Homeಕ್ರೀಡೆಒಲಂಪಿಕ್41 ವರ್ಷಗಳ ಕಾಯುವಿಕೆ ಅಂತ್ಯ | ಕೊನೆಗೂ ಪದಕಕ್ಕೆ ಮುತ್ತಿಟ್ಟ ಭಾರತೀಯ ಹಾಕಿ ತಂಡ!

41 ವರ್ಷಗಳ ಕಾಯುವಿಕೆ ಅಂತ್ಯ | ಕೊನೆಗೂ ಪದಕಕ್ಕೆ ಮುತ್ತಿಟ್ಟ ಭಾರತೀಯ ಹಾಕಿ ತಂಡ!

- Advertisement -
- Advertisement -

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿಗಾಗಿ ನಡೆದ ಪುರುಷರ ಹಾಕಿ ಪಂದ್ಯಾಟದಲ್ಲಿ ಭಾರತೀಯ ತಂಡವು ಜರ್ಮನಿ ವಿರುದ್ದ 5-4 ಅಂತರದಲ್ಲಿ ಗೆದ್ದು ಕೊಂಡಿತು. ಈ ಮೂಲಕ ಭಾರತೀಯ ತಂಡವು ಕಳೆದ 41 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದುಕೊಂಡಿತು.

ಮಂಗಳವಾರ ನಡೆದ ಸೆಮಿಫೈನಲ್‌ನಲ್ಲಿ ಭಾರತವು ಬೆಲ್ಜಿಯಂ ವಿರುದ್ದ 2-5 ಅಂತರದಲ್ಲಿ ಸೋಲುಂಡು ಚಿನ್ನದ ಕನಸನ್ನು ಕೈಬಿಟ್ಟಿತ್ತು. 1980 ರಲ್ಲಿ ಮಾಸ್ಕೋ ಕ್ರೀಡಾಕೂಟದಲ್ಲಿ ಭಾರತವು ಕೊನೆಯ ಬಾರಿಗೆ ಹಾಕಿಯಲ್ಲಿ ಪದಕ ಗೆದ್ದಿತ್ತು.

ಇದನ್ನೂ ಓದಿ: ಜಾವಲಿನ್ ಥ್ರೋ: 86.65 ಮೀ ದೂರ ಎಸೆದು ಮೊದಲಿಗರಾಗಿ ಫೈನಲ್ ತಲುಪಿದ ಭಾರತದ ನೀರಜ್!

ಸಿಮ್ರಂಜಿತ್ ಸಿಂಗ್ ಎರಡು ಗೋಲ್‌ ಮತ್ತು ಹಾರ್ದಿಕ್ ಸಿಂಗ್, ಹರ್ಮನ್‌ಪ್ರೀತ್ ಸಿಂಗ್ ಮತ್ತು ರೂಪಿಂದರ್ ಪಾಲ್ ಸಿಂಗ್ ತಲಾ ಒಂದೊಂದು ಗೋಲ್‌ ದಾಖಲಿಸಿದರು. ಮೊದಲ ಕ್ವಾರ್ಟರ್‌ನ ಎರಡನೇ ನಿಮಿಷದಲ್ಲಿ ಜರ್ಮನಿಯ ತೈಮೂರ್ ಒರುಜ್ ಗೋಲು ಗಳಿಸುವುದರೊಂದಿಗೆ ಜರ್ಮನಿ ತಂಡವು ಆರಂಭಿಕ ಮುನ್ನಡೆ ಸಾಧಿಸಿತ್ತು.

ಸಿಮ್ರಂಜಿತ್ ಸಿಂಗ್ ಆಟದ 17 ನೇ ನಿಮಿಷದಲ್ಲಿ ಗೋಲು ಗಳಿಸುವುದರೊಂದಿಗೆ ಭಾರತದ ಅಂಕವನ್ನು 1-1 ಕ್ಕೆ ಏರಿಸಿದರು. ಆದಾಗ್ಯೂ ಎರಡನೆ ಕ್ವಾರ್ಟರ್‌ನಲ್ಲಿ ಜರ್ಮನಿ ಮತ್ತೆ ಎರಡು ಗೋಲುಗಳನ್ನು ಗಳಿಸಿ 3-1 ಮುನ್ನಡೆ ಸಾಧಿಸಿತು.

