಹರ್ಮನ್‌ಪ್ರೀತ್ ಸಿಂಗ್ ಮತ್ತೊಮ್ಮೆ ಭಾರತಕ್ಕೆ ತಲಾ ಒಂದೊಂದು ಗೋಲ್‌ ನೀಡುವುದರೊಂದಿಗೆ ತಂಡವನ್ನು 3-3 ಕ್ಕೆ ತಂದು ಸಮಬಲ ಗೊಳಿಸಿದರು.

ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ

ಮೂರನೆಯ ಕ್ವಾರ್ಟರ್‌‌ನಲ್ಲಿ ರುಪಿಂದರ್ ಪಾಲ್ ಸಿಂಗ್ ತನ್ನ ಪೆನಾಲ್ಟಿ ಸ್ಟ್ರೋಕ್ ನಲ್ಲಿ ಭಾರತಕ್ಕೆ 4-3 ಮುನ್ನಡೆಯ ಗೋಲ್ ದಾಖಲಿಸಿದರು ನೀಡಿದರು. ನಂತರ ಸಿಮ್ರಂಜಿತ್ ಸಿಂಗ್ ಪಂದ್ಯದ ಎರಡನೇ ಗೋಲು ಗಳಿಸಿ ಭಾರತಕ್ಕೆ 5-3 ಮುನ್ನಡೆ ತಂದುಕೊಟ್ಟರು.

ಜರ್ಮನಿ ಅಂತಿಮ ಕ್ವಾರ್ಟರ್‌ನಲ್ಲಿ ಪೆನಾಲ್ಟಿ ಕಾರ್ನರ್‌ ಮೂಲಕ ಒಂದು ಗೋಲ್ ಪಡೆಯಲು ಯಶಸ್ವಿಯಾಯಿತು. ಆದಾಗ್ಯೂ, ಭಾರತೀಯ ಆಟಗಾರರು ಸಮರ್ಥವಾಗಿ ಜರ್ಮನಿಯನ್ನು ಎದುರಿಸಿ ಒಂದು ಅಂಕಗಳ ಮುನ್ನಡೆಯನ್ನು ಕಾಯ್ದು ಕೊಳ್ಳುವಲ್ಲಿ ಯಶಸ್ವಿಯಾದರು.

ಆಟ ಮುಗಿಯಲು ಕೆಲವೇ ಸೆಕೆಂಡುಗಳು ಬಾಕಿ ಇರುವಾಗ, ಜರ್ಮನಿಗೆ ಪೆನಾಲ್ಟಿ ಕಾರ್ನರ್‌ ಪಡೆಯುವಲ್ಲಿ ಯಶಸ್ವಿಯಾದರೂ, ಗೋಲಿ ಪಿಆರ್ ಶ್ರೀಜೇಶ್ ಅದನ್ನು ತಡೆದು ಭಾರತವನ್ನು ಗೆಲುವಿನ ದಡಕ್ಕೆ ತಲುಪಿಸಿದರು. ಶ್ರೀಜೇಶ್‌‌ ಪಂದ್ಯದಲ್ಲಿ ಒಟ್ಟು ಒಂಬತ್ತು ಗೋಲ್‌ಗಳನ್ನು ತಡೆದು ಗೆಲುವಿಗೆ ನೆರವಾಗಿ ಭಾರತದ 41 ವರ್ಷಗಳ ಕಾಯುವಿಕೆಗೆ ಅಂತ್ಯ ಹಾಡಿದರು.

ಮತ್ತೊಂದು ಕಡೆ ಭಾರತದ ಮಹಿಳಾ ಹಾಕಿ ತಂಡವು ಬುಧವಾರ ನಡೆದಿದ್ದ ಸೆಮಿಫೈನಲ್‌‌ನಲ್ಲಿ ಅರ್ಜೆಂಟೀನಾ ವಿರುದ್ದ 1-2 ಅಂತರದಲ್ಲಿ ಸೋಲುಂಡಿತ್ತು. ಮಹಿಳಾ ತಂಡವು ಶುಕ್ರವಾರ (ನಾಳೆ) ಗ್ರೇಟ್‌ ಬ್ರಿಟನ್‌ ತಂಡದ ವಿರುದ್ದ ಕಂಚಿಗಾಗಿ ಆಡಲಿದೆ.

ಇದನ್ನೂ ಓದಿ: ಒಲಂಪಿಕ್ ಮಹಿಳೆಯರ 100 ಮೀಟರ್ ಓಟದ ಸ್ಪರ್ಧೆ: ಮೂರು ಪದಕ ಜಮೈಕಾ ಪಾಲಿಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...