Homeಮುಖಪುಟರೈತ ಮುಖಂಡರು ಸಚಿವರೊಂದಿಗಿನ 7 ಗಂಟೆಗಳ ಮಾತುಕತೆ ಅಂತ್ಯ: ಯಾರು ಏನು ಹೇಳಿದರು?

ರೈತ ಮುಖಂಡರು ಸಚಿವರೊಂದಿಗಿನ 7 ಗಂಟೆಗಳ ಮಾತುಕತೆ ಅಂತ್ಯ: ಯಾರು ಏನು ಹೇಳಿದರು?

ಸರ್ಕಾರವು ಕನಿಷ್ಠ ಬೆಂಬಲ ಬೆಲೆ ಮುಂದುವರೆಯುತ್ತದೆ ಎಂದು ಲಿಖಿತ ಭರವಸೆ ನೀಡಲು ಮುಂದಾಗಿದೆ. ಅಲ್ಲದೇ ಗುತ್ತಿಗೆ ಕೃಷಿ ಪದ್ದತಿಯಲ್ಲಿ ಉದ್ಭವಿಸುವ ಸಮಸ್ಯೆಗಳಿಗೆ ರೈತರು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಬಹುದು ಎಂದು ಕೇಂದ್ರ ಹೇಳಿದೆ

- Advertisement -
- Advertisement -

ವಿವಾದಾತ್ಮಕ ಕೃಷಿ ಕಾಯ್ದೆಗಳ ಕುರಿತ ಮಹತ್ವದ ರೈತ ಮುಖಂಡರು ಮತ್ತು ಸಚಿವರೊಂದಿಗಿನ 7 ಗಂಟೆಗಳ ಮಾತುಕತೆ ಅಂತ್ಯ ಕಂಡಿದೆ. ಆದರೆ ಇಂದಿನ ಸಭೆಯು ಸಹ ತಾರ್ಕಿಕ ಅಂತ್ಯ ಕಾಣುವಲ್ಲಿ ವಿಫಲವಾಗಿದ್ದು ಮುಂದಿನ ಸಭೆ ಡಿಸೆಂಬರ್ 05ಕ್ಕೆ ನಿಗಧಿಯಾಗಿದೆ. ರೈತರು ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂಬ ತಮ್ಮ ನಿಲುವಿಗೆ ಬದ್ಧರಾಗಿದ್ದರೆ ಕೇಂದ್ರ ಕೃಷಿ ಸಚಿವ ನರೇಂದ್ರ ತೋಮರ್ “ನಮಗೆ ಯಾವುದೇ ಅಹಂಕಾರವಿಲ್ಲ. ರೈತರ ಸಮಸ್ಯೆಗಳನ್ನು ಮುಕ್ತವಾಗಿ ಆಲಿಸುತ್ತೇವೆ. ರೈತರು ಪ್ರತಿಭಟನೆ ಹಿಂತೆಗೆದುಕೊಂಡರೆ ಒಳ್ಳೆಯದು” ಎಂದಿದ್ದಾರೆ.

ಸರ್ಕಾರವು ಕನಿಷ್ಠ ಬೆಂಬಲ ಬೆಲೆ ಮುಂದುವರೆಯುತ್ತದೆ ಎಂದು ಲಿಖಿತ ಭರವಸೆ ನೀಡಲು ಮುಂದಾಗಿದೆ. ಅಲ್ಲದೇ ಗುತ್ತಿಗೆ ಕೃಷಿ ಪದ್ದತಿಯಲ್ಲಿ ಉದ್ಭವಿಸುವ ಸಮಸ್ಯೆಗಳಿಗೆ ರೈತರು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಬಹುದು ಎಂದು ಕೇಂದ್ರ ಹೇಳಿದೆ. ಈ ಕಾಯ್ದೆಗಳ ಪ್ರಕಾರ ರೈತರು ರೈತರು ಸಮಸ್ಯೆಗಳನ್ನು ಸಬ್‌ ಡಿವಿಷನಲ್ ಮ್ಯಾಜಿಸ್ಟ್ರೇಟ್ ಬಳಿ ಮಾತ್ರ ಬಗೆಹರಿಸಬೇಕಿತ್ತು.

ಆದರೆ ರೈತರು ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯದಿದ್ದರೆ ಹೋರಾಟ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಕೇವಲ ಎಂಎಸ್‌ಪಿ ನೀಡುವುದು ಸಮಸ್ಯೆಯನ್ನು ಬಗೆಹರಿಸುವುದಿಲ್ಲ, ಕಾನೂನುಗಳನ್ನು ಹಿಂತೆಗೆದುಕೊಳ್ಳಿ ಎಂದು ತಾಕೀತು ಮಾಡಿದ್ದಾರೆ.

ಇಂದಿನ ಸಭೆ ಕೇಂದ್ರ ಕೊನೆಯ ಅವಕಾಶ ಎಂದು ರೈತರು ಎಚ್ಚರಿಕೆ ನೀಡಿದ್ದರು. ಆದರೂ ಇಂದಿನ ಸಭೆ ತಾರ್ಕಿಕ ಅಂತ್ಯ ಕಾಣದ ಕಾರಣ ಶನಿವಾರ ನಡೆಯುವ ಸಭೆಗೆ ರೈತ ಮುಖಂಡರು ಭಾಗವಹಿಸುವರೋ ಅಥವಾ ಸಭೆ ಬಹಿಷ್ಕರಿಸಿ ಹೋರಾಟ ಮುಂದುವರೆಸುವರೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಇಂದು 35 ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ನಡೆದ ಮಾತುಕತೆಯಲ್ಲಿ ಕೇಂದ್ರ ಸರ್ಕಾರದ ಪರವಾಗಿ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಕ್ಯಾಬಿನೆಟ್ ಸಚಿವ ಪಿಯೂಶ್ ಗೋಯಲ್ ಮತ್ತು ಸೋಮ್‌ ಪ್ರಕಾಶ್  ಭಾಗವಹಿಸಿದ್ದರು.

ಮೂವರು ಕೇಂದ್ರ ಸಚಿವರೊಂದಿಗಿನ ರೈತ ಮುಖಂಡರ ಮಹತ್ವದ ಸಭೆಯಲ್ಲಿ ರೈತರು ಮತ್ತೊಮ್ಮೆ ಸ್ವಾಭಿಮಾನ ಮೆರೆದಿದ್ದಾರೆ. ಮಧ್ಯಾಹ್ನದ ಊಟದ ಬಿಡುವಿನಲ್ಲಿ ರೈತ ಮುಖಂಡರಿಗೆ ಸರ್ಕಾರದಿಂದ ಮಾಡಿದ ಊಟದ ವ್ಯವಸ್ಥೆಯನ್ನು ತಿರಸ್ಕರಿಸಿದ ರೈತರ ತಾವೇ ತಂದಿದ್ದ ಊಟವನ್ನು ನೆಲದಲ್ಲಿ ಕೂತು ಉಣ್ಣುವ ಮೂಲಕ ಸರ್ಕಾರದ ಹಂಗು ನಮಗೆ ಬೇಡ ಎಂಬ ಸಂದೇಶ ರವಾನಿಸಿದ್ದಾರೆ.


ಇದನ್ನೂ ಓದಿ: ‘ನಮ್ಮ‌ ಊಟ ನಾವೇ ತಂದಿದ್ದೇವೆ’: ಸರ್ಕಾರದ ಜೊತೆಗಿನ ಸಭೆಯಲ್ಲಿ ಊಟ ಮಾಡಲು ನಿರಾಕರಿಸಿದ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...