Homeಕರ್ನಾಟಕಸೆ. 26ಕ್ಕೆ ವಿಧಾನಸಭಾ ಅಧಿವೇಶನ ಅಂತ್ಯ: ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯ

ಸೆ. 26ಕ್ಕೆ ವಿಧಾನಸಭಾ ಅಧಿವೇಶನ ಅಂತ್ಯ: ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯ

ರಾಜ್ಯ ಸರ್ಕಾರ ನಮ್ಮ ಶಾಸಕರ 1600 ಪ್ರಶ್ನೆಗಳಿಗೂ ಉತ್ತರ ನೀಡಿಲ್ಲ. ಜನಪರ ಚರ್ಚೆಗೂ ಇಲ್ಲಿ ಅವಕಾಶವಿಲ್ಲ. ಈ ಸರ್ಕಾರ ಸಂಪೂರ್ಣವಾಗಿ ಜನರ ವಿಶ್ವಾಸ ಕಳೆದುಕೊಂಡಿದೆ- ಡಿ.ಕೆ.ಶಿವಕುಮಾರ್

- Advertisement -
- Advertisement -

ಕರ್ನಾಟಕ ವಿಧಾನಸಭೆ ಅಧಿವೇಶನವು ಸೆ.26 ರಂದು ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಆ ದಿನದಂದು, ಎಲ್ಲಾ ಇಲಾಖೆಗಳ ಮುಖ್ಯ ಕಾರ್ಯದರ್ಶಿ/ಪ್ರಧಾನ ಕಾರ್ಯದರ್ಶಿಗಳು ಹಾಜರಿದ್ದು ಸಚಿವರುಗಳ ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಉತ್ತರಗಳು ಮತ್ತು ಅಗತ್ಯ ಮಾಹಿತಿಯನ್ನು ನೀಡುವಂತೆ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಮೊಹಮ್ಮದ್ ನಯೀಮ್ ಮೊಮಿನ್ ಇಂದು ಸುತ್ತೋಲೆ ಹೊರಡಿಸಿದ್ದಾರೆ.

ಸೆ.21 ರಿಂದ ವಿಧಾನಸಭಾ ಅಧಿವೇಶನವು ಆರಂಭವಾಗಿದ್ದು, ಹಲವು ದಿನಗಳು ನಡೆಯಬೇಕಿದ್ದ ಸದನವನ್ನು ಕೊರೊನಾ ಕಾರಣದಿಂದ ಕೇವಲ 6 ದಿನಗಳಿಗೆ ಸೀಮಿತಗೊಳಿಸಲಾಗಿದೆ. ಹಾಗಾಗಿ ಸೆ. 26ರಂದು ಅಧಿವೇಶನದ ಕಾರ್ಯಕಲಾಪಗಳು ಕೊನೆಗೊಳ್ಳಲಿವೆ.

ಈ ಹಿಂದೆ ಕೇವಲ 3 ದಿನಗಳಿಗೆ ಸೀಮಿತಗೊಳಿಸುತ್ತೇವೆ ಎಂದು ಯಡಿಯೂರಪ್ಪನವರು ಹೇಳಿದ್ದರು. ಇದಕ್ಕೆ ವಿರೋಧ ಪಕ್ಷ ತೀವ್ರವಾದ ವಿರೋಧ ವ್ಯಕ್ತಪಡಿಸಿದ್ದರಿಂದ 6 ದಿನಗಳಿಗೆ ವಿಸ್ತರಿಸಲಾಗಿದೆ.

ಇದನ್ನೂ ಓದಿ: ಅಂಬೇಡ್ಕರ್ ಕನಸಿನ ಭೂ ಹಂಚಿಕೆ ಜಾರಿಯಾಗಲಿ: ನೂರ್ ಶ್ರೀಧರ್

ವಿಧಾನಸಭೆ ಅಧಿವೇಶನ ಆರಂಭಾವಾದಂದಿನಿಂದ, ಕೃಷಿಗೆ ಸಂಬಂಧಿಸಿದ ಸರ್ಕಾರದ ಸುಗ್ರೀವಾಜ್ಞೆಗಳನ್ನು ವಿರೋಧಿಸಿ ರಾಜ್ಯದ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳು ಒಟ್ಟಾಗಿ ಐಕ್ಯ ಹೋರಾಟ ಮತ್ತು ಪರ್ಯಾಯ ಅಧಿವೇಶನವನ್ನು ನಡೆಸುತ್ತಿವೆ. ಇಷ್ಟೇ ಅಲ್ಲದೇ ಇನ್ನೂ ಹಲವಾರು ಸಂಘಟನೆಗಳು ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿವೆ.

ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ, “ರಾಜ್ಯ ಸರ್ಕಾರ ನಮ್ಮ ಶಾಸಕರ 1600 ಪ್ರಶ್ನೆಗಳಿಗೂ ಉತ್ತರ ನೀಡಿಲ್ಲ. ಜನಪರ ಚರ್ಚೆಗೂ ಇಲ್ಲಿ ಅವಕಾಶವಿಲ್ಲ. ಈ ಸರ್ಕಾರ ಸಂಪೂರ್ಣವಾಗಿ ಜನರ ವಿಶ್ವಾಸ ಕಳೆದುಕೊಂಡಿದೆ, ಇದನ್ನು ನಮ್ಮ ಪಕ್ಷ ಸದನದಲ್ಲಿ ಮಂಡನೆ ಮಾಡಲಿದೆ. ಅದಕ್ಕೆ ಇವತ್ತೇ ಅವಕಾಶ ಕೊಡಬೇಕು. ಈ ಸರ್ಕಾರ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಕಳೆದುಕೊಂಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಆಗ ಉಳುವವನೆ ಭೂಮಿಯ ಒಡೆಯ, ಈಗ ದುಡ್ಡಿದ್ದವನೇ ಭೂಮಿಯ ಒಡೆಯ: ಸಿದ್ದರಾಮಯ್ಯ ಆತಂಕ

ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ಮತ್ತು ಕಾರ್ಮಿಕ ವಿರೋಧಿ ಸುಗ್ರೀವಾಜ್ಞೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ, ಸೆ.25 ರಂದು ಭಾರತ್ ಬಂದ್ ಮಾಡಲಾಗುತ್ತಿದೆ. ಇದಕ್ಕೆ ಈಗಾಗಲೇ ದೇಶದಾದ್ಯಂತ ಹಲವು ಸಂಘಟನೆಗಳು ಬೆಂಬಲ ಸೂಚಿಸಿವೆ. ಕರ್ನಾಟಕದಲ್ಲಿಯೂ ಐಕ್ಯ ಹೋರಾಟದ ಸಂಘಟನೆಗಳ ವತಿಯಿಂದ ನಾಳೆ (ಸೆ.5) ರಸ್ತೆ ತಡೆ ಚಳುವಳಿಯನ್ನು ಮಾಡಲಾಗುತ್ತಿದೆ. ಇದಕ್ಕೆ ಮಣಿದು ರಾಜ್ಯ ಸರ್ಕಾರ ಸುಗ್ರೀವಾಜ್ಞೆಗಳನ್ನು ಹಿಂಪಡೆಯದಿದ್ದರೆ, ಸೆ.28 ರಂದು ರಾಜ್ಯದಾದ್ಯಂತ ಬಂದ್ ಆಚರಿಸಲಾಗುವುದು ಎಂದು ಐಕ್ಯ ಹೋರಾಟ ಸಮಿತಿ ತಿಳಿಸಿದೆ.


ಇದನ್ನೂ ಓದಿ: ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಯಡಿಯೂರಪ್ಪ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...