ಎರಡನೇ ಕ್ವಾರ್ಟರ್‌‌ನಲ್ಲಿ ಹಾರ್ದಿಕ್ ಸಿಂಗ್‌ ಮತ್ತು ಹರ್ಮನ್‌ಪ್ರೀತ್ ಸಿಂಗ್ ಮತ್ತೊಮ್ಮೆ ಭಾರತಕ್ಕೆ ತಲಾ ಒಂದೊಂದು ಗೋಲ್‌ ನೀಡುವುದರೊಂದಿಗೆ ತಂಡವನ್ನು 3-3 ಕ್ಕೆ ತಂದು ಸಮಬಲ ಗೊಳಿಸಿದರು.

ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ

ಮೂರನೆಯ ಕ್ವಾರ್ಟರ್‌‌ನಲ್ಲಿ ರುಪಿಂದರ್ ಪಾಲ್ ಸಿಂಗ್ ತನ್ನ ಪೆನಾಲ್ಟಿ ಸ್ಟ್ರೋಕ್ ನಲ್ಲಿ ಭಾರತಕ್ಕೆ 4-3 ಮುನ್ನಡೆಯ ಗೋಲ್ ದಾಖಲಿಸಿದರು ನೀಡಿದರು. ನಂತರ ಸಿಮ್ರಂಜಿತ್ ಸಿಂಗ್ ಪಂದ್ಯದ ಎರಡನೇ ಗೋಲು ಗಳಿಸಿ ಭಾರತಕ್ಕೆ 5-3 ಮುನ್ನಡೆ ತಂದುಕೊಟ್ಟರು.

ಜರ್ಮನಿ ಅಂತಿಮ ಕ್ವಾರ್ಟರ್‌ನಲ್ಲಿ ಪೆನಾಲ್ಟಿ ಕಾರ್ನರ್‌ ಮೂಲಕ ಒಂದು ಗೋಲ್ ಪಡೆಯಲು ಯಶಸ್ವಿಯಾಯಿತು. ಆದಾಗ್ಯೂ, ಭಾರತೀಯ ಆಟಗಾರರು ಸಮರ್ಥವಾಗಿ ಜರ್ಮನಿಯನ್ನು ಎದುರಿಸಿ ಒಂದು ಅಂಕಗಳ ಮುನ್ನಡೆಯನ್ನು ಕಾಯ್ದು ಕೊಳ್ಳುವಲ್ಲಿ ಯಶಸ್ವಿಯಾದರು.

ಆಟ ಮುಗಿಯಲು ಕೆಲವೇ ಸೆಕೆಂಡುಗಳು ಬಾಕಿ ಇರುವಾಗ, ಜರ್ಮನಿಗೆ ಪೆನಾಲ್ಟಿ ಕಾರ್ನರ್‌ ಪಡೆಯುವಲ್ಲಿ ಯಶಸ್ವಿಯಾದರೂ, ಗೋಲಿ ಪಿಆರ್ ಶ್ರೀಜೇಶ್ ಅದನ್ನು ತಡೆದು ಭಾರತವನ್ನು ಗೆಲುವಿನ ದಡಕ್ಕೆ ತಲುಪಿಸಿದರು. ಶ್ರೀಜೇಶ್‌‌ ಪಂದ್ಯದಲ್ಲಿ ಒಟ್ಟು ಒಂಬತ್ತು ಗೋಲ್‌ಗಳನ್ನು ತಡೆದು ಗೆಲುವಿಗೆ ನೆರವಾಗಿ ಭಾರತದ 41 ವರ್ಷಗಳ ಕಾಯುವಿಕೆಗೆ ಅಂತ್ಯ ಹಾಡಿದರು.

ಮತ್ತೊಂದು ಕಡೆ ಭಾರತದ ಮಹಿಳಾ ಹಾಕಿ ತಂಡವು ಬುಧವಾರ ನಡೆದಿದ್ದ ಸೆಮಿಫೈನಲ್‌‌ನಲ್ಲಿ ಅರ್ಜೆಂಟೀನಾ ವಿರುದ್ದ 1-2 ಅಂತರದಲ್ಲಿ ಸೋಲುಂಡಿತ್ತು. ಮಹಿಳಾ ತಂಡವು ಶುಕ್ರವಾರ (ನಾಳೆ) ಗ್ರೇಟ್‌ ಬ್ರಿಟನ್‌ ತಂಡದ ವಿರುದ್ದ ಕಂಚಿಗಾಗಿ ಆಡಲಿದೆ.

ಇದನ್ನೂ ಓದಿ: ಒಲಂಪಿಕ್ ಮಹಿಳೆಯರ 100 ಮೀಟರ್ ಓಟದ ಸ್ಪರ್ಧೆ: ಮೂರು ಪದಕ ಜಮೈಕಾ ಪಾಲಿಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